ವರ್ತಮಾನದ ಅಪೀಲು: ಇದು ನಮ್ಮ ಜವಾಬ್ದಾರಿ, ನೀವೂ ಪಾಲ್ಗೊಳ್ಳಿ

ಕೆಜಿಎಫ್ ದಲಿತ ಕಾಲೋನಿಗಳಲ್ಲಿ ಇತ್ತೀಚೆಗೆ ಘಟಿಸಿದ ಸಾವುಗಳು ನಿಮಗೆ ನೆನಪಿರಬಹುದು. ಕಕ್ಕಸ್ಸು ಗುಂಡಿ ಶುಚಿಗೊಳಿಸಲು ಹೋದ ಐವರು ಅಸುನೀಗಿದ್ದಾರೆ. ಇದೇ ಕೆಲಸದಿಂದಾಗಿ ಅಂಟಿಸಿಕೊಂಡ ನಾನಾ ರೋಗಗಳಿಂದ ಸತ್ತವರೆಷ್ಟೋ, ಲೆಕ್ಕ ಇಟ್ಟವರಾರು? ಇನ್ನು ಕೆಲವರು ರೋಗಗಳಿಂದ ಬಳಲುತ್ತಿದ್ದಾರೆ.

ದುಡಿವವರನ್ನು ಕಳೆದುಕೊಂಡ ಅವರ ಕುಟುಂಬಗಳು ಅತಂತ್ರ ಸ್ಥಿತಿಯಲ್ಲಿವೆ. ಸಾಲು ಸಾಲು ಸಾವುಗಳ ನಂತರ ಸ್ಥಳೀಯ ಸಂಸ್ಥೆ ಎಚ್ಚರಗೊಂಡು ಮಲಹೊರುವ ಪದ್ಧತಿ ನಿರ್ಮೂಲನೆಗೆ ಶತಪ್ರಯತ್ನ ಮಾಡುತ್ತಿದೆ. ಮಲದ ಗುಂಡಿಗಳನ್ನು ಶುಚಿ ಮಾಡಲು ಯಾರೂ ಇವರನ್ನು ಕರೆಯಬಾರದು ಎಂದು ಅರಿವು ಮೂಡಿಸುವ ಪ್ರಯತ್ನದಲ್ಲಿದ್ದಾರೆ. ಆದರೆ, ಅದೇ ಆಡಳಿತದ ಜವಾಬ್ದಾರಿಯಾಗಿದ್ದು ದುಡಿಯುವ ಕೈಗಳನ್ನು ಮತ್ತು ದುಡಿಮೆಯನ್ನು ಕಳೆದುಕೊಂಡವರಿಗೆ ಪರ್ಯಾಯ ಉದ್ಯೋಗ ಕೊಡಿಸಬೇಕಾದ್ದು. ಇದುವರೆಗೂ ಅದು ಈಡೇರಿಲ್ಲ. ಭರವಸೆ ನೀಡಿದ್ದಾರೆ. ಈಡೇರುವುದು ಎಂದೋ?

ಆದರೆ ಅಲ್ಲಿಯವರೆಗೆ??

ಪಿಯುಸಿಎಲ್ ಮತ್ತಿತರ ಸಂಘಟನೆಗಳ ಸತತ ಒತ್ತಡದ ಫಲವಾಗಿ, ವೈ.ಜೆ.ರಾಜೇಂದ್ರ, ದಯಾನಂದ್, ಚಂದ್ರಶೇಖರ್, ಪದ್ಮ ಮೊದಲಾದ ಸಾಮಾಜಿಕ ಹೋರಾಟಗಾರರ ಪ್ರಯತ್ನದಿಂದಾಗಿ ಕೆಜಿಎಫ್‌ನಲ್ಲಿ ಈಗ ಮನುಷ್ಯರೇ ಮಲಹೊತ್ತುವ ಕಾರ್ಯಕ್ಕೆ ಸ್ಥಳೀಯ ಆಡಳಿತ ತಡೆಯೊಡ್ಡಿದೆ. ಇದರ ಜತೆಜತೆಗೆ ಈ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಾದ ಜಿಲ್ಲಾಡಳಿತ ಮಾತ್ರ ನಿಧಾನಗತಿ ಅನುಸರಿಸುತ್ತಿದೆ. ಪರಿಣಾಮವಾಗಿ ಈ ಕುಟುಂಬಗಳ ಒಪ್ಪೊತ್ತಿನ ಊಟಕ್ಕೂ ಈಗ ತತ್ವಾರ.

ಸದ್ಯಕ್ಕೆ ಅವರಿಗೆ ಆದಾಯದ ಮೂಲವೇ ಇಲ್ಲ. ಪರ್ಯಾಯ ಉದ್ಯೋಗ ಕಲ್ಪಿಸುವವರೆಗಾದರೂ ಆ ಕಾಲೋನಿಯಲ್ಲಿ ಗಂಜಿ ಕೇಂದ್ರ ಸ್ಥಾಪಿಸಿ ಅನ್ನ ನೀಡಬೇಕಾದ ಜವಾಬ್ದಾರಿ ಆಡಳಿತದದ್ದು. ಆದರೆ ಇದುವರೆಗೂ ಅದು ಸಾಧ್ಯವಾಗಿಲ್ಲ. ನಾಗರಿಕ ಸಮಾಜವೂ ಜವಾಬ್ದಾರಿ ಮರೆತರೆ? ನಮ್ಮ ಮನೆಯ ಮಲದ ಗುಂಡಿಗಳು ತುಂಬಿಕೊಂಡಾಗ, ನಗರಸಭೆ, ಪುರಸಭೆಗಳನ್ನು ನಂಬಿಕೊಳ್ಳದೆ ನಾವು ಇಂತಹವರ ಮೊರೆ ಹೋಗಿದ್ದೆವು, ಅವರನ್ನು ಗುಂಡಿಯೊಳಗೆ ಇಳಿಸಿ ಮೇಲೆ ಮೂಗು ಮುಚ್ಚಿ ನಿಂತಿದ್ದೆವು. ಅವರು ಅಂಟಿಸಿಕೊಂಡ ರೋಗಗಳಿಗೆ, ತೆತ್ತ ಜೀವಕ್ಕೆ ಸರಕಾರ ಅಷ್ಟೇ ಅಲ್ಲ, ನಾವೂ ಹೊಣೆ.

ವರ್ತಮಾನ ಬಳಗ ಹೀಗೊಂದು ಆಲೋಚನೆ ಮಾಡಿದೆ. ಒಪ್ಪತ್ತಿನ ಅನ್ನಕ್ಕಾಗಿ ಕಷ್ಟಪಡಿಸುತ್ತಿರುವವರಿಗೆ ನಾವು, ನೀವು ನೆರವಾಗೋಣ ಎಂಬುದು ನಮ್ಮ ಆಲೋಚನೆ. ಅವರಿಗೆ ಮುಖ್ಯವಾಗಿ ಈಗ ಬೇಕಿರುವುದು, ಅಕ್ಕಿ, ಬೇಳೆ ಹಾಗೂ ಅಡಿಗೆಗೆ ಬೇಕಾದ ಇತರೆ ಅಗತ್ಯ ಸಾಮಾಗ್ರಿಗಳು. ಸಂಗ್ರಹವಾಗುವ ಹಣದಲ್ಲಿ ಅಗತ್ಯ ವಸ್ತುಗಳನ್ನು ಕೊಂಡು ಅವರಿಗೆ ತಲುಪಿಸುವ ಹೊಣೆ ನಮ್ಮದು. ಸಂಗ್ರಹವಾಗುವ ಪ್ರತಿ ಪೈಸೆಗೂ ಲೆಕ್ಕ ಕೊಡುತ್ತೇವೆ ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ ತಾನೆ? ಅಂತೆಯೇ ನಮ್ಮ ಜೊತೆ ಕೈಜೋಡಿಸುವವರ ಹೆಸರನ್ನು ಪ್ರಕಟಿಸುತ್ತೇವೆ. ಜೊತೆಗೆ ಹಣ ನೀಡುತ್ತೇವೆ ಎಂದು ಭರವಸೆ ಕೊಡುವವರ ಹೆಸರನ್ನೂ ಮತ್ತೊಂದು ಪಟ್ಟಿಯಲ್ಲಿ ಪ್ರಕಟಿಸುತ್ತೇವೆ. ಅಂತಹವರು ತಮ್ಮ ಭರವಸೆಗಳನ್ನು ಮೇಲ್ ಮಾಡಬಹುದು (editor@vartamaana.com).

ವರ್ತಮಾನ ಬಳಗ 5,000 ರೂ.ಗಳನ್ನು ಈ ಕೆಲಸಕ್ಕಾಗಿ ವಿನಿಯೋಗಿಸುತ್ತದೆ.

ನೀವು ಹಣ ಕಳುಹಿಸಬೇಕಾದ ಬ್ಯಾಂಕ್ ಖಾತೆ: 64046096974 (ಟಿ.ಕೆ.ದಯಾನಂದ) ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸಂಪಂಗಿರಾಮ ನಗರ ಶಾಖೆ, ಬೆಂಗಳೂರು. ಇದೇ ಡಿಸೆಂಬರ್ 15 ರ ಒಳಗೆ ತಾವು ಹಣ ಕಳುಹಿಸಬೇಕಾಗಿ ವಿನಂತಿ. ಚೆಕ್ ಕಳುಹಿಸುವವರು ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು. ಚೆಕ್ ಟಿ.ಕೆ.ದಯಾನಂದ ರ ಹೆಸರಿನಲ್ಲಿರಲಿ.

ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ:

ನಂ. 400, 23ನೇ ಮುಖ್ಯ ರಸ್ತೆ,
ಕುವೆಂಪು ನಗರ, ಎರಡನೇ ಹಂತ
ಬೆಂಗಳೂರು – 560076

ದೂ: 080-26783329

ನಮಸ್ಕಾರ
ವರ್ತಮಾನ ಬಳಗ.


ಡಿಸೆಂಬರ್ 6, 2011 ರಂದು ಸೇರಿಸಿದ್ದು:

ನಮ್ಮ ಮನವಿಗೆ ಅನೇಕರು ಸ್ಪಂದಿಸಿದ್ದಾರೆ. ಕೆಲ ಉತ್ಸಾಹಿ ಬ್ಲಾಗ್ ಗಳು, ವೆಬ್ ಸೈಟ್ ಗಳು, ಫೇಸ್ ಬುಕ್ ಸ್ನೇಹಿತರು ನಮ್ಮ ಮನವಿಯನ್ನು ಮತ್ತಷ್ಟು ಜನರಿಗೆ ಮುಟ್ಟಿಸುವಲ್ಲಿ ತಮ್ಮ ಸಹಕಾರ ನೀಡಿದ್ದಾರೆ. ಅವರಿಗೆಲ್ಲಾ ನಮ್ಮ ಧನ್ಯವಾದಗಳು. ಅವರ ಸಹಕಾರ ಹೀಗೇ ಇರಲಿ ಎಂದು ಬಯಸುತ್ತೇವೆ. ಈ ಮಧ್ಯೆ ಕೆಲವರು ಹಣ ಕಳುಹಿಸುವುದರ ಬಗ್ಗೆ ಕೆಲವು ಮಾಹಿತಿ ಬಯಸಿದ್ದಾರೆ.

ಇಂಟರ್ ನೆಟ್ ಮೂಲಕ ಹಣ ವರ್ಗಾವಣೆ ಮಾಡ ಬಯಸುವವರಿಗೆ ಅನುಕೂಲವಾಗಬಹುದಾದ ಮಾಹಿತಿ ಇಲ್ಲಿದೆ.
ಬ್ಯಾಂಕ್ ಖಾತೆ ಸಂಖ್ಯೆ: 64046096974
ಖಾತೆ: ಉಳಿತಾಯ ಖಾತೆ
ಬ್ಯಾಂಕ್: ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸಂಪಂಗಿರಾಮ ನಗರ ಶಾಖೆ, ಬೆಂಗಳೂರು.
ಐಎಫ್ ಎಸ್ ಸಿ ಕೋಡ್ (IFSC code): SBMY0040376
ಬ್ರಾಂಚ್ ಕೋಡ್ : 040376

(ಇಂಟರ್ ನೆಟ್ ಮೂಲಕ ಹಣ ವರ್ಗಾಯಿಸುವವರು, ಹಣ ಕಳುಹಿಸಿದ ನಂತರ ವರ್ತಮಾನ ಕ್ಕೆ ಇಮೇಲ್ ಮೂಲಕ ತಮ್ಮ ಹೆಸರು, ವಿಳಾಸ ಹಾಗೂ ಕಳುಹಿಸಿದ ಮೊತ್ತ ವನ್ನು ತಿಳಿಸಿದರೆ ತಮ್ಮ ಹೆಸರನ್ನು ಪ್ರಕಟಿಸಲು ಸಹಾಯವಾಗುತ್ತದೆ).

ಚೆಕ್ ಅಥವಾ ಡಿಡಿ ಕಳುಹಿಸುವವರು:

“T.K. Dayanand / ಟಿ.ಕೆ. ದಯಾನಂದ”

ಹೆಸರಿಗೆ ಚೆಕ್ ಬರೆದು
ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ:

ನಂ. 400, 23ನೇ ಮುಖ್ಯ ರಸ್ತೆ,
ಕುವೆಂಪು ನಗರ, ಎರಡನೇ ಹಂತ
ಬೆಂಗಳೂರು – 560076

ದೂ: 080-26783329

ನಮಸ್ಕಾರ,
ವರ್ತಮಾನ ಬಳಗ.


ಡಿಸೆಂಬರ್ 10, 2011 ರಂದು ಸೇರಿಸಿದ್ದು:

-ರವಿ ಕೃಷ್ಣಾರೆಡ್ಡಿ

ಸ್ನೇಹಿತರೆ,

KGF ನ ಸಂತ್ರಸ್ತರಿಗಾಗಿ ನಾವು ಮಾಡಿಕೊಂಡ ಮನವಿಗೆ ಸ್ಪಂದಿಸಿ ಈಗಾಗಲೆ ಐದಾರು ಜನ ತಮ್ಮ ಸಹಾಯ ಹಸ್ತ ಚಾಚಿದ್ದಾರೆ. ನಾವು ಮನವಿ ಪ್ರಕಟಿಸಿದ ಮೊದಲ ಎರಡು ದಿನ ಹಣಸಂದಾಯ ಮಾಡುವ ವಿಚಾರಕ್ಕೆ ಕೆಲವೊಂದು ಮಾಹಿತಿಗಳು ಅಪೂರ್ಣವಾಗಿದ್ದವು. ಈಗ ನೀವು ಯಾವುದೇ ರೀತಿ ಕಳುಹಿಸಬೇಕೆಂದರೂ (ಇಂಟರ್ನೆಟ್/ಎಟಿಎಮ್ ಟ್ರಾನ್ಸ್‌ಫರ್/ಚೆಕ್) ಸಂಪೂರ್ಣ ಮಾಹಿತಿ ಲಭ್ಯವಿದೆ.

ಇಲ್ಲಿಯವರೆಗೆ ಒಟ್ಟು ರೂ. 18,500 ಸಂಗ್ರಹವಾಗಿದೆ. ಇನ್ನೂ ಹಲವರು ಒಂದೆರಡು ದಿನದಲ್ಲಿಯೇ ಚೆಕ್ ಕಳುಹಿಸುವ, ಅಕೌಂಟಿಗೆ ಟ್ರಾನ್ಸ್‌ಫರ್ ಮಾಡುವ ಆಶ್ವಾಸನೆ ಇತ್ತಿದ್ದಾರೆ. ಸಹಾಯ ಮಾಡಬೇಕೆಂದಿರುವವರು ಆದಷ್ಟು ಬೇಗ ಮಾಡಿ. ಡಿಸೆಂಬರ್ 15ಕ್ಕೆ ಸಂಗ್ರಹವಾಗುವ ಒಟ್ಟು ಮೊತ್ತವನ್ನು ಪದಾರ್ಥರೂಪದಲ್ಲಿ ಸಂತ್ರಸ್ತರಿಗೆ ತಲುಪಿಸುವ ಕಾರ್ಯ ಆರಂಭಿಸಲು ಅನುಕೂಲವಾಗುತ್ತದೆ. ಸರಿಯಾದ ಅಥವ ಅತ್ಯಗತ್ಯವಾದ ಸಮಯದಲ್ಲಿ ಮಾಡುವ ಸಹಾಯವೇ ಅತ್ಯುತ್ತಮ ಸಹಾಯ. ಅದನ್ನು ಮತ್ತಷ್ಟು ನಿಧಾನಗೊಳಿಸುವುದು ಬೇಡ ಎನ್ನುವುದಷ್ಟೇ ನಮ್ಮ ಆಶಯ.

ಅಂದ ಹಾಗೆ, ಇಲ್ಲಿಯವರೆಗೆ ಹಣ ಸಂದಾಯ ಮಾಡಿರುವವರ ಮತ್ತು ಚೆಕ್ ಕಳುಹಿಸಿರುವವರ ವಿವರ ಹೀಗಿದೆ:

ವರ್ತಮಾನ ಬಳಗ – 5000
ರಾಮಕೃಷ್ಣ ಎಂ. – 10000
ಮಾನಸ ನಾಗರಾಜ್ – 500
ಅನಾಮಧೇಯ-1 – 1000
ಎಸ್.ವಿಜಯ, ಮೈಸೂರು – 1000
ಸ್ವರ್ಣಕುಮಾರ್ ಬಿ.ಎ. – 1000

ಒಟ್ಟು: 18,500


ದಿನಾಂಕ 20/12/2011 ರಂದು ಸೇರಿಸಿದ್ದು:

KGF ಸಂತ್ರಸ್ತರಿಗೆ ತಲುಪಿದ ನೆರವು…

ಗೆಳೆಯರೆ,

ಕಳೆದ ಭಾನುವಾರ ಟಿ.ಕೆ. ದಯಾನಂದ್, ದಿನೇಶ್ ಕುಮಾರ್, ಮತ್ತು ಗೆಳೆಯರು KGFಗೆ ಹೋಗಿ ಸುಮಾರು 50 ಸಂತ್ರಸ್ತ ಕುಟುಂಬಗಳಿಗೆ ನೆರವನ್ನು ನೀಡಿ ಬಂದಿದ್ದಾರೆ. ಅದರ ವಿವರಗಳನ್ನು ಒಂದೆರಡು ದಿನದಲ್ಲಿ ಪ್ರಕಟಿಸಲಿದ್ದೇವೆ. ಹಾಗೆಯೇ, ರಸೀತಿಯನ್ನೂ ಸಹ. ದಿನೇಶ್ ಕುಮಾರ್‌ರವರು ಈಗ ತಾನೆ ಅಂದಿನ ಹಂಚಿಕೆ ಕಾರ್ಯದ ಕೆಲವು ಫೋಟೋಗಳನ್ನು ಕಳುಹಿಸಿದ್ದಾರೆ. ಅವರಿಗೆ ಮತ್ತು ಇದನ್ನು ಸಾಧ್ಯ ಮಾಡಿದ ಎಲ್ಲರಿಗೂ ಮತ್ತೊಮ್ಮೆ ವರ್ತಮಾನದ ಬಳಗದ ಪರವಾಗಿ ಧನ್ಯವಾದಗಳು.

ಅಂದಹಾಗೆ, ನಮಗೆ ಭಾನುವಾರದ ತನಕವೂ ನೆರವು ಹರಿದು ಬಂದಿತ್ತು. ಒಟ್ಟು ರೂ. 35000 ಹಣಸಂಗ್ರಹವಾಗಿದ್ದು, ಅದರ ಅಂತಿಮ ವಿವರ ಹೀಗಿದೆ: ವರ್ತಮಾನ ಬಳಗ – 5000,, ರಾಮಕೃಷ್ಣ ಎಂ – 10000, ಮಾನಸ ನಾಗರಾಜ್ – 500, ಅನಾಮಧೇಯ-1 – 1000, ಎಸ್. ವಿಜಯ – 1000, ಸ್ವರ್ಣ ಕುಮಾರ್ ಬಿ.ಎ. – 1500, ಬಿ. ಶ್ರೀಪಾದ ಭಟ್ – 2000, ಅನಾಮಧೇಯ-2 – 500, ಅಕ್ಷತಾ – 1000, ಸಂದೀಪ್/ರಾಘವೇಂದ್ರ ಸಿ.ವಿ. – 2000, ಪಿ.ರಂಗನಾಥ – 2000, ತ್ರಿವೇಣಿ ಟಿ.ಸಿ. – 1000, ಅವಿನಾಶ ಕನ್ನಮ್ಮನವರ – 500, ಸತೀಶ್ ಗೌಡ ಬಿ.ಎಚ್. (ಕ.ರ.ವೇ.) – 500, ಆರ್.ಕೆ.ಕೀರ್ತಿ (ಕ.ರ.ವೇ.) – 1000, ಬಿ. ಸಣ್ಣೀರಪ್ಪ (ಕ.ರ.ವೇ.) – 500, ಸಿ.ವಿ.ದೇವರಾಜ್ (ಕ.ರ.ವೇ.) – 1000, ನಂದಿನಿ ಎ.ಡಿ. – 500, ಶಿವಕುಮಾರ್ ದಂಡಿಗೆಹಳ್ಳಿ – 2000, ಕಾರ್ತಿಕ್ ಡಿ.ಪಿ. – 1500.










2 thoughts on “ವರ್ತಮಾನದ ಅಪೀಲು: ಇದು ನಮ್ಮ ಜವಾಬ್ದಾರಿ, ನೀವೂ ಪಾಲ್ಗೊಳ್ಳಿ

  1. Pingback: ವರ್ತಮಾನದ ಕರೆಗೆ ಓಗೊಡೋಣ ಬನ್ನಿ, ಮಲಸಂತ್ರಸ್ಥರಿಗೆ ನೆರವಾಗೋಣ… « VISHWA KANNADIGA NEWS – ವಿಶ್ವ ಕನ್ನಡಿಗ ನ್ಯೂಸ್

  2. ಸಾಕ್ಷಿ

    ಮಾನ್ಯರೆ,
    ನಾಗರೀಕ ಸಮಾಜದಲ್ಲಿದ್ದೇವ ಎಂದು ಭಯವಾಗುತ್ತಿದೆ. ತಮ್ಮ ಕಾರ್ಯಕ್ಕೆ, ತಮ್ಮ ಆಲೋಚನೆಗಳಿಗೆ ಸದಾ ನನ್ನ ಬೆಂಬಲವಿರುತ್ತದೆಂದು ತಿಳಿಸಲು ಇಚ್ಚಿಸುತ್ತೇನೆ. ಆರ್ಥಿಕವಾಗಿ ನನ್ನ ಮಿತಿಯೊಳಗೆ ಸಾದ್ಯವಾದ ವೇಳೆಯೊಳಗೆ ಹಣ ಕಳಿಸುತ್ತೇನೆಂದು ತಿಳಿಸುತ್ತಿದ್ದೇನೆ.
    ವಂದನೆಗಳೊಂದಿಗೆ

    Reply

Leave a Reply to ಸಾಕ್ಷಿ Cancel reply

Your email address will not be published. Required fields are marked *