ಸ್ನೇಹಿತರೆ,
2008ರಲ್ಲಿ ಮೊದಲ ಗಾಂಧಿ ಜಯಂತಿ ಕಥಾಸ್ಪರ್ಧೆಯನ್ನು ನಡೆಸಿದ್ದು. ಎರಡನೆಯದು 2009ರಲ್ಲಿ. ಎರಡೂ “ವಿಕ್ರಾಂತ ಕರ್ನಾಟಕ” ವಾರಪತ್ರಿಕೆ ನಡೆಸಿದ್ದು; ಪ್ರಾಯೋಜಿಸಿದ್ದು ನಾನು. ನಂತರ ವಿಕ್ರಾಂತ ಕರ್ನಾಟಕ ನಿಂತು ಹೋದ ಮೇಲೆ ಹಲವಾರು ಕಾರಣಗಳಿಂದಾಗಿ ನನಗೆ ಅದನ್ನು ಮುಂದುವರೆಸಲು ಆಗಿರಲಿಲ್ಲ. ಈಗ ವರ್ತಮಾನದ ಅಡಿಯಲ್ಲಿ ಅದನ್ನು ಮುಂದುವರೆಸಬೇಕೆಂದು ತೀರ್ಮಾನಿಸಿದ್ದೇನೆ. ಬಹುಶ: ಈ ವರ್ಷದಿಂದ ಇದನ್ನು ಪ್ರತಿ ವರ್ಷ ತಪ್ಪದೆ ನಡೆಸುವ ಯೋಜನೆ ಹಾಕುತ್ತಿದ್ದೇನೆ.
ಗಾಂಧಿ ಜಯಂತಿ ಕಥಾಸ್ಪರ್ಧೆಯ ಆರಂಭದಲ್ಲಿ ಈ ಸ್ಪರ್ಧೆಯ ಉದ್ದೇಶ ಮತ್ತು ಕತೆಗಳು ಯಾವುದರ ಹಿನ್ನೆಲೆಯಲ್ಲಿ ರೂಪುಗೊಂಡಿರಬೇಕು ಎಂದು ಕೆಲವು ಟಿಪ್ಪಣಿ ಬರೆದಿದ್ದೆ. ಆದರೆ ಈ ಬಾರಿ ಅಂತಹ ನಿಬಂಧನೆಗಳು ಏನೂ ಇಲ್ಲ. ಉತ್ತಮ ಕತೆಗಳನ್ನು ಬರೆಯಿರಿ ಮತ್ತು ಕಳುಹಿಸಿ ಎಂಬುದಷ್ಟೇ ವಿನಂತಿ.
ಬಹುಮಾನಗಳ ವಿವರ:
ಮೊದಲ ಬಹುಮಾನ: ರೂ. 6000
ಎರಡನೆ ಬಹುಮಾನ: ರೂ. 4000
ಮೂರನೆಯ ಬಹುಮಾನ: ರೂ. 3000
ಎರಡು ಪ್ರೋತ್ಸಾಹಕ ಬಹುಮಾನಗಳು: ತಲಾ ರೂ. 1000
ನಿಮ್ಮ ಕತೆ ತಲುಪಲು ಕೊನೆಯ ದಿನಾಂಕ: ಆಗಸ್ಟ್ 31, 2012
ಸೆಪ್ಟೆಂಬರ್ ತಿಂಗಳಿನಲ್ಲಿ ಕತೆಗಳ ಮೌಲ್ಯಮಾಪನ ಮಾಡಿ ಗಾಂಧಿ ಜಯಂತಿಯ ಸಂದರ್ಭದಲ್ಲಿ ಒಂದು ಪುಟ್ಟ ಸಭೆ ಮಾಡಿ ಬಹುಮಾನ ನೀಡಲಾಗುತ್ತದೆ. ಬಹುಮಾನ ಪಡೆದ ಕತೆಗಳು ನಂತರ ವರ್ತಮಾನ.ಕಾಮ್ನಲ್ಲಿ ಪ್ರಕಟವಾಗಲಿವೆ.
ಮಾಮೂಲಿನಂತೆ ಎಲ್ಲಾ ಕಥಾಸ್ಪರ್ಧೆಗಳ ನಿಬಂಧನೆಗಳು ಇಲ್ಲಿಯೂ ಅನ್ವಯಿಸುತ್ತವೆ: ಕತೆ ಸ್ವಂತದ್ದಾಗಿರಬೇಕು; ಅಪ್ರಕಟಿತವಾಗಿರಬೇಕು; ಕನಿಷ್ಟ 1500 ಪದಗಳದ್ದಾಗಿರಬೇಕು.
ಮತ್ತು, ಕೆಲವು ತಾಂತ್ರಿಕ ಮತ್ತು ಅನುಕೂಲದ ಕಾರಣಕ್ಕಾಗಿ ದಯವಿಟ್ಟು ನಿಮ್ಮ ಕತೆಯ ಸಾಫ್ಟ್ ಕಾಪಿಯನ್ನೇ ಕಳುಹಿಸಿ. ಬರಹ/ನುಡಿ/ಯೂನಿಕೋಡ್, ಹೀಗೆ ಯಾವುದೇ ತಂತ್ರಾಂಶದಲ್ಲಿದ್ದರೂ ಸರಿ.
ಕತೆಗಳನ್ನು ಕಳುಹಿಸಬೇಕಾಗದ ಇಮೇಲ್ ವಿಳಾಸ: editor@vartamaana.com
ಈ ಪ್ರಕಟಣೆ ನೋಡಿರದ ತಮ್ಮ ಕತೆಗಾರ ಸ್ನೇಹಿತರಿಗೂ ದಯವಿಟ್ಟು ಇದನ್ನು ತಲುಪಿಸಿ ಎಂದು ವಿನಂತಿಸುತ್ತೇನೆ.
ಧನ್ಯವಾದಗಳು,
ರವಿ ಕೃಷ್ಣಾರೆಡ್ಡಿ
2009ರ ಗಾಂಧಿ ಜಯಂತಿ ಕಥಾ ಸ್ಪರ್ಧೆಯಿಂದಲೆ ನಾನು ಕಥೆಗಾರನಾಗ್ಇ ಬರವಣಿಗೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಯಿತು. ನನ್ನ ಮೊದಲ ಕಥೆ “ಮೊಹರಂ ಕಡೇ ದಿನ” ಈ ಸ್ಪರ್ದೆಯಲ್ಲಿ ಬಹುಮಾನ ಪಡೆದು ಪ್ರಕಟಗೊಂಡು ನನ್ನ ಉತ್ಸಾಹ ಮೂಡಿಸಿತು. ಈ ಸ್ಪೆರ್ಧೆ ಮತ್ತೆ ಶುರುವಾಗಿದ್ದು ಸಂತಸದ ಸಂಗತಿ. ನನ್ನಂಥ ನೂರಾರು ಕಥೆಗಾರರಿಗೆ ಪ್ರೇರಣೆ ನೀಡಲಿ.
ತುಂಬಾ ಸಂತೋಷದ ವಿಷಯ ಸರ್. ನಿಮ್ಮ ಪ್ರಯತ್ನ, ಯೋಚನೆ ಒಳ್ಳೆಯದು. ಹೊಸ ಕಥೆಗಳು, ಹೊಸತನದ ಕಥೆಗಳು, ಹೊಸ ಕಥೆಗಾರರು ಹುಟ್ಟಲಿ. ಶುಭಾಷಯಗಳು.
– ಇಂದ್ರಕುಮಾರ್.ಎಚ್.ಬಿ., ದಾವಣಗೆರೆ 9986465530
ಕನಿಷ್ಠ 1500 ಅಥವಾ ಗರಿಷ್ಟ 1500 ?
nanna ‘punarapi’kathege vikranthadalli bahumaana bandithu.mathe sparde ittiruvudu kushi thandide.chalam.hassan.
8747043485