ಧರ್ಮಸ್ಥಳದಲ್ಲಿ ಭಯಭೀತಿ ತೊಲಗಲಿ, ನೆಲದ ಕಾನೂನು ನೆಲೆಗೊಳ್ಳಲಿ…


– ರವಿ ಕೃಷ್ಣಾರೆಡ್ದಿ


ಕಳೆದ ಎರಡು ದಿನ ಮಂಗಳೂರು-ಉಡುಪಿ ಜಿಲ್ಲೆಗಳಲ್ಲಿ ಇದ್ದೆ. ಎರಡು ರಾತ್ರಿ ಮಂಗಳೂರು ಜಿಲ್ಲೆಯಲ್ಲಿ ಉಳಿದುಕೊಂಡಿದ್ದೆ. ನೆನ್ನೆ ಉಡುಪಿ-ಕಾರ್ಕಳ-ಮೂಡುಬಿದ್ರೆಯ ಮೂಲಕ ಬೆಂಗಳೂರಿಗೆ ಹೊರಟಾಗ ಯಾವ ದಾರಿ ಸೂಕ್ತ (ಶಿರಾಡಿ ಘಟ್ಟ ರಸ್ತೆಯೊ, ಚಾರ್ಮಾಡಿ ಘಟ್ಟ ರಸ್ತೆಯೋ) ಎಂದಿದ್ದಕ್ಕೆ ಅಲ್ಲಿಯ ಸೇಹಿತರೊಬ್ಬರು, ’ಬೆಳ್ತಂಗಡಿ ಮತ್ತು ಉಜಿರೆಯಿಂದ ನೇರವಾಗಿ ಚಾರ್ಮಾಡಿ ಘಟ್ಟದ ರಸ್ತೆಯಲ್ಲಿ ಹೋಗಿ. ಹಾಗೆ ಹೋದರೆ ನಿಮಗೆ ಧರ್ಮಸ್ಥಳದ ಮೂಲಕ ಹೋಗುವುದೂ ತಪ್ಪುತ್ತದೆ. ಅಲ್ಲಿ ಗೊತ್ತಲ್ಲ ಏನೇನಾಗುತ್ತಿದೆ ಎಂದು, ಜಾಗ ಸರಿ ಇಲ್ಲ,’ ಎಂದರು. ಆರೋಗ್ಯಕರ ಹಾಸ್ಯಪ್ರವೃತ್ತಿ ಇರುವ ಅವರು ಅದನ್ನು ತಮಾಷೆಯಿಂದ ಹೇಳಿದ್ದು. ಆದರೆ ಹೊರಗಿನವನಾದ ನನಗಿಂತ ಹೆಚ್ಚಿಗೆ ಅವರಿಗೆ ಗೊತ್ತಿತ್ತು, ಅದು ಕೇವಲ ತಮಾಷೆಯಲ್ಲ ಎಂದು.

ಇಲ್ಲಿಯವರೆಗೂ ಕರ್ನಾಟಕದಲ್ಲಿ ಪ್ರಶ್ನಾತೀತ ವ್ಯಕ್ತಿಯಾಗಿದ್ದವರೊಬ್ಬರು ಕೆಲ ತಿಂಗಳುಗಳಿಂದ ಪ್ರಶ್ನಾತೀತರಾಗಿ ಉಳಿದಿಲ್ಲ. ಬಹುಶಃ ನನ್ನ ತಂದೆ-ತಾಯಿಯ ಎರಡೂ ಕಡೆಯ ಪೂರ್ವಿಕರೆಲ್ಲರೂ ಸೇರಿ ಧರ್ಮಸ್ಥಳವನ್ನು ಸಂದರ್ಶಿಸಿದ್ದಕ್ಕಿಂತ ಹಲವು ಪಟ್ಟು ಹೆಚ್ಚಿಗೆ ಮಂಜುನಾಥನನ್ನು ಸಂದರ್ಶಿಸಿರುವ ಬಯಲುಸೀಮೆಯ Dharmasthala_Templeನನ್ನಂತಹವರಿಗೆ ಧರ್ಮಸ್ಥಳದ ಬಗ್ಗೆ ಒಂದು ಭಯ-ಭಕ್ತಿ ಇದೆ. ಇಲ್ಲಿ ಭಕ್ತಿಗಿಂತಲೂ ಹೆಚ್ಚಾಗಿ ಕೆಲವು ಕಟ್ಟುಕತೆಗಳ ಮೂಲಕ (ವ್ಯವಸ್ಥಿತವಾಗಿ?) ಮೌಢ್ಯ ಮತ್ತು ದೈವಭಯವನ್ನು ಹುಟ್ಟು ಹಾಕಲಾಗಿದೆ.

ಈ ಸಾರಿಯ ನನ್ನ ಪ್ರಯಾಣದಲ್ಲಿ ಕಂಡಹಾಗೆ ಬೆಳ್ತಂಗಡಿ ಮತ್ತು ಸುತ್ತಮುತ್ತಲ ಜನಕ್ಕೆ ನಮಗಿಂತ ಹೆಚ್ಚಿನ ವಾಸ್ತವದ ಪರಿಚಯ ಇದೆ, ಮತ್ತು ಇಲ್ಲಿಯವರೆಗೆ ಬಹುತೇಕ ಎಲ್ಲರೂ ಭಯದಿಂದ ಹಾಗೂ ಏನು ಮಾಡಿದರೂ ಉಪಯೋಗವಿಲ್ಲ ಎನ್ನುವ ಕಾರಣಕ್ಕೆ ಬಾಯಿಮುಚ್ಚಿಕೊಂಡೇ ಇದ್ದರು. ಈಗ ಅವರು ಬಹಿರಂಗವಾಗಿ ತಮ್ಮ ಅಸಮಾಧಾನವನ್ನು, ಕೋಪವನ್ನು ಹೊರಹಾಕಲು ಸೌಜನ್ಯ ಎನ್ನುವ ಆ ಮಣ್ಣಿನ ಒಬ್ಬ ಹೆಣ್ಣುಮಗಳ ಬಲಿ ಮೂಲವಾದದ್ದು ಮಾತ್ರ ದುರಂತ.

ಅಂದ ಹಾಗೆ, ಬೆಳ್ತಂಗಡಿ ಸುತ್ತಮುತ್ತಲ ಅನೇಕ ಪ್ರಜ್ಞಾವಂತರಿಗೆ ಸೌಜನ್ಯಾಳ ಮೇಲಿನ ಅತ್ಯಾಚಾರ ಮತ್ತು ಕೊಲೆ ಧಿಗ್ಭ್ರಾಂತಿ ಮೂಡಿಸಿದ ಘಟನೆ ಅಲ್ಲ. ಇಂತಹವು ಅಲ್ಲಿ ಆಗಾಗ್ಗೆ ಬಲಿಷ್ಟರಿಂದ ನಡೆಯುತ್ತಿದ್ದ, ಕಾಲಗರ್ಭದಲ್ಲಿ ಮುಚ್ಚಿಹೋಗುತ್ತಿದ್ದ ಘಟನೆಗಳೆ. ಆದರೆ ಅವರಿಗೆ ನಿಜಕ್ಕೂ ಶಾಕ್ ಆಗಿರುವುದು, ಹೀಗೂ ಆಗಲು ಸಾಧ್ಯವೇ ಎನ್ನಿಸುತ್ತಿರುವುದು, ಈ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮುಚ್ಚಿಹೋಗದೆ “ಖಾವಂದ”ರಿಗೆ ಬೆವರಿಳಿಯುವಂತೆ ಆಗಿರುವುದು.

ನನಗೆ ದಕ್ಷಿಣ ಕನ್ನಡದಲ್ಲಿ ಹಲವಾರು ಸಜ್ಜನ ಸ್ನೇಹಿತರಿದ್ದಾರೆ. ಕೆಲವು ಬಂಡುಕೋರ, ರಾಜಿಯಿಲ್ಲದ ಯುವ ಸ್ನೇಹಿತರಂತೆ, ಪ್ರಬುದ್ಧ, ಮಿತಭಾಷಿಕ, ಮಧ್ಯವಯಸ್ಕ ಸ್ನೇಹಿತರೂ ಇದ್ದಾರೆ. ಆದರೆ ಈ ಎಲ್ಲಾ ಸ್ನೇಹಿತರಿಗೆ ಧರ್ಮಸ್ಥಳದ ವಿಚಾರಕ್ಕೆ ಬಂದಾಗ ತಕರಾರುಗಳಿವೆ. ಇವರ್‍ಯಾರೂ ವೈಯಕ್ತಿಕ ದ್ವೇಷದಿಂದ ಮಾತನಾಡುವವರಲ್ಲ. ವರ್ತಮಾನ.ಕಾಮ್‌ನಲ್ಲಿ ವಾರದ ಹಿಂದೆ “ಪ್ರಶ್ನೆಗಳಿರುವುದು ಡಿ. ವೀರೇಂದ್ರ ಹೆಗ್ಗಡೆಗೆ!” ಎನ್ನುವ ಲೇಖನ ಬಂದಾಗ ನಾನದನ್ನು ಫೆಸ್‌ಬುಕ್‌ನಲ್ಲಿ ಶೇರ್ ಮಾಡಿಕೊಳ್ಳುತ್ತ ಆ ಹಿನ್ನೆಲೆಯಲ್ಲಿ ಈ ಟಿಪ್ಫಣಿ ಬರೆದಿದ್ದೆ:

“ನಾನು ನಂಬುವ ಸ್ನೇಹಿತರ ಪ್ರಕಾರ ಧರ್ಮಸ್ಥಳ ಮತ್ತು ಅದರ ಸುತ್ತಮುತ್ತ ನಡೆಯುವ ಅನೇಕ ಘಟನೆಗಳು ಅಲ್ಲಿಯ ವ್ಯವಸ್ಥೆಯ ಬಗ್ಗೆ ಸಂಶಯ ಮತ್ತು ಭಯ ಹುಟ್ಟಿಸುವಂತಹವು. ಒಂದು ರೀತಿಯಲ್ಲಿ ಪರ್ಯಾಯ ಸರ್ಕಾರವೇ ಅಲ್ಲಿ ಅಸ್ತಿತ್ವದಲ್ಲಿದೆ ಎನ್ನುತ್ತಾರೆ. ನಾಲ್ಕಾರು ಮರಣದಂಡನೆಗಳಿಗಾಗುವಷ್ಟು ತಪ್ಪು ಮಾಡಿರುವವರು ಅಥವ ಅದರ ಪೋಷಕರು ಅಲ್ಲಿ “ದೊಡ್ಡವರ” ವೇಷದಲ್ಲಿ ಇದ್ದಾರೆ ಎಂದು ಜನ ಹೇಳುತ್ತಾರೆ. ಸೌಜನ್ಯ ಎನ್ನುವ ಹೆಣ್ಣುಮಗಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಅಪರಾಧಿಗಳು ಹೊರಗಿದ್ದಾರೆ, ಅಮಾಯಕ ಮತ್ತು ಮಾನಸಿಕ ಅಸ್ವಸ್ಥನೊಬ್ಬ ಈ ಕೇಸಿನಲ್ಲಿ ಫಿಕ್ಸ್ ಆಗಿ ಬಂದಿಯಾಗಿದ್ದಾನೆ ಎಂದು ವರ್ಷದಿಂದಲೂ ಕೆಲವು ಜನ ಹೇಳುತ್ತಾ, ನ್ಯಾಯಕ್ಕಾಗಿ ಹೋರಾಡುತ್ತ ಬಂದಿದ್ದಾರೆ.

ಜನ ವ್ಯಕ್ತಿಪೂಜೆಯನ್ನು ಬದಿಗಿಟ್ಟು ಸತ್ಯವನ್ನಷ್ಟೇ ನೋಡಲು ಪ್ರಯತ್ನಿಸಬೇಕು ಮತ್ತು ಮತೀಯ ಅಥವ ಆಸ್ತಿಕ ಕಾರಣಗಳಿಗಾಗಿ ಭಾವಾವೇಶಕ್ಕೆ ಒಳಗಾಗಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ನಿರಾಕರಣೆ ಮಾಡುವಂತಹ ಹಂತಕ್ಕೆ ತಮ್ಮ ಭಕ್ತಿ ಮತ್ತು ಆಸ್ತಿಕತೆಯನ್ನು ಬಲಿಕೊಡಬಾರದು ಎನ್ನುವುದು ನನ್ನ ಮನವಿ. ಗಾಂಧಿ ಹೇಳುತ್ತಾರೆ, “ಎಲ್ಲಾ ಧರ್ಮಗಳೂ ಮನುಷ್ಯ ನಿರ್ಮಿತ; ಹಾಗಾಗಿಯೇ ಅವು ಅಪೂರ್ಣ.” ಹಾಗಾಗಿ ಮತಾಂಧತೆಗೆ ಒಳಗಾಗದೆ, ದೇವರು ಮತ್ತು ನಮ್ಮ ನಡುವೆ ಇರುವ ಪೂಜಾರಿಯನ್ನು ಮನುಷ್ಯನೆಂದೇ ಪರಿಗಣಿಸಿ ಆತನನ್ನೂ ವಿಮರ್ಶಿಸುವ, ಪ್ರಶ್ನಿಸುವ, ಸಾಕ್ಷಿಗಳು ಇರುವಾಗ ಸಂಶಯಿಸುವ, ಅಂತಿಮವಾಗಿ ಅವನನ್ನು ನಿರಾಕರಿಸುವ ಹಕ್ಕನ್ನು ಉಳಿಸಿಕೊಳ್ಳಬೇಕು.

ಈ ಸಂದರ್ಭದಲ್ಲಿ ನಮ್ಮ ಎಲ್ಲಾ ಮುಖ್ಯವಾಹಿನಿ ಮಾಧ್ಯಮಗಳು ಸೌಜನ್ಯ ಎಂಬ ಈ ನೆಲದ ಹೆಣ್ಣುಮಗಳಿಗೆ ಆಗಿರುವ ಅನ್ಯಾಯವನ್ನು ಪ್ರತಿಭಟಿಸಿ ನಡೆಸಲಾಗುತ್ತಿರುವ ಹೋರಾಟವನ್ನು ಮುಚ್ಚಿಡದೆ ಜನರ ಮುಂದೆ ಇಡಬೇಕೆಂದು ವಿನಂತಿಸುತ್ತೇನೆ.”

ಇದಾದ ನಂತರವೇ ನಾನು ಮಂಗಳೂರಿಗೆ ಹೋಗಿದ್ದು. ಅಲ್ಲಿ ಮೇಲಿನದಕ್ಕಿಂತ ಹೆಚ್ಚು ಅಸಹ್ಯ ಹುಟ್ಟಿಸುವ, ಗಾಬರಿಯಾಗಿಸುವ ಮಾತುಗಳನ್ನು ಕೇಳಿದೆ. ಸ್ವತಃ ಈಗಿನ ಧರ್ಮಾಧಿಕಾರಿಯವರ ಸಜ್ಜನೆ ತಾಯಿಯವರು ಎರಡು-ಮೂರು ದಶಕಗಳ ಹಿಂದೆ ದುರ್ಮರಣಕ್ಕೀಡಾದ ಘಟನೆ ಅಪಘಾತವೋ ಅಥವ ಆಯೋಜಿತ ಕೊಲೆಯೋ sowjanya-heggadeಎನ್ನುವ ಸಂಶಯಗಳಿಂದ ಹಿಡಿದು. ಧರ್ಮಸ್ಥಳದ ಸಂಸ್ಥೆ ನಡೆಸುವ ಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿಯಾಗಬೇಕಿದ್ದ ಶ್ರೀಮತಿ ಹರಳೆಯವರನ್ನು ಪೆಟ್ರೋಲ್ ಹಾಕಿ ಸುಟ್ಟ ಕೊಲೆಯ ಬಗ್ಗೆಯೂ ಜನ ಬೇಸರ ಖಿನ್ನತೆಯಿಂದ ಮಾತನಾಡುತ್ತಾರೆ. ಉಜಿರೆಯಲ್ಲಿ ಅವರ ಸಂಸ್ಥೆಯಲ್ಲಿ ಓದಿದ ಕೆಲವು ಪ್ರಾಮಾಣಿಕ ಮತ್ತು ಸಂಯಮಿ ಮನಸ್ಸುಗಳು ಸಹ ಹೆಗ್ಗಡೆಯವರ ಕುಟುಂಬದವರು ತಮ್ಮ ಕೆಳಗಿನ ನೌಕರರನ್ನು ನಡೆಸಿಕೊಳ್ಳುವ ದರ್ಪ ದೌರ್ಜನ್ಯದ ಬಗ್ಗೆ ಬೇಸರ ವ್ಯಕ್ತಪಡಿಸುತ್ತಾರೆ. ಆ ಕುಟುಂಬದ ಕೆಲವು ದುರಂತಗಳನ್ನು ನೆನೆದು ಬಹುಶಃ ಇದು ನಿಸರ್ಗ ನ್ಯಾಯವೇನೋ ಎನ್ನುತ್ತಾರೆ.

ಹಾಗೆಯೇ, ’ಅವರ ಒಡೆತನದಲ್ಲಿರುವ ತನಕ ನಾನು ಆ ದೇವಸ್ಥಾನಕ್ಕೆ ಹೋಗುವುದಿಲ್ಲ. ಸರ್ಕಾರ ಅದನ್ನು ವಹಿಸಿಕೊಂಡ ದಿನ ಮಂಜುನಾಥನ ದರ್ಶನಕ್ಕೆ ಹೋಗುತ್ತೇನೆ,’ ಎಂದು “ಹರಕೆ” ಹೊತ್ತಿರುವ ಆಸ್ತಿಕರೂ ಇದ್ದಾರೆ.

ವಿಷಯ ದಿನದಿಂದ ದಿನಕ್ಕೆ ಗಂಭೀರವಾಗುತ್ತ ಹೋಗುತ್ತಿದೆ. ನಿಸರ್ಗ ನ್ಯಾಯಕ್ಕಿಂತ ಹೆಚ್ಚಾಗಿ ಈ ನೆಲದ ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕಿದೆ. ಇಲ್ಲದಿದ್ದರೆ ನಾವು ಇಂತಹ ವ್ಯವಸ್ಥೆ ಕಟ್ಟಿಕೊಂಡದ್ದಕ್ಕೆ ಅರ್ಥವಾದರೂ ಏನಿರುತ್ತದೆ? ಸೌಜನ್ಯಾಳ ಕೊಲೆ ಪ್ರಕರಣ ಮಾತ್ರವಲ್ಲ, ಇಲ್ಲಿ ಹತ್ತಾರು ವರ್ಷಗಳಿಂದ ದಾಖಲಾಗುತ್ತ ಬಂದಿದ್ದ ಅನಾಥ ಶವಗಳ ಹಿನ್ನೆಲೆ ಏನು, ಅಷ್ಟೊಂದು ಪ್ರಮಾಣದಲ್ಲಿ ಇಲ್ಲಿ ಅಸಹಜ ಸಾವುಗಳು ಘಟಿಸಲು ಕಾರಣವೇನು, ಮತ್ತು ಇದ್ದಕ್ಕಿದ್ದಂತೆ ವರ್ಷದಿಂದೀಚೆಗೆ ಅನಾಥ ಶವಗಳು ಸಿಗದೆ ಹೋಗುತ್ತಿರಲು ಕಾರಣವೇನು ಎನ್ನುವುದರ ತನಿಖೆಯೂ ಆಗಬೇಕು. ರಾಜ್ಯ ಸರ್ಕಾರದ ಸಿಐಡಿ ತನಿಖೆ ಎಂದರೆ ಅದು ಬಹಳಷ್ಟು ಸಲ JusticeForSowjanya(ಪಟ್ಟಭದ್ರರು ಮತ್ತು ಪ್ರಭಾವಿಗಳು ಪಾಲ್ಗೊಂಡಿರುವ ಕೇಸುಗಳಲ್ಲಿ) ಮೊದಲೇ ವರದಿ ಸಿದ್ಧಪಡಿಸಿ ನಂತರ ತನಿಖೆಯ ನಾಟಕ ಆಡುವುದು. ಸ್ಥಳೀಯ ಕಾಂಗ್ರೆಸ್ ಶಾಸಕರನ್ನು ಹೊರತುಪಡಿಸಿ ರಾಜ್ಯದ ಅನೇಕ ಕಾಂಗ್ರೆಸ್ ನಾಯಕರು ಮಂಡಿಯೂರಿ ಜೈಕಾರ ಹಾಕುತ್ತಿರುವಾಗ ಸಿಬಿಐ ತನಿಖೆಯಿಂದಲಾದರೂ ಸತ್ಯ ಹೊರಬರುತ್ತದೆ ಎನ್ನುವುದು ಸಂದೇಹಾಸ್ಪದ. ಬಹುಶಃ ಕೆಲವು ಸಂಘಸಂಸ್ಥೆಗಳು ಮತ್ತು ಮಾಧ್ಯಮಗಳೇ ಇದನ್ನು ಮಾಡಬೇಕಿದೆ.

ಈಗ ಹೊರಗುತ್ತಿಗೆಯ ಕಾಲ. ಸರ್ಕಾರದ ಕರ್ತವ್ಯವಾಗಿರುವ ಮತ್ತು ಅದು ಮಾಡಲೇಬೇಕಿರುವ ಕೆಲವು ಸಾಮಾಜಿಕ ಮತ್ತು ಶೈಕ್ಷಣಿಕ ಕೆಲಸಗಳನ್ನು ಕೆಲವು ವ್ಯಕ್ತಿ ಮತ್ತು ಸಂಸ್ಥೆಗಳೇ ಮಾಡಿದಾಕ್ಷಣ ನಾವು ಆ ವ್ಯಕ್ತಿ ಮತ್ತು ಸಂಸ್ಥೆಗಳನ್ನು ವೈಭವೀಕರಿಸಲು ಆರಂಭಿಸಿದರೆ ಸಮಸ್ಯೆ ನಮ್ಮ ತಿಳಿವಳಿಕೆಯದ್ದಾಗುತ್ತದೆ. ಯೋಗ್ಯ ಜನಪ್ರತಿನಿಧಿಗಳನ್ನು ಆರಿಸಿಕೊಳ್ಳದ ನಮ್ಮ ಅಯೋಗ್ಯತನದ್ದಾಗುತ್ತದೆ. ಇದೆಲ್ಲವನ್ನೂ ತಿಳಿದುಕೊಳ್ಳದೆ, ನಮ್ಮ ಜವಾಬ್ದಾರಿಗಳನ್ನು ನಿರಾಕರಿಸಿಕೊಂಡು ಕೆಲವು ಸ್ವಾರ್ಥ ಮತ್ತು ಕಪಟಿ ವ್ಯಕ್ತಿಗಳು ಮಾಡುವ ’ಸಮಾಜಮುಖಿ ಕೆಲಸ’ಗಳನ್ನು ಮಾತ್ರ ಗಮನದಲ್ಲಿಟ್ಟುಕೊಂಡು ಅನಗತ್ಯವಾದ ವ್ಯಕ್ತಿನಿಷ್ಟೆ ಮತ್ತು ಆರಾಧನಾ ಮನೋಭಾವ ಬೆಳೆಸಿಕೊಳ್ಳುವುದು ಬೇಡ ಎಂದು ನನ್ನ ಯುವಮಿತ್ರರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಪ್ರಬುದ್ಧ ಮತ್ತು ನೈತಿಕ ಮೂಲದ ವ್ಯವಸ್ಥೆ ನಮ್ಮದಾಗಲಿ.

11 thoughts on “ಧರ್ಮಸ್ಥಳದಲ್ಲಿ ಭಯಭೀತಿ ತೊಲಗಲಿ, ನೆಲದ ಕಾನೂನು ನೆಲೆಗೊಳ್ಳಲಿ…

  1. partha

    “ಖಾವಂದರ” ಕೈವಾಡ ಇದ್ದೇ ಇದೆ ಅಂತ ನಿಮಗೆ ಹೇಗೆ ಗೊತ್ತು ?? ಬರಿ ಗಾಳಿ ಮಾತಿನ ಆಧಾರಗಳ ಮೇಲೆ ತೀರ್ಮಾನಗಳನ್ನು ಕೊಡುವುದು ತರವೂ ಅಲ್ಲ , ಒಳ್ಳೆ ಪತ್ರಕರ್ತನ ಗುಣವೂ ಅಲ್ಲ

    Reply
      1. partha

        ನಾನು ಯಾರ ಮೇಲೂ ಆರೋಪ ಮಾಡುತ್ತಿಲ್ಲವಲ್ಲ. ರವಿಕೃಷ್ಣ ರೆಡ್ಡಿ ಅವರು ಆರೋಪ ಮಾಡುವ ದನಿಯಲ್ಲಿ ಮಾತನಾಡುತ್ತಿದ್ದಾರೆ. ಅವರಿಗೆ ಒಂದಿಷ್ಟು ಆಧಾರಗಳಿರಬೇಕು.ಇಲ್ಲ ಬರಿ ಸ್ಪ್ಲಿಟ್ ಅಂಡ್ ರನ್ ಮನಸ್ತಿತಿ ಕನ್ನಡ ಪತ್ರಕರ್ತರ ರಕ್ತಗತವಾಗುತ್ತಿರುವುದು ದುರಂತ

        Reply
  2. sharmishtha

    In school days we used to sing a song which was about Dharmasthala. It goes like this `Nyaya neethi murthivetta satya daivave, mahamahima manjunatha namo ennuve…’. In this song one line goes like this `NINNA RAKSHE IRALU NANU ELLA GELLUVE…’ now days it started to sound differently to me. it is like a mockery of whole incident.
    Nisarga nyaya ivarige kotte illa. avrige bandiruvanthaddu jana samanyarigu barabahudagiruva aarogya samasyegalu matra. Soujanya & Padmalatha incident nalli aagiruva papakke aa shikshe saka?????? NEVER. I was on tears when I saw that poor girls face in tv.

    Reply
  3. Ananda Prasad

    ಮೋಸ ಹೋಗುವವರು ಇರುವವರೆಗೆ ಮೋಸ ಮಾಡುವವರು ಇರುತ್ತಾರೆ. ಮೋಸ ಮಾಡುವವರದು ತಪ್ಪು ಇರುವಂತೆ ಮೋಸ ಹೋಗುವವರದೂ ತಪ್ಪು ಇರುತ್ತದೆ. ಮೋಸ ಹೋಗುವವರ ತಪ್ಪು ಏನೆಂದರೆ ಯಾವುದನ್ನೂ ವಿಚಾರ ಮಾಡದೆ ಮೋಸ ಮಾಡುವವರು ಹೇಳಿದ್ದನ್ನು ನಂಬುವುದು. ಅದೇ ರೀತಿ ನಂಬುವವರು ಇರುವಲ್ಲಿವರೆಗೆ ನಂಬಿಸುವವರೂ ಇರುತ್ತಾರೆ ಎಂಬುದನ್ನು ನಾವು ತಿಳಿದುಕೊಳ್ಳಬೇಕಾಗಿದೆ. ನಂಬಿಸುವವರದು ತಪ್ಪು ಇರುವಂತೆ ನಂಬುವವರದೂ ತಪ್ಪು ಇರುತ್ತದೆ. ನಂಬುವಾಗಲೂ ವಿಚಾರ ಮಾಡಿ ನಂಬುವ ಪ್ರವೃತ್ತಿಯನ್ನು ಜನರು ಬೆಳೆಸಿಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆ ಆರೋಗ್ಯಕರವಾಗಿ ಬೆಳೆದೀತು, ಇಲ್ಲದಿದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆ ಬೆಳೆಯಲು ಸಾಧ್ಯವಿಲ್ಲ. ಇಂದು ನಂಬಿಸುವ ಉದ್ಯಮವು ಒಂದು ದೊಡ್ಡ ಉದ್ಯಮವಾಗಿ ಬೆಳೆದಿದೆ. ಈ ಉದ್ಯಮವನ್ನು ಬೆಳೆಸಿದ ಕುಳಗಳು ನಿರಂಕುಶ ಪ್ರಭುಗಳ ರೀತಿಯಲ್ಲಿ ಸಕಲ ಭೋಗಗಳನ್ನೂ ಅನುಭವಿಸುತ್ತಾ ಜನರ ಹಣದಲ್ಲಿ ತಮ್ಮ ಘನತೆ, ಗೌರವ ಹೆಚ್ಚಿಸಿಕೊಳ್ಳುತ್ತಿರುವುದು ವಿಪರ್ಯಾಸ. ಇದನ್ನು ತಿಳಿಯದೆ ತಮ್ಮ ನಂಬಿಕೆಯ ದೌರ್ಬಲ್ಯದಿಂದ ಅಂಥ ನಿರಂಕುಶ ಪ್ರಭುಗಳನ್ನೇ ಸಮರ್ಥಿಸಲು ಹೊರಡುವ ಅಮಾಯಕ ಭಕ್ತರನ್ನು ಕಂಡಾಗ ನಗಬೇಕೋ ಅಳಬೇಕೋ ಗೊತ್ತಾಗುವುದಿಲ್ಲ.

    ವಿಚಾರವಂತರಲ್ಲದ ಜನರಿಗೆ ನಂಬಿಕೆ ಅಗತ್ಯ, ಇಲ್ಲವೆಂದು ಹೇಳಲಾಗದು. ನಂಬುವವರು ಸರಳವಾಗಿ ತಮ್ಮ ತಮ್ಮ ಊರಿನಲ್ಲಿಯೇ ಇರುವ ದೇವರನ್ನು ನಂಬಿದರೆ ಸಾಕಲ್ಲವೇ? ದೂರ ದೂರದ ಊರುಗಳಿಂದ ಜನರನ್ನು ದೇವರ ಹೆಸರಿನಲ್ಲಿ ಒಂದು ಸ್ಥಳಕ್ಕೆ ಬರುವಂತೆ ಮಾಡಿ ಬಡ ಜನರಿಂದ ಕಾಣಿಕೆಯ ರೂಪದಲ್ಲಿ ಹಣ ಕಕ್ಕಿಸುವ ವ್ಯವಸ್ಥೆ ಶೋಷಣೆಯಲ್ಲದೆ ಮತ್ತೇನೂ ಅಲ್ಲ. ದೇವರು ಸರ್ವಾಂತರ್ಯಾಮಿ ಎಂದು ಹೇಳುತ್ತಾರೆ, ದೇವರೊಬ್ಬನೇ ನಾಮ ಹಲವು ಎಂದು ಹೇಳುತ್ತಾರೆ. ಹೀಗಿರುವಾಗ ಅಪಾರ ಹಣ ಖರ್ಚು ಮಾಡಿ ಬಡವರನ್ನು ದೇವರ ಹೆಸರಿನಲ್ಲಿ ದೂರದ ಊರುಗಳಿಗೆ ಹೋಗುವಂತೆ ಕಥೆ ಕಟ್ಟಿ ಪ್ರಚೋದಿಸುವುದು ಕೂಡ ಮೋಸ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಜನರ ಶ್ರದ್ಧಾ ಕೇಂದ್ರಗಳ ಮೇಲೆ ದಾಳಿ ಮಾಡುವ ಪ್ರಯತ್ನ ನಡೆಯುತ್ತಾ ಇದೆ ಇದನ್ನು ಸಹಿಸುವುದಿಲ್ಲ ಎಂದು ಕೆಲವರು ಗರ್ಜಿಸುತ್ತಿದ್ದಾರೆ. ಜನರ ಶ್ರದ್ಧಾ ಕೇಂದ್ರಗಳ ಮೇಲೆ ವೈಚಾರಿಕ ದಾಳಿ ನಡೆಸಿ ಜನರನ್ನು ವಿಚಾರವಂತರನ್ನಾಗಿ ರೂಪಿಸುವುದು ಇಂದಿನ ನಮ್ಮ ದೇಶದ ಅಗತ್ಯ, ಇಲ್ಲದಿದ್ದರೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ವಂಚನೆ, ಶೋಷಣೆ ತಪ್ಪಿಸಲು ಸಾಧ್ಯವಿಲ್ಲ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಆರೋಗ್ಯಕರವಾಗಿ ಕಟ್ಟಲು ಸಾಧ್ಯವೇ ಇಲ್ಲ. ನಮ್ಮ ದೇಶದಲ್ಲಿ ಈಗ ಇರುವ ವ್ಯವಸ್ಥೆ ಹುಸಿ ಪ್ರಜಾಪ್ರಭುತ್ವ ವ್ಯವಸ್ಥೆ. ಈಗ ಇರುವುದು ನಿಜವಾಗಿ ಧಾರ್ಮಿಕ ಊಳಿಗಮಾನ್ಯ ವ್ಯವಸ್ಥೆ. ಇದು ತೊಲಗಿ ನಿಜವಾದ ಪ್ರಜಾಪ್ರಭುತ್ವ ವ್ಯವಸ್ಥೆ ಬೆಳೆಯಬೇಕಾದರೆ ಜನರನ್ನು ಪುರೋಹಿತಶಾಹಿ ಚಿಂತನೆಯಿಂದ, ಅದು ಕಥೆ ಕಟ್ಟಿ ಜನರನ್ನು ತನ್ನ ಕಪಿ ಮುಷ್ಟಿಯಲ್ಲಿ ಇಡುವುದರಿಂದ ಹೊರಗೆ ತರಬೇಕು.

    ಆಸಾರಾಮ್ ಬಾಪು ಎಂಬ ಸ್ವಯಂಘೋಷಿತ ದೇವಮಾನವನ ಅವತಾರಗಳು ಈಗ ಮಾಧ್ಯಮಗಳ ಪ್ರಭಾವದಿಂದ ಒಂದೊಂದಾಗಿ ಹೊರಬರುತ್ತಿವೆ. ಆಸಾರಾಮ್ ಬಾಪು ತನ್ನ ವಿರುದ್ಧ ಮಾಧ್ಯಮಗಳಲ್ಲಿ ಏನನ್ನೂ ಪ್ರಸಾರ ಮಾಡಬಾರದು ಎಂದು ಕೋರಿ ಸುಪ್ರೀಂ ಕೋರ್ಟಿಗೆ ಹಾಕಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ. ಇದು ನಿಜಕ್ಕೂ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನಕ್ಕೆ ಸಂದ ಜಯ. ಮಾನ ನಷ್ಟ ಮೊಕದ್ದಮೆ ಹಾಕಿ ತಮ್ಮನ್ನು ಸಾರ್ವಜನಿಕರ ವಿಮರ್ಶೆಗಳಿಂದ ರಕ್ಷಿಸಿಕೊಂಡು ಧರ್ಮದ ಮುಸುಕಿನಲ್ಲಿ ನಡೆಸುವ ಅನಾಚಾರಗಳನ್ನು ಸಹಿಸುವುದಿಲ್ಲ ಎಂದು ಸುಪ್ರೀಂ ಕೋರ್ಟು ಸೂಚ್ಯವಾಗಿ ತಿಳಿಸಿದೆ. ಧರ್ಮ, ದೇವರು, ಪವಾಡಗಳ ಹೆಸರಿನಲ್ಲಿ ಜನರನ್ನು ಮರುಳುಗೊಳಿಸಿ ಮೆರೆಯುತ್ತಿರುವ ಗೋಮುಖ ವ್ಯಾಘ್ರಗಳಿಗೆ ನಿಜಕ್ಕೂ ಇದು ಎಚ್ಚರಿಕೆಯ ಗಂಟೆಯಾಗಿದೆ. ಕನ್ನಡದ ಟಿವಿ ವಾಹಿನಿಗಳೇ ನಿದ್ದೆಯಿಂದ ಇನ್ನಾದರೂ ಎದ್ದೇಳಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಸಹಕರಿಸಿ.

    Reply
  4. Prakash Deshpande,Journalist ,Hukkeri .

    ಸೌಜನ್ಯ ಪ್ರಕರಣ ನಾಡಿನ ಪ್ರಜ್ಞಾವಂತಿಕೆಯ ಪ್ರತೀಕ.ತಪ್ಪು ಮಾಡಿದವರು ಯಾರೇ ಇರಲಿ ಎಷ್ಟೇ ದೊಡ್ಡವರಿರಲಿ ಅವರು ಕಾನೂನು ಕ್ರಮಕ್ಕೊಳಗಾಗಲೆಬೇಕು.ಇದರಲ್ಲಿ ಎರಡಿಲ್ಲ.ಸೌಜನ್ಯಳಿಗಾದ ಅಮಾನವೀಯ ಅನ್ಯಾಯವನ್ನು ಮನುಶ್ಯತ್ವವುಳ್ಳ ಎಲ್ಲರೂ ಒಕ್ಕೊರಳೊನಿಂದ ಖಂಡಿಸಲೇಬೇಕು.ಆದರೆ ಇದರಲ್ಲಿ ಖಾವಂದರ ಕೈವಾಡ ಎಷ್ಟೆಂಬುದನ್ನು ಆ ಮಂಜುನಾಥನೇ ಹೇಳಬೇಕು.ಆ ಸ್ಥಳದಲ್ಲಿ ಅನ್ಯಾಯ ನಡೆಯುದಿಲ್ಲವೆಂಬುದು ಸೌಜನ್ಯ ಪ್ರಕರಣ ಸುಳ್ಳಾಗಿಸಿದೆ.ತಪ್ಪಿತಸ್ಥರನ್ನು ಬಂಧಿಸುವದು ಸಕಾ೵ರದ ತುತು೵ ಅಗತ್ಯದ ಕಾಯ೵.ಸಕಾ೵ರದ ತನಿಖೆಯ ಮೇಲೆ ಜನರಿಗೆ ವಿಶ್ವಾಸವಿಲ್ಲದಂಥ ಪರಿಸ್ಥಿತಿ ಈಗಿದೆ.ಮಾಧ್ಯಮಗಳೇ ವಿಶೇಷ ತನಿಖೆ ಕೈಕೊಂಡು ತನಿಖಾ ವರದಿ ಪ್ರಕಟಿಸಿ ಜನರಿಗೆ ಸತ್ಯ ದಶ೵ನ ಮಾಡಿಸಬೇಕು.ಗಂಡ ಹೆಂಡತಿಯರ ಅವರು ಇಟ್ಟುಕೊಂಡವರ ಬಗ್ಗೆ ದಿನಗಟ್ಟಲೆ ದೃಶ್ಯಾವಳಿ ತೋರಿಸುವ ದೃಶ್ಯ ಮಾಧ್ಯಮಗಳು ಈ ಪ್ರಕರಣದಲ್ಲಿ ತೆಪ್ಪಗೇಕಿವೆ?

    Reply
  5. Sandeep Shetty

    “ಬೆಳ್ತಂಗಡಿ ಮತ್ತು ಉಜಿರೆಯಿಂದ ನೇರವಾಗಿ ಚಾರ್ಮಾಡಿ ಘಟ್ಟದ ರಸ್ತೆಯಲ್ಲಿ ಹೋಗಿ. ಹಾಗೆ ಹೋದರೆ ನಿಮಗೆ ಧರ್ಮಸ್ಥಳದ ಮೂಲಕ ಹೋಗುವುದೂ ತಪ್ಪುತ್ತದೆ. ಅಲ್ಲಿ ಗೊತ್ತಲ್ಲ ಏನೇನಾಗುತ್ತಿದೆ ಎಂದು, ಜಾಗ ಸರಿ ಇಲ್ಲ,’” Yes Mr.Reddy, entire ghat section is no more safe because of your maoists friends. Not because of Dharmasthala.
    “ಸರ್ಕಾರ ಅದನ್ನು ವಹಿಸಿಕೊಂಡ ದಿನ ಮಂಜುನಾಥನ ದರ್ಶನಕ್ಕೆ ಹೋಗುತ್ತೇನೆ,’”THis is actual intention of movement. Communists/pseudo secularists want these temple and SDM institutes to come under govt so that they can loot.
    “ಇಲ್ಲಿ ಹತ್ತಾರು ವರ್ಷಗಳಿಂದ ದಾಖಲಾಗುತ್ತ ಬಂದಿದ್ದ ಅನಾಥ ಶವಗಳ ಹಿನ್ನೆಲೆ ಏನು!!!” can somebody please tell details of these dead bodies mentioned? I am sure it is again one more hyped fact.

    Reply
    1. Sharmishtha

      Mr Shetty we are discussing about Soujanya not about Naxsalites here. Why you are making that as a issue here and trying to divert the core subject. Ivatthu Soujanyagada anyaya naale namage nimge agbahudu antha illi navella dhwani etthuttha irodu. Please discuss your RSS agenda in some other forum. All private institutes are looting people don’t think that they are providing education in a lower price for poor people. They are looting. Try to come out of your RSS agenda and look the things. Nimge obba thangi iddu avlige heegagidre novu enu antha nimge gottagtha ittu.

      Reply
  6. shivanand kallure

    Yaryaro avaravar vayaktik hitasaktigaligagi aarop maduttarendu nivyake sumsumne aaropa madtira swami? hage aarop madalu yenadru aadharagalu eddare avugalallu sadhya tanikhe maduttiruva cid ge oppisi punya kattikolli. adannu bittu hige manasige tochiddannu yake heltira? nivu hige bareyuvudaring soujanyage nyay sigodilla adu nimage gottirali. virendra hegdeyavarannu aaropisuttiruv comunistaru sadhya adhikaradalliruv siddaramaiah avarannu secular rajakarani, mahan pramanik yendu bhongu biduttaralla. avaryage pratibhatanegalannu madi sarvajanikar nemmadi halu maduttare, sakshigaliddare sarkarakke kodali. summane gantalu haridukolluvudarinda yavude labhavilla. Mahan pramanikateya Sogu hakikondu adhikarakke bandiruv so called secular siddaramaiah tanikheyannu churukugolisali…

    Reply
  7. Sandeep Shetty

    To Sharmishta: I dragged in Naxalites as all you people support them and protect them intellectually. I am sure pvt institutes are also looting but u should agree that pvt institutes provide far better quality of service in all sectors. Once those are taken over by Govt/Communists those will become only looting. I am ready to come out of RSS mindset, will you come out of Maoist mindset? Communists are using this issue to your base in that region . Soujanya nanna thangi agiddare,avaligada anyayada mele LAL SALAM samrajya kattalu horatiruva nimmanthavaranna haththira suliyals biduthiralilla… And if u have facts about glorified allegations done by Mr.Reddy, please share.

    Reply

Leave a Reply to Sharmishtha Cancel reply

Your email address will not be published. Required fields are marked *