ಸ್ಣೇಹಿತರೇ,
ಇತರ ಸಮಾನಮನಸ್ಕ ಸಂಸ್ಥೆ ಮತ್ತು ಸಂಘಗಳ ಜೊತೆ ಸೇರಿ ವರ್ತಮಾನ.ಕಾಮ್ ನಡೆಸುತ್ತಿರುವ “ದಲಿತರು ಮತ್ತು ಉದ್ಯಮಶೀಲತೆ” ಕುರಿತಾದ ವಿಚಾರ ಸಂಕಿರಣ ಮತ್ತು ಸಂವಾದದ ಮೂರನೆಯ ಕಾರ್ಯಕ್ರಮ ಬರುವ ಭಾನುವಾರದಂದು (ಜನವರಿ 19, 2014) ಮೈಸೂರಿನಲ್ಲಿ ನಡೆಯಲಿದೆ. ಈ ಸರಣಿಯ ಮೊದಲ ಕಾರ್ಯಕ್ರಮ ಹಾಸನದಲ್ಲಿ ನಡೆಯಿತು. ಎರಡನೆಯದನ್ನು ತುಮಕೂರಿನಲ್ಲಿ ಆಯೋಜಿಸಲಾಗಿತ್ತು. ಮೈಸೂರಿನ ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾಲಯದ “ಡಾ.ಬಿ.ಆರ್. ಅಂಬೇಡ್ಕರ್ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ”ದ ಸಹಯೋಗದಲ್ಲಿ ನಡೆಸಲಾಗುತ್ತಿದೆ. ಇಲ್ಲಿ ಆ ಕಾರ್ಯಕ್ರಮದ ವಿವರಗಳನ್ನು ಲಗತ್ತಿಸಲಾಗಿದೆ.
ಮೈಸೂರು ಮತ್ತು ಸುತ್ತಮುತ್ತಲಿನ ಆಸಕ್ತರು, ಲೇಖಕರು, ಉದ್ಯಮಿಗಳು, ಚಳವಳಿಯಲ್ಲಿ ಇರುವವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ವಿನಂತಿಸುತ್ತೇವೆ.
ನಮಸ್ಕಾರ,
ಬಿ. ಶ್ರೀಪಾದ್ ಭಟ್ ಮತ್ತು ರವಿ ಕೃಷ್ಣಾರೆಡ್ಡಿ
ವರ್ತಮಾನ.ಕಾಮ್ ಪರವಾಗಿ