“ಗಾಂಧಿ ಜಯಂತಿ ಕಥಾ ಸ್ಪರ್ಧೆ – 2014″ರ ಫಲಿತಾಂಶ

ಆತ್ಮೀಯರೇ,

ಎಲ್ಲರಿಗೂ 2014ರ “ಗಾಂಧಿ ಜಯಂತಿ” katha sprade 2014ಆಚರಣೆಯ ಶುಭಾಶಯಗಳು.

ವರ್ತಮಾನ ಬಳಗ ಆಯೋಜಿಸಿದ್ದ ಈ ವರ್ಷದ “ಗಾಂಧಿ ಜಯಂತಿ ಕಥಾ ಸ್ಪರ್ಧೆ”ಗೆ ಸುಮಾರು 40 ಕತೆಗಳು ಬಂದಿದ್ದವು. ಈ ಸಾರಿಯ ತೀರ್ಪುಗಾರರು ಸಾಹಿತಿ ಮತ್ತು ಪ್ರಾಧ್ಯಾಪಕ ಎಸ್. ಗಂಗಾಧರಯ್ಯನವರು. ಇಂತಹ ಜವಾಬ್ದಾರಿಯನ್ನು ನಿಭಾಯಿಸಲು ಒಪ್ಪಿಕೊಂಡ ಅವರಿಗೆ ವರ್ತಮಾನ ಬಳಗ ಕೃತಜ್ಞತೆಗಳನ್ನು ಅರ್ಪಿಸುತ್ತದೆ. ಅವರು ಆಯ್ಕೆ ಮಾಡಿರುವ ಉತ್ತಮ ಕತೆಗಳು ಹೀಗಿವೆ:

  • ಮೊದಲ ಬಹುಮಾನ : “ಕಾಲವ್ಯಾಧಿ” – ಟಿ.ಎಸ್. ವಿವೇಕಾನಂದ್
  • ಎರಡನೆಯ ಬಹುಮಾನ : “ಬೋನಿಗೆ ಬಿದ್ದವರು” – ಟಿ.ಕೆ. ದಯಾನಂದ್
  • ಮೂರನೆಯ ಬಹುಮಾನ : “ಚಿವುಟಿದಷ್ಟೂ ಚಿಗುರು” – ಎಚ್.ಎಸ್. ಅನುಪಮ
  • ಪ್ರೋತ್ಸಾಹಕ ಬಹುಮಾನಗಳು :
    • ಹೇ ರಾಮ್” – ಪಾರ್ವತಿ ಪಿಟಗಿ
    • ಇಸುಮುಳ್ಳು” – ಅನುಪಮಾ ಪ್ರಸಾದ್

ಕಥಾ ಸ್ಪರ್ಧೆಗೆ ತಮ್ಮ ಕತೆಗಳನ್ನು ಆಸಕ್ತಿಯಿಂದ ಕಳುಹಿಸಿ, ಈ ಕಥಾಸ್ಪರ್ಧೆಯನ್ನು ಬೆಂಬಲಿಸಿದ ಮತ್ತು ಪ್ರೋತ್ಸಾಹಿಸಿದ ಎಲ್ಲಾ ಕತೆಗಾರರಿಗೂ ಧನ್ಯವಾದಗಳು ಮತ್ತು ಕೃತಜ್ಞತೆಗಳು. ಮತ್ತು ವಿಜೇತರಿಗೆ ಅಭಿನಂದನೆಗಳು. ತೀರ್ಪುಗಾರರಾದ ಎಸ್. ಗಂಗಾಧರಯ್ಯನವರಿಗೆ ಕೃತಜ್ಞತೆಗಳು. ಈ ಕಥಾ ಸ್ಪರ್ಧೆಯ ಆಯೋಜನೆಯಲ್ಲಿ ವಿಶೇಷವಾಗಿ ಸಹಕರಿಸಿದ ನಮ್ಮ ಬಳಗದ ಶ್ರೀಪಾದ ಭಟ್ಟರಿಗೆ ಧನ್ಯವಾದಗಳು.

ತೀರ್ಪುಗಾರರ ಅಭಿಪ್ರಾಯದ ಲೇಖನವನ್ನು ಇಷ್ಟರಲ್ಲಿಯೇ ಪ್ರಕಟಿಸಲಾಗುವುದು.

ಬಹುಮಾನಿತ ಕತೆಗಳನ್ನು ಮುಂದಿನ ದಿನಗಳಲ್ಲಿ ವಾರಕ್ಕೊಂದರಂತೆ ಪ್ರಕಟಿಸಲಾಗುವುದು.

ಮತ್ತೊಮ್ಮೆ ಇದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಮತ್ತು ವಿಜೇತರಿಗೆ ಅಭಿನಂದನೆಗಳು.

ನಮಸ್ಕಾರ,
ರವಿ ಕೃಷ್ಣಾರೆಡ್ಡಿ
ವರ್ತಮಾನ.ಕಾಮ್

Leave a Reply

Your email address will not be published. Required fields are marked *