“ಬಿಳಿಸಾಹೇಬನ ಭಾರತ” ಪುಸ್ತಕವಾಗಿ ಬರುತ್ತಿದೆ. ಅಭಿನಂದನೆಗಳು

ಆತ್ಮೀಯರೇ,

ನಿಮಗೆಲ್ಲರಿಗೂ ತಿಳಿದಿರಬಹುದು; 2011ರ ಡಿಸೆಂಬರ್‌ನಿಂದ 2012 ರ ಜುಲೈ ತನಕ, 29 ವಾರಗಳ ಕಾಲ, ನಮ್ಮ ಪ್ರೀತಿಯ ಲೇಖಕ ಜಗದೀಶ ಕೊಪ್ಪ ವರ್ತಮಾನ.ಕಾಮ್‌ನಲ್ಲಿ “ಬಿಳಿ ಸಾಹೇಬನ ಭಾರತ (ಕಾರ್ಬೆಟ್ ಕಥನ)”ವನ್ನು ಬರೆದರು. ವರ್ತಮಾನ.ಕಾಮ್‌ನ ಆರಂಭದ ದಿನಗಳಲ್ಲಿ ಅನೇಕ ಸರಣಿ ಲೇಖನಗಳನ್ನಷ್ಟೇ ಅಲ್ಲದೆ, ರಾಜಕೀಯ-ಸಾಮಾಜಿಕ-ಆರ್ಥಿಕ-ಸಾಂಸ್ಕೃತಿಕ ವಿಚಾರಗಳ ಬಗ್ಗೆ ಜಗದೀಶ ಕೊಪ್ಪರು ನಿರಂತರವಾಗಿ ಬರೆದು ನಮಗೆ ಬೆನ್ನೆಲುಬಾಗಿ ನಿಂತು, ವರ್ತಮಾನ.ಕಾಮ್ ಬೇರೂರಿ ನಿಲ್ಲಲು ನೆರವಾದವರು. ಬಿಳಿ ಸಾಹೇಬನ ಭಾರತ, ನಕ್ಸಲ್ ಕಥನ, ಜೀವನದಿಗಳ ಸಾವಿನ ಕಥನ; ಈ ಮೂರು ಸರಣಿ ಲೇಖನಗಳು ಅಪಾರ ಓದುಗರನ್ನು ಗಳಿಸಿದ್ದವು. ಇದರಲ್ಲಿ ಈಗಾಗಲೆ ’ಜೀವನದಿಗಳ ಸಾವಿನ ಕಥನ’ ಮತ್ತು “ನಕ್ಸಲ್ ಕಥನ”ಗಳು ಇನ್ನೊಂದಷ್ಟು ಲೇಖನ-ಮಾಹಿತಿಗಳ ಜೊತೆಗೆ “ಜೀವನದಿಗಳ ಸಾವಿನ ಕಥನ” ಮತ್ತು “ಎಂದೂ ಮುಗಿಯದ ಯುದ್ಧ”ಗಳಾಗಿ ಪುಸ್ತಕಗಳಾಗಿಯೂ ಹೊರಬಂದಿದೆ.

ಈಗ, “ಬಿಳಿ ಸಾಹೇಬನ ಭಾರತ”ವೂ ಪುಸ್ತಕವಾಗಿ ಬರುತ್ತಿದೆ. ಈ ಸಂದರ್ಭದಲ್ಲಿ ಲೇಖಕ ಜಗದೀಶ ಕೊಪ್ಪರಿಗೆ koppa-Invitation-biLisahebaವರ್ತಮಾನ ಬಳಗದ ಪರವಾಗಿ ಧನ್ಯವಾದ, ಕೃತಜ್ಞತೆ, ಮತ್ತು ಅಭಿನಂದನೆಗಳನ್ನು ತಿಳಿಸುತ್ತೇವೆ. ಈ ಪುಸ್ತಕ ಬಿಡುಗಡೆಯ ಕಾರ್ಯಕ್ರಮ ಇದೇ ಶನಿವಾರ ಸಂಜೆ 4:30ಕ್ಕೆ ಬೆಂಗಳೂರಿನಲ್ಲಿದೆ. ವಿವರಗಳು ಇಲ್ಲಿ ಲಗತ್ತಿಸಿರುವ ಆಹ್ವಾನ ಪತ್ರಿಕೆಯಲ್ಲಿದೆ. ದಯವಿಟ್ಟು ಭಾಗವಹಿಸಿ.

ವಿಶ್ವಾಸದೊಂದಿಗೆ,
ರವಿ ಕೃಷ್ಣಾರೆಡ್ಡಿ
ವರ್ತಮಾನ ಬಳಗ



jeevanadigaLa-koppa


eMdU-mugiyada-yudda-koppa


biLisaheba-koppa

Leave a Reply

Your email address will not be published. Required fields are marked *