ಹಂಪಿಯಲ್ಲಿ ಇದೇ ಶನಿವಾರ-ಭಾನುವಾರದಂದು “ನಾವು ನಮ್ಮಲ್ಲಿ” ಕಾರ್ಯಕ್ರಮ

ಆತ್ಮೀಯರೇ,

ನಮ್ಮ ವರ್ತಮಾನ.ಕಾಮ್ ಓದುಗರಿಗೆ “ನಾವು ನಮ್ಮಲ್ಲಿ” ಮತ್ತು ಅದರ ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಪರಿಚಯಿಸುವ ಅಗತ್ಯವಿಲ್ಲ ಎಂದು ಭಾವಿಸುತ್ತೇನೆ. ವರ್ತಮಾನ.ಕಾಮ್ ಆರಂಭವಾದಾಗಿನಿಂದಲೂ “ನಾವು ನಮ್ಮಲ್ಲಿ”ಯೊಡನೆ ವರ್ತಮಾನ ಬಳಗಕ್ಕೆ ಅವಿನಾಭಾವ ಸಂಬಂಧವಿದೆ. ನಿಮಗೆ ಗೊತ್ತಿರುವಂತೆ ವರ್ತಮಾನ.ಕಾಮ್ ಆರಂಭಿಸಬೇಕೆಂಬ ಯೋಚನೆ ಬಂದಿದ್ದೇ ನಾನು 2011 ರಲ್ಲಿ ಚಿತ್ರದುರ್ಗದಲ್ಲಿ ನಡೆದ “ನಾವು ನಮ್ಮಲ್ಲಿ” ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಂದರ್ಭ ಬಂದಾಗ. ಪ್ರಾಮಾಣಿಕತೆ ಮತ್ತು ಬದ್ಧತೆಯನ್ನು ಹೊಂದಿರುವ ಯುವ ತಲೆಮಾರಿನ ಸಮಾಜಮುಖಿ ಕನ್ನಡ ಮನಸ್ಸುಗಳು ಈ ಕಾರ್ಯಕ್ರಮವನ್ನು ಪ್ರತಿವರ್ಷ ಆಯೋಜನೆ ಮಾಡುತ್ತಿವೆ. ಮತ್ತು ಸಮಾನಮನಸ್ಕರು ಇದರಲ್ಲಿ ಪಾಲ್ಗೊಳ್ಳುತ್ತ ಬಂದಿದ್ದಾರೆ. ಕೊಟ್ಟೂರಿನ ’ಬಯಲು ಸಾಹಿತ್ಯ ವೇದಿಕೆ’ ವತಿಯಿಂದ ಆರಂಭವಾದ ಈ ವಾರ್ಷಿಕ ಕಾರ್ಯಕ್ರಮಕ್ಕೆ ಈಗ ಹನ್ನೊಂದನೇ ಪ್ರಾಯ.

ಈ ಬಾರಿಯ ಕಾರ್ಯಕ್ರಮ ಇದೇ ಶನಿವಾರ ಮತ್ತು ಭಾನುವಾರ (ಅಕ್ಟೋಬರ್ 3-4, 2015) ದಂದು ಹಂಪಿಯ naavu-nammalli-2015-1 ಕನ್ನಡ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ. ನಾಡಿನ ಅನೇಕ ಚಿಂತಕರು ಮತ್ತು ಹೋರಾಟಗಾರರು “ಸಂವಿಧಾನ ಭಾರತ” ದ ಬಗ್ಗೆ ಚರ್ಚೆ, ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಶ್ರೀಪಾದ್ ಭಟ್, ಶ್ರೀಧರ್ ಪ್ರಭು ಸೇರಿದಂತೆ ವರ್ತಮಾನ ಬಳಗದ  ಹಲವಾರು ಮಿತ್ರರು ಅದರಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವರ್ತಮಾನ.ಕಾಮ್‌ನಲ್ಲಿ ಇತ್ತೀಚೆಗೆ ಅನೇಕ ಲೇಖನಗಳನ್ನು ಬರೆದ ವಿಜಯಕುಮಾರ್ ಸಿಗರನಹಳ್ಳಿಯವರ ಆ ಲೇಖನಗಳ ಸಂಗ್ರಹ ಈ ಕಾರ್ಯಕ್ರಮದಲ್ಲಿ ಬಿಡುಗಡೆ ಆಗಲಿದೆ. ’ನಾವು ನಮ್ಮಲ್ಲಿ’ ಸಹಯೋಗದಲ್ಲಿ ನಮ್ಮ ಬಳಗದ ಇನ್ನೊಬ್ಬರಾದ ಅಕ್ಷತಾ ಹುಂಚದಕಟ್ಟೆಯವರ ’ಅಹರ್ನಿಶಿ’ ಈ ಪುಸ್ತಕ ಪ್ರಕಟಿಸಿದೆ.

ಎಂದಿನಂತೆ ಈ ವಾರ್ಷಿಕ ಕಾರ್ಯಕ್ರಮಕ್ಕೆ ಹೋಗಲು ನಾನೂ ಉತ್ಸುಕನಾಗಿದ್ದೇನೆ. ನಿಮ್ಮೆಲ್ಲರನ್ನೂ ಅಲ್ಲಿ ನೋಡುವ ವಿಶ್ವಾಸದಲ್ಲಿ…

ನಮಸ್ಕಾರ,
ರವಿ

naavu-nammalli-2015
naavu-nammalli-2015
naavu-nammalli-book

Leave a Reply

Your email address will not be published. Required fields are marked *