Daily Archives: October 2, 2015

“ಗಾಂಧಿ ಜಯಂತಿ ಕಥಾ ಸ್ಪರ್ಧೆ – 2015″ರ ಫಲಿತಾಂಶ

ಆತ್ಮೀಯರೇ,

ಎಲ್ಲರಿಗೂ 2015ರ “ಗಾಂಧಿ ಜಯಂತಿ”ಯ ಶುಭಾಶಯಗಳು.

ವರ್ತಮಾನ ಬಳಗ ಆಯೋಜಿಸಿದ್ದ ಈ ವರ್ಷದ “ಗಾಂಧಿ ಜಯಂತಿ ಕಥಾ ಸ್ಪರ್ಧೆ”ಗೆ ಸುಮಾರು 25 ಕತೆಗಳು gandhi-katha-spardge-2015ಬಂದಿದ್ದವು; ಅದರಲ್ಲಿ ಒಂದೆರಡು ಕತೆಗಳು ಇಲ್ಲಿ ಫಲಿತಾಂಶ ಪ್ರಕಟಣೆಗೆ ಮೊದಲೇ ಬೇರೆ ಕಡೆ ಪ್ರಕಟವಾದದ್ದು ನಮ್ಮ ಗಮನಕ್ಕೆ ಬಂದಿದ್ದರಿಂದ ಅವನ್ನು ಪರಿಗಣಿಸಲಾಗಿಲ್ಲ. ಈ ಸಾರಿಯ ತೀರ್ಪುಗಾರರು ಕವಿ, ಲೇಖಕಿ, ಮತ್ತು ಪ್ರಾಧ್ಯಾಪಕಿ ಭಾರತೀದೇವಿ.ಪಿ. ಈ ಜವಾಬ್ದಾರಿಯನ್ನು ನಿಭಾಯಿಸಲು ಒಪ್ಪಿಕೊಂಡ ಅವರಿಗೆ ವರ್ತಮಾನ ಬಳಗ ಕೃತಜ್ಞತೆಗಳನ್ನು ಅರ್ಪಿಸುತ್ತದೆ. ಅವರು ಆಯ್ಕೆ ಮಾಡಿರುವ ಉತ್ತಮ ಕತೆಗಳು ಹೀಗಿವೆ:

  • ಮೊದಲ ಬಹುಮಾನ : “ಪಯಣ” – ಶಾಂತಿ.ಕೆ.ಎ
  • ಎರಡನೆಯ ಬಹುಮಾನ : “ಹಾಳು ಸುಡುಗಡ ಬದುಕು” – ಹನುಮಂತ ಹಾಲಿಗೇರಿ
  • ಮೂರನೆಯ ಬಹುಮಾನ : “ಮನ್ವಂತರ” – ಸಂವರ್ಥ ಸಾಹಿಲ್
  • ಪ್ರೋತ್ಸಾಹಕ ಬಹುಮಾನಗಳು :
    • ಪಾಕಿಸ್ಥಾನದಿಂದ ಪತ್ರ” – ಮಹಾಂತೇಶ್ ನವಲ್ಕಲ್
    • ಉಡುಗೊರೆ” – ಸ್ವಾಲಿಹ್ ತೋಡಾರ್

ಕಥಾ ಸ್ಪರ್ಧೆಗೆ ತಮ್ಮ ಕತೆಗಳನ್ನು ಆಸಕ್ತಿಯಿಂದ ಕಳುಹಿಸಿ, ಈ ಕಥಾಸ್ಪರ್ಧೆಯನ್ನು ಬೆಂಬಲಿಸಿದ ಮತ್ತು ಪ್ರೋತ್ಸಾಹಿಸಿದ ಎಲ್ಲಾ ಕತೆಗಾರರಿಗೂ ಧನ್ಯವಾದಗಳು ಮತ್ತು ಕೃತಜ್ಞತೆಗಳು. ಮತ್ತು ವಿಜೇತರಿಗೆ ಅಭಿನಂದನೆಗಳು.

ತೀರ್ಪುಗಾರರ ಅಭಿಪ್ರಾಯದ ಲೇಖನವನ್ನು ಇಷ್ಟರಲ್ಲಿಯೇ ಪ್ರಕಟಿಸಲಾಗುವುದು.

ಬಹುಮಾನಿತ ಕತೆಗಳನ್ನು ಮುಂದಿನ ದಿನಗಳಲ್ಲಿ ವಾರಕ್ಕೊಂದರಂತೆ ಪ್ರಕಟಿಸಲಾಗುವುದು.

ನಮಸ್ಕಾರ,
ರವಿ ಕೃಷ್ಣಾರೆಡ್ಡಿ
ವರ್ತಮಾನ.ಕಾಮ್