ಸ್ನೇಹಿತರೇ,
ಎಂದಿನಂತೆ ಈ ವರ್ಷವೂ “ಗಾಂಧಿ ಜಯಂತಿ ಕಥಾ ಸ್ಪರ್ಧೆ” ಆಯೋಜಿಸಲಾಗುತ್ತಿದೆ. (ಕಳೆದ ವರ್ಷದ ಈ ಆಹ್ವಾನದಲ್ಲಿ ಈ ಕಥಾಸ್ಪರ್ಧೆಯ ಹಿನ್ನೆಲೆಯ ಬಗ್ಗೆ ಒಂದಿಷ್ಟು ವಿವರಗಳಿವೆ.)
ಇದು ಕನ್ನಡದಲ್ಲಿಯ ಕಾಲ್ಪನಿಕ ಮತ್ತು ಸೃಜನಶೀಲ ಸಣ್ಣಕತೆಗಳಿಗೆಂದು ನಡೆಸುವ ಒಂದು ಕಥಾ ಸ್ಪರ್ಧೆ. ಮಹಾತ್ಮ ಗಾಂಧಿಗೆ ಗೌರವಪೂರ್ವಕವಾಗಿ ಮತ್ತು ಗಾಂಧಿ ಜಯಂತಿಯ ಸಂದರ್ಭದಲ್ಲಿ ನಡೆಸುವುದರಿಂದ ಅದಕ್ಕೆ ’ಗಾಂಧಿ ಜಯಂತಿ ಕಥಾ ಸ್ಪರ್ಧ” ಎಂದು ಹೆಸರಿಡಲಾಗಿದೆ.
ಕಥಾ ಸ್ಪರ್ಧೆಯ ನಿಯಮಗಳು ಮತ್ತಿತರ ವಿವರಗಳು ಇಂತಿವೆ:
- ಕತೆ ಸ್ವಂತದ್ದಾಗಿರಬೇಕು; ಅಪ್ರಕಟಿತವಾಗಿರಬೇಕು (ಬ್ಲಾಗ್/ವೆಬ್ಸೈಟ್ಗಳಲ್ಲೂ ಪ್ರಕಟವಾಗಿರಬಾರದು); ಕನಿಷ್ಟ 1500 ಪದಗಳದ್ದಾಗಿರಬೇಕು. ನೀಳ್ಗತೆಯಾದರೂ ನಡೆದೀತು.
- ಕತೆಯ ಸಾಫ್ಟ್ ಕಾಪಿಯನ್ನೇ ಕಳುಹಿಸಬೇಕು. ಬರಹ/ನುಡಿ/ಯೂನಿಕೋಡ್, ಹೀಗೆ ಯಾವುದೇ ತಂತ್ರಾಂಶದಲ್ಲಿದ್ದರೂ ಸರಿ. ಸ್ಕ್ಯಾನ್ ಮಾಡಿ ಕಳುಹಿಸುವ ಇಮೇಜ್ಗಳನ್ನು ಪರಿಗಣಿಸಲಾಗುವುದಿಲ್ಲ.
ಬಹುಮಾನಗಳ ವಿವರ:
- ಮೊದಲ ಬಹುಮಾನ: ರೂ. 6000
- ಎರಡನೆ ಬಹುಮಾನ: ರೂ. 4000
- ಮೂರನೆಯ ಬಹುಮಾನ: ರೂ. 3000
- ಎರಡು ಪ್ರೋತ್ಸಾಹಕ ಬಹುಮಾನಗಳು: ತಲಾ ರೂ. 1000
ನಿಮ್ಮ ಕತೆ ತಲುಪಲು ಕೊನೆಯ ದಿನಾಂಕ:
ಆಗಸ್ಟ್ 31, 2014
ಸೆಪ್ಟೆಂಬರ್ ತಿಂಗಳಿನಲ್ಲಿ ಕತೆಗಳ ಮೌಲ್ಯಮಾಪನ ಮಾಡಿ ಗಾಂಧಿ ಜಯಂತಿಯ ಸಂದರ್ಭದಲ್ಲಿ ಬಹುಮಾನ ನೀಡಲಾಗುತ್ತದೆ. ಬಹುಮಾನ ಪಡೆದ ಕತೆಗಳು ನಂತರ ವರ್ತಮಾನ.ಕಾಮ್ನಲ್ಲಿ ಪ್ರಕಟವಾಗಲಿವೆ.
ಕತೆಗಳನ್ನು ಕಳುಹಿಸಬೇಕಾಗದ ಇಮೇಲ್ ವಿಳಾಸ:
editor@vartamaana.com
ಹಾಗೆಯೇ, ಈ ಪ್ರಕಟಣೆ ಗೊತ್ತಿಲ್ಲದೇ ಇರಬಹುದಾದ ತಮ್ಮ ಕತೆಗಾರ ಸ್ನೇಹಿತರಿಗೂ ದಯವಿಟ್ಟು ಇದನ್ನು ತಲುಪಿಸಿ ಮತ್ತು ತಿಳಿಸಿ ಎಂದು ವಿನಂತಿಸುತ್ತೇನೆ.
ಧನ್ಯವಾದಗಳು,
ರವಿ ಕೃಷ್ಣಾರೆಡ್ಡಿ