Author Archives: editor

ನಟ ನಟಿಯರ ವಿವಾದಗಳು ಮತ್ತು ಮಾಧ್ಯಮ

Naveen Soorinje


ನವೀನ್ ಸೂರಿಂಜೆ


 

“ಪತ್ರಕರ್ತರ ಕತೆ ಹೇಗಿದೆ ಅಂದ್ರೆ, ಕಾವೇರಿ ವಿಷಯದಲ್ಲಿ ತುಟಿ ಬಿಚ್ಚದೇ ಇದ್ದ ಅಂಬರೀಷ್ ಪತ್ರಿಕಾಗೋಷ್ಠಿ ಮಾಡಿದ ತಕ್ಷಣ ಸುಮ್ನೆ ಬಿಟ್ಟು ಕಳ್ಸಿದ್ರಿ. ಅದೇ ಸಂಬಂಧವೇ ಪಡದ ಪ್ರಕಾಶ್ ರೈಗೆ ತರಾಟೆಗೆ ತಗೋತೀರಿ. ರಮ್ಯಾ ಪಾಕ್ ನಲ್ಲೂ ಒಳ್ಳೆಯವರಿದ್ದಾರೆ ಎಂದಿದ್ದಕ್ಕೆ ನೇಣಿಗೆ ಹಾಕಿದ್ರಿ. ನೀವು ಒಂದೋ ಜಾತಿ ಕಾರಣಕ್ಕೆ ಬೆನ್ನು ಬೀಳ್ತೀರಿ. ಅಥವಾ ಹೆಣ್ಣು ಅನ್ನೋ ಕಾರಣಕ್ಕೆ ಅಟ್ಟಾಡಿಸ್ತೀರಿ” ಎಂದು ಫೋನ್ ಮಾಡಿ ಬೈದ್ರು ಪ್ರಕಾಶಕರೂ ಆಗಿರುವ ಕವಿ ಅಕ್ಷತಾ ಹುಂಚದಕಟ್ಟೆ. ಅಕ್ಷತಾ ಅವರು ಹೇಳಿದ ಅಷ್ಟೂ ಮಾತುಗಳು ನಿಜ. ಆದರೆ ಅದಷ್ಟೇ ಸತ್ಯವಲ್ಲ. ಅಂಬರೀಷ್ ರನ್ನು ಬಚಾವ್ ಮಾಡುವ, ರಮ್ಯಾರನ್ನು ಬಲಿಪಶು ಮಾಡುವ, ಪ್ರಕಾಶ್ ರೈ ಕಾಂಟ್ರವರ್ಸಿ ಒಂದೇ ಚಾನೆಲ್ಲಿಗೆ ಸೀಮಿತವಾಗಿರೋ ಕಾರಣದ ಹಿಂದೆ ಆರ್ಥಿಕ ಕಾರಣಗಳೂ ಇವೆ.

ಹೌದು. ಸಿನೇಮಾ, ರಾಜಕೀಯ, ಮಾಧ್ಯಮದಲ್ಲಿರುವಷ್ಟು ಜಾತಿಗಳ ಜೊತೆಗಿನ ಕೊಂಡಿ ಬಹುಷಃ ಬೇರಾವ ಕ್ಷೇತ್ರದಲ್ಲೂ ಇರಲಿಕ್ಕಿಲ್ಲವೇನೋ?

ಅದರಲಿ. ಮಾಧ್ಯಮದಲ್ಲಿ ಸಿನೇಮಾ ಮಂದಿಯನ್ನು ನಿಜಜೀವನದಲ್ಲೂ ಹೀರೋ ಮಾಡುವುದು, ನಿರ್ಲಕ್ಷ್ಯ ಮಾಡುವುದು ಕೇವಲ ಜಾತಿ ಕಾರಣಕ್ಕಾಗಿ ಅಲ್ಲ. ಅದರ ಹಿಂದೆ ಆರ್ಥಿಕ ಕಾರಣವೂ ಕೆಲಸ ಮಾಡುತ್ತೆ.

ಈಗ ಅಂಬರೀಷ್ ವಿಚಾರವನ್ನೇ ತಗೊಳ್ಳಿ. ಕಾವೇರಿ ವಿವಾದ ಪ್ರಾರಂಭಕ್ಕೂ ಮುನ್ನವೇ ಅಂಬರೀಷ್ ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು ಅಮೇರಿಕಾ ತೆರಳಿದ್ದರು. ಅಲ್ಲಿಂದಲೇ ಚಿಕಿತ್ಸೆ ಪಡೆದು ವಾಪಸ್ ಬರುವಷ್ಟರಲ್ಲಿ ಇಲ್ಲಿ ಕಾವೇರಿ ವಿಷಯ ಕಾವೇರಿತ್ತು. ಸರ್ವಪಕ್ಷ ಸಭೆ, ವಿಶೇಷ ಅಧಿವೇಶನಕ್ಕೆ ಬಂದಿಲ್ಲ. ಕನಿಷ್ಠ ಹೇಳಿಕೆಯನ್ನೂ ಕೊಟ್ಟಿಲ್ಲ ಎಂದು ರೈತರು ಪ್ರತಿಭಟಿಸಿದ್ದು ಮಾಧ್ಯಮಗಳಲ್ಲಿ ಸುದ್ದಿಯಾಯ್ತು. ವಿಮಾನ ನಿಲ್ದಾಣದಿಂದ ನೇರವಾಗಿ ಬಂದ ಅಂಬರೀಷ್ ಪತ್ರಿಕಾಗೋಷ್ಠಿ ನಡೆಸಿ ಜನರ ಕ್ಷಮೆ ಕೇಳಿದ್ರು. ಮಾಧ್ಯಮಗಳು ಅಷ್ಟಕ್ಕೆ ಸುಮ್ಮನಾದ್ವು.

ಹಾಗಂತ ಅಂಬರೀಷ್ ಪತ್ರಿಕಾಗೋಷ್ಠಿ ಮಾಡಿ ಕ್ಷಮೆ ಕೇಳಿದ್ದು ಮಾಧ್ಯಮಗಳ ಹೆದರಿಕೆಯಿಂದ ಅಲ್ಲ. ಮಾದ್ಯಮಗಳ ಸಲಹೆಯಿಂದ. ಅಂಬರೀಷ್prakash ಅಭಿನಯದ ‘ದೊಡ್ಮನೆ ಹುಡುಗ’ ಸಿನೇಮಾ ರಿಲೀಸ್ ಆಗೋದಿತ್ತು. ಸಿನೇಮಾ ಪ್ರಮೋಶನ್ ಗಾಗಿ ಮಾಧ್ಯಮಗಳಿಗೆ ಲಕ್ಷಗಟ್ಟಲೆ ಸುರಿಯಲಾಗಿತ್ತು. ಅಷ್ಟರಲ್ಲಿ ಮಂಡ್ಯ ರೈತರು ದೊಡ್ಮನೆ ಹುಡುಗ ಸಿನೇಮಾದ ಬ್ಯಾನರ್ ನಲ್ಲಿ ಹಾಕಲಾಗಿದ್ದ ಅಂಬರೀಷ್ ಚಿತ್ರವನ್ನು ಹರಿಯಲಾರಂಬಿಸಿದ್ರು. ದೊಡ್ಮನೆ ಚಿತ್ರದ ಪ್ರಚಾರಕ್ಕಾಗಿ ಹಣ ಪಡೆದುಕೊಂಡರೂ ರೈತರ ಹೋರಾಟ ಈ ಸಂಧರ್ಭದಲ್ಲಿ ಮುಚ್ಚಿ ಹಾಕುವಂತಿರಲಿಲ್ಲ. ಅದಕ್ಕಾಗಿ ಪತ್ರಕರ್ತರನೇಕರ ಆತ್ಮೀಯ ಸಲಹೆಯಂತೆ ಅಂಬರೀಷ್ ಪತ್ರಿಕಾಗೋಷ್ಠಿ ನಡೆಸಿದ್ರು. ಪತ್ರಕರ್ತರು ಮತ್ತೆಂದೂ ಅವರ ರಾಜೀನಾಮೆ ಕೇಳಲಿಲ್ಲ. ರಾಜೀನಾಮೆಗೆ ಆಗ್ರಹಿಸುವಂತೆ ರೈತರನ್ನು ಪ್ರಚೋದಿಸಲಿಲ್ಲ. ಅಲ್ಲಿ ಜಾತಿ ಕಾರಣದ ಜೊತೆ ಜೊತೆಗೇ ಬಲವಾಗಿ ಹೆಜ್ಜೆ ಹಾಕಿದ್ದು ಆರ್ಥಿಕ ಕಾರಣ.

ರಮ್ಯಾ ವಿಚಾರವೂ ಇದಕ್ಕಿಂತ ಹೊರತಲ್ಲ. ಪಾಕಿಸ್ತಾನದಲ್ಲಿ ನಮ್ಮ ನಿಮ್ಮಂತೆಯೇ ಒಳ್ಳೆಯ ಜನರಿದ್ದಾರೆ. ಸ್ವರ್ಗ ನರಕ ಅಲ್ಲೂ ಇದೆ ಇಲ್ಲೂ ಇದೆ ಎಂದು ಹೇಳಿಕೆ ಕೊಟ್ಟಿದ್ದನ್ನು ಮಾದ್ಯಮಗಳು ಹಿಂದುತ್ವ ಅವಾಹಿಸಿಕೊಂಡು ಸುದ್ದಿ ಮಾಡಿದ್ದವು. ಕೆಲವು ಟಿವಿ ಚಾನೆಲ್ ಗಳಂತೂ ರಮ್ಯಾಗೆ ಪಾಕ್ ನಲ್ಲಿ ಸ್ವರ್ಗ ತೋರಿಸಿದವರು ಯಾರು ? ಎಂದು ಕೀಳಾಗಿ ಪ್ರಶ್ನಿಸಿದ್ರು. ರಮ್ಯಾ ಜಾತಿಯಲ್ಲಿ ಒಕ್ಕಲಿಗರಾದರೂ ಆಕೆ ಮಹಿಳೆ ಎಂಬ ಕಾರಣಕ್ಕೆ ಹೀಗೆ ಬೆನ್ನುಬಿದ್ದಿದ್ದು ಸ್ಪಷ್ಟವಾಗಿ ಕಾಣುತ್ತಿತ್ತು. ಮಹಿಳೆಯೊಬ್ಬಳು ಇಷ್ಟು ನಿಷ್ಠುರವಾಗಿ ಮಾತಾಡುವುದನ್ನು ಒಂದು ವೇಳೆ ಸಮಾಜ ಸಹಿಸಿದ್ರೂ ಕನ್ನಡ ಮಾಧ್ಯಮಗಳು ಸಹಿಸುವಷ್ಟು ಪ್ರಬುದ್ದತೆಯನ್ನು ಬೆಳೆಸಿಕೊಂಡಿಲ್ಲ.

ಅದಿರಲಿ, ರಮ್ಯಾ ಇದೇ ಹೇಳಿಕೆ ಕೊಡುವಾಗ ರಮ್ಯಾ ಬಳಿ ಹೈ ಬಜೆಟ್ಟಿನ ಸಿನೀಮಾ ಒಂದಿದ್ದರೆ ಮಾದ್ಯಮಗಳ ವರ್ತನೆ ಹೇಗಿರುತ್ತಿತ್ತು? ಆ ಸಿನೇಮಾ ಪ್ರಮೋಶನ್ ಗುತ್ತಿಗೆ ಪಡೆದುಕೊಂಡವನ ಹಣ ದಿಕ್ಕರಿಸಿ ರಾಷ್ಟ್ರಪ್ರೇಮ ಮೆರೆಯುತ್ತಿದ್ದವಾ ? ಖಂಡಿತ ಇಲ್ಲ. ದರ್ಶನ್ ತನ್ನ ಹೆಂಡತಿಗೆ ಹೊಡೆದಾಗ ಎಕ್ಸ್ ಕ್ಲೂಸಿವ್ ನ್ಯೂಸ್ ಹಾಕುತ್ತಿದ್ದ ಚಾನೆಲ್ ಗಳು ನಿರ್ಮಾಪಕ ಕಡೆಯಿಂದ ಫೋನ್ ಬಂದ ತಕ್ಷಣ ಮೌನ ವಹಿಸಿದ ಉದಾಹರಣೆ ನಮ್ಮ ಮುಂದಿದೆ. ಶಾರುಕ್ ಖಾನ್ ಅಸಹಿಷ್ಣುತೆ ವಿವಾದವು ತಾರಕಕ್ಕೇರಲು ಮಾದ್ಯಮಗಳನ್ನು ಜಾಹೀರಾತು ಕಂಪನಿಗಳು, ಸಿನೇಮಾ ಪ್ರಮೋಶನ್ ಕಂಪನಿಗಳು ಬಿಡಲಿಲ್ಲ. ಕೈಯ್ಯಲ್ಲಿ ಜಾಹೀರಾತು ಇಲ್ಲದ, ಸಿನೇಮಾ ಇಲ್ಲದ ಶಾರೂಕ್ ಖಾನ್ ಅಸಹಿಷ್ಣುತೆಯ ಹೇಳಿಕೆ ನೀಡಿದ್ದರೆ ಮಾದ್ಯಮಗಳು ಆತನನ್ನು ಗಡಿಪಾರು ಮಾಡದೆ ಬಿಡುತ್ತಿರಲಿಲ್ಲವೇನೋ?

ಈಗ ಪ್ರಕಾಶ ರೈ ರಾಮಾಯಣದ ಮೂಲ ವಿಚಾರಕ್ಕೆ ಬರೋಣಾ. ಇದೊಳ್ಳೆ ರಾಮಾಯಣ ಎಂಬ ಚಿತ್ರದ ಪ್ರಮೋಶನ್ ಕಂಪನಿ ಆಹ್ವಾನದ ಮೇರೆಗೆ ಹೆಚ್ಚಿನ ಎಲ್ಲಾ ಚಾನೆಲ್ ಗಳು ಪ್ರಕಾಶ್ ರೈ ಸಂದರ್ಶನ ಮಾಡಿದ್ದವು. ಪ್ರಮೋಶನ್ ಕಂಪನಿಯಿಂದ ಚಾನೆಲ್ ಗಳಿಗೆ ಸಲ್ಲಿಕೆಯಾಗಿರೋ ಹಣಕ್ಕನುಗುಣವಾಗಿ ಅರ್ಧ ಗಂಟೆ, ಒಂದು ಗಂಟೆ ವಿಶೇಷ ಕಾರ್ಯಕ್ರಮ, ಸಂದರ್ಶನ ನಡೆಸುತ್ತಿದ್ದವು. ನಿಜ ಹೇಳಬೇಕೆಂದರೆ, ಲೋಗೋ ಬಳಸದೆ ಲ್ಯಾಪಲ್ ಹಾಕಿ ಇಂಟರ್ ವ್ಯೂ ಮಾಡುವುದರಿಂದ ಪ್ರಕಾಶ್ ರೈಗೆ ಯಾವ ಚಾನೆಲ್ ಗೆ ಸಂದರ್ಶನ ಕೊಡುತ್ತಿದ್ದೇನೆ ಎಂಬ ಅರಿವೂ ಇರುವುದಿಲ್ಲ!

ಜನಶ್ರಿ ಚಾನೆಲ್ ಅ್ಯಂಕರ್ ಕೇಳಬಾರದ್ದೇನೂ ಕೇಳಿರಲಿಲ್ಲ. ಇದೊಳ್ಳೆ ರಾಮಾಯಣ ಎಂಬ ಟೈಟಲ್ ನಂತೆಯೇ ಕಾವೇರಿ ಸಮಸ್ಯೆ ಇದೊಳ್ಳೆ ರಾಮಾಯಣ ಆಗಿದೆ.kannada-news-channels ಕಾವೇರಿ ಜಲವಿವಾದ ಕುರಿತು ನಿಮ್ಮ ಅಭಿಪ್ರಾಯ ಏನು? ಎಂದು ಕೇಳಿದ್ರು. ತನ್ನ ಸಿನೇಮಾದ ಬಗೆಗಿನ ಪೇಯ್ಡ್ ಕಾರ್ಯಕ್ರಮದಲ್ಲಿ ಈ ಅಂಶ ಬೇಡ ಎಂದರೆ ಅದನ್ನು ಸಂಸ್ಥೆಗೆ ಮನವಿ ಮಾಡಿದರಾಯ್ತು. ಕಾವೇರಿ ವಿಚಾರವಾಗಿ ಕನ್ನಡದ ನಟ ನಟಿಯರು ಬೀದಿಗಿಳಿದಿದ್ದ ಮಾಹಿತಿ ಹೊಂದಿದ್ದ ಅ್ಯಂಕರ್ ಅಮಾಯಕರಾಗಿ ಈ ಪ್ರಶ್ನೆ ಕೇಳಿದ್ದಿರಬಹುದು. ಪ್ರಶ್ನೆ ಬೇಡ ಎಂದರೆ ಅದನ್ನಷ್ಟೇ ಕಟ್ ಮಾಡಿ ಮುಂದಿನ ಪ್ರಶ್ನೆಗೆ ಹೋಗಬಹುದಿತ್ತು. ಆದರೆ ಪ್ರಕಾಶ್ ರೈ ಹಾಗೆ ಮಾಡಲಿಲ್ಲ. ಲ್ಯಾಪಲ್ ಮೈಕ್ ಕಿತ್ತೆಸೆದು “ಏನ್ರೀ, ನಿಮಗೆ ಕಾಂಟ್ರವರ್ಸಿ ಬೇಕಾ? ನಿಮ್ಮ ಬಗೆಗಿನ ಕಾಂಟ್ರವರ್ಸಿ ಹೇಳಬೇಕಾ” ಎಂದು ಸಿನೇಮಾ ವಾಯ್ಸ್ ತಂದುಕೊಂಡು ಬೊಬ್ಬೆ ಹಾಕಿದ್ರು. ಉದ್ದೇಶಪೂರ್ವಕವಾಗಿ ಕೇಳಿಲ್ಲ ಸರ್ ಎಂದು ಅ್ಯಂಕರ್ ಪದೇ ಪದೇ ಹೇಳಿದ್ರೂ ಕೇಳದಿದ್ದಾಗ ಕೊನೆಗೆ ಜವಾಬ್ದಾರಿಯುತ ವ್ಯಕ್ತಿ ಬಳಿ ಕೇಳಿದ್ದೀನಿ ಅಷ್ಟೆ ಅಂದುಕೊಂಡು ಅ್ಯಂಕರ್ ಹೊರನಡೆದ್ರು.

ಈ ವಿಡಿಯೋ ವೈರಲ್ ಆದ್ರೂ ಜನಶ್ರೀ ಹೊರತುಪಡಿಸಿ ಬೇರಾವ ಮಾಧ್ಯಮಗಳು ಇದನ್ನೆತ್ತಿಕೊಂಡು ಸುದ್ದಿ ಮಾಡಿಲ್ಲ. ಕಾರಣ, ಎಲ್ಲಾ ಮಾಧ್ಯಮಗಳಿಗೆ ಇದೊಳ್ಳೆ ರಾಮಾಯಣ ಚಿತ್ರದ ಪ್ರಮೋಶನ್ ಗೆ ಹಣ ಸಂದಾಯ ಆಗಿರುತ್ತದೆ.

ಹೀಗೆ ಜಾತಿ, ಧರ್ಮದ ಕಾರಣವನ್ನೇ ಟಿ ಆರ್ ಪಿ ಯನ್ನಾಗಿಸಿ ಸಿನೇಮಾ ಮಂದಿಯ ಬೆನ್ನು ಬೀಳುವ ಮಾಧ್ಯಮದ ಮಂದಿ ಹಣದ ವಿಷಯ ಬಂದಾಗ ತಮ್ಮ ಹುಸಿ ರಾಷ್ಟ್ರಪ್ರೇಮ, ನಾಡಪ್ರೇಮಕ್ಕೆ ಬೆನ್ನು ತಿರುಗಿಸುತ್ತಾರೆ. ಜಾತಿ, ಧರ್ಮ, ಲಿಂಗ ತಾರತಮ್ಯದ ತನ್ನದೇ ಮನಸ್ಥಿತಿಯನ್ನು ಹಣ ಸಂಪಾದಿಸುವ ಸರಕನ್ನಾಗಿ ಪರಿವರ್ತಿಸುವ ಕಲೆ ಗೊತ್ತಿರೋದು ಬಹುಷಃ ಪತ್ರಕರ್ತರಿಗೆ ಮಾತ್ರವೆಂದು ಕಾಣುತ್ತದೆ.

ವಾಟ್ಸಾಪ್ ನಲ್ಲಿ ಜೊತೆಯಾದವರು ಒಟ್ಟಿಗೆ ಕುಳಿತು ಸಿನಿಮಾ ನೋಡಿದರು

  • – ಶಿವರಾಂ ಕೆಳಗೋಟೆ

‘ಚೋಮನ ದುಡಿ’ ಸಿನಿಮಾ ಪ್ರದರ್ಶನ ಮುಗಿಯಿತು. ಅಭಿಪ್ರಾಯ ಹಂಚಿಕೊಳ್ಳುವ ಸಮಯ. ಹೊಸಪೇಟೆ ಮೂಲದ ವಿದ್ಯಾರ್ಥಿನಿ ಮಾತನಾಡುತ್ತಾ, “ಈ ಸಿನಿಮಾ ನಾನು ಎರಡು-ಮೂರು ಬಾರಿ ನೋಡಿದ್ದೇನೆ. ಚೋಮನನ್ನು ನೋಡಿದಾಗಲೆಲ್ಲಾ ನನಗೆ ನನ್ನೂರಲ್ಲಿರುವ ದೊಡ್ಡಪ್ಪ ನೆನಪಾಗುತ್ತಾರೆ. ನಾನು ಚಿಕ್ಕಂದಿನಿಂದ ನೋಡುತ್ತಿದ್ದೇನೆ, ಅವರು ಬೇರೆಯವರ ಜಮೀನಿನಲ್ಲಿ ಕೂಲಿ ಮಾಡುತ್ತಾರೆ. ತುಂಡು ಭೂಮಿಯನ್ನು ಹೊಂದುವ ಅವರ ಕನಸು ಇಂದಿಗೂ ಈಡೇರಿಲ್ಲ. ಈ ಸಿನಿಮಾ ನಮ್ಮದೇ ಕತೆ ಅನ್ನಿಸುತ್ತೆ” ಎಂದರು.

 

ನೆನಪಿರಲಿ – ಶಿವರಾಮ ಕಾರಂತರುwhatsapp-image-2016-09-24-at-10-35-50 ಚೋಮನ ದುಡಿ ಕಾದಂಬರಿ ಬರೆದದ್ದು 1930 ರ ದಶಕದಲ್ಲಿ. ಅದು ಬಿ.ವಿ.ಕಾರಂತರ ನಿರ್ದೇಶನದಲ್ಲಿ ಸಿನಿಮಾ ಆದದ್ದು 1975 ರಲ್ಲಿ. ಮೊನ್ನೆಯಷ್ಟೆ ಮಂಗಳೂರಲ್ಲಿ ಈ ಸಿನಿಮಾ ಪ್ರದರ್ಶನ ನಡೆಯಿತು. ಈ ಸುದೀರ್ಘ ಕಾಲಾವಧಿಯಲ್ಲಿ ನೇತ್ರಾವದಿ ಸಾಕಷ್ಟು ಹರಿದಿದ್ದಾಳೆ, ಚೋಮನಂತಹವರ ಬದುಕಲ್ಲಿ ಬದಲಾವಣೆ ಆದದ್ದು ಕಡಿಮೆ. ಅದೇ ಚೋಮನದುಡಿ ಕಾದಂಬರಿ ಬರೆದು, ಚೋಮನ ಭೂಮಿ ಹೊಂದುವ ಕನಸನ್ನು ಕಲಾತ್ಮಕವಾಗಿ ಕಟ್ಟಿಕೊಟ್ಟ ಶಿವರಾಮ ಕಾರಂತರು 1970 ರ ದಶಕದ ಭೂಸುಧಾರಣೆ ಕಾಯಿದೆ ಜಾರಿ ಹೊತ್ತಿಗೆ ಬದಲಾಗಿದ್ದಂತೆ ಕಾಣುತ್ತಾರೆ. ಅವರು ‘ಒಬ್ಬರಿಂದ ಕಿತ್ತು ಮತ್ತೊಬ್ಬರಿಗೆ ಭೂಮಿ ಕೊಡುವ’ ಬಗ್ಗೆ ಟೀಕೆಯ ಧಾಟಿಯಲ್ಲಿ ಮಾತನಾಡಿದ್ದರು ಎಂದು ಉಡುಪಿಯ ಉಪನ್ಯಾಸಕಿ ನೆನಪಿಸಿಕೊಂಡರು.

ಈ ಮೇಲಿನ ಸಂದರ್ಭ ನಡೆದದ್ದು ಕಳೆದ ಶನಿವಾರ ಮತ್ತು ಭಾನುವಾರ (ಸೆ.24-25) ಮನುಜಮತ ವಾಟ್ಸಾಪ್ ಗುಂಪು ಮತ್ತು ಮಂಗಳೂರಿನ ಸಹಮತ ಫಿಲ್ಮ್ ಸೊಸೈಟಿ ಒಟ್ಟಿಗೆ ಆಯೋಜಿಸಿದ್ದ ಸಿನಿ ಉತ್ಸವದಲ್ಲಿ. ಸೋಷಿಯಲ್ ಮೀಡಿಯಾದ ಫೇಸ್ ಬುಕ್, ವಾಟ್ಸಾಪ್ ಗಳ ಬಗ್ಗೆ ಅಲ್ಲಲ್ಲಿ ನೆಗೆಟಿವ್ ಕಾಮೆಂಟುಗಳನ್ನು ಕೇಳುತ್ತಿರುತ್ತೇವೆ. ಆದರೆ ಪಾಸಿಟಿವ್ ಬೆಳವಣಿಗೆಗಳೂ ಈ ಸೋಷಿಯಲ್ ಮೀಡಿಯಾ ಟೂಲ್ ಗಳಿಂದ ಸಾಧ್ಯವಾಗಿದೆ ಎನ್ನುವುದಕ್ಕೆ ಮನುಜಮತ ಗುಂಪೂ ಒಂದು ಸಾಕ್ಷಿ. 2015 ರಲ್ಲಿ ಸಮಾನ ಮನಸ್ಕರು ಎಂಬ ಕಾರಣಕ್ಕೆ ಒಂದು ಗುಂಪು ರೂಪ ಪಡೆಯಿತು. ಅದರ ಕರ್ತೃ ಬರಹಗಾರ ಹರ್ಷಕುಮಾರ್ ಕುಗ್ವೆ. ನಾಡಿನಾದ್ಯಂತ ಬೇರೆ ಬೇರೆ ಹಿನ್ನೆಲೆಯ ಜನರನ್ನು ಒಂದೆಡೆ ಸೇರಿಸಿದರು. ಚರ್ಚೆಗಳು ಬಿರುಸಾಗಿ ನಡೆದವು. ಕೆಲ ಹಿರಿಯರಂತೂ ರಾತ್ರಿಯೆಲ್ಲಾ ಹಲವು ವಿಚಾರಗಳ ಚರ್ಚೆಗಳಲ್ಲಿ ಪಾಲ್ಗೊಂಡ ಉದಾಹರಣೆಗಳು ಬೇಕಾದಷ್ಟಿವೆ. ಅಲ್ಲಲ್ಲಿ ಈ ಗುಂಪಿನ ಚಟುವಟಿಕೆಗಳು ಚರ್ಚೆಗೆ ಬರುತ್ತಿದ್ದವು. ಆ ಬಗ್ಗೆ ಕೇಳಿ ತಿಳಿದಿದ್ದ ಹಲವwhatsapp-image-2016-09-25-at-20-02-00ರಂತೂ ಹೇಗಾದರೂ ಮಾಡಿ ಈ ಗುಂಪಿಗೆ ಸೇರಿಕೊಳ್ಳಬೇಕೆಂದು ನಾನಾ ಪ್ರಯತ್ನ ಮಾಡಿದರು. ಕೆಲವರು ಅಡ್ಮಿನ್ ಗಳಿಗೆ ಬೇರೆಯವರ ಮೂಲಕ ಶಿಫಾರಸ್ಸು ಮಾಡಿಸಿದಂತಹ ಸಂದರ್ಭಗಳೂ ಇದ್ದವು.

ಈ ಗುಂಪಿನ ವಿಶೇಷ ಎಂದರೆ, ಇಲ್ಲಿಯವರು ಮೊಬೈಲ್ ಆಚೆಗೆ ತಮ್ಮ ಕಾರ್ಯ ಚಟುವಟಿಕೆಗಳನ್ನು ವಿಸ್ತರಿಸಿದ್ದು. ಬೆಂಗಳೂರು ಮೆಡಿಕಲ್ ಕಾಲೇಜು ಪ್ರಾಧ್ಯಾಪಕ ಡಾ.ಎಂ.ಬಿ.ರಾಮಮೂರ್ತಿಯವರೂ ಈ ಗುಂಪಿನ ಆಕ್ಟಿವ್ ಸದಸ್ಯ. ಅವರಿಗೆ ಸೇರಿದ್ದ ಭೂಮಿಯಲ್ಲಿ ಸದಸ್ಯರೆಲ್ಲಾ ಸೇರಿ ವನಮಹೋತ್ಸವ ಕಾರ್ಯಕ್ರಮ ಮಾಡಿದರು. ಸದಸ್ಯರು ಖುದ್ದು ಹೋಗಿ ನೆಟ್ಟ ಗಿಡಗಳ ಬಗ್ಗೆ ಆಗಾಗ ಅಪ್ ಡೇಟ್ ಈ ಗುಂಪಿನಲ್ಲಿರುತ್ತೆ. ಸುಂದರ ಮಲೆಕುಡಿಯ ಎಂಬ ಕಾರ್ಮಿಕನನ್ನು ಮಾಲೀಕ ಹೀನಾಯವಾಗಿ ಹಿಂಸಿಸಿದಾಗ, ಮಾನವೀಯ ನೆಲೆಯಲ್ಲಿ ಈ ಗುಂಪಿನ ಸದಸ್ಯರು ಹಣ ಸಂಗ್ರಹಿಸಿ ಕೊಟ್ಟರು. ದೀನ ದಲಿತರ ಶೋಷಣೆಯಂತ ಪ್ರಕರಣಗಳು ನಡೆದಾಗ ಇಲ್ಲಿಯ ಸದಸ್ಯರು ಬೀದಿಗಿಳಿದು ಪ್ರತಿಭಟನೆಯನ್ನೂ ಮಾಡಿದ್ದಾರೆ.whatsapp-image-2016-09-25-at-21-30-38

 

ಈ ಚಟುವಟಿಕೆಗಳ ಮುಂದುವರಿದ ಭಾಗವೇ ಸಿನಿ ಉತ್ಸವಗಳು. ಮೊದಲ ಬಾರಿಗೆ ಶಿವಮೊಗ್ಗ ಹತ್ತಿರದ ಸದಸ್ಯರು ಕುಪ್ಪಳಿಯಲ್ಲಿ ಎರಡು ದಿನದ ಸಿನಿ ಉತ್ಸವ ಮಾಡಿದರು. ನಂತರ ಸಿನಿ ತೇರು ಹಾಸನ ತಲುಪಿತು. ಕಳೆದ ಮೇ ತಿಂಗಳಲ್ಲಿ ಉಡುಪಿಯಲ್ಲಿಯೂ ಉತ್ಸವ ಇತ್ತು. ಸದ್ಯ ಮಂಗಳೂರಿನಲ್ಲಿ ನಡೆದದ್ದು ನಾಲ್ಕನೆಯದು. ಹರ್ಷ ಕುಮಾರ್ ಕುಗ್ವೆ, ಕಿರಣ್ ಕುಮಾರ್ ಮಾರಶೆಟ್ಟಿಹಳ್ಳಿ, ಪ್ರತಿಭಾ ಸಾಗರ, ಹಿರಿಯರಾದ ಕೆ.ಫಣಿರಾಜ್, ಸುಮಾ, ಉಡುಪಿಯ ಬಲ್ಲಾಳ್ ಅವರು, ಸುಮಾ, ಹಾಸನದ ರೋಹಿತ್ ಇಂತಹ ಅನೇಕ ಮಂದಿ (ಕೆಲವರ ಹೆಸರು ಇಲ್ಲಿ ಬಿಟ್ಟಿರಬಹುದು) ಈ ಹಬ್ಬಗಳನ್ನು ಯಶಸ್ವಿಯಾಗಿ ಆಯೋಜಿಸುವುದರಲ್ಲಿ ಪರಿಶ್ರಮ ಪಟ್ಟಿದ್ದಾರೆ.

whatsapp-image-2016-09-25-at-09-40-35

ನಾಲ್ಕೂ ಹಬ್ಬಗಳಲ್ಲಿ ಸರಾಸರಿ 50-60 ಮಂದಿ ಪಾಲ್ಗೊಂಡರು. ಹಾಗಂತ ಇಲ್ಲಿ ಬರುವವರೆಲ್ಲಾ ಸಿನಿ ಪ್ರಿಯರು ಅಥವಾ ಸಿನಿಮಾ ಬಗ್ಗೆ ಆಸಕ್ತಿ ಉಳ್ಳವರು ಎಂದಷ್ಟೇ ಹೇಳಿದರೆ ನ್ಯಾಯ ಸಲ್ಲಿಸಿದಂತಾಗುವುದಿಲ್ಲ. ಎಲ್ಲಾ ಜನಪರ ಮನಸುಗಳು ಬಯಸುವ ಬದಲಾವಣೆಗೆ ಸಿನಿಮಾಗಳು ಬಹುಮುಖ್ಯ ಮಾಧ್ಯಮ ಎಂದು ನಂಬಿರುವವರು ಹಾಗೂ ಗೆಳೆಯರೊಂದಿಗೆ ಸಿನಿಮಾ ನೋಡುವ ಕ್ರಿಯೆಯೇ ಒಂದು ವಿಶೇಷ ಎಂದು ತಿಳಿದುಕೊಂಡವರು.

ಮಲಯಾಳಂನ ಜಯನ್ ಚೇರಿಯನ್ ನಿರ್ದೇಶಿದಿ ಪಾಪಿಲಾನ್ ಬುದ್ಧ ಸಿನಿಮಾ ಮುಗಿಯುವ ಹೊತ್ತಿಗೆ ರಾತ್ರಿ ಹನ್ನೊಂದಾಗಿತ್ತು. ಸಿನಿಮಾ ಒಂದು ವಿಷಾದದ ನಿಶಬ್ದದೊಂದಿಗೆ ಮುಗಿಯುತ್ತದೆ. ನಿರ್ದೇಶಕನ ಯಶಸ್ಸು ಎಂದರೆ, ಪ್ರೇಕ್ಷಕರು ಕೂಡ ಅದೇ ನಿಶಬ್ದವನ್ನು ಮತ್ತಷ್ಟು ಕಾಲ ಕೊಂಡೊಯ್ಯುತ್ತಾರೆ. ಸಿನಿಮಾ ನೋಡಿ ಮಲಗಿದವರಿಗೆ ರಾತ್ರಿ ಅಸ್ಪಷ್ಟ ಕನಸುಗಳಲ್ಲಿ ಅದೇ ಸಿನಿಮಾದ ದೃಶ್ಯಗಳು ಬಂದಿದ್ದೂ ಸುಳ್ಳಲ್ಲ. ಮರಾಠಿ ಸಿನಿಮಾ ಸೈರಟ್ ನಿರ್ದೇಶಕ ನಾಗರಾಜ್ ಮಂಜುಳೆಯವರ ಈ ಮೊದಲ ಚಿತ್ರ ಫಂಡ್ರಿ ಕೂಡಾ ನೋಡುಗರನ್ನು ಹಿಡಿದಿಟ್ಟಿದ್ದು ಮಾತ್ರವಲ್ಲ, ಆwhatsapp-image-2016-09-25-at-09-12-17ತ್ಮಾವಲೋಕನ ಮಾಡಿಕೊಳ್ಳಿರೋ ಎಂಬಂತೆ ‘ಕಲ್ಲಲ್ಲಿ ಹೊಡೆದು’ ಹೇಳಿತು. To Kill a Mocking Bird, The Day after Everyday, Never Judge People by their Appearance – ಇವು ಭಾಗವಹಿಸಿದವರು ನೋಡಿದ ಇತರ ಚಿತ್ರಗಳು. ಜಾತಿ, ಲಿಂಗ ಹಾಗೂ ಬಣ್ಣದ ಕಾರಣಗಳಿಗಾಗಿ ಶೋಷಣೆಗೆ ತುತ್ತಾದವರ ಕತೆಗಳನ್ನು ಆಧರಿಸಿದ ಸಿನಿಮಾಗಳಿವು. ಕಾರ್ಯಕ್ರಮ ಆರಂಭವಾಗಿದ್ದು ನಂಗೇಲಿ ನಾಟಕದೊಂದಿಗೆ. ಚಿಂತಕ ಚಂದ್ರ ಪೂಜಾರಿ ಆರಂಭದ ಮಾತುಗಳನ್ನಾಡಿದರು.

ಮಂಗಳೂರು ಸಹಮತದ ಐವಾನ್ ಡಿಸಿಲ್ವಾ, ನಾದ, ವಾಣಿ, ಕಿಟ್ಟಣ್ಣ ಮತ್ತಿತರರು ಉತ್ಸಾಹದಿಂದ ಕಾರ್ಯಕ್ರಮ ಆಯೋಜಿಸಿದ್ದರು. ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ನಿಯಮಿತವಾಗಿ ಮಾಡುವ ಉದ್ದೇಶ ಈ ಬಳಗದ ಸದಸ್ಯರದು.

ಫೋಟೋಗಳು: ಐವಾನ್ ಡಿಸಿಲ್ವಾ.

ಚಿತ್ರದುರ್ಗ: ಹಿಂದೂ ಮಹಾಗಣಪತಿ – ದಲಿತ ಮಹಾಗಣಪತಿ

– ಶಿವರಾಂ ಕೆಳಗೋಟೆ

ಗಣೇಶ ವಿಸರ್ಜನೆ ಕಾರ್ಯಕ್ರಮಗಳು ಎಲ್ಲೆಡೆ ನಡೆಯುತ್ತಿವೆ. ಇದೇ 24 ರಂದು ಚಿತ್ರದುರ್ಗದ ಹಿಂದೂ ಮಹಾ ಗಣಪತಿ ವಿಸರ್ಜನೆ ನಿಗದಿಯಾಗಿದೆ. ದಿನ ಹತ್ತಿರವಾಗುತ್ತಿದ್ದಂತೆಯೇ ಚಿತ್ರದುರ್ಗದ ಜನರಲ್ಲಿ ಅವ್ಯಕ್ತ ಆತಂಕ, ಏನಾಗುತ್ತದೆಯೋ ಎಂಬ ಭಯದ ವಾತಾವರಣ. ಏಕೆಂದರೆ, ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನೆ ಆರಂಭವಾದ ಕಳೆದ ಮೂರು ವರ್ಷಗಳಿಂದಲೂ ವಿಸರ್ಜನೆ ದಿನದ ಮೆರವಣಿಗೆಗಳಲ್ಲಿ ಬೇರೆ ಬೇರೆ ಊರುಗಳಿಂದ ನೂರಾರು ಜನ ನಗರಕ್ಕೆ ಬಂದು ಕೇಸರಿ ವಸ್ತ್ರ ಧರಿಸಿ ಪಾಲ್ಗೊಳ್ಳುತ್ತಾರೆ. ಕೋಮು ಭಾವನೆ ಕೆರಳಿಸುವ, ಹಿಂದೂ ಉನ್ಮಾದದ ಘೋಷಣೆಗಳನ್ನು ಕೂಗುತ್ತಾ ಸಾಗುತ್ತಾರೆ. ಮೆರವಣಿಗೆ ಮುಗಿವ ಹೊತ್ತಿಗೆ ನಗರದ ಯಾವ ಭಾಗದಲ್ಲಾದರೂ ಹಿಂಸೆಯ ಕಿಡಿ ಹಬ್ಬುತ್ತದೇನೋ ಎಂಬ ಆತಂಕದಲ್ಲಿ ಜನರು ಇರುತ್ತಾರೆ.

ಸಮಾಜದ ನೆಮ್ಮದಿ ಹಾಗೂ ಶಾಂತಿಗಾಗಿ ದೇವರ ಪೂಜೆ ನಡೆಸುವುದು ಪದ್ಧತಿ. ವಿಪರ್ಯಾಸ ಎಂದರೆ ಇಂತಹ ಸಂದರ್ಭದಲ್ಲಿಯೇ ಶಾಂತಿ ಕದಡಬಹುದೇನೋ ಎಂಬ ಆತಂಕದಿಂದ ಪೊಲೀಸ್ ಇಲಾಖೆ ಅಕ್ಕ ಪಕ್ಕದ ಜಿಲ್ಲೆಗಳಿಂದ ಹೆಚ್ಚಿನ ಸಿಬ್ಬಂದಿಯನ್ನು ಕರೆಸಿ ಬಂದೋಬಸ್ತ್ ಗೆ ನಿಯೋಜಿಸುತ್ತಾರೆ. ಸ್ವತಃ ಜಿಲ್ಲಾ ರಕ್ಷಣಾಧಿಕಾರಿಯೇ ಕಂಟ್ರೋಲ್ ರೂಮ್ganesh-ugra ನಲ್ಲಿ ಕೂತು ಡ್ರೋನ್ ಕೆಮರಾಗಳ ಮೂಲಕ ಮೆರವಣಿಗೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುತುವರ್ಜಿ ವಹಿಸುತ್ತಾರೆ. ಕಳೆದ ವರ್ಷಗಳಲ್ಲಿ ಮೆರವಣಿಗೆ ವೇಳೆ ಸಣ್ಣ ಪುಟ್ಟ ಗಲಭೆಗಳೂ ನಡೆದಿವೆ.

ಇದೆಲ್ಲವನ್ನೂ ಕಂಡು ಬೇಸತ್ತ ಕೆಲ ದಲಿತ ಪರ ಸಂಘಟನೆಗಳು ಹಾಗೂ ಪ್ರಗತಿಪರ ಹೋರಾಟಗಾರರು ಈ ಬೆಳವಣಿಗೆಯನ್ನು ಎದುರಿಸುವುದು ಹೇಗೆ ಎಂಬ ಗೊಂದಲಕ್ಕೆ ಬಿದ್ದು ಈ ಬಾರಿ ದಲಿತ ಗಣಪತಿ ಎಂದು ಪರ್ಯಾಯ ಉತ್ಸವಕ್ಕೆ ನಾಂದಿ ಹಾಡಿದ್ದಾರೆ. ಅವರು ಹಳೇ ಮಾಧ್ಯಮಿಕ ಶಾಲೆಯ ಆವರಣದಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಿ, ಇದೇ 22 ರಂದು ವಿಸರ್ಜನೆ ಹಮ್ಮಿಕೊಂಡಿದ್ದಾರೆ. ಆ ವೇಳೆ ನಡೆಯುವ ಮೆರವಣಿಗೆಗೆ ಏಕತಾ ಯಾತ್ರೆ ಎಂಬ ಹೆಸರಿಟ್ಟಿದ್ದಾರೆ. ಪ್ರತಿಷ್ಟಾಪನೆ ನಂತರ ಪ್ರ ತಿ ದಿನ ವಿವಿಧ ಧಾರ್ಮಿಕ ಮುಖಂಡರು (ಅನ್ಯ ಧರ್ಮೀಯರೂ ಸೇರಿದಂತೆ) ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ದಲಿತ ಸಂಘರ್ಷ ಸಮಿತಿಯ ಮಹಾಲಿಂಗಪ್ಪ ಈ ವ್ಯವಸ್ಥೆ ಮಾಡುವಲ್ಲಿ ನೇತೃತ್ವ ವಹಿಸಿದ್ದಾರೆ.

“ಹಿಂದೂ ಮಹಾ ಗಣಪತಿ ಆಯೋಜಕರಿಗೆ ಬೆಂಗಾವಲಾಗಿ ನಿಂತು ಅವರ ಮೆರವಣಿಗೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಅವರ ಘೋಷಣೆಗಳನ್ನು ಏರಿದ ದನಿಯಲ್ಲಿ ಕೂಗುತ್ತಿದ್ದವರು ನಮ್ಮದೇ ಮನೆಯ ದಲಿತ ಹಾಗೂ ಹಿಂದುಳಿದ ಹುಡುಗರು. ಆದರೆ, ಅಲ್ಲಿಯ ಆಚರಣೆ ರೀತಿ-ನೀತಿಗಳಿಂದ ಆಗುವ ಅಪಾಯಗಳ ಪರಿಚಯ ಆ ಹುಡುಗರಿಗೆ ಇಲ್ಲ. ಅವರನ್ನು ಇತ್ತ ಸೆಳೆಯಬೇಕೆಂದರೆ, ಅವರಿಗೆ ಪರ್ಯಾಯ ಬೇಕು. ದಲಿತ ಮಹಾಗಣಪತಿ ಪ್ರತಿಷ್ಟಾಪನೆ ಒಂದು ವೈಚಾರಿಕ ಪರ್ಯಾಯ ಅಲ್ಲದಿರಬಹುದು, ಆದರೆ, ಆರಂಭದಲ್ಲಿ ಅವರನ್ನು ಸರಿದಾರಿಗೆ ಸೆಳೆಯುವುದಕ್ಕೆ ಒಂದು ತಂತ್ರವಾಗಿಯಾದರೂ ಇಂತಹದೊಂದು ಕಾರ್ಯಕ್ರಮದ ಅಗತ್ಯವಿದೆ” ಎನ್ನುತ್ತಾರೆ ದಲಿತ ಮಹಾಗಣಪತಿ ಉತ್ಸವದ ಸಮರ್ಥಕರೊಬ್ಬರು.

ಜನರಿಗೆ ತಪ್ಪು, ಸರಿಗಳ ಸ್ಪಷ್ಟ ಅರಿವಿದೆ. ಆದರೆ, ಒಂದು ತಪ್ಪಿನ ಎದುರಿಗೆ ಮತ್ತೊಂದು ಸರಿಯನ್ನು ತೋರಿಸಿದಾಗಲೇ ಅವರು ತಪ್ಪಿನ ಬಗ್ಗೆ ಮಾತನಾಡಲಾರಂಭಿಸುವುದು. ಎಲ್ಲರಿಗೂ ಗೊತ್ತು, ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ ದಿನ, ಅವರೊಂದಿಗೆ ಅನ್ಯಧರ್ಮಿಯರು ಪಾಲ್ಗೊಳ್ಳಲು ಸಾಧ್ಯವಿಲ್ಲ. ಅದೊಂದು ದಿನ ನಗರದಲ್ಲಿ ಏನೋ ಘಟಿಸಬಹುದು ಎಂಬ ಆತಂಕದಿಂದ ಕೆಲವರು ಊರು ಬಿಡುವ ಸಂದರ್ಭಗಳೂ ಇವೆ. ಆದರೆ, ಅವರಿಗೆ ‘ಏಕತಾ ಯಾತ್ರೆ’ ಯಂತಹ ಕಾರ್ಯಕ್ರಮದಲ್ಲಿ ಅಂತಹ ಆತಂಕಗಳಿರುವುದಿಲ್ಲ. ಮೇಲಾಗಿ ಬಹುಸಂಖ್ಯಾತ ಜನರಿಗೆ, ಸಮಾಜವನ್ನು ಒಡೆಯುವ ಯಾತ್ರೆಗಿಂತ ಏಕತಾ ಯಾತ್ರೆಯೇ ನಮ್ಮ ಆಯ್ಕೆಯಾಗಬೇಕು ಎಂದು ಮನವರಿಕೆ ಆಗುತ್ತದೆ, ಎನ್ನುವುದು ಅವರ ವಾದ.

ಹೀಗೆ ಮಾತನಾಡುತ್ತಿರುವಾganesh-dalitಗಲೆ ಇಪ್ಪತ್ತರ ಆಸುಪಾಸಿನಲ್ಲಿರುವ ಹುಡುಗನೊಬ್ಬ ತನ್ನ ಪಲ್ಸರ್ ಗಾಡಿಯಲ್ಲಿ ದಲಿತ ಮಹಾಗಣಪತಿ ಪೆಂಡಾಲ್ಗೆ ಬಂದ. ಅವನ ಗಾಡಿಯ ಮುಂಭಾಗ ಭಗತ್ ಸಿಂಗ್ ಚಿತ್ರ ಇತ್ತು. ಹಿಂದೆ ಜೈ ಹನುಮಾನ್ ಚಿತ್ರ. ‘ನಾನೇಕೆ ನಾಸ್ತಿಕ?’ ಎಂದು ಪುಸ್ತಕ ಬರೆದ ಭಗತ್ ಸಿಂಗ್ ಹಾಗೂ ಜೈ ಹನುಮಾನ್ ಚಿತ್ರ ಒಟ್ಟಿಗೆ ಹೋಗಲಾರವು. ಆ ಹುಡುಗನ ಅಸ್ಪಷ್ಟ, ಗೊಂದಲಕಾರಿ ಮನಸ್ಥಿತಿ ಇದುವರೆಗೆ ಹಿಂದೂ ಮಹಾಗಣಪತಿಗೆ ಪ್ರಮುಖ ಕಾರ್ಯಕರ್ತನನ್ನಾಗಿ ಮಾಡಿತ್ತು. ಈ ವರ್ಷವೂ ಅಲ್ಲಿಯೇ ಕೆಲಸ ಮಾಡುತ್ತಿದ್ದ ಹುಡುಗ ವಿರಾಮದ ವೇಳೆ ದಲಿತ ಮಹಾಗಣಪತಿ ಪೆಂಡಾಲ್ ಭೇಟಿ ಕೊಟ್ಟಿದ್ದ. ದಲಿತ ಸಂಘಟನೆ ಕಾರ್ಯಕರ್ತರು ಬಯಸಿದ್ದು ಇದನ್ನೇ.

ವಿಗ್ರಹ ಸ್ವರೂಪ:
ಎರಡೂ ಗುಂಪಿನವರು ಪ್ರತಿಷ್ಟಾಪಿಸಿರುವ ಗಣೇಶನ ವಿಗ್ರಹಗಳು ವಿಶಿಷ್ಟವಾಗಿವೆ. ದಲಿತ ಮಹಾಗಣಪತಿ ಹೆಗಲ ಮೇಲೆ ನೇಗಿಲು ಇದೆ. ಪ್ರತಿಷ್ಟಾಪನೆ ದಿನವೇ ರೈತ ಸಂಘದವರು ಭೇಟಿ ನೀಡಿ ವಿಗ್ರಹಕ್ಕೆ ಹಸಿರು ಶಾಲು ಹೊದಿಸಿ, ಆತನನ್ನು ರೈತ ಗಣಪತಿಯನ್ನಾಗಿ ಮಾಡಿದರು. ಈ ನೆಲದ ಬಹುಜನರ ಪ್ರತಿನಿಧಿಯಾಗಿ ಆ ಗಣಪ ಕಂಡರೆ ಅಚ್ಚರಿಯೇನಿಲ್ಲ.

ಆದರೆ ಹಿಂದೂ ಮಹಾಗಣಪತಿ ಹಾಗಲ್ಲ. ಆತ ಬೃಹದಾಕಾರವಾಗಿರುವ ಉಗ್ರನರಸಿಂಹನ ವಿಗ್ರಹದ ಮೇಲೆ ಸಣ್ಣದಾಗಿ ಗಣಪ ಕೂತಿದ್ದಾನೆ. ಉತ್ಸವ ಗಣೇಶನದೋ ಉಗ್ರನರಸಿಂಹನದೋ ಎಂಬ ಸಂಶಯ ಬರುತ್ತದೆ. ಜೊತೆಗೆ ಈ ರೂಪಕ್ಕೆ ಏನಾದರೂ ಹಿನ್ನೆಲೆ ಇದೆಯೇ ಎಂದು ಯೋಚಿಸಿದರೆ, ಏನೂ ತಿಳಿಯುತ್ತಿಲ್ಲ. ಉಗ್ರ ನರಸಿಂಹನಿಗೂ, ಶಿವನ ಮಗನಾದ ಗಣಪನಿಗೂ ಸಂಬಂಧವೆಲ್ಲಿ?

ಮಾಜಿ ಮಂತ್ರಿ ಸುರೇಶ್ ಕುಮಾರ್ ಅವರಿಗೆ ಬಹಿರಂಗ ಪತ್ರ

ಸಹೃದಯರಾದ ಶ್ರೀ ಸುರೇಶ್ ಕುಮಾರ್ ಅವರಿಗೆ

ಪ್ರೀತಿಯ ನಮಸ್ಕಾರಗಳು.

ಈ ಬಹಿರಂಗ ಪತ್ರದ ಉದ್ದೇಶ ತಾವು ಆಗಸ್ಟ್ 30ರಂದು ತಮ್ಮ ಫೇಸ್ಬುಕ್ ಖಾತೆಯಲ್ಲಿ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಬರೆದ ಎರಡು ಪ್ರತ್ಯೇಕ ಸ್ಟೇಟಸ್ಗಳು. ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಶ್ರೀ ದಿನೇಶ್ ಅಮೀನ್ ಮಟ್ಟು ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದು ಕೆಲವೇ ಸಮಯದಲ್ಲಿ ಅಳಿಸಿ ಹಾಕಿದ ಒಂದು ಸಾಲು ಮಾತಿನ ಕುರಿತು ಆ ನಡುರಾತ್ರಿಯಲ್ಲಿ ತಾವು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದೀರಿ. ನಿಮ್ಮ ಕನ್ನಡದ ಸ್ಟೇಟಸ್ ಹೀಗೆ ಹೇಳುತ್ತದೆ: ತನ್ನ ಶತ್ರುವಿಗೂ ಈ ರೀತಿ ಅವಹೇಳನಾಕಾರಿ ಮಾತುಗಳನ್ನು ಹೇಳಬಾರದಲ್ಲವೇ ದಿನೇಶ್. ಪ್ರತಾಪ್ ಸಿಂಹರ ಪತ್ನಿಯವರ ದುರದೃಷ್ಟಕರ ದೈಹಿಕ ಸ್ಥಿತಿಯನ್ನು ಉಪಯೋಗಿಸಿ ಪ್ರತಾಪಸಿಂಹರ ಮೇಲೆ ನಿಮ್ಮ ಬೌದ್ಧಿಕ(?) ಹಲ್ಲೆ ನಿಮ್ಮ ಬಗ್ಗೆಯೇ ಕನಿಕರ ಹುಟ್ಟಿಸುತ್ತಿದೆ. ಇದು ಬೌದ್ಧಿಕ ವಿಕಾರತೆಯ ಅನಾವರಣ.

ಅದೇ ರೀತಿ ನೀವು ಇಂಗ್ಲಿಷ್ ನಲ್ಲಿ ಬರೆದ ಸಾಲುಗಳು ಹೀಗಿವೆ: It is crass crudity of the Media Advisor to CM of Karnataka to ridicule a woman’s unfortunate physical condition sureshto attack her husband.

ಈ ಕುರಿತು ನಿಮ್ಮ ವಾಲ್ ನಲ್ಲಿ ಕಮೆಂಟ್ ಮಾಡಬಹುದಿತ್ತು. ಆದರೆ ಹೇಳಬೇಕಾದ ವಿಷಯಗಳು ತುಸು ಹೆಚ್ಚೇ ಇರುವುದರಿಂದ ಈ ಬಹಿರಂಗ ಪತ್ರವನ್ನು ಬರೆಯುತ್ತಿದ್ದೇನೆ. ನಿಮ್ಮ ಸ್ಟೇಟಸ್ಗಳ ವಿಷಯಕ್ಕೆ ಮತ್ತೆ ಬರುತ್ತೇನೆ. ಈಗ ಹಿಂದೆ ನಡೆದ ಎರಡು ಘಟನೆಗಳನ್ನು ನೆನಪಿಸಲು ಬಯಸುತ್ತೇನೆ.

ಮೊದಲನೆಯ ಘಟನೆ ನಡೆದಿದ್ದು 2014ರ ನವೆಂಬರ್ 8ರಂದು. ತೀರ್ಥಹಳ್ಳಿಯ ನಂದಿತಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗಳು ನಡೆಯುತ್ತಿದ್ದ ಕಾಲವದು. ನಿಮ್ಮ ಪಕ್ಷದ ನೇತಾರರಾದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರು ಒಂದು ಹೇಳಿಕೆ ನೀಡಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಗೃಹ ಸಚಿವ ಕೆ.ಜೆ.ಜಾರ್ಜ್ ಪುತ್ರಿಯರ ಮೇಲೆ ಅತ್ಯಾಚಾರವಾಗುವವರೆಗೆ ಇವರಿಗೆ ಬುದ್ಧಿಬರಲ್ಲ ಎಂದು ಹೇಳಿದ್ದರು ನಿಮ್ಮ ಈಶ್ವರಪ್ಪನವರು. ಕುತೂಹಲಕ್ಕೆ ನಿಮ್ಮ ಟೈಮ್ ಲೈನ್ಗೆ ಹೋಗಿ ಆ ದಿನಗಳಲ್ಲಿ ಈ ಕುರಿತು ನೀವು ಏನನ್ನಾದರೂ ಬರೆದಿದ್ದೀರಾ ಎಂದು ಪರೀಕ್ಷಿಸಿದೆ. ನಿಮ್ಮ ಮೌನವಷ್ಟೇ ಕಣ್ಣಿಗೆ ರಾಚಿತು. ಇದು ಈಶ್ವರಪ್ಪನವರ ಬೌದ್ಧಿಕ ವಿಕಾರತೆಯ ಅನಾವರಣ ಎಂದು ನೀವು ಬರೆದಿರಬಹುದು ಅಥವಾ It is crass crudity of the former DCM ಎಂದು ಬರೆದಿರಬಹುದು ಎಂದು ನಿರೀಕ್ಷೆ ಮಾಡಿದ್ದೆ. ನನ್ನ ನಿರೀಕ್ಷೆ ಸುಳ್ಳಾಯಿತು.

ಇನ್ನೊಂದು ಘಟನೆ ಇನ್ನೊಂದು ವರ್ಷದ ನಂತರ ನಡೆದದ್ದು. 2015ರ ಅಕ್ಟೋಬರ್ 17ರಂದು ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಮಲ್ಲಾಪುರಕ್ಕೆ ಇದೇ ನಿಮ್ಮ ಕೆ.ಎಸ್ ಈಶ್ವರಪ್ಪನವರು ತೆರಳಿದ್ದರು. ರಾಜ್ಯದಲ್ಲಿ ಕೊಲೆ, ಸುಲಿಗೆ, ಅತ್ಯಾಚಾರ ಹೆಚ್ಚಾಗುತ್ತಿದೆ, ವಿರೋಧ ಪಕ್ಷದ ಮುಖಂಡರಾದ ನಿಮ್ಮ ಪ್ರತಿಕ್ರಿಯೆ ಏನು ಎಂದು ಚಾನಲ್ ಒಂದರ ಮಹಿಳಾ ವರದಿಗಾರರು ಈಶ್ವರಪ್ಪನವರನ್ನು ಪ್ರಶ್ನಿಸಿದ್ದರು. ನಿಮ್ಮ ಮುಖಂಡರ ಉತ್ತರ ಹೀಗಿತ್ತು: ಅಲ್ಲಮ್ಮಾ, ನಿನ್ನನ್ನು ಯಾವನೋ ಕರೆದುಕೊಂಡು ಹೋಗಿ ರೇಪ್ ಮಾಡಿದರೆ ನಾವೇನು ಮಾಡಕ್ಕಾಗುತ್ತೆ. ನಾನು ಎಲ್ಲೋ ಇರ್ತೀನಿ.

ಈ ವಿಷಯಕ್ಕೆ ಸಂಬಂಧಿಸಿದಂತೆಯೂ ನೀವು ಏನನ್ನಾದರೂ ಬರೆದಿರಬಹುದು ಎಂಬ ಕುತೂಹಲದಿಂದ ನಿಮ್ಮ ಟೈಮ್ ಲೈನ್ ತಡಕಾಡಿದೆ. ಅಲ್ಲಿ ಅಕ್ಟೋಬರ್ 18ರಂದು ಸಿಕ್ಕಿದ್ದು ಇಷ್ಟು, ನೀವು ಬರೆದಿರೋದೇ ಇಷ್ಟು: ಮಾತನಾಡಲು ಕಲಿಯಲು – ಪ್ರಾರಂಭಿಸಲು ಬಾಲ್ಯದಲ್ಲಿ 3 ಮೊದಲ ವರ್ಷಗಳು ಬೇಕು. ಏನು ಮಾತನಾಡಬೇಕು – ಏನು ಮಾತನಾಡಬಾರದು ಎಂಬುದನ್ನು ಅರಿಯಲು ಇಡೀ ಜೀವಮಾನವೇ ಸಾಲದು.

ನೀವು ಈಶ್ವರಪ್ಪನವರ ಕುರಿತೇ ಈ ಸ್ಟೇಟಸ್ ಹಾಕಿದ್ದೀರೆಂಬುದು ಗೊತ್ತಾಗಿದ್ದು ಅಲ್ಲಿ ನಿಮ್ಮ ಸ್ನೇಹಪಟ್ಟಿಯಲ್ಲಿರುವವರು ಮಾಡಿರುವ ಕಮೆಂಟುಗಳಿಂದ! ಏನನ್ನು ಮಾತನಾಡಬೇಕು, ಏನನ್ನು ಮಾತನಾಡಬಾರದು ಎಂಬುದನ್ನು ಅರಿಯಲು ಇಡೀ ಜೀವಮಾನವೇ ಸಾಲದು ಎಂಬ ಈ ಆತ್ಮವಿಮರ್ಶೆಯ ಮಾತುಗಳು ಈಶ್ವರಪ್ಪನವರ ಹೇಳಿಕೆಗೆ ಪ್ರತಿಕ್ರಿಯೆಯಾ ಎಂದೆನಿಸಿ ಆಶ್ಚರ್ಯವೆನಿಸಿತು.

ಮುಖ್ಯಮಂತ್ರಿ, ಗೃಹಸಚಿವರ ಪುತ್ರಿಯರು,dinesh ಚಾಲನ್ ಒಂದರ ವರದಿಗಾರ್ತಿಯ ಕುರಿತು ಅತ್ಯಾಚಾರದಂಥ ಅತಿಸೂಕ್ಷ್ಮ ವಿಷಯಗಳನ್ನು ಇಟ್ಟುಕೊಂಡು ಆಡಿದ ಮಾತುಗಳು ತಮಗೆ ಬೌದ್ಧಿಕ ವಿಕಾರತೆ ಎನಿಸದೇ ಹೋಗಿದ್ದು ನಿಜಕ್ಕೂ ಆಶ್ಚರ್ಯ. ಅಥವಾ ಅತಿ ಸುಲಭವಾಗಿ ಒಂದು ನಿರ್ಣಯಕ್ಕೆ ಬರಬಹುದು. ನಿಮ್ಮ ಪಕ್ಷದವರು ಮಾಡಿದರೆ ಅದು ಆತ್ಮಾವಲೋಕನಕ್ಕೆ ದಾರಿ, ಬೇರೆಯವರು ಮಾಡಿದರೆ ಮಾತ್ರ ತೀವ್ರ ಸ್ವರೂಪದ ಟೀಕೆ-ವಿಮರ್ಶೆಗಳಿಗೆ ಅವಕಾಶ. ಇಂಥ ವಿಷಯಗಳಲ್ಲೂ ನೀವು ಎಷ್ಟು ಸೆಲೆಕ್ಟಿವ್ ಆಗಿರಲು ಬಯಸುತ್ತೀರಿ ನೋಡಿ. ರಾಜಕೀಯ ಅಂದರೆ ಇಷ್ಟೇನಾ ಸರ್? ಅಥವಾ ಸುರೇಶ್ ಕುಮಾರ್ ಅವರನ್ನು ಈ ಕೊಳಕು ರಾಜಕಾರಣದಿಂದ ಹೊರತಾಗಿರುವ ಮನುಷ್ಯ ಎಂದು ನಾವು ಭಾವಿಸಿದ್ದೇ ತಪ್ಪಾ?

ಈಗ ಮುಖ್ಯವಾದ ವಿಷಯಕ್ಕೆ ಬಂದುಬಿಡುತ್ತೇನೆ. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಶ್ರೀ ದಿನೇಶ್ ಅಮೀನ್ ಮಟ್ಟು ಅವರು ಮೈಸೂರಿನ ಸಂಸದ ಪ್ರತಾಪ ಸಿಂಹ ಅವರನ್ನು ಕುರಿತು ಬರೆಯುವಾಗ “ಮನೆಯಲ್ಲೇ ಅಂಗವಿಕಲ ಪತ್ನಿ ಇರುವಾಗ ಬೇರೆಯವರ ಬೋಳುಮಂಡೆಯಲ್ಲಿ ಕೂದಲು ಹುಡುಕುವಾತ ಎಂದು ಬರೆದಿದ್ದರು, ನಂತರ ಒಬ್ಬ ಹೆಣ್ಣುಮಗಳು ಈ ಉಲ್ಲೇಖ ಸರಿಯಿಲ್ಲವೆಂದು ಹೇಳಿದ ನಂತರ ಆ ಸಾಲನ್ನು ಕೂಡಲೇ ಡಿಲೀಟ್ ಮಾಡಿದ್ದರು. ಕನ್ನಡ ಬಲ್ಲ ಯಾರಿಗೇ ಆದರೂ ಅರ್ಥವಾಗುವುದು ಏನೆಂದರೆ ಮನೆಯಲ್ಲೇ ಅಂಗವೈಕಲ್ಯದ ಸಮಸ್ಯೆಯನ್ನು ಎದುರಿಸುತ್ತಿರುವವರ ಬೇರೆಯವರ ದೇಹದ ವೈಕಲ್ಯಗಳ ಬಗ್ಗೆ ಮಾತನಾಡುವುದು ಸರಿಯಲ್ಲ, ಏಕೆಂದರೆ ಬೇರೆಯವರನ್ನು ಮೂದಲಿಸುವಾಗ ಅದೇ ಸ್ಥಿತಿಯಲ್ಲಿರುವ ಮನೆಯವರು ಏನೆಂದುಕೊಂಡಾರು ಎಂಬ ಬಗ್ಗೆ ಕನಿಷ್ಟ ಪ್ರಜ್ಞೆ ಇರಬೇಕು – ಎಂಬುದು. ಆದರೂ ಇಲ್ಲಿ `ಅಂಗವಿಕಲ ಪತ್ನಿ ಎಂಬ ಉಲ್ಲೇಖ ಬಹಳಷ್ಟು ಜನರಿಗೆ ಇಷ್ಟವಾಗಲಿಲ್ಲ, ದಿನೇಶ್ ಅವರು ಅದನ್ನು ಕೂಡಲೇ ಸರಿಪಡಿಸಿದರು ಕೂಡ.

ಈಗ ಬೋಳುಮಂಡೆ ವಿಷಯಕ್ಕೆ ಬರೋಣ ಸರ್. ಇದರ ಹಿನ್ನೆಲೆಗಳನ್ನು ಸ್ವಲ್ಪ ವಿವರವಾಗಿಯೇ ನಿಮಗೆ ಹೇಳಬೇಕು. ಪ್ರತಾಪಸಿಂಹ ಅವರು ಪತ್ರಿಕೆಯೊಂದರ ಅಂಕಣದಲ್ಲಿ ದಿನೇಶ್ ಅಮೀನ್ ಮಟ್ಟು ಅವರನ್ನು ಕುಟುಕುವ ಸಲುವಾಗಿ ಮೊದಲು ಈ `ಬೋಳುಮಂಡೆ’ ಪದವನ್ನು ಬಳಸಿದ್ದರು. ಅದನ್ನೂ ಒಂದು ವೈಕಲ್ಯ ಎಂದಿಟ್ಟುಕೊಳ್ಳೋಣ. ದಿನೇಶ್ ಅವರನ್ನು ಟೀಕಿಸಲು ಪ್ರತಾಪ್ ಅವರಿಗೆ ಎಲ್ಲ ಹಕ್ಕುಗಳೂ ಇವೆ. ಅವರು ಟೀಕಿಸಲಿ, ಅವರ ದೇಹದ ಊನದ ಕುರಿತು ಮಾತನಾಡುವ ಅಗತ್ಯವೇನಿತ್ತು? ಪ್ರತಾಪಸಿಂಹ ಅವರು ಹೀಗೆ ಬರೆದ ನಂತರ ಅವರನ್ನು ಅನುಸರಿಸುವ ನೂರಾರು ಮಂದಿ ಬಲಪಂಥೀಯರು ಸಾಮಾಜಿಕ ಜಾಲತಾಣಗಳಲ್ಲಿ ಈ `ಬೋಳುಮಂಡೆ ಪದವನ್ನು ಪದೇಪದೇ ಬಳಸಿ ಅಣಕಿಸಿದರು, ಈಗಲೂ ಅಣಕಿಸುತ್ತಲೇ ಇದ್ದಾರೆ.

ದಿನೇಶ್ ಅವರನ್ನು ಹೀಗೆ `ಬೋಳುಮಂಡೆ ಎಂದು ಟ್ರಾಲ್ ಮಾಡಲು ಒಂದು ಕಾರಣವಿದೆ ಸರ್. ಅದು ಬಹುಶಃ ನಿಮಗೆ ಗೊತ್ತಿಲ್ಲದೆಯೇ ಇರಬಹುದು. ಸ್ವತಃ ನಿಮ್ಮ ಪಕ್ಷದ ದೊಡ್ಡ ನಾಯಕರಾದ ಎಲ್.ಕೆ.ಅಡ್ವಾನಿ, ವಿಎಚ್ಪಿ ಮುಖಂಡರಾದ ಪ್ರವೀಣ್ ತೊಗಾಡಿಯಾ ಅಂಥವರಿಗೂ ತಲೆಯಲ್ಲಿ ಕೂದಲಿಲ್ಲ. ಇದು ಗೊತ್ತಿದ್ದೂ ದಿನೇಶ್ ಅವರನ್ನು `ಬೋಳುಮಂಡೆ ಎಂದು ಕರೆಯಲು ಕಾರಣವಿದೆ. ದಿನೇಶ್ ಅಮೀನ್ ಮಟ್ಟು ಅವರು ಕ್ಯಾನ್ಸರ್ ಎಂಬ ಭೀಕರ ಕಾಯಿಲೆಯಿಂದ ನರಳಿದವರು. ಪ್ರಜಾವಾಣಿಯಲ್ಲಿ ಅವರು ಕಾರ್ಯನಿರ್ವಹಿಸುವಾಗಲೇ ಅವರಿಗೆ ಈ ರೋಗವಿತ್ತು. ಸತತ ಔಷಧೋಪಚಾರಗಳ ನಂತರ ಅವರು ಗುಣಮುಖರಾದರು. ಕ್ಯಾನ್ಸರ್ನಿಂದ ಪಾರಾಗಲು ಇರುವ ಐದುವರ್ಷಗಳ `ಅಪಾಯಕಾರಿ ಅವಧಿಯನ್ನು ಅವರು ದಾಟಿದ್ದಾರೆ. ಇದು ಗೊತ್ತಿದ್ದೇ ನಾವೆಲ್ಲ ಭಕ್ತರೆಂದು ಕರೆಯುವ ಬಲಪಂಥೀಯ ಶಕ್ತಿಗಳು `ಕ್ಯಾನ್ಸರ್ನಿಂದ ಈತನ ತಲೆ ಬೋಳಾಗಿದೆ, ಆದರೂ ಬುದ್ಧಿಬಂದಿಲ್ಲ ಎಂದು ಬರೆದರು. ಅದಕ್ಕೆ ಸಾಕ್ಷಿಗಳನ್ನು ಒದಗಿಸಬಲ್ಲೆ.

ಕ್ಯಾನ್ಸರ್ ಕುರಿತು ತಮಗೆ ವಿವರವಾಗಿ ಹೇಳಬೇಕಾಗಿ ಇಲ್ಲ ಸರ್. ಆದರೂ ಇದು ಬಹಿರಂಗ ಪತ್ರವಾದ್ದರಿಂದ ಗೊತ್ತಿಲ್ಲದವರಿಗೆ ಒಂದಷ್ಟು ವಿಷಯಗಳು ತಿಳಿಯಲಿ ಎಂಬ ಕಾರಣಕ್ಕೆ ಒಂದೆರಡು ಸಾಲುಗಳನ್ನು ಹೇಳಿಬಿಡುತ್ತೇನೆ. ಇಡೀ ಜಗತ್ತಿನಲ್ಲಿ ಕ್ಯಾನ್ಸರ್ನಷ್ಟು ಭೀಕರವಾದ ಖಾಯಿಲೆ ಇನ್ನೊಂದಿಲ್ಲ. ಅದನ್ನು ಜಯಿಸುವುದು ಅಷ್ಟು ಸುಲಭವೂ ಅಲ್ಲ. ಅದಕ್ಕೆ ಈಗಲೂ ಇರುವ ಸಾಂಪ್ರದಾಯಿಕ ಚಿಕಿತ್ಸೆಗಳೆಂದರೆ ಶಸ್ತ್ರಚಿಕಿತ್ಸೆ, ಕೀಮೋಥೆರಪಿ ಮತ್ತು ರೇಡಿಯೋಥೆರಪಿಗಳು ಮಾತ್ರ. ಕ್ಯಾನ್ಸರ್ ರೋಗದ ಹಾಗೆಯೇ ಈ ಚಿಕಿತ್ಸೆಗಳೂ ಸಹ ರೋಗಿಯನ್ನು ಜೀವಂತ ಶವ ಮಾಡಿಬಿಡುತ್ತವೆ. ಕ್ಯಾನ್ಸರ್ ಬಹುತೇಕ ರೋಗಿಗಳನ್ನು ಕೊಲ್ಲುತ್ತದೆ, ಆದರೆ ಈ ಕೊಲ್ಲುವ ಮಾದರಿಯೂ ಭೀಕರ. ದೇಹದ ಒಂದೊಂದೇ ಅವಯವಗಳನ್ನು ಅದು ನಿಷ್ಕ್ರಿಯಗೊಳಿಸುತ್ತ ಇಂಚುಇಂಚಾಗಿ ಮನುಷ್ಯನನ್ನು ಕೊಲ್ಲುತ್ತದೆ.

ನೀವು ಒಮ್ಮೆ ಕಿದ್ವಾಯಿ ಆಸ್ಪತ್ರೆಗೋ ಅಥವಾ ಶೃಂಗೇರಿ ಶಂಕರಮಠದವರು ನಡೆಸುವ ಶಂಕರ ಕ್ಯಾನ್ಸರ್ ಆಸ್ಪತ್ರೆಗೋ ಒಮ್ಮೆ ಹೋಗಿಬನ್ನಿ. ಅಲ್ಲಿ ಸಾವಿರ ಸಾವಿರಗಟ್ಟಲೆ ಕ್ಯಾನ್ಸರ್ ರೋಗಿಗಳನ್ನು ನೋಡಬಹುದು. ಎಲ್ಲರ ತಲೆಯೂ ಕೀಮೋಥೆರಪಿ ಎಂಬ ಭಯಾನಕ ಚಿಕಿತ್ಸೆಗೆ ಒಳಗಾಗಿ ಬೋಳಾಗಿರುತ್ತದೆ. ಬಹುಶಃ ನಿಮ್ಮ ಸಂಸದರ ಭಾಷೆಯಲ್ಲಿ ಹೇಳುವುದಾದರೆ ಇವರೆಲ್ಲರೂ ಬೋಳುಮಂಡೆಗಳೇ. ಕ್ಯಾನ್ಸರ್ ಕಣಗಳನ್ನು ಸಾಯಿಸಲೆಂದೇ ದೇಹಕ್ಕೆ ವಿಷವನ್ನು ಹರಿಸುವ ಚಿಕಿತ್ಸೆಯೇ ಕೀಮೋಥೆರಪಿ. ಅದು ಕ್ಯಾನ್ಸರ್ ಕಣಗಳ ಜತೆ ಗುದ್ದಾಡುವುದರ ಜತೆಗೆ ದೇಹದ ಇನ್ನಿತರ ಜೀವಕಣಗಳನ್ನೂ ಘಾಸಿಗೊಳಿಸುತ್ತದೆ. ಅದರ ಪರಿಣಾಮವಾಗಿಯೇ ಕ್ಯಾನ್ಸರ್ ರೋಗಿಗಳು ತಮ್ಮ ಕೂದಲು ಕಳೆದುಕೊಳ್ಳುತ್ತಾರೆ. ಕೂದಲು ಮಾತ್ರವಲ್ಲ, ಅವರ ದೇಹದ ಇಮ್ಯುನಿಟಿಯನ್ನೇ ಅದು ಕೊಲ್ಲುತ್ತ ಬರುತ್ತದೆ.

ಕೂದಲು ಕಳೆದುಕೊಳ್ಳುವುದೇನು ದೊಡ್ಡ ವಿಷಯವಲ್ಲ ಬಿಡಿ ಸರ್, ಜೀವ ಉಳಿಯಬೇಕಲ್ಲ. ಅದಕ್ಕಾಗಿ ಕೋಟ್ಯಂತರ ಕ್ಯಾನ್ಸರ್ ರೋಗಿಗಳು ಬಡಿದಾಡುತ್ತಲೇ ಇರುತ್ತಾರೆ. ಕಂಡಕಂಡ ಕಡೆ ಚಿಕಿತ್ಸೆಗೆ ಹೋಗುತ್ತಾರೆ. ಇದೊಂಥರ ಸಾವಿನ ಜತೆಗಿನ ಯುದ್ಧ. ಇಂಥ ಜೀವಗಳನ್ನು `ಬೋಳುಮಂಡೆಗಳು ಎಂದು ಕರೆಯಲು ನಿಮ್ಮ ಆತ್ಮಸಾಕ್ಷಿ ಒಪ್ಪುತ್ತಾ ಸರ್? ಇದೊಂದು ಪ್ರಶ್ನೆಗೆ ನೀವು ಉತ್ತರ ಕೊಟ್ಟರೆ ಸಾಕು, ಈ ಸುದೀರ್ಘ ಪತ್ರ ಬರೆದಿದ್ದೂ ಸಾರ್ಥಕವಾಗುತ್ತದೆ.

ದಿನೇಶ್ ಅವರು ಕ್ಯಾನ್ಸರ್ ಜತೆ ಗುದ್ದಾಡಿ, ನಂತರ ಅದರಿಂದ ಪಾರಾದ ನಂತರ ನನಗೆ ಗೊತ್ತಿರುವಂತೆ ವಾರಕ್ಕೆ ಇಬ್ಬರು ಕ್ಯಾನ್ಸರ್ ರೋಗಿಗಳು, ಸಂಬಂಧಿಗಳ ಜತೆಗಾದರೂ ಮಾತನಾಡುತ್ತಾರೆ. ಗಂಟೆಗಟ್ಟಲೆ ಅವರ ಅನುಭವವನ್ನು ಹೇಳುತ್ತ ಧೈರ್ಯ ತುಂಬುವ ಕೆಲಸ ಮಾಡುತ್ತಾರೆ. ವೈದ್ಯರ ಜತೆ ಮಾತನಾಡಿ ರೋಗಿಗಳಿಗೆ ಸಹಾಯ ಮಾಡಲು ಮನವಿ ಮಾಡುತ್ತಾರೆ. ಸಕರ್ಾರದಿಂದ ಚಿಕಿತ್ಸಾ ವೆಚ್ಚವನ್ನು ಕೊಡಿಸಲು ಯತ್ನಿಸುತ್ತಾರೆ. ಇದೆಲ್ಲವನ್ನೂ ಅವರು ಯಾರ ಬಳಿಯೂ ಹೇಳಿಕೊಳ್ಳುವುದಿಲ್ಲ. ನೊಂದ ನೋವು ನೋಯದವರಿಗೇನು ಗೊತ್ತು ಅಲ್ವಾ ಸರ್?

ಇದೆಲ್ಲ ವಿಷಯ ಒಂದೆಡೆ ಇರಲಿ, ಈಗ ಇಷ್ಟೆಲ್ಲ ವಿವರವಾಗಿ ಹೇಳಿದ ಮೇಲೂ ನೀವು ನಿಮ್ಮ ಸಂಸದರಿಂದ ಈ `ಬೋಳುಮಂಡೆ ಪ್ರಯೋಗದ ಬಗ್ಗೆ ಒಂದು ವಿಷಾದದ ಹೇಳಿಕೆ ಕೊಡಿಸುವಿರಾ? ಅದು ನಿಮ್ಮಿಂದ ಸಾಧ್ಯವಾ? ದಿನೇಶ್ ಅವರೇನೋ ತಾವು ಬರೆದ ಸಾಲಿನ ಧ್ವನಿ ಅಪಾರ್ಥಕ್ಕೆ ಎಡೆ ಮಾಡಿಕೊಡುತ್ತಿದೆ ಎಂಬುದನ್ನು ಅರ್ಥ ಮಾಡಿಕೊಂಡು ಅದನ್ನು ಡಿಲೀಟ್ ಮಾಡಿದರು. ಪ್ರತಾಪ್ ಸಿಂಹ ಅವರಿಂದ ಇದೇ ಕೆಲಸ ಮಾಡಿಸಲು ಸಾಧ್ಯವೇ ನಿಮ್ಮಿಂದ?

ಅದೆಲ್ಲ ಹೋಗಲಿ, ನೀವಾದರೂ ಬಲಪಂಥೀಯ ಹುಡುಗರು ತೀರಾ ಕೆಟ್ಟಾಕೊಳಕಾಗಿ ದಿನೇಶ್ ಅವರ ಕುರಿತು ಬರೆಯುವುದನ್ನು ನಿಲ್ಲಿಸಿ ಎಂದು ಒಂದು ಮನವಿ ಮಾಡಬಲ್ಲಿರಾ? ಖಂಡಿತಾ ಇಲ್ಲ. ನಿಮ್ಮ ಸ್ಟೇಟಸ್ಗೆ ಒಬ್ಬಾತ ದಿನೇಶ್ ಅವರ ದೇಹವನ್ನು ಸೀಳಿ, ಸಿದ್ಧರಾಮಯ್ಯ ಅವರ ಕೊರಳಿಗೆ ನೇತುಹಾಕಬೇಕು ಎಂದು ಕಮೆಂಟು ಬರೆಯುತ್ತಾನೆ. ನೀವು ಅದನ್ನು ಡಿಲೀಟ್ ಮಾಡುವ ಗೋಜಿಗೂ ಹೋಗುವುದಿಲ್ಲ. ಹೀಗೆಲ್ಲ ಬರೀಬೇಡ್ರಪ್ಪ ಎಂದು ನೀವು ಮನವಿ ಮಾಡಿದರೆ, ರಾಕೇಶ್ ಸಿದ್ಧರಾಮಯ್ಯ ತೀರಿಕೊಂಡಾಗ ಸಾವಿನ ಸಂಭ್ರಮ ಕೂಡದು ಎಂದು ಬರೆದ ಮಾಜಿ ಮುಖ್ಯಮಂತ್ರಿ ಶ್ರೀ ಸದಾನಂದಗೌಡರ ಮೇಲೆ ನಡೆದ ಅಕ್ಷರದಾಳಿಯೇ ನಿಮ್ಮ ಮೇಲೂ ನಡೆಯುತ್ತದೆ. ಯಾಕೆಂದರೆ ಈ ಹುಚ್ಚುಪಡೆಯ ವಿಕಾರಗಳು ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಲೇ ಇದೆ. ಈ ಪಡೆಗೆ ಇವತ್ತು ಅಮೀನ್ ಮಟ್ಟು ಅವರು ಗುರಿ, ನಾಳೆ ಸ್ವತಃ ನರೇಂದ್ರ ಮೋದಿಯವರೇ ಆದರೂ ಆಶ್ಚರ್ಯವಿಲ್ಲ. ನಮಗೆ ಕನಿಕರ ಹುಟ್ಟಬೇಕಿರುವುದು ನಮ್ಮ ಬಗ್ಗೆಯೇ ಸರ್. ಇಂಥ ವಿಷವನ್ನು ಸಮಾಜದಲ್ಲಿ ಹರಡುತ್ತ ಹೋದ ನಮ್ಮ ಬೇಜವಾಬ್ದಾರಿಯ ಕುರಿತು.

ನಮ್ಮ ಮೌDinesh-1ನವೇ ನಮ್ಮಲ್ಲಿ ಅಸಹ್ಯವನ್ನು ಹುಟ್ಟಿಸಬೇಕು ಸರ್. ಡಾ.ಯು.ಆರ್.ಅನಂತಮೂರ್ತಿ, ಡಾ.ಎಂ.ಎಂ.ಕಲ್ಬುರ್ಗಿ, ರಾಕೇಶ್ ಸಿದ್ಧರಾಮಯ್ಯ ಅವರುಗಳು ತೀರಿಕೊಂಡಾಗ ಈ ವಚರ್ುಯಲ್ ಜಗತ್ತಿನಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಬರಬರುತ್ತ ಇದೊಂದು ಟ್ರೆಂಡ್ ಖಾಯಂ ಆಗಿ ಜಾರಿಯಲ್ಲಿರಲಿದೆ. ನಿಮ್ಮಂಥವರು ಇಂಥ ಸಂದರ್ಭಗಳಲ್ಲಿ ಮೌನಕ್ಕೆ ಶರಣಾಗುತ್ತೀರಿ, ಯಾಕೆಂದರೆ ನೀವೂ ಕೂಡ ಸದಾನಂದಗೌಡರ ಹಾಗೆ ದಾಳಿಗೆ ಒಳಗಾಗುವ ಭೀತಿಯಲ್ಲಿರಬಹುದು. ಆದರೂ ನನ್ನದೊಂದು ಮನವಿ. ಈ ವಿಕಾರಗಳ ಕುರಿತು ಯಾವಾಗಲಾದರೂ ಮಾತನಾಡಿ ಸರ್; ಪಕ್ಷ-ಸಂಸ್ಥೆ-ಸಿದ್ಧಾಂತಗಳಿಂದ ಆಚೆ ಬಂದು.

ನೀವು ರಾಜಕಾರಣದಲ್ಲಿ ಇದ್ದರೂ ಮಾನವೀಯ ಸೂಕ್ಷ್ಮಗಳನ್ನು ಅರ್ಥಮಾಡಿಕೊಳ್ಳಬಲ್ಲವರು ಎನ್ನುವ ಕಾರಣಕ್ಕೆ ಇಷ್ಟನ್ನು ಬರೆದಿದ್ದೇನೆ. ಉತ್ತರಿಸುತ್ತೀರಿ ಎಂಬ ನಿರೀಕ್ಷೆಗಳೇನೂ ಇಲ್ಲ.

ಸಾವಿತ್ರಿ ಮೇಡಂಗೆ ನನ್ನ ನಮಸ್ಕಾರಗಳನ್ನು ತಿಳಿಸಿ.

ಪ್ರೀತಿಯಿಂದ
ದಿನೇಶ್ ಕುಮಾರ್ ಎಸ್.ಸಿ. (ದಿನೂ)

ಬುರ್ಕಾ ಧರಿಸಿದ ವಿದ್ಯಾರ್ಥಿನಿ : ವಿವಾದದ ಹಿಂದಿರುವ ಕೇಸರಿ ಸಂಚು

ನವೀನ್ ಸೂರಿಂಜೆ

ಅವತ್ತು ಆಯಿಶಾ ಆಸ್ಮಿನ್ ಎಂಬ ವಿದ್ಯಾರ್ಥಿನಿಗೆ ಬುರ್ಕಾ ಧರಿಸಿ ಕಾಲೇಜಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಸುದ್ದಿ ಬಂದ ತಕ್ಷಣ ನಾನು ಸುದಿಪ್ತೋ ಮೊಂಡಲ್ , ಶ್ರೀನಿಧಿ, ವಿನೋಭ, ಸತ್ಯ ಬಂಟ್ವಾಳದ ಎಸ್ ವಿ ಎಸ್ ಕಾಲೇಜಿಗೆ ತೆರಳಿದ್ದೆವು. ಸುದ್ದಿ ಮಾಡುವ ಉದ್ದೇಶದಿಂದ ತೆರಳಿದ್ದ ನಮಗೆ ಅಲ್ಲಿನ ಪ್ರಾಂಶುಪಾಲರು ಅಧಿಕೃತವಾಗಿ ಹೇಳಿಕೆ ಕೊಟ್ಟಿದ್ದೇನೆಂದರೆ, ”ನೋಡಿ ಇವತ್ತು ಬುರ್ಕಾ ಹಾಕಿಕೊಂಡು ಬರಲು ಅನುಮತಿ ಕೊಟ್ಟರೆ, ನಾಳೆಯಿಂದ ಕಾಲೇಜಿನ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬರುತ್ತಾರೆ. ಶಾಲೆಯ ಶಿಸ್ತು ಹಾಳಾಗುತ್ತದೆ. ಅದಕ್ಕೆ ಬುರ್ಕಾ ಹಾಕಿಕೊಂಡು ಪ್ರವೇಶ ಬೇಡ”.

 
ಅವತ್ತು ಬಂಟ್ವಾಳದ ಎಸ್ ವಿ ಎಸ್ ಕಾಲೇಸುರಿಂಜೆ-1ಜಿನ ಪ್ರಾಂಶುಪಾಲರು ಹೇಳಿದಂತೆ ಆಗಲಿಲ್ಲ. ವಿದ್ಯಾರ್ಥಿನಿ ನಾಳೆಯಿಂದ ಬುರ್ಕಾ ಹಾಕಿಕೊಂಡು ಬರಬಾರದು ಎಂದರೆ ಆಕೆಯ ಶೈಕ್ಷಣಿಕ ಭವಿಷ್ಯವೇ ತುಂಡಾಗುತ್ತದೆ. ಬುರ್ಕಾ ಬೇಕೇ ಬೇಡವೇ ಎನ್ನುವುದು ಬೇರೆಯದ್ದೇ ಚರ್ಚೆ. ನಾಳೆಯಿಂದಲೇ ತೆಗೆಯಬೇಕು ಎಂದು ನಿರ್ಭಂಧ ವಿಧಿಸೋದ್ರಿಂದ ಆಕೆಯ ಭವಿಷ್ಯಕ್ಕೆ ಮಾರಕವಾಗುತ್ತದೆ ಎಂದುಕೊಂಡು ನಾವು ಆಯಿಶಾ ಆಸ್ಮಿನ್ ಗೆ ಬುರ್ಕಾ ಧರಿಸಿ ಕಾಲೇಜು ಪ್ರವೇಶ ನಿರಾಕರಣೆಯ ಸುದ್ದಿ ಮಾಡಿದ್ವಿ. ಅದು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ ಕೊನೆಗೆ ಕಾಲೇಜು ಆಡಳಿತ ಮಂಡಳಿ ಬುರ್ಕಾದೊಂದಿಗೆ ಆಯಿಶಾ ಆಸ್ಮಿನ್ ಗೆ ಪ್ರವೇಶಕ್ಕೆ ಅವಕಾಶ ನೀಡಿತ್ತು. ಆದರೆ ಅವತ್ತು ಬಂಟ್ವಾಳ ಎಸ್ ವಿ ಎಸ್ ಕಾಲೇಜಿನ ಪ್ರಾಂಶುಪಾಲರು ಹೇಳಿದ್ದನ್ನು ಇಂದು ಸುಳ್ಯ ತಾಲೂಕಿನ ಪೆರ್ವಾಜೆಯ ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗಳು ಜಾರಿಗೆ ತಂದಿದ್ದಾರೆ. ಬುರ್ಕಾ ಹಾಕಿಕೊಂಡು ಬರುವುದಾದರೆ ನಾವೂ ಕೂಡಾ ಕೇಸರಿ ಶಾಲು ಹಾಕಿಕೊಂಡು ಬರುತ್ತೇವೆ ಎಂದು ಹಠ ಹಿಡಿದಿದ್ದಾರೆ.

 

ಸುಳ್ಯದ ಪೆರುವಾಜೆ ಕಾಲೇಜಿನಲ್ಲಿ ಎಬಿವಿಪಿಯ ಸೂಚನೆಯಂತೆ ಬುರ್ಕಾ ನಿಷೇದಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ತೊಟ್ಟಿದ್ದರು. ಸ್ವಲ್ಪ ಹಿಂದಕ್ಕೆ ಹೋಗೋಣ. ಅಂದು ಜೆ ಎನ್ ಯು ನಲ್ಲಿ ಕನ್ಹಯ್ಯ ಕುಮಾರ್ ಬಡತನ, ಹಸಿವು, ಅಸಮಾನತೆಯಿಂದ ಸ್ವಾತಂತ್ರ್ಯ ಬೇಕು ಎಂದು ಕೇಳಿದಾಗ ಇದೇ ಎಬಿವಿಪಿಯವರು ಬೊಬ್ಬೆ ಹಾಕಿದ್ದರು. ಜೆ ಎನ್ ಯು ವಿದ್ಯಾರ್ಥಿಗಳಿಗೆ ನಮ್ಮ ತೆರಿಗೆಯ ಹಣದಲ್ಲಿ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಅವರಿಗೆ ಶಿಕ್ಷಣ ಪಡೆಯುವುದರ ಹೊರತಾಗಿ ಇದೆಲ್ಲಾ ರಾಜಕೀಯ ಏಕೆ ಬೇಕು ಎಂದು ಎಬಿವಿಪಿ ಪ್ರಶ್ನೆ ಮಾಡಿತ್ತು. ಪೆರುವಾಜೆ ಸರಕಾರಿ ಕಾಲೇಜಿನಲ್ಲಿ ಕೂಡಾ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಕೊಡುತ್ತಿರುವುದು ನಮ್ಮದೇ ತೆರಿಗೆ ಹಣದಲ್ಲಿ. ಇಲ್ಯಾಕೆ ರಾಜಕೀಯ ಬೇಕಿದೆ ಎಂದು ಎಬಿವಿಪಿ ಪ್ರಶ್ನೆ ಮಾಡಿಕೊಳ್ಳಬೇಕಿದೆ ಎಂಬುದು ಬೇರೆ ವಿಚಾರ. ಇರಲಿ.

 

ಶಬರಿಮಲೆ ವೃತದ ಸಂಧರ್ಭದಲ್ಲಿ ಕಪ್ಪು ಶಾಲನ್ನು ಧರಿಸಿಕೊಂಡು ಹಲವು ವಿದ್ಯಾರ್ಥಿಗಳು ಕಾಲೇಜಿಗೆ ಬರುತ್ತಾರೆ. ಮುಸ್ಲಿಂ ವಿದ್ಯಾರ್ಥಿಗಳಾಗಲೀ, ತರಗತಿ ಉಪನ್ಯಾಸಕರಾಗಲೀ, ಆಡಳಿತ ಮಂಡಳಿಯಾಗಲೀ ವಿರೋಧ ವ್ಯಕ್ತಪಡಿಸಿದ ಉದಾಹರಣೆಗಳು ಇಲ್ಲ. ಕೆಲವೇ ದಿನಗಳ ಕಾಲ ಹಾಕುವ ಧಾರ್ಮಿಕ ವಸ್ತ್ರಾಧಾರಣೆಯ ಬಗ್ಗೆ ಆಕ್ಷೇಪ ಎತ್ತುವುದು ಕೂಡಾ ಸರಿಯಾದುದಲ್ಲ. ಬುರ್ಕಾದ ವಿಚಾರ ಹಾಗಲ್ಲ. ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜು ಆವರಣದೊಳಗೆ ಬುರ್ಕಾ ಹಾಕಿದರೂ ತರಗತಿಯಲ್ಲಿ ಬುರ್ಕಾ ಹಾಕಿಕೊಂಡು ಕೂರುವುದಿಲ್ಲ. ಎಲ್ಲಾ ವಿದ್ಯಾರ್ಥಿನಿಯರಂತೆ ಸಮವಸ್ತ್ರದಲ್ಲೇ ಪಾಠ ಕೇಳುತ್ತಾರೆ.
ಬುರ್ಕಾ ಎನ್ನುವುದು ಪುರುಷ ಮನಸ್ಥಿತಿಯ ಹೇರಿಕೆ ಎನ್ನುವುದು ಮತ್ತೊಂದು ವಾದ. ಹಾಗಂತ ಏಕಾಏಕಿ ಒಬ್ಬರ ವಸ್ತ್ರವನ್ನು ತಕ್ಷಣದಿಂದಲೇ ಬದಲಾಯಿಸಬೇಕು ಎಂದು ತಾಕೀತು ಮಾಡುವುದು ಯಾವ ನ್ಯಾಯ ?

 

ಮೂಡಬಿದ್ರೆಯ ಜೈನ್ ಕಾಲೇಜಿನಲ್ಲೂ ಇಂತಹುದೇ ಪ್ರಸಂಗ ಎದುರಾಗಿತ್ತು. ವಿದ್ಯಾರ್ಥಿನಿಯರು ಬುರ್ಕಾ ಧರಿಸಿಕೊಂಡು ಕಾಲೇಜಿಗೆ ಬರಬಾರದು ಎಂದು ದಿಢೀರನೆ ಕಾಲೇಜು ಆಡಳಿತ ಮಂಡಳಿ ಆದೇಶ ಹೊರಡಿಸಿತ್ತು. ಬುರ್ಕಾ ಧರಿಸಿ ಕಾಲೇಜಿಗೆ ಪ್ರವೇಶವಿಲ್ಲ ಎಂದು ಕಾಲೇಜಿಗೆ ವಿದ್ಯಾರ್ಥಿನಿ ಸೇರುವ ದಿನವೇ ಖಾತ್ರಿ ಪಡಿಸಿದ್ದರೆ ಅಥವಾ ಕಾಲೇಜಿನ ನಿಯಮಾವಳಿ ಪುಸ್ತಕದಲ್ಲೇ ಅದನ್ನು ಸ್ಪಷ್ಟಪಡಿಸಿ, ನಂತರ ವಿದ್ಯಾರ್ಥಿನಿ ಕಾಲೇಜಿಗೆ ಪ್ರವೇಶಾತಿಯನ್ನು ಪಡೆದಿದ್ದರೆ ಆಡಳಿತ ಮಂಡಳಿಯ ತಾಕೀತಿಗೊಂದು ಅಸುರಿಂಜೆ-2ರ್ಥ ಇರುತ್ತಿತ್ತು. ಆದರೆ ಈವರೆಗೂ ಇಲ್ಲದ ಒಂದು ಆಕ್ಷೇಪ ಒಮ್ಮಿಂದೊಮ್ಮೆಲೆ ಬಂದಾಗ ಅದರ ಹಿಂದೆ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜು ಪ್ರವೇಶಿಸಬಾರದು ಎಂದು ಬಯಸುವ ಮನಸ್ಥಿತಿಗಳ ಕೈವಾಡ ಇರುವುದು ಖಚಿತವಾಗುತ್ತದೆ. ಹಾಗಾಗಿಯೇ ಮೂಡಬಿದ್ರೆ ಜೈನ್ ಕಾಲೇಜಿನ ಬುರ್ಕಾ ನಿಷೇಧವನ್ನು ನಾವು ಒಂದು ತಂಡವಾಗಿ ಸುದ್ದಿ ಮಾಡಿದ್ದೆವು. ಸುದ್ದಿ ಬಂದ ನಂತರ ಕಾಲೇಜಿನ ಪರ ಅಥವಾ ಬಲಪಂಥೀಯರ ಪರ ಇದ್ದ ಕೆಲ ಪತ್ರಕರ್ತರು ಸಾಹಿತಿ ಸಾರಾ ಅಬುಬಕ್ಕರ್ ಹೇಳಿಕೆಯನ್ನು ಪಡೆದುಕೊಂಡರು. ಸ್ತ್ರೀವಾದಿ ಸಾರ ಅಬೂಬಕ್ಕರ್ ಬುರ್ಕಾ ವಿರೋಧಿ. ಹಾಗಂತ ಅವರು ಘಟನೆಯ ಹಿನ್ನಲೆಯನ್ನು ಅಭ್ಯಸಿಸದೇ “ಬುರ್ಕಾ ನಿಷೇದ ಮಾಡಿದ್ದು ಕಾಲೇಜು ಆಡಳಿತ ಮಂಡಳಿಯ ಉತ್ತಮ ನಿಲುವು” ಎಂದು ಬಿಟ್ಟರು. ಇದನ್ನೇ ಕಾಯುತ್ತಿದ್ದ ಪತ್ರಕರ್ತರು ಸಾರಾ ಅಬೂಬಕ್ಕರ್ ಹೆಸರಿನಲ್ಲಿ ತಮ್ಮ ಬೇಳೆ ಬೇಯಿಸಿಕೊಂಡರು.

 

ಇಷ್ಟಕ್ಕೂ ಬುರ್ಕಾವನ್ನು ಪ್ರಗತಿಪರರು ಸ್ತ್ರಿವಾದದ ನೆಲೆಯಲ್ಲಿ ವಿರೋಧಿಸುತ್ತಾರೆ. ಈ ಎಬಿವಿಪಿಗೆ ಸೇರಿದ ಹುಡುಗರು ಯಾಕೆ ವಿರೋಧಿಸುತ್ತಾರೆ ಎಂಬ ಸ್ಪಷ್ಟನೆಯನ್ನು ಕೊಡಬೇಕು. ವಿದ್ಯಾರ್ಥಿನಿಯರು ಚಿಕ್ಕ ಚಿಕ್ಕ ಡ್ರೆಸ್ ಗಳನ್ನು ಹಾಕಿಕೊಂಡು ಬಂದರೆ ಅದನ್ನು ನೈತಿಕತೆಯ ಹೆಸರಲ್ಲಿ ಇದೇ ಎಬಿವಿಪಿಯವರು ವಿರೋಧಿಸುತ್ತಾರೆ. ಪೂರ್ತಿ ಮೈಮುಚ್ಚಿಕೊಂಡು ಬಂದರೆ ಬುರ್ಕಾದ ಹೆಸರಿನಲ್ಲಿ ವಿರೋಧಿಸುತ್ತಾರೆ. ಇದು ಎಂತಹ ದ್ವಂದ್ವತೆ ? ಬುರ್ಕಾ ಎನ್ನುವುದು ಪುರುಷರು ಮಹಿಳೆಯರ ಮೇಲೆ ಹೇರಿರುವ ವಸ್ತ್ರ ಸಂಹಿತೆ ಅನ್ನೋ ಕಾರಣಕ್ಕಾಗಿ ಎಬಿವಿಪಿ ವಿರೋಧಿಸುತ್ತದೆ ಎಂದಾದರೆ, ವಸ್ತ್ರದ ವಿಷಯದಲ್ಲಿ ಆರ್ ಎಸ್ ಎಸ್ ನಿಲುವುಗಳೆಲ್ಲವನ್ನೂ ಎಬಿವಿಪಿ ವಿರೋಧ ಮಾಡಬೇಕಾಗುತ್ತದೆ. ಆದರೆ ಕಾರಣವೇ ಇಲ್ಲದೆ ಬುರ್ಕಾವನ್ನು ವಿರೋಧಿಸುವುದು, ಬುರ್ಕಾ ಧರಿಸಿಕೊಂಡು ವಿದ್ಯಾರ್ಥಿನಿಯರು ಕಾಲೇಜಿಗೆ ಬರಬಾರದೆಂದು ತಡೆಯುವುದು ಮುಸ್ಲಿಂ ವಿದ್ಯಾರ್ಥಿನಿಯರನ್ನು ಶಿಕ್ಷಣದಿಂದ ವಂಚಿಸುವ ಸಂಚಲ್ಲದೆ ಬೇರೇನೂ ಅಲ್ಲ ಎಂಬುದಂತೂ ಸ್ಪಷ್ಟ.