Author Archives: editor

ಕಾನ್ಶಿರಾಂ – ಕಲ್ಲಿದ್ದಲ ಕಗ್ಗತ್ತಲೆಯನ್ನು ಕೊಹಿನೂರೊಂದು ಕಳೆದ ಕಥೆ : ಭಾಗ- ೩

ಮಂಡಲ ವರದಿ ಜಾರಿಗೆ ತರಲು ಹೋರಾಡಿದ ಮೊಟ್ಟ ಮೊದಲ ದೃಷ್ಟಾರ

-ಶ್ರೀಧರ ಪ್ರಭು

sridhar-2

ಈ ದೇಶದಲ್ಲಿ ಹಿಂದುಳಿದ ವರ್ಗಗಳು (OBC) ಅತ್ಯಂತ ಹೆಚ್ಚು ಋಣಿಯಾಗಿರಬೇಕಿರುವುದು ಬಾಬಾಸಾಹೇಬ್ ಅಂಬೇಡ್ಕರರಿಗೆ. ಬಾಬಾಸಾಹೇಬರು ನೆಹರು ಸಂಪುಟಕ್ಕೆ ರಾಜೀನಾಮೆ ಸಲ್ಲಿಸಿದ ನಾಲ್ಕು ಮುಖ್ಯ ಕಾರಣಗಳಲ್ಲಿ ಮೊಟ್ಟ ಮೊದಲ ಮತ್ತು ಪ್ರಮುಖ ಕಾರಣ ಸಂವಿಧಾನದ ೩೪೦ ನೆ ವಿಧಿಯ ಪ್ರಕಾರ ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ ದೊರಕೆದೇ ಇದ್ದದ್ದು.
ಹಿಂದುಳಿದ ವರ್ಗಗಳ ಅಭಿವೃದ್ದಿಗೆ ಬರೀ ಆಯೋಗವೊಂದನ್ನು ರಚಿಸುವ ಪ್ರಸ್ತಾವನೆ ಇಟ್ಟು ಸರಕಾರ ತನ್ನ ನೇರ ಜವಾಬ್ದಾರಿಯನ್ನು ಆಯೋಗಕ್ಕೆ ವರ್ಗಾಯಿಸಿ ಕೈತೊಳೆದುಕೊಂದಿದ್ದಲ್ಲದೇ ಆಯೋಗಕ್ಕೆ ನೇಮಕಾತಿ ಕೂಡ ಮಾಡದ ಕ್ರಮವನ್ನು ಖಂಡಿಸಿ ಹೊರಬಂದರು. ಸ್ವತಂತ್ರ ಭಾರತದ ಮೊದಲ ಸರಕಾರ ಅಂಬೇಡ್ಕರರಿಗೆ ಸಂಸತ್ತಿನಲ್ಲಿ ತಮ್ಮ ರಾಜೀನಾಮ ಕುರಿತು ಹೇಳಿಕೆ ನೀಡಲೂ ಅವಕಾಶ ಒದಗಿಸಲಿಲ್ಲ. ಹಾಗಾಗಿ ಅವರು ಯಾವ ಕಾರಣಗಳಿಗೋಸ್ಕರ ರಾಜೀನಾಮೆ ಇತ್ತದ್ದು ಎಂದು ದೇಶಕ್ಕೆ ಗೊತ್ತಾಗಲೇ ಇಲ್ಲ. ಅಂದಿನ ಮನುವಾದಿ ನಿಯಂತ್ರಿತ ಮಾಧ್ಯಮಗಳು ಭಾಷಣದ ಪಾಠವನ್ನು ಕೂಡ ಪ್ರಕಟಿಸಲಿಲ್ಲ. ಬಾಬಾ ಸಾಹೇಬರ ಈ ಐತಿಹಾಸಿಕ ತೀರ್ಮಾನ ನಂತರದಲ್ಲಿ (೧೯೫೩) ಕಾಕಾ ಕಲೇಲ್ಕರ್ (ಪುಣೆಯ ಗಾಂಧಿವಾದಿ ಬ್ರಾಹ್ಮಣ ಮುಖಂಡ – ಹುಟ್ಟಿದ್ದು ಬೆಳಗಾವಿ ತಾಲೂಕಿನ ಬೆಳಗುಂಡಿಯಲ್ಲಿ) ನೇತೃತ್ವದಲ್ಲಿ ದೇಶದ ಮೊಟ್ಟ ಮೊದಲ ಹಿಂದುಳಿದ ವರ್ಗಗಳ ಆಯೋಗ – ‘ಕಲೇಲ್ಕರ್ ಹಿಂದುಳಿದ ವರ್ಗಗಳ ಆಯೋಗ’ ರಚನೆಯಾಗಲು ನಾಂದಿಯಾಯಿತು.
ಈ ಕಾಲೇಲ್ಕರ್ ವರದಿ ತುಂಬಾ ಮಜವಾಗಿತ್ತು. ಅಲ್ಲಿ ಇಲ್ಲಿ ಏನಾದರೂ ಪ್ರಾತಿನಿಧ್ಯ ಕೊಡುವುದಾದರೆ ಶಾಲೆಗಳಲ್ಲಿ ಜವಾನನ ಹುದ್ದೆ ಮತ್ತು ಪೌರ ಕಾರ್ಮಿಕರ ಹುದ್ದೆ, ಇಂಥಹ ಹುದ್ದೆಗಳಿಗೆ ಬೇಕಾದರೆ ಕೊಡಬಹುದು; ಆದರೆ ಯಾವುದೇ ಕಾರಣಕ್ಕೂ ಮೊದಲ ಮತ್ತು ಎರಡನೇ ದರ್ಜೆಯ ಕೆಲಸಗಳಲ್ಲಿ ಪ್ರಾತಿನಿಧ್ಯ ಇರಲೇ ಬಾರದು ಎಂದು ಶಿಫಾರಸ್ಸು ಮಾಡಲಾಯಿತು! ಸ್ವತಃ ಆಯೋಗದ ಅಧ್ಯಕ್ಷರೇ ತಮ್ಮ ವರದಿಯ ಶಿಫಾರಸ್ಸುಗಳಿಗೆ ವಿರೋಧ ವ್ಯಕ್ತ ಪಡಿಸಿ ಸರಕಾರದ ಹುದ್ದೆಗಳಲ್ಲಿ ಹಿಂದುಳಿದವರಿಗೆ ಪ್ರತಿನಿಧ್ಯವೇ ಇರಬಾರದು ಬೇಕಾದರೆ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೇಕಾದರೆ ಕೊಡಿ ಎಂದರು. ಸರಕಾರಕ್ಕೆ ವರದಿ ಸಲ್ಲಿಸುವಾಗ ಬರೆದ ಪತ್ರದಲ್ಲೇ ತಮ್ಮ ವರದಿಗೆ ತಮ್ಮದೇ ವಿರೋಧವಿದೆ ಎಂದೂ ಹೇಳಿ ಬಿಟ್ಟರು. ಇನ್ನು ಇಂತಹ periyar-ambedkarಉಗುರು-ಹಲ್ಲಿಲ್ಲದ ಕಾಕಾ ಕಲೇಲ್ಕರ್ ವರದಿಗೆ ಕೂಡ ಅಂದು ಸಾಕಷ್ಟು ವಿರೋಧ ವ್ಯಕ್ತವಾಗಿ ಕಲೇಲ್ಕರ್ ಅವರಿಂದಲೇ ಮಣ್ಣು ಕೊಡಿಸಲಾಯಿತು. ಕೊಡಲಾಯಿತು. ಅಂಬೇಡ್ಕರರ ಸತತ ಪ್ರಯತ್ನದ ಫಲವಾಗಿಯೇ ಹಿಂದುಳಿದ ವರ್ಗಗಳಿಗೆ ಇಂದು ಮೀಸಲಾತಿ ದೊರೆತದ್ದು.
ಬಾಬಾಸಾಹೇಬರ ನಂತರದಲ್ಲಿ ಈ ದೇಶದ ಹಿಂದುಳಿದ ವರ್ಗಗಳು ಅತ್ಯಂತ ಹೆಚ್ಚು ಋಣಿಯಾಗಿರಬೇಕದದ್ದು ಯಾರಿಗೆ ಎಂದು ರಾಜಕೀಯ ಇತಿಹಾಸ ತಜ್ಞರು ಪ್ರಾಮಾಣಿಕ ಸಂಶೋದನೆ ಮಾಡಿದರೆ ಗೋಚರಿಸುವ ಮೊಟ್ಟ ಮೊದಲ ಹೆಸರು ದಾದಾಸಾಹೇಬ್ ಕಾನ್ಶಿರಾಂ. ಎಲ್ಲರೂ ನಂಬಿದಂತೆ ಮಂಡಲ ವರದಿಯ ರೂವಾರಿ ವಿ ಪಿ ಸಿಂಗ್ ಅಲ್ಲ. ಬದಲಿಗೆ ಮಾನ್ಯವರ ಕಾನ್ಶಿರಾಂ. ೧೯೮೭ ರಲ್ಲಿ ಹರ್ಯಾಣ ವಿಧಾನಸಭೆಗೆ ಚುನಾವಣಾ ಪ್ರಚಾರ ಭಾಷಣದಲ್ಲಿ ಮೊಟ್ಟ ಮೊದಲ ಬಾರಿಗೆ ಮಂಡಲ ಆಯೋಗದ ಶಿಫಾರಸ್ಸು ಜಾರಿಗೆ ಮಾಡಬೇಕು ಎಂದು ಗರ್ಜಿಸಿದ್ದು ಕಾನ್ಶಿರಾಂ. ಅಂದಿನವರೆಗೆ ಯಾರಿಗೂ ಮಂಡಲ ವರದಿ ಎಂದರೆ ಏನು ಎಂದೇ ಗೊತ್ತಿರಲಿಲ್ಲ. ೧೯೮೭ ರಲ್ಲಿ ಕಾನ್ಶಿರಾಮರು ಹರ್ಯಾಣ ಚುನಾವಣಾ ಪ್ರಚಾರ ಭಾಷಣಗಳು ಸಂಪಾದಿಸಿದರೆ ಅದು ಇಡೀ ಭಾರತದ ಹಿಂದುಳಿದ ವರ್ಗದ ಪಾಲಿಗೆ ಧರ್ಮ ಗ್ರಂಥವಾದೀತು.

 

ಬಹುಜನ ಸಮಾಜ ಪಕ್ಷದ ಮೊದಲ ಎರಡು ಐತಿಹಾಸಿಕ ಘೋಷಣೆಗಳು – “ಮಂಡಲ್ ಅಯೋಗ್ ಜಾರಿ ಕರೋ ನಹಿ ತೋ ಕುರ್ಸಿ ಖಾಲಿ ಕರೋ” ಮತ್ತು “ವೋಟ್ ಹಮಾರಾ – ರಾಜ್ ತುಮ್ಹಾರಾ ನಹಿ ಚಲೇಗಾ ನಹಿ ಚಲೇಗಾ” ಹರ್ಯಾಣ ಚುನಾವಣೆಯ ಈ ಎರಡು ಚುನಾವಣಾ ಘೋಷಣೆಗಳು ದೇಶದಾದ್ಯಂತ ಮನೆಮಾತಾದವು. ಕಾನ್ಶಿರಾಂ ಒಂದು ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳುತ್ತಾರೆ
“ಈ ದೇಶದ ೪೫೦ ಜನ ಜಿಲ್ಲಾಧಿಕಾರಿಗಳಲ್ಲಿ ೧೨೫ ಜನ ದಲಿತರು. ದೇಶದ ಶೇಕಡಾ ಐವತ್ತರಷ್ಟು ಜನಸಂಖ್ಯೆಯ ಹಿಂದುಳಿದ ವರ್ಗದವರು ವರು ಇಲ್ಲವೇ ಇಲ್ಲ ಎನ್ನುವಷ್ಟು ಸಂಖ್ಯೆಯಲ್ಲಿ ಜಿಲ್ಲಾಧಿಕಾರಿ ಗಳಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ೪೫೦ ಜನ ಐಎಎಸ್ ಅಧಿಕಾರಿಗಳಿದ್ದಾರೆ ಅದರಲ್ಲಿ ೧೩೭ ಜನ ದಲಿತರು ಆದರೆ ಹಿಂದುಳಿದವರು ಕೇವಲ ೭ (ಅದರಲ್ಲಿ ಆರು ಜನ ಯಾದವರು). ಏಕೆ ಎಂದು ಯೋಚಿಸಿ”
ಅನೇಕರಿಗೆ ಗೊತ್ತಿಲ್ಲದ ವಿಚಾರವೆಂದರೆ ಬಹುಜನ ಸಮಾಜ ಪಕ್ಷದ ಮೊಟ್ಟ ಮೊದಲ ಲೋಕ ಸಭಾ ಸದಸ್ಯ ಭೀಮ್ ಸಿಂಗ್ ಪಟೇಲ್ ( ೧೯೯೧ ರ ಲೋಕ ಸಭಾ ಚುನಾವಣೆಯಿಂದ ಮಧ್ಯ ಪ್ರದೇಶದ ರೀವಾ ಲೋಕ ಸಭಾ ಕ್ಷೇತ್ರ) ಹಿಂದುಳಿದ ವರ್ಗದ ಕುರ್ಮಿ ಜನಾಂಗದವರು. ಅಷ್ಟೇ ಅಲ್ಲ, ೧೯೯೬ ರಲ್ಲಿ ಮತ್ತು ಮೇಲ್ವರ್ಗದ ಭದ್ರ ಕೋಟೆ ಎನಿಸಿಕೊಂಡ ಮಧ್ಯ ಪ್ರದೇಶದ ಸತ್ನಾ ಲೋಕ ಸಭಾ ಕ್ಷೇತ್ರದಲ್ಲಿ ಬಹುಜನ ಸಮಾಜ ಪಕ್ಷದಿಂದ ಪ್ರಥಮ ಬಾರಿಗೆ ಸ್ಪರ್ಧಿಸಿದ ಸುಖ್ ಲಾಲ್ ಕುಶ್ವಾಹ ಅರ್ಜುನ ಸಿಂಗರನ್ನು ಸೋಲಿಸಿ ಬಿಟ್ಟರು. ವಾಜಪೇಯಿಯವರ ಅಲೆ ಇದ್ದಾಗ್ಯೂ ಭಾಜಪ ಮೂರನೇ ಸ್ಥಾನಕ್ಕೆ ಹೋಯಿತು. ಉತ್ತರ ಭಾರತದಲ್ಲಿ, ಅದರಲ್ಲೂ ಮುಖ್ಯವಾಗಿ ಉತ್ತರ ಪ್ರದೇಶ, ಹರ್ಯಾಣ, ವಿಂಧ್ಯ ಪ್ರದೇಶ (ಮಧ್ಯಪ್ರದೇಶದ ಉತ್ತರ ಭಾಗ) ದಲ್ಲಿ ಬಹು ದೊಡ್ಡ ಸಂಖ್ಯೆಯಲ್ಲಿ ಹಿಂದುಳಿದ ವರ್ಗ ಬಹುಜನ ಸಮಾಜ ಪಾರ್ಟಿಯ ಜೊತೆ ಗುರುತಿಸಿ ಕೊಂಡಿತು. ಹೀಗೆ ಅಧುನಿಕ ಭಾರತದ ರಾಜಕೀಯ ಸಂದರ್ಭದಲ್ಲಿ ಹಿಂದುಳಿದ ವರ್ಗಗಳಲ್ಲಿ ಮೊಟ್ಟ ಮೊದಲು ಜಾಗೃತಿ ಮೂಡಿಸಿದ ಕೀರ್ತಿ ಸಲ್ಲಬೇಕಿರುವುದು ಕಾನ್ಶಿರಾಂ ಅವರಿಗೆ.

kanshiram
ವಿಶೇಷವೆಂದರೆ ಕುಶ್ವಾಹ ಮತ್ತು ಪಟೇಲ್ ಸಂಸದರಾದಾಗ ಅವರ ವಯಸ್ಸು ಮೂವತ್ತೈದು ವರ್ಷ ಮೀರಿರಲಿಲ್ಲ. ಹೀಗೆ ಹಿಂದುಳಿದ ವರ್ಗಗಳಲ್ಲಿನ ಹೊಸ ತಲೆಮಾರಿಗೆ ಅವಕಾಶಗಳನ್ನು ಕೊಟ್ಟು ಬೆಳೆಸಿದ ಕಾನ್ಶಿರಾಂ ಬರದೇ ಇದ್ದಿದ್ದರೆ ಇಡೀ ಉತ್ತರ ಭಾರತದ ರಾಜಕೀಯ ಕೇಸರಿಮಯವಾಗಿರುತ್ತಿತ್ತು.
೧೯೯೧ ರಲ್ಲಿ ಉತ್ತರ ಪ್ರದೇಶದಲ್ಲಿ ೨೨೧ ಸ್ಥಾನ ಗಳನ್ನು ಗೆದ್ದು ಅಧಿಕಾರದಲ್ಲಿದ್ದ ಭಾರತೀಯ ಜನತಾ ಪಾರ್ಟಿ ಸರಕಾರವನ್ನು ಬಾಬರಿ ಮಸೀದಿ ಧ್ವಂಸದ ಹಿನ್ನೆಲೆಯಲ್ಲಿ ವಿಸರ್ಜಿಸಿ ರಾಷ್ಟ್ರಪತಿ ಆಡಳಿತ ತರಲಾಯಿತು. ನಂತರ ನಡೆದ ಚುನಾವಣೆಗಳಲ್ಲಿ ಎಲ್ಲರೂ ಭಾವಿಸಿದ್ದು ಭಾಜಪ ಸಂಪೂರ್ಣ ಬಹುಮತ ಪಡೆಯುತ್ತದೆ ಎಂದು. ಆದರೆ ಎಲ್ಲರ ನಿರೀಕ್ಷೆ ಹುಸಿಗೊಳಿಸಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ-ಬಹುಜನ ಸಮಾಜ ಪಾರ್ಟಿಯ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದಿತು. ಕೋಮು ಜ್ವಾಲೆಯಲ್ಲಿ ಬೆಂದು ಹೋಗಿದ್ದ ಈ ಚುನಾವಣೆಯಲ್ಲಿ ಕೋಮುವಾದಿ ರಾಜಕಾರಣವನ್ನು ಹತ್ತಿಕ್ಕಿ ಜನಪರ ಆಶಯ ಹೊತ್ತ ಹಿಂದುಳಿದ ವರ್ಗಗಳಿಗೆ ಅಧಿಕಾರ ದೊರಕಿಸಿಕೊಡಲು ಕಾರಣ ಕಾನ್ಶಿರಾಂ ಅವರ ಸಂಘಟನಾ ಚಾತುರ್ಯ. ಮೊತ್ತ ಮೊದಲ ಬಾರಿಗೆ ಯಶಸ್ಸಿಗೆ ಕಾರಣ.
ಅದರೊಂದಿಗೇ ೧೯೯೮ ರ ಮಧ್ಯ ಪ್ರದೇಶದ ವಿಧಾನ ಸಭಾ ಚುನಾವಣೆಯಲ್ಲಿ ಕಾನ್ಶಿರಾಂ ತಮ್ಮ ಪ್ರಸಿದ್ದ ಘೋಷಣೆ “ಜಿಸ್ಕಿ ಜಿತನಿ ಸಂಖ್ಯಾ ಭಾರಿ – ಉಸ್ಕಿ ಉತನಿ ಭಾಗಿದಾರಿ” (ಅವರವರ ಸಂಖ್ಯೆ ಯಷ್ಟು ಅವರ ಪ್ರಾತಿನಿಧ್ಯ’) ಯನ್ನು ಸಂಪೂರ್ಣ ಜಾರಿ ಗೊಳಿಸಿ ೫೦.೫ % ರಷ್ಟು ಟಿಕೆಟ್ ಗಳನ್ನು ಹಿಂದುಳಿದ ವರ್ಗಗಳಿಗೆ ಕೊಟ್ಟರು. ಬಿ.ಎಸ್.ಪಿ ಗೆದ್ದುಕೊಂಡ ಹನ್ನೊಂದು ಕ್ಷೇತ್ರ ಗಳಲ್ಲಿ ಹೆಚ್ಚಿನ ಕ್ಷೇತ್ರಗಳು ಸಾಮಾನ್ಯ ಕ್ಷೇತ್ರಗಳಾಗಿದ್ದವು. ಅವರ ಜೀವನ ಕಾಲದಲ್ಲಿ ಮಧ್ಯ ಪ್ರದೇಶದ ಹಿಂದುಳಿದ ವರ್ಗ ಕಾನ್ಶಿರಾಂರ ನಾಯಕತ್ವ ಮತ್ತು ಸಿದ್ಧಾಂತಗಳ ಜೊತೆ ಸಂಪೂರ್ಣವಾಗಿ ಸಮಾವೇಶಗೊಂಡಿತ್ತು.
ಒಂದು ಲೆಕ್ಕದಲ್ಲಿ ನೋಡಿದರೆ ಕಲ್ಯಾಣ್ ಸಿಂಗ್, ವಿನಯ್ ಕಟಿಯಾರ್, ಉಮಾ ಭಾರತಿಯವರಿಗೆ ಸಂಘ ಪರಿವಾರ ನಾಯಕತ್ವ ಕೊಡಲು ಕಾರಣ ಉತ್ತರ ಪ್ರದೇಶದಲ್ಲಿ ಬಹಳ ದೊಡ್ಡ ಸಂಖ್ಯೆಯಲ್ಲಿ ಹಿಂದುಳಿದವರು ಸಾಮಾಜಿಕವಾಗಿ ಸಮಾಜವಾದಿ ಮತ್ತು ಬಹುಜನ ಚಳುವಳಿಯ ಜೊತೆ ಗುರಿತಿಸಿಕೊಂಡಿದ್ದೇ ಆಗಿತ್ತು. ಹೀಗಾಗಿ ಒಂದು ಲೆಕ್ಕದಲ್ಲಿ ಸಂಘಪರಿವಾರಕ್ಕೆ ಒಬಿಸಿಗಳನ್ನ ಮುಂಚೂಣಿಗೆ ತರುವ ಅನಿವಾರ್ಯತೆ ಬಂದದ್ದು ಬಹುಜನ ರಾಜಕಾರಣದಿಂದ.
‘ಅಯೋಧ್ಯಾ ಕಾಂಡ’ ಜರುಗಿದ ಮೂರು ವರ್ಷಗಳಲ್ಲಿ (೧೮, ೧೯, ಸೆಪ್ಟೆಂಬರ್, ೧೯೯೫) ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಾರ್ಟಿಯ ಸರಕಾರ ರಚನೆಯಾಗಿದ್ದಲ್ಲದೆ, ಮನುವಾದದ ಹೃದಯ ಕೇಂದ್ರ ಲಖನೌ ನಲ್ಲಿ ಪೆರಿಯಾರ್ ಮೇಳ ಆಯೋಜಿಸಲಾಯಿತು. ದಕ್ಷಿಣ ಭಾರತದ ಅದರಲ್ಲೂ ರಾಮನನ್ನು ವಿರೋಧಿಸಿದ ತಮಿಳುನಾಡಿನ ರಾಜಕೀಯ ಚಿಂತಕರೊಬ್ಬರ ನೆನಪಿನಲ್ಲಿ ಬೃಹತ್ ಮೇಳವೊಂದನ್ನು ಭಾಜಪದ ನೆರವು ಪಡೆದುಕೊಂಡೇ ಇದ್ದ ಕಾಲದಲ್ಲಿ ಆಚರಿಸಿದ ಛಾತಿ ಕನ್ಶಿರಾಂರಿಗೆ ಮಾತ್ರ ಸಾಧ್ಯವಿತ್ತು.
ಒಂದು ವೇಳೆ ಅನೇಕರು ಆರೋಪಿಸಿದ ಹಾಗೆ ಕಾನ್ಶಿರಾಂ ಅವಕಾಶವಾಗಿದ್ದರೆ, ರಿಪಬ್ಲಿಕನ್ ಪಾರ್ಟಿಯ ಅಠವಳೆ, ಉದಿತ್ ರಾಜ್, ಪಾಸ್ವಾನ್ ಮಾದರಿಯಲ್ಲಿ ಬಿಜೆಪಿ ತಾಳಕ್ಕೆ ಕುಣಿದು ಅವರಲ್ಲೇ ಲೀನವಾಗುತ್ತಿದ್ದರು. ಬಿಜೆಪಿಗೆ ಕಾನ್ಶಿರಾಂ ಅನಿವಾರ್ಯರಾಗಿದ್ದರೆ ಹೊರತು ಕಾನ್ಶಿರಾಂ ಭಾಜಪವನ್ನು ನೆಚ್ಚಿಕೊಂಡಿರಲಿಲ್ಲ. ಹಾಗಲ್ಲದಿದ್ದರೆ, ಉತ್ತರ ಪ್ರದೇಶದಲ್ಲಿ ಮಾಯಾವತಿ ಸರಕಾರಕ್ಕೆ ಬಾಹ್ಯ ಬೆಂಬಲ ಕೊಡುವುದಾಗಿ ಘೋಷಣೆ ಮಾಡಿದ ಯಾರ ಮುಲಾಜೂ ಇಲ್ಲದೆ, ನಮ್ಮ ಗುರಿ ಸಾಧನೆಗೆ ನಾವು ಭಾಜಪವನ್ನು ಬಳಸಿಕೊಳ್ಳುತ್ತಿದ್ದೇವೆ ಎಂದು ಬಹಿರಂಗವಾಗಿ ಅವರು ಘೋಷಣೆ ಮಾಡುತ್ತಿರಲಿಲ್ಲ. ಮತ್ತೆ ಅಧಿಕಾರಕ್ಕೆ ಅಂಟಿಕೊಳ್ಳಲು ಬೇಕಾದ ‘ನಾಜೂಕಯ್ಯನ’ ಅವತಾರವೆತ್ತುತ್ತಿದ್ದರು.
ಕಾನ್ಶಿರಾಂ ಅವರ ಅಂತರಂಗ ಮತ್ತು ಬಹಿರಂಗ ಒಂದೇ ಆಗಿತ್ತು.

ಕನ್ನಡಪ್ರಭದಲ್ಲಿ ಹರಿಕುಮಾರ್ – ಹೀಗೊಂದು ಅನಿರೀಕ್ಷಿತ

ಗೋಪಾಲ್ ಬಿ. 

ಕನ್ನಡ ಪತ್ರಿಕೋದ್ಯಮದಲ್ಲಿ Hari kumar-picಕಳೆದ ಒಂದು ವಾರ ಅಪರೂಪದ ಸಂಗತಿಯೊಂದು ನಡೆಯಿತು. ಪ್ರಜಾವಾಣಿ ಪತ್ರಿಕೆಗೆ ಹೊಸ ದಿಕ್ಕು ಹಾಗೂ ಕರ್ನಾಟಕದ ಚಿಂತನಾವಲಯಕ್ಕೆ ಹೊಸದೊಂದು ದೆಸೆ ತೋರಿಸಿದ್ದ ಕೆ.ಎನ್.ಹರಿಕುಮಾರ್ ಅವರ ದೀರ್ಘ ಲೇಖನವೊಂದು ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾಯಿತು. ಬರಹದ ಮೊದಲ ಕಂತು ಪ್ರಕಟವಾದಾಗ ಅನೇಕರಿಗೆ ಅಚ್ಚರಿಯಾದದ್ದಂತೂ ಸತ್ಯ. ಅದು ಅನಿರೀಕ್ಷಿತ.
ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಇತ್ತೀಚೆಗೆ ಮಾತನಾಡುತ್ತಾ ತುರ್ತು ಪರಿಸ್ಥಿತಿಯಂತಹ ಸನ್ನಿವೇಶ ಮತ್ತೆ ಬಂದೀತೇನೋ ಎಂಬ ಆತಂಕ ವ್ಯಕ್ತಪಡಿಸಿದ್ದರು. ಆ ಮಾತಿನ ಎಳೆಯೊಂದಿಗೆ ಆರಂಭವಾಗುವ ಹರಿಕುಮಾರ್ ಅವರ ಮಾತುಗಳು, ಈ ಹೊತ್ತು ಪ್ರಜಾಪ್ರಭುತ್ವ ಎದುರಿಸುತ್ತಿರುವ ಸವಾಲುಗಳನ್ನು ಗುರುತಿಸಿ
ದ್ದಾರೆ. ತುರ್ತು ಪರಿಸ್ಥಿತಿ ಹೇರಿಕೆ ತಂದುಕೊಡಬಹುದಾದ ಅಪಾಯಗಳನ್ನು ಮನಗಂಡು, ಕೇವಲ ಪ್ರಜಾಪ್ರಭುತ್ವದ ಮೇಲ್ಮೈ ರೂಪುರೇಷೆಗಳನ್ನು ಹಾಗೇ ಉಳಿಸಿಕೊಂಡು, ಇದೇ ವ್ಯವಸ್ಥೆ ಜನವಿರೋಧಿಯಾಗುವ ಅಪಾಯ ಇದೆ Hari Kumar.jpg - 2ಎಂದು ಎಚ್ಚರಿಸುವ ಹರಿಕುಮಾರ್ ಅವರು “ನಮ್ಮ ಸ್ವಾತಂತ್ರ್ಯ ಹಾಗೂ ಹಕ್ಕುಗಳನ್ನು ಹತ್ತಿಕ್ಕುವ, ಕಬಳಿಸುವ ಪ್ರಯತ್ನಗಳನ್ನು ಹಿಮ್ಮೆಟ್ಟಿಸಲು, ಸಾಮಾಜಿಕ ಅಭಿಪ್ರಾಯ ರೂಪಿಸುವ ಹಾಗೂ ಸಾಮಾಜಿಕ ಹೋರಾಟ ಕಟ್ಟುವ ಮೂಲಕ ಮಾತ್ರ ಸಾಧ್ಯ” – ಎಂದು ಸಲಹೆ ನೀಡುತ್ತಾರೆ.

Hari Kumar
ಅವರ ಈ ಲೇಖನ ಪ್ರಕಟವಾಗುವ ಕೆಲವು ವಾರಗಳ ಹಿಂದಷ್ಟೇ ಫೇಸ್ ಬುಕ್ ನಲ್ಲಿ ಹರಿಕುಮಾರ್ ಅವರು ಸಕ್ರಿಯ ಪತ್ರಿಕೋದ್ಯಮ ಹಾಗೂ ಸಾ ಮಾಜಿಕ ಹೋರಾಟಗಳಿಂದ ದೂರ ಉಳಿದಿರುವ ಬಗ್ಗೆ ಚರ್ಚೆಯಾಗಿತ್ತು. ಈ ನಾಡಿನ ಆಸ್ತಿಗಳೇ ಎನ್ನಬಹುದಾದ ಕೆಲ ಹಿರಿಯ ಪ ತ್ರಕರ್ತರು (ಜಗದೀಶ್ ಕೊಪ್ಪ, ದಿನೇಶ್ ಅಮಿನ್ ಮಟ್ಟು, ನಾಗೇಶ್ ಹೆಗಡೆ…ಇನ್ನೂ ಹಲವರು) ಆ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಹರಿಕುಮಾರ್ ಮತ್ತೆ ಚಾಲ್ತಿಗೆ ಬರಬೇಕು. ಅವರು ಮಾತನಾಡಬೇಕು, ಬರೆಯಬೇಕು – ಎನ್ನುವ ಅಭಿಪ್ರಾಯ ಅಲ್ಲಿ ವ್ಯಕ್ತವಾಗಿತ್ತು. ಬಹುಶಃ ಆ ಚರ್ಚೆಯ ವಿವರಗಳು ಅವರಿಗೆ ಸಾಮಾಜಿಕ ತಾಣದ ಮೂಲಕ ತಲುಪಿದ್ದವೇನೋ, ಆ ಕಾರಣದಿಂದ ಅವರು ಸುದೀರ್ಘ ಲೇಖನವೊಂದನ್ನು ಬರೆದು ಕನ್ನಡ ಪ್ರಭಕ್ಕೆ ಕಳುಹಿಸಿದರೆ… ಗೊತ್ತಿಲ್ಲ.
ಆದರೆ, ಈ ಬೆಳವಣಿಗೆ ಆಶಾದಾಯಕ. ಕನ್ನsugataಡಪ್ರಭ ನವೆಂಬರ್ 1 ರಂದು ಕರ್ನಾಟಕದ 60 ಮಹನಿಯರನ್ನು ಆಯ್ಕೆ ಮಾಡುವಾಗ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹರಿಕುಮಾರ್ ಅವರನ್ನು ಗುರುತಿಸಿದ್ದರು. ಅದಾದ ಬಳಿಕೆ ಕೆಲವೇ ದಿನಗಳಲ್ಲಿ ಲೇಖನ ಸರಣಿ ಆರಂಭವಾಯಿತು. ಇಂತಹದೊಂದು ಅಪರೂಪದ ಬೆಳವಣಿಗೆ ಘಟಿಸಲು ಕಾರಣರಾದ ಹರಿಕುಮಾರ್ ಹಾಗೂ ಕನ್ನಡಪ್ರಭ ಸಂಪಾದಕರಾದ ಸುಗತ ಶ್ರೀನಿವಾಸರಾಜು ಅವರು ಅಭಿನಂದನಾರ್ಹರು.

ಶಾಂತಿ ಕದಡುವವರ ಮಧ್ಯೆ ನೆಮ್ಮದಿಯನ್ನು ಕನವರಿಸುತ್ತಾ…

​ಎಸ್. ಸದಾನಂದ

ಕೆಲ ವರ್ಷಗಳ ಹಿಂದೆ ಮಧ್ಯಕರ್ನಾಟಕದ ಜಿಲ್ಲಾ ಕೇಂದ್ರವೊಂದರಲ್ಲಿ ನಡೆದ ಘಟನೆ ಇದು.

ಆಗ ನಿವೃತ್ತಿ ಅಂಚಿನಲ್ಲಿದ್ದ ಶಿಕ್ಷಕರೊಬ್ಬರು ಪ್ರತಿ ದಿನ ವಾಕಿಂಗ್ ನಲ್ಲಿ ಆ ಪತ್ರಿಕೆಯ ವರದಿಗಾರರನ್ನು ಭೇಟಿಯಾಗಿ ವಿಷ್ ವಿನಮಯ ಮಾಡಿಕೊಳ್ಳುತ್ತಿದ್ದರು. ಒಂದು ದಿನ pic 2ವರದಿಗಾರರನ್ನು ತಡೆದು ನಿಲ್ಲಿಸಿ “ದಯವಿಟ್ಟು ನಾಳೆಯಿಂದ ನಿಮ್ಮ ಪತ್ರಿಕೆ ನಮ್ಮ ಮನೆಗೆ ಹಾಕುವುದನ್ನು ನಿಲ್ಲಿಸಬೇಕು. ನಿಮ್ಮ ಪ್ರಸರಣ ವಿಭಾಗದವರಿಗೆ ತಿಳಿಸಲು ಸಾಧ್ಯವೇ” ಎಂದರು. ಮನವಿಯನ್ನು ಸ್ವೀಕರಿಸಿದ ವರದಿಗಾರ ಸಂಬಂಧಪಟ್ಟವರಿಗೆ ಮಾಹಿತಿ ತಲುಪಿಸಿ ಅವರ ಮನೆಗೆ ಪತ್ರಿಕೆ ಹೋಗುವುದು ನಿಂತಿತು.

 

ಮತ್ತೆ ಕೆಲ ದಿನಗಳ ನಂತರ ಅಂತಹದೇ ವಾಕಿಂಗ್ ಸಂದರ್ಭವೊಂದರಲ್ಲಿ ಭೇಟಿಯಾದ ವರದಿಗಾರರನ್ನು ಆ ಶಿಕ್ಷಕರು ಮತ್ತೆ ನಿಲ್ಲಿಸಿದರು. “ನಿಮ್ಮ ಪತ್ರಿಕೆಯನ್ನು ನಿಲ್ಲಿಸಿದ್ದಕ್ಕೆ ನಿಮಗೆ ಬೇಸರ ಆಗಿರಬಹುದು. ಆದರೆ ನಿಮ್ಮೊಂದಿಗೆ ಆ ನನ್ನ ತೀರ್ಮಾನಕ್ಕೆ ಕಾರಣವನ್ನು ತಿಳಿಸಿಬೇಕಿದೆ” ಎಂದು ಮಾತು ಮುಂದುವರಿಸಿದರು… “ನನಗೆ ಕಾಲೇಜು ಓದುವ ಮಗನಿದ್ದಾನೆ. ನಿಮ್ಮ ಪತ್ರಿಕೆಯಲ್ಲಿ ಪ್ರಕಟವಾಗುವ ಕೆಲ ಅಂಕಣಗಳು ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಹಾಗೂ ನೆರೆಹೊರೆಯವರನ್ನು ಅನುಮಾನದಿಂದ ನೋಡುವ ಸನ್ನಿವೇಶ ಸೃಷ್ಟಿಯಾಗಲು ಪ್ರಚೋದನಕಾರಿಯಾಗಿವೆ. ಇನ್ನೂ ಎಳೆಯ ಹರೆಯದಲ್ಲಿರುವ ಮಗ ಅವನ್ನು ಓದಿ, ದಿಕ್ಕು ತಪ್ಪಿ ಮತಾಂಧನಾಗಿ ಯಾವುದೋ ಕೃತ್ಯದಲ್ಲಿ ಭಾಗಿಯಾಗಿ ಜೈಲುಪಾಲಾದರೆ ಏನು ಗತಿ? ನಾನೀಗ ನಿವೃತ್ತಿ ಅಂಚಿನಲ್ಲಿದ್ದೇನೆ. ನಿವೃತ್ತಿ ನಂತರ ನಾನು ನೆಮ್ಮದಿಯಾಗಿ ಮನೆಯಲ್ಲಿ ಮಕ್ಕಳ ಶ್ರೇಯೋಭಿವೃದ್ಧಿಯನ್ನು ನೋಡಿಕೊಂಡು ಇರಬೇಕೆಂದು ಬಯಸುತ್ತೇನೆ. ಜೈಲಿಗೆ ಹೋದ ಮಗನಿಗೆ ನಾನು ಬುತ್ತಿ ತೆಗೆದುಕೊಂಡು ಜೈಲಿನ ಬಾಗಿಲು ಕಾಯುವ ಕಾಯಕ ಬೇಡ..ಹಾಗಾಗಿ ನಿಮ್ಮ ಪತ್ರಿಕೆ ನಿಲ್ಲಿಸಿದೆ. ನೀವು ಬೇಸರ ಮಾಡಿಕೊಳ್ಳಬೇಡಿ,” ಎಂದು ಆ ಶಿಕ್ಷಕರು ಮುಂದೆ ಹೋದರು.

 

ಈ ಘಟನೆಯ ಪರಿಚಯ ಇರುವ ಅನೇಕರಿಗೆ ಇದು ಮತ್ತೆ ಮತ್ತೆ ನೆನಪಾಗಿ ಕಾಡುವುದುಂಟು. ಈ ಹೊತ್ತು ಮೂಡಬಿದ್ರೆಯಲ್ಲಿ ಕೊಲೆಯಾದ ಯುವಕ, ಮಂಗಳೂರಿನಲ್ಲಿ ಕೋಮು ಸಂಘಟನೆಗಳ ಪ್ರಚೋದನೆಗೆ ಮರುಳಾಗಿ ವಿವಿಧ ಗಲಭೆಗಳಲ್ಲಿ ಸಿಲುಕಿ ಜೈಲುಪಾಲಾಗಿರುವ ಹತ್ತಾರು ಯುವಕರು, ಯಾರದೋ ಜಯಂತಿ, ಮತ್ತಾರದೋ ಮೆರವಣಿಗೆ ಎಂದಾಕ್ಷಣ ಬೀದಿಗೆ ಬಂದು ಕಲ್ಲು, ಬಾವುಟ ಹಿಡಿದು ನಿಲ್ಲುವ ಮಂದಿಯನ್ನು ನೋಡಿದಾಗಲೆಲ್ಲಾ ಈ ಮೇಲಿನ ಘಟನೆ ನೆನಪಾಗದೆ ಇರದು.

girish-karnad

ಕೊಡಗಿನಲ್ಲಿ ಒಬ್ಬರು ಹತ್ಯೆಯಾದರೆ, (ಅದು ಯಾವ ಕಾರಣಕ್ಕೆ ಎಂಬುದು ಇನ್ನೂ ಸ್ಪಷ್ಟವಿಲ್ಲ) ಇದಕ್ಕೆ ಪ್ರತೀಕಾರ ತೆಗೆದುಕೊಳ್ಳುತ್ತೇವೆ ಎಂದು ಅಲ್ಲಿಯ ಶಾಸಕ ಹೇಳಿಕೆ ನೀಡುತ್ತಾರೆ. ಇಡೀ ರಾಜ್ಯದ ನಾಯಕರೆಲ್ಲಾ ಆ ಊರಿಗೆ ಹೋಗಿ ಬಾಯಿಗೆ ಬಂದ ಹಾಗೆ ಮಾತನಾಡಿ ಹಿಂಸೆಯನ್ನು ವ್ಯಾಪಕಗೊಳಿಸುತ್ತಾರೆ. ಏಕೆ ಶಾಂತಿ ಬೇಡ? ಅವರಿಗೆ ಅಶಾಂತಿ ನೆಲೆಸಿದಷ್ಟೂ ಲಾಭವೇ? ಎದುರಿಗಿದ್ದು ನೋಡಿದವರಂತೆ, ಕೆಳಗೆ ಬೀಳಿಸಿ ಕಲ್ಲಿನಿಂದ ಜಜ್ಜಿ ಕೊಂದರು ಎಂದು ಹೇಳಿಕೆ ನೀಡುತ್ತಾರೆ ಕೆಲವರು. ಇವರಿಗೇಕೆ ಜವಾಬ್ದಾರಿ ಬಾರದು?

ನಮ್ಮಲ್ಲಿರುವ ವೈವಿಧ್ಯತೆಯನ್ನು ಧಿಕ್ಕರಿಸುವ, ಶೋಷಣೆಯನ್ನು ಪೋಷಿಸುವ ಹಾಗೂ ಇನ್ನೊಂದು ಧರ್ಮದವರನ್ನು ಶತ್ರುವಂತೆ ಕಾಣುವ ಮನಸುಗಳ ಮಧ್ಯೆ ಬದುಕಬೇಕಿರುವುದನ್ನು ನನೆಸಿಕೊಂಡರೆ ಆತಂಕವಾಗುತ್ತದೆ. ಪುಟ್ಟ ಪುಟ್ಟ ಮಕ್ಕಳಿರುವ ಕೆಲ ಪೋಷಕರಂತೂ ಮಕ್ಕಳು ಎದುರಿಸಬೇಕಿರುವ ನಾಳೆಗಳ ಬಗ್ಗೆ ಸಾಕಷ್ಟು ಚಿಂತಿತರಾಗಿದ್ದಾರೆ. ಹೀಗೆ ಮಾಧ್ಯಮದ ಕೆಮರಾಗಳ ಮುಂದೆ, ಪತ್ರಿಕೆಗಳ ಅಂಕಣಗಳಲ್ಲಿ ಕಿಡಿ ಹಚ್ಚುವವರು ನೆಮ್ಮದಿಯಾಗೇ ಇರುತ್ತಾರೆ. ಸಂದರ್ಭ ಬಂದಾಗ ಪಕ್ಷಾಂತರ ಮಾಡಿ ‘ಕ್ರಾಂತಿಕಾರಿ’ ಪೋಸು ಕೊಟ್ಟು ಮ್ಯಾಗಜೀನ್ ಗಳಿಗೆ ಮುಖಪುಟದ ರೂಪದರ್ಶಿಯಾಗುತ್ತಾರೆ! ಆದರೆ ಬಲಿಪಶುವಾಗುವುದು ಅಮಾಯಕರು. ಬಡವರ ಮಕ್ಕಳು ಹಾಗೂ ಅನಾಥರಾಗುವವರು ವೃದ್ಧ ಪೋಷಕರು.

 

ಬುದ್ಧಿ ಹೇಳಬೇಕಾದ ಜೀವಿಗಳು ಪ್ರಶಸ್ತಿ, ಸನ್ಮಾನ, ಸ್ಥಾನಮಾನಗಳಲ್ಲಿ ಮೈಮರೆತು ಭಾಷಣಗಳಿಗೆ ಸೀಮಿತರಾಗಿ ಆಗಾಗ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಾರೆ. ಅಷ್ಟರ ಮಟ್ಟಿಗೆ ಅವರು ಆಕ್ಟಿವ್. ಇಲ್ಲವಾದಲ್ಲಿ ಯಾವುದೋ ಸಿನಿಮಾದ ವಿಲನ್ ಪಾತ್ರಗಳಲ್ಲಷ್ಟೇ ದರ್ಶನ. ಈ ದೇಶ ಪ್ರಪಂಚದಲ್ಲಿ ನಂಬರ್ 1 ಪಟ್ಟ ಪಡೆದುಕೊಂಡು ಏನೂ ಆBhagawanಗಬೇಕಿಲ್ಲ. ಮನುಷ್ಯನ ಮೆದುಳು ವಿಕಾಸ ಗೊಳ್ಳದೆ, ಅಭಿವೃದ್ಧಿ ಏನಾದರೇನು? ಬಿಹಾರದ ನೆಲದಲ್ಲಿ ನಿಂತು, ನೀವು ನಮಗೆ ಓಟು ಹಾಕಿ ಗೆಲ್ಲಿಸದಿದ್ದರೆ, ಪಾಕಿಸ್ತಾನದಲ್ಲಿ ಪಟಾಕಿ ಹಚ್ಚುತ್ತಾರೆ ಅಂತ ಒಬ್ಬ. ಮತ್ತೊಬ್ಬ ನಿಮ್ಮ ಮೀಸಲಾತಿಯನ್ನು ಅಲ್ಪಸಂಖ್ಯಾತರು ತಿನ್ನುತ್ತಿದ್ದಾರೆ ಎಂದು ಹಲ್ಲು ಮಸೆಯುತ್ತಾನೆ. ಸಂವಿಧಾನದ ಆಶಯಗಳಿಗೆ ಬದ್ಧನಾಗಿ ಕಾರ್ಯನಿರ್ವಹಿಸಿ ಹೀಗೆ ಓಟಿಗಾಗಿ ಸಮಾಜ ಒಡೆಯುವ ಮಾತನಾಡಿದವನ ಹೆಸರು ಪ್ರಧಾನಿ! ಈ ಕಡಿ-ಕೊಲ್ಲು ಮಾತುಗಳಿಗೆ ಸಾಮಾಜಿಕ ತಾಣಗಳಲ್ಲಿ ಜಯಕಾರಗಳು.

 

ಬುದ್ಧಿವಂತ, ವಿಚಾರವಂತ, ಓದಿಕೊಂಡಿರುವವನು, ಸಂಶೋಧಕ, ಪ್ರಗತಿಪರ – ಎನ್ನುವ ಪದಗಳನ್ನು ಅದೆಷ್ಟರ ಮಟ್ಟಿಗೆ ಹೀಯಾಳಿಸಲಾಗಿದೆ ಎಂದರೆ, ಯಾರೂ ತನ್ನನ್ನು ತಾನು ಹಾಗೆ ಪರಿಚಯ ಮಾಡಿಕೊಳ್ಳಲು ಹಿಂಜರಿಯುವಷ್ಟು. (ವಿಚಿತ್ರ ಎಂದರೆ ಇತ್ತೀಚೆಗೆ ಮಾನ್ಯತೆ ಪಡೆಯುತ್ತಿರುವ ಮತ್ತೊಂದು ಡೆಸಿಗ್ನೇಷನ್ – ಸಂಸ್ಕೃತಿ ಚಿಂತಕ!) ಇಂತಹ ಬೆಳವಣಿಗೆ ಅಧ್ಯಯನ ಎನ್ನುವ ಕ್ರಿಯೆ ಬಗ್ಗೆಯೇ ನವ ತರುಣರಲ್ಲಿ ನಿರ್ಲಕ್ಷ್ಯ ಉಂಟು ಮಾಡುವಷ್ಟು. There is no respect for scholarship. ಥ್ಯಾಂಕ್ ಗಾಡ್, ಇಂತಹವರ ಕಾಲದಲ್ಲಿ ಕುವೆಂಪು, ವಿವೇಕಾನಂದ ರಂತಹವರು ಬದುಕಲಿಲ್ಲ. ಇಲ್ಲವಾಗಿದ್ದಲ್ಲಿ ಅವರ ಒಂದೊಂದು ಮಾತು, ಹೇಳಿಕೆಗಳು ಟಿಆರ್ ಪಿ ಹಿಂದೆ ಬಿದ್ದಿರುವವರ ಬೆಳಗ್ಗೆ, ಮಧ್ಯಾಹ್ನ ಹಾಗೂ ಸಂಜೆಯ ಬುಲೆಟಿನ್ ಗಳಿಗೆ ಸರಕಾಗಿರುತ್ತಿದ್ದವು! ಮಾರನೆಯ ದಿನ ಅವರ ಗಡಿಪಾರಿಗೆ ಒತ್ತಾಯಿಸಿ ಬೀದಿಗಿಳಿಯುತ್ತಿದ್ದರು. ಕೆಲ ಮಾಜಿ ಮಂತ್ರಿ ಮಹಾಶಯರು ಅವರನ್ನು ಸಾರಸಗಟಾಗಿ ‘ಹುಚ್ಚ’ ರೆಂದು ಪ್ರಮಾಣ ಪತ್ರ ಕೊಡುತ್ತಿದ್ದರು.
ಇಂದು ಗಿರೀಶ್ ಕಾರ್ನಾಡ್ ಅವರನ್ನು ಅನೇಕ ರಾಜಕಾರಣಿಗಳು, ಸ್ವಾಮೀಜಿಗಳು ‘ಹುಚ್ಚ’ ಎಂದು ಕರೆದರು. ಆಯ್ತು ಅವರಿಗೆ ಸ್ವಾತಂತ್ರ್ಯ ಇದೆ, ಕರೆಯಲಿ. ಆದರೆ ಕರೆಯುವ ಮುನ್ನ ಒಂದೇ ಒಂದು ಬಾರಿ ಕಾರ್ನಾಡರ ‘ತುಘಲಕ್’ ನಾಟಕವನ್ನು ಓದಿದ್ದರೆ ಚೆನ್ನಾಗಿತ್ತಲ್ಲವೆ. ಆದರೆ, ಈಗ ಅಂತಹ ಮಾತನ್ನೇ ಹೇಳುವಂತಿಲ್ಲ. “ಅವನ್ಯಾವ ಸೀಮೆ ರೈಟರ್ ಅಂತ ಓದಬೇಕು…” ಎಂದು ಜಗಳಕ್ಕೆ ಬರುತ್ತಾರೆ. ಲೇಖಕರೊಬ್ಬರನ್ನು ಸಂದರ್ಶನಕ್ಕೆ ಕರೆದಾಗ, ಅವರ ಲೇಖನಗಳನ್ನು ಓದಿಕೊಂಡಿರಬೇಕಲ್ಲವೇ. ಆದರೆ ‘ಅಧ್ಯಯನದ ಅಗತ್ಯವೇ ಇಲ್ಲ’ ಎನ್ನುವವರ ಧಾಟಿ ಹೆಚ್ಚಾಗುತ್ತಿದೆ. ಕೆಲ ದಿನಗಳ ಹಿಂದೆ, ಸೃಜನಶೀಲ ಬರೆವಣಿಗೆಯಲ್ಲಿರುವವರ ವಾದವೂ ಹೀಗೇ ಆಗಿತ್ತು. ನಾನು ನನ್ನ ಹಿಂದಿನ ಲೇಖಕರನ್ನು ಓದಿಕೊಳ್ಳುವುದಿಲ್ಲ. ಅದರ ಅಗತ್ಯ ನನಗಿಲ್ಲ ಎನ್ನುವವರು ಭಾರೀ ಆತ್ಮವಿಶ್ವಾಸದಿಂದಲೇ ತಮ್ಮ ವಾದ ಮಂಡಿಸಿದರು.
ಆದರೆ ಈಗ ಸೃಜನೇತರ ಬರವಣಿಗೆ/ಮಾಧ್ಯಮದಲ್ಲಿ ತೊಡಗಿಸಿಕೊಂಡವರೂ ಅದೇ ಧಾಟಿಯಲ್ಲಿ ಮಾತಿಗಿಳಿಯುತ್ತಿದ್ದಾರೆ. ಕೆ.ಎಸ್. ಭಗವಾನ್ ಅವರ ವಿಚಾರದ ಬಗ್ಗೆ ತಕರಾರುಗಳಿರಲಿ. ಆದರೆ, ಆ ಮನುಷ್ಯ ತನ್ನ ವೃತ್ತಿಯ 30ಕ್ಕೂ ಹೆಚ್ಚು ವರ್ಷ ಈ ನೆಲದ ಸಾವಿರಾರು ಹುಡುಗರಿಗೆ ಶೇಕ್ಸ್ ಪಿಯರ್ ಪರಿಚಯಿಸಿದ, ಮನೋಜ್ಞವಾಗಿ ಪಾಠ ಮಾಡಿದವರು ಎನ್ನುವ ಕಾರಣಕ್ಕೆ ಕನಿಷ್ಟ ಗೌರವ ಬೇಡವೆ? ಒಬ್ಬ ‘ಏ ಭಗವಾನ್…’ ಎಂದು ಗದರಿದರೆ, ಮತ್ತೊಬ್ಬ “ನಿಮ್ಮಂ ತಹವರಿಗೇಕೆ ಭಗವಾನ್ ಎಂಬ ಹೆಸರು..” ಎಂದು ಪ್ರಶ್ನಿಸುತ್ತಾನೆ.
download
ಹಿಂಸೆಯಿಲ್ಲದ, ದ್ವೇಷ ಇಲ್ಲದ ನಾಳೆಗಳಿಗಾಗಿ ಈ ಹೊತ್ತಿನ ಯುವಕರಿಗೆ ಜಾತಿ, ವರ್ಣ, ಧರ್ಮದ ಆಚೆಗೆ ನಿಲ್ಲುವ ಒಂದಿಷ್ಟು ಆದರ್ಶ ವ್ಯಕ್ತಿತ್ವಗಳನ್ನು ಅಮೂಲಾಗ್ರವಾಗಿ ಓದಿಕೊಳ್ಳಿ ಎಂದು ಹೇಳುವ ಹಿರಿಯರು ಬೇಕಾಗಿದ್ದಾರೆ. ಟೀವಿ ಸ್ಟುಡಿಯೋಗಳಲ್ಲಿ ಕುಳಿತು ಏರಿದ ದಿನಯಲ್ಲಿ ಮಾತನಾಡುವವರಷ್ಟೇಬುದ್ಧಿವಂತರಲ್ಲ ಎನ್ನುವುದನ್ನು ಎದೆಗೆ ನಾಟುವಂತೆ ಹೇಳುವವರ ಅಗತ್ಯವಿದೆ.

ಹೌದು, ಮಾಧ್ಯಮ ‘ಜಾತೀಯತೆ’ ಯಿಂದ ಮುಕ್ತವಾಗಬೇಕು

– ಶಂಶೀರ್ ಬುಡೋಳಿ

ಸಿಎಂ ಮಾಧ್ಯಮ ಸಲಹೆಗಾರ, ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ರವರ ಅಭಿಪ್ರಾಯಕ್ಕೆ ಗೌರವ ಕೊಟ್ಟು ಮತ್ತಷ್ಟು ಕಹಿ ವಿಚಾರಗಳನ್ನ ಇಲ್ಲಿ ಹಂಚಿಕೊಳ್ಳಲು ನಾನು ಇಚ್ಛೆಪಡುತ್ತೇನೆ.

ಇದಕ್ಕೆ ವಿರೋಧ ವ್ಯಕ್ತವಾಗಲೂಬಹುದು, ಸಹಮತ ದೊರೆಯಲೂಬಹುದು. ಆದರೆ ಕೆಲವೊಂದು ಸತ್ಯಗಳನ್ನ ಹೇಳಲೇಬೇಕಾದ ಅನಿವಾರ್ಯತೆ ಇದೆ. ಯಾಕೆಂದರೆ ಮಾಧ್ಯಮಕ್ಕೆ ಎಂಟ್ರಿ ಕೊmediaಡುವ ವೇಳೆ ಕೆಲವೊಂದು ವಿಚಾರಕ್ಕೆ, ಕೆಲವೊಂದು ವ್ಯಕ್ತಿಗಳಿಗೆ ನಾನು ಕೂಡಾ ಅಸ್ಪೃಶ್ಯನಾಗಿದ್ದೆ..!

ಖಾಸಗಿ ನ್ಯೂಸ್ ಚಾನೆಲ್ನಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡುತ್ತಿರುವ ನನಗೆ ಸತ್ಯವೊಂದನ್ನ ಬಿಟ್ಟು ಏನನ್ನೂ ಹೇಳೋಕೇ ಆಗಲ್ಲ. ಮಾಧ್ಯಮಗಳು ಇರೋದು ಜನಹಿತಕ್ಕಾಗಿ. ಆದರೆ ಇವತ್ತು ಈ ಎಲ್ಲಾ ಆಶಯಗಳಿಗೆ ಬೆಲೆನೇ ಸಿಗುತ್ತಿಲ್ಲ ಎಂಬ ಬೇಸರನೂ ಇದೆ. ಸಂವಿಧಾನದ ಮೂಲ ಆಶಯಗಳನ್ನೇ ಗಾಳಿಗೆ ತೂರಲಾಗುತ್ತಿದೆ. ಕಾರಣ ನಮ್ಮ ಮೇಲಿರುವ ಹುದ್ದೆಗಳಲ್ಲಿ ಸಮಾನ ಮನಸ್ಕರು ಇಲ್ಲದಿರುವುದು! ಇದಕ್ಕೆ ಏನೋ, ಜನರಿಗೆ ನ್ಯೂಸ್ ಚಾನೆಲ್ ಅಂದರೆ ಈಗೀಗ ನಿರಾಸೆ ಮೂಡುತ್ತಿರುವುದು ಹಾಗೂ ಪತ್ರಕರ್ತರು ಆಗಾಗ ಚಾನೆಲ್ನಿಂದ ಚಾನೆಲ್ಗೆ `ಜಂಪ್’ ಆಗುತ್ತಿರುವುದು.

‘ಮೀಸಲಾತಿ’ಗಾಗಿ ದೇಶದಲ್ಲಿ ಹೋರಾಟ ನಡೆಯುತ್ತಿರುವ ಈ ಹೊತ್ತಲ್ಲಿ ಮಾಧ್ಯಮದಲ್ಲೂ ಮೀಸಲಾತಿ ಬೇಕಾ..? ಬೇಡವಾ..? ಎಂಬ ಪ್ರಶ್ನೆ ಉದ್ಭವಿಸುವುದು ಸರಿ. ಇಡೀ ಭಾರತೀಯ ಮಾಧ್ಯಮ ಲೋಕದತ್ತ ನೋಡಿದಾಗ ಇಲ್ಲಿ ‘ಜಾತೀಯತೆ’ ಪ್ರಬಲವಾಗಿ ಬೇರೂರಿದ್ಯಾ.. ಎಂಬ ಪ್ರಶ್ನೆ ಹೆಚ್ಚಿನ ಮಂದಿಯಲ್ಲಿದೆ. ಯಾಕೆಂದರೆ ನೀವೊಮ್ಮೆ ಭಾಷಾವಾರು ನ್ಯೂಸ್ ಚಾನೆಲ್, ಪತ್ರಿಕೆಗಳಲ್ಲಿ, ರೇಡಿಯೋ ಚಾನೆಲ್, ವೆಬ್ ಸೈಟ್ಗಳಲ್ಲಿ ಹಾಗೂ ಚಿತ್ರರಂಗದಲ್ಲಿ ಉನ್ನತ ಸ್ಥಾನದಲ್ಲಿರುವವರು ಯಾರೆಂದು ಕಣ್ಣಾಡಿಸಿ. ಉನ್ನತ ಸ್ಥಾನ ಎಂದು ಕರೆಯಲ್ಪಡುವ ಹುದ್ದೆಗಳಲ್ಲಿ ಯಾವ್ಯಾವ ಜಾತಿಯವರು ಇದ್ದಾರೆಂಬುದು ನಿಮಗೆ ಗೊತ್ತಾಗುತ್ತೆ. ಅಂದರೆ ಯಾವ ರೀತಿ ಈ ಕ್ಷೇತ್ರದಲ್ಲಿ ‘ಜಾತೀಯತೆ’ ಎಂಬುದು ನುಸುಳಿತು ಎನ್ನುವುದೇ ದೊಡ್ಡ ಪ್ರಶ್ನೆ. ನನ್ನ ಪ್ರಕಾರ ಮಾಧ್ಯಮ ‘ಜಾತೀಯತೆ’ಯಿಂದ ಮುಕ್ತವಾಗಬೇಕು. ಮನುಷ್ಯತ್ವ ಇರುವ ಮಂದಿ ಜಾಸ್ತಿಯಾಗಬೇಕು. ಆ ಜಾತಿ, ಈ ಜಾತಿ ಅನ್ನೋದನ್ನ ತೊಲಗಿಸಿ, ಸಮಾಜದ ಹಿತಕ್ಕಾಗಿ ದುಡಿಯುವವರ ಸಂಖ್ಯೆ ಜಾಸ್ತಿಯಾಗಬೇಕು.

ಪ್ರಜಾಪ್ರಭುತ್ವ ದೇಶದಲ್ಲಿರುವ ಮಾಧ್ಯಮವೊಂದು ‘ಜಾತೀಯತೆ’ ಮಾಡಿ ಸುದ್ದಿ ಪ್ರಸಾರ ಮಾಡುವುದು ಎಷ್ಟು ಸರಿ..? ಈ ದೇಶ, ನೆಲ, ಜಲ ಯಾವ ರೀತಿ ಹಿಂದೂ, ಮುಸ್ಲಿಂ, ಜೈನ, ಸಿಖ್ ಹೀಗೆ ಮುಂತಾದ ಧರ್ಮೀಯರಿಗೆ ಬದುಕಲು ಅವಕಾಶ ನೀಡಿದೆಯೋ ಅದೇ ರೀತಿ ಮಾಧ್ಯಮದಲ್ಲಿಯೂ ಸಹ ಎಲ್ಲಾ ಧರ್ಮ, ಜಾತಿಯವರಿಗೂ ಪ್ರಾತಿನಿಧ್ಯ ಸಿಗಬೇಕು.

ಒಂದಂತೂ ಸತ್ಯ. ಕನ್ನಡ ಮಾಧ್ಯಮ ಇಂದು ‘ಜಾತೀಯತೆ’, `ಜಿಲ್ಲಾವಾರು ಬೇದಭಾವ’ದ ಸುಳಿಯಲ್ಲಿ ಸಿಲುಕಿದೆ. ಅದಕ್ಕಿಂತಲೂ ಬಳಲುತ್ತಿದೆ ಅಂತಾ ಹೇಳಬಹುದು. ಕರಾವಳಿ, ಮಲೆನಾಡು, ಉತ್ತರ
ಕರ್ನಾಟಕ, ಹೈದ್ರಾಬಾದ್ ಕರ್ನಾಟಕ, ಮೈಸೂರು ಕರ್ನಾಟಕ ಎಂದು ವಿಂಗಡಿಸುವ ಮಂದಿ ಜಾಸ್ತಿಯಾಗುತ್ತಿದ್ದಾರೆ. ಹೀಗಾಗಿ ಪತ್ರಕರ್ತರ ಮಧ್ಯೆ `ಮಾನಸಿಕ ಸಂಘರ್ಷ’ ನಡೀತಿದೆ ಅಂತಾ ಹೇಳಬಹುದು. ಪತ್ರಕರ್ತರೇನೂ ದೇವತಾ ಪುರುಷರಲ್ಲ. ಆದರೆ ಸಮಾಜದ ಪಾಲಿಗೆ ಅವರು ಪ್ರಮುಖ ವ್ಯಕ್ತಿಗಳು ಅಷ್ಟೇ. ಸುಲಭವಾಗಿ ಹೇಳುವುದಾದರೆ ಸಮಾಜವನ್ನ ಸರಿದಾರಿಯಲ್ಲಿ ನಡೆಸುವಂತಹವರು. ಸರಿದಾರಿಗೆ ಹೋಗಿ ಅಂತಾ ದಾರಿ ತೋರಿಸುವವರು.

ಹಣಬಲ, ಅಧಿಕಾರ ಬಲ ಹೊಂದಿದವರು ಇವತ್ತು ಮಾಧ್ಯಮವನ್ನ ಆಳುತ್ತಿದ್ದಾರೆ. ಕನ್ನಡದಲ್ಲಿ ಇವತ್ತು 11 ನ್ಯೂಸ್ ಚಾನೆಲ್ಗಳಿವೆ. 6 ಎಂಟರ್ಟೈನ್ಮೆಂಟ್ ಚಾನೆಲ್ಗಳಿವೆ. ಇದರ ಜತೆಗೆ ಮ್ಯೂಸಿಕ್, ಕಾಮಿಡಿ, ಮೂವೀಸ್, ಧಾರ್ಮಿಕ, ಮಕ್ಕಳ ಚಾನೆಲ್ಗಳಿವೆ. ಇವೆಲ್ಲಾ ಯಾರ ಒಡೆತನದಲ್ಲಿವೆ ಎಂಬುದನ್ನ ನೀವು ನೋಡುತ್ತಾ ಹೋದರೆ ಎಲ್ಲವೂ ಅರ್ಥವಾಗುತ್ತೆ. ಯಾವ್ಯಾವ ಜಾತಿಯವರಿಗೆ ನಮ್ಮ ಮಾಧ್ಯಮದಲ್ಲಿ ಎಷ್ಟು ಮನ್ನಣೆ ಸಿಗುತ್ತಿದೆ ಅಂತಾನೂ ಗೊತ್ತಾಗುತ್ತೆ. ಹಣದಾಸೆಗೋ, ಪ್ರಚಾರಕ್ಕಾಗಿಯೋ ಇವತ್ತು ಕೆಲ ಮಂದಿ ಮಾಧ್ಯಮ ರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಚಾನೆಲ್ಗಳನ್ನ, ಪತ್ರಿಕೆಗಳನ್ನ ಕಟ್ಟುತ್ತಿದ್ದಾರೆ. ಸಿನಿಮಾ ಮಾಡುವವರೂ ಇದ್ದಾರೆ. ಹೀಗಾಗಿ ವಿವಿಧ ಮನೋಭಾವದ ಪತ್ರಕರ್ತರ ಮಧ್ಯೆ ಮಾನಸಿಕ ಸಂಘರ್ಷ ನಡೆಯುತ್ತಿದೆ ಅಂತಾ ಹೇಳಬಹುದು. ಹೀಗಾಗಿ ಸುದ್ದಿ ಪ್ರಸಾರದ ವಿಷಯದಲ್ಲಿ ತಾರತಮ್ಯ ಕಾಣುತ್ತಿದೆ. ಪರಿಣಾಮ ಜನರಿಗೆ ಗೊಂದಲವುಂಟಾಗುತ್ತಿದೆ.
ಯೆಸ್. ನಾವೆಲ್ಲಾ ಸಮಾನ ಮನಸ್ಕರು. ಪ್ರಗತಿಪರ ಇರುವವರು. ಮನುಷ್ಯತ್ವ ಪರ ಇರುವವರು. ಧರ್ಮದ ತಳಹದಿಯಲ್ಲಿ ಬದುಕುವವರು. ಆಶಾದಾಯಕವಾದ, ಹೊಸ ಆದರ್ಶಗಳನ್ನ, ಹೊಸ ಚಿಂತನೆಗಳನ್ನ ಇಟ್ಟುಕೊಂಡು ಕಷ್ಟಪಟ್ಟು, ಬಹಳ ವಿರೋಧಭಾಸಗಳನ್ನ, ಅವಮಾನವನ್ನ, ಸವಾಲುಗಳನ್ನ ಎದುರಿಸಿ ಸಮಾಜದ ಪರವಾಗಿ ದುಡಿಯಬೇಕೆಂದು ಏನೇನೋ ಕನಸುಗಳನ್ನ ಕಟ್ಟಿಕೊಂಡು ಇವತ್ತು ಮಾಧ್ಯಮ ರಂಗಕ್ಕೆ ಎಂಟ್ರಿ ಕೊಡುವುದು ಸುಲಭದ ಮಾತಲ್ಲ. ಬರವಣಿಗೆ ಎಂಬ ಪ್ರತಿಭೆ ಜತೆಗೆ ಅಲ್ಪಸಂಖ್ಯಾತರ, ದಲಿತ, ಹಿಂದುಳಿದ, ಶೋಷಿತರ, ಅಸ್ಪೃಶ್ಯರ ಪರ ಹಾಗೂ ನೊಂದವರ ಪರ ನಾನು ದುಡಿಯಬೇಕೆಂಬ ಕನಸುಗಳನ್ನಿಟ್ಟುಕೊಂಡು ಮಾಧ್ಯಮ ರಂಗಕ್ಕೆ ( ಸ್ನಾತಕೋತ್ತರ ಪದವಿ ಪಡೆದು) ಎಂಟ್ರಿ ಕೊಟ್ಟೆ. ಖುಷಿ ಸಂಗತಿ ಏನೆಂದರೆ ಇಂತಹುದೇ ಆಶಯ ಹೊಂದಿರುವ ದೈನಿಕ ಪತ್ರಿಕೆಯಲ್ಲಿ ಮೊದಲು ಕೆಲಸ ಮಾಡಲು ಅವಕಾಶ ಸಿಕ್ಕಿದ್ದೇ ಒಂದು ಭಾಗ್ಯ. ಆ ಪತ್ರಿಕೆ ನನಗೆ ಕಲಿಸಿದ ಪತ್ರಿಕೋದ್ಯಮದ ಪಾಠ ನನ್ನ ಬದುಕಿಗೆ ದಾರಿ. ಹಾಗೆಯೇ ಆ ಪತ್ರಿಕೆ ಇವತ್ತಿಗೂ ನನ್ನ ಪ್ರತಿಭೆಗೆ ಪ್ರೋತ್ಸಾಹ ನೀಡುತ್ತಿದೆ. ಕನ್ನಡ ಪತ್ರಿಕೋದ್ಯಮದಲ್ಲಿ ಇಂತಹ ಪತ್ರಿಕೆ ಇದೆ ಅನ್ನೋದೇ ಸಂತೋಷದ ವಿಷಯ.
ಸಿಇಓ, ಪ್ರಧಾನ ಸಂಪಾದಕ, ಸಂಪಾದಕ, ಸಹಾಯಕ ಸಂಪಾದಕ ಹೀಗೆ ಉನ್ನತ ಮಟ್ಟದ ಜವಾಬ್ದಾರಿ ಹೊಂದಿರುವ ಹುದ್ದೆಗಳಲ್ಲಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ಜಾತಿಗಳ ಪ್ರಮಾಣ ಬಹಳ ಕಡಿಮೆ ಇದೆ. ಮೊದಲಿಗಿಂತ ಈಗೀಗ ಮುಸ್ಲಿಮ್ ಸಮುದಾಯದಲ್ಲಿ ಮಾಧ್ಯಮ ಜಾಗೃತಿ ಮೂಡಿಸಲಾಗುತ್ತಿದೆ. ಹೀಗಾಗಿ ಕೆಲವರು ಪತ್ರಿಕೋದ್ಯಮದಲ್ಲಿ ಶಿಕ್ಷಣ ಪಡೆದು ಮಾಧ್ಯಮ ರಂಗಕ್ಕೆ ಬರಲು ಉತ್ಸುಕರಾಗಿದ್ದಾರೆ. ಅಂದಮಾತ್ರಕ್ಕೆ ಇವರಿಗೆ ಭರ್ಜರಿ ಸ್ವಾಗತವೇನೂ ಇಲ್ಲಿ ಸಿಗುತ್ತಿಲ್ಲ. ಯಾಕಂದ್ರೆ ಜಾತಿ, ಪ್ರಾಂತ್ಯವಾರು ಸಂಘರ್ಷದಿಂದ ಬಳಲಿರುವ ಕೆಲ ಮಾಧ್ಯಮದಲ್ಲಿ ಮುಸ್ಲಿಮ್, ದಲಿತ, ಹಿಂದುಳಿದ ವರ್ಗದ ವ್ಯಕ್ತಿಯನ್ನ ನೇಮಕ ಮಾಡುವಾಗ ಹಿಂದೆ-ಮುಂದೆ ನೋಡುವ ಮಂದಿಯೇ ಜಾಸ್ತಿ. ಅವನಲ್ಲಿ ಶೈಕ್ಷಣಿಕ ಅರ್ಹತೆ, ಪ್ರತಿಭೆ, ಕೆಲಸ ಮಾಡುವ ಸಾಮರ್ಥ್ಯ ಇದ್ದರೂ ನೇಮಕ ಮಾಡುವಲ್ಲಿ ಹಿಂದೇಟು ಹಾಕಲಾಗುತ್ತಿದೆ. ಸಂದರ್ಶನದ ವೇಳೆ ಮಾನಸಿಕವಾಗಿ ಕುಗ್ಗಿಸುವಂತೆ ವರ್ತಿಸುವ ಮಂದಿಯೂ ಇದ್ದಾರೆ. ಒಂದು ವೇಳೆ ನೇಮಕ ಮಾಡಿದರೂ ಕಡಿಮೆ ಸಂಬಳ ನೀಡಿ ನೇಮಕ ಮಾಡಲಾಗುತ್ತದೆ. ಇದಕ್ಕೆ ನೊಂದು ಎಷ್ಟೋ ಮಂದಿ ಪತ್ರಿಕೋದ್ಯಮದ ಸಹವಾಸವೇ ಬೇಡ ಅಂತಾ ಬೇರೆ ಕ್ಷೇತ್ರಕ್ಕೋ, ವಿದೇಶಕ್ಕೋ ಹೋಗಿ ದುಡಿಯುತ್ತಿದ್ದಾರೆ.
ನನ್ನಲ್ಲಿ ಒಮ್ಮೆ ಹಿರಿಯ ಪತ್ರಕರ್ತರೊಬ್ಬರು ಪ್ರಶ್ನಿಸಿದ್ದರು. ‘ಅಲ್ಲ, ಈ ಮುಸ್ಲಿಮ್, ದಲಿತ, ಹಿಂದುಳಿದ ವರ್ಗದ ಯುವಕ-ಯುವತಿಯರು ಪತ್ರಿಕೋದ್ಯಮದಲ್ಲಿ, ಪದವಿಯೋ/ ಸ್ನಾತಕೋತ್ತರ ಪದವಿಯೋ ಪಡೆದು ಎಲ್ಲಿಗೆ ಹೋಗುತ್ತಿದ್ದಾರೆ’ ಎಂದು ಪ್ರಶ್ನಿಸಿದ್ದರು. ಅದಕ್ಕೆ ನಾನು ಹೇಳಿದೆ. ‘ಸರ್, ಸಾಮಾಜಿಕ ಕಳಕಳಿಯುಳ್ಳ ಮಂದಿ ನಮ್ಮ ಮಧ್ಯೆ ಇಲ್ಲ ಅಂತಲ್ಲ. ಆದರೆ ಕಡಿಮೆ ಸಂಬಳದಲ್ಲಿ ಜೀವನಪೂರ್ತಿ ದುಡಿಯಿರಿ’ ಅಂತಾ ಆರಂಭದಲ್ಲೇ ಹೇಳಿದರೆ ಅವರೇನೂ ಮಾಡುತ್ತಾರೆ? ಕುಟುಂಬ ನಿರ್ವಹಣೆಯ ಜವಾಬ್ದಾರಿ ಹೊಂದಿರುವವರು ಈ ಸಂಬಳದಲ್ಲಿ ದುಡಿಯಿರಿ ಅಂತಾ ಹೇಳಿದರೆ ಏನ್ ಮಾಡುತ್ತಾರೆ? ಅಂದೆ..’ ಹೀಗಾಗಿ ಇಂದು ಮಾಧ್ಯಮದಲ್ಲಿ ಅರಳಬೇಕಾಗಿದ್ದ ಪ್ರತಿಭೆಗಳು ಅವಕಾಶ ಸಿಗದೇ ಸಾಯುತ್ತಿವೆ. ಆದರೆ ನನ್ನಂತಹ ಆಶಾವಾದಿಗಳು, ಪ್ರಗತಿಪರರು, ಹೊಸ ಆಲೋಚನೆಯನ್ನ, ಗುರಿಗಳನ್ನ ಹೊಂದಿರುವವರು ಅಪಮಾನ, ನಿರ್ಲಕ್ಷ್ಯವನ್ನ ಎದುರಿಸುತ್ತಾ ಅದರ ಜೊತೆಗೆ ಹೋರಾಡುತ್ತಿರುವುದರಿಂದಲೇ ಇವತ್ತು ನೆಲೆಯೂರಲು ಸಾಧ್ಯವಾಗಿದೆ.

ಹೆಚ್ಚಿನ ಪತ್ರಕರ್ತ ಮಿತ್ರರು ಇತರರಿಗೆ ಆದ ಅನ್ಯಾಯ, ಮೋಸದ ಬಗ್ಗೆ ವರದಿ ಮಾಡುತ್ತಾರೆ. ಆದರೆ ತಮಗಾದ ಅನ್ಯಾಯದ ಬಗ್ಗೆ ಸಮಾಜದ ಜೊತೆ ಹೇಳಿಕೊಳ್ಳಲು ಇಚ್ಛೆಪಡಲ್ಲ. ಕಾರಣ ವೃತ್ತಿ ಗೌರವ..!

ಯೆಸ್. ಅಮಿನ್ಮಟ್ಟುರವರು ತಮ್ಮ ಭಾಷಣದಲ್ಲಿ ಹೇಳಿದಂತೆ ಮಾಧ್ಯಮ ಕ್ಷೇತ್ರದಲ್ಲಿ ದುಡಿಯುವವರ ಮೇಲೆ ಹೊಡೆಯಲ್ಲ, ಬಡಿಯಲ್ಲ, ಹಲ್ಲೆ ಮಾಡಲ್ಲ. ಬದಲು ಮಾನಸಿಕವಾಗಿ ಕಿರುಕುಳ ಕೊಟ್ಟರೆ ಸಾಕು, ಅವರಾಗಿಯೇ ಕೆಲಸ ಬಿಟ್ಟು ಹೋಗುತ್ತಾರೆ ಎಂಬ ಮಾತು ನಿಜ. ಇದಕ್ಕೆ ನಾನೊಂದು ಮಾತನ್ನ ಸೇರಿಸುತ್ತೇನೆ. ಅದೇನೆಂದರೆ ಕಡಿಮೆ ಸಂಬಳ ಕೊಟ್ಟು ಸಹ ಬೇಗನೇ ಓಡಿಸುವ ಮಂದಿನೂ ಇದ್ದಾರೆ..! ನನ್ನ ಪ್ರಕಾರ ಇಂತಹ ಕಡೆ ಕೆಲಸ ಮಾಡುವ ನನ್ನ ಪತ್ರಕರ್ತ ಮಿತ್ರರು ಹೇಡಿಯಂತೆ ಓಡಬಾರದು. ಹೋರಾಡಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಿ ಸಂಬಳ ಜಾಸ್ತಿ ಗಿಟ್ಟಿಸಿಕೊಳ್ಳಬೇಕು. ಇಲ್ಲದಿದ್ದರೆ ಹೋರಾಡಿಯೇ ನಿರ್ಗಮಿಸಬೇಕು..!
ದೈಹಿಕವಾಗಿ ಕಿರುಕುಳ ಕೊಡುವುದಕ್ಕಿಂತ ಮಾನಸಿಕವಾಗಿ ಕಿರುಕುಳ ಕೊಟ್ಟರೆ ಆತನ ಮಾನಸಿಕ ನೆಮ್ಮದಿಗೆ ಭಂಗ ತರಬಹುದು. ಇದು ಉನ್ನತ ಸ್ಥಾನದಲ್ಲಿರುವ ಮಂದಿ ಕೆಲಸಗಾರರನ್ನ ಓಡಿಸಲು ಕಂಡುಕೊಂಡಿರುವ ಹೊಸ ಮಾರ್ಗ. ಹೀಗೆ ಮಾಡಿದರೆ ಕೆಲಸದಲ್ಲಿ ತಪ್ಪು ಆಗುತ್ತೆ. ಇದನ್ನೇ ನೆಪವನ್ನಾಗಿಟ್ಟುಕೊಂಡು ಇವತ್ತು ಎಷ್ಟೋ ಮಂದಿಯನ್ನ ಕೆಲಸದಿಂದ ತೆಗೆದು ಹಾಕಲಾಗಿದೆ.
ಯಾವುದೇ ವ್ಯಕ್ತಿ ಇರಲಿ, ಎಷ್ಟು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾನೋ, ಅದನ್ನ ಪ್ರೋತ್ಸಾಹಿಸುವ ಬದಲು ಆತನಲ್ಲಿರುವ ನೆಗೆಟಿವ್ ಅಂಶಗಳನ್ನೇ ಎತ್ತಿಕೊಂಡು ಮತ್ತೆ ಮತ್ತೆ ಕೀಳರಿಮೆ ಮೂಡಿಸುವಂತೆ ಆತನ ಜೊತೆ ವರ್ತಿಸುವಸುವ ಮಂದಿಗೇನೂ ಕಡಿಮೆ ಇಲ್ಲ. ಸುಮ್ನೆ ಮೂದಲಿಸುತ್ತಾ ಆತನನ್ನ ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ವೇಳೆ ನಗು, ಮೌನದಿಂದ ಉತ್ತರ ನೀಡಿ ಅಂತಹ ವಿರೋಧಿಗಳನ್ನ ಸೋಲಿಸಬೇಕು. ಇನ್ನು ಪ್ರಾಮಾಣಿಕವಾಗಿ ಕೆಲಸ ಮಾಡುವುದಕ್ಕಿಂತ ವಾಮ ಮಾರ್ಗದಲ್ಲೋ ಹಣ ಮಾಡುವ ಮಂದಿನೂ ಇದ್ದಾರೆ. ಇನ್ನು ಕೆಲಸಕ್ಕಿಂತ ‘ಮಾತಿನ ಕೆಲಸ’ ಮಾಡುವ ಮಂದಿನೂ ಜಾಸ್ತಿ..! ಇದು ನಮ್ಮ ಮುಂದಿರುವ ವಾಸ್ತವ ಸಂಗತಿ.
ಒಂದು ಕಡೆ ಏಕಪಕ್ಷೀಯವಾಗಿ ವರದಿ ಪ್ರಸಾರ ಆಗುತ್ತಿರುವುದಕ್ಕೆ ಈ ಜಾತೀಯತೆಯೇ ಕಾರಣ. ಜೊತೆಗೆ ಪ್ರಾಂತ್ಯವಾರು ಭೇದಭಾವ. ಹಿಂದಿ, ಇಂಗ್ಲೀಷ್ ಚಾನೆಲ್ಗಳಲ್ಲಿ ಮುಸ್ಲಿಮ್, ದಲಿತ, ಹಿಂದುಳಿದ ವರ್ಗದ ಮಂದಿಗೆ ಒಳ್ಳೆಯ ಅವಕಾಶ ದೊರೆಯುತ್ತಿದೆ. ಆದರೆ ಕನ್ನಡ ಮಾಧ್ಯಮದಲ್ಲಿ ಇದ್ಯಾಕೆ ಸಾಧ್ಯವಾಗುತ್ತಿಲ್ಲ..? ನಮ್ಮ ಕನ್ನಡ ಟಿವಿ ಮಾಧ್ಯಮದಲ್ಲಿ ಎಷ್ಟು ಮಂದಿ ಸೆಕ್ಯುಲರ್ ಎಡಿಟರ್ಗಳಿದ್ದಾರೆ..? ಎರಡು-ಮೂರೋ ಮಂದಿ ಇದ್ದಾರೆ. ಇವರು ನಮ್ಮ ಜೊತೆಗೆ ಇದ್ದಾರೆ ಅನ್ನೋದೇ ಸಮಾಧಾನ, ಖುಷಿ. ಇನ್ನು ನಾವು, ನೀವು ಚಿಂತಿಸಬೇಕಾದ್ದು ಬಹಳವಿದೆ. ಪ್ರಗತಿಪರ ಚಿಂತನೆಯುಳ್ಳ ಯುವಕ-ಯುವತಿಯರಿಗೆ ಅವಕಾಶ ಕಡಿಮೆ ನೀಡಲಾಗುತ್ತಿದೆ. ಅಂದ ಮಾತ್ರಕ್ಕೆ ಎಲ್ಲಾ ಮಾಧ್ಯಮಗಳು ಜಾತೀಯತೆ ಮಾಡುತ್ತಿದೆ ಎಂದು ಹೇಳುತ್ತಿಲ್ಲ. ಬದಲು ಮೂಲ ಆಶಯಗಳನ್ನ ಮರೆತಂತಿದೆ. ಇನ್ನು ಕೆಲ ಮಾಧ್ಯಮಗಳಲ್ಲಿರುವ ಮಂದಿ ಜಾತೀಯತೆ ಪರವಾಗಿರುವುದರಿಂದ್ದ ಎಲ್ಲಾ ಮಾಧ್ಯಮಗಳಿಗೆ ಕೆಟ್ಟ ಹೆಸರು ಬರುತ್ತಿದೆ. ಮೂಲ ಆಶಯವನ್ನ ಮರೆತು ಸುದ್ದಿ ಮಾಡಲು ಹೋದರೆ ಏನಾಗುತ್ತೆ, ಹೇಳಿ..?

 

ಇವತ್ತು ನಮ್ಮ ಮುಂದೆ ಪ್ರಗತಿಪರ ಚಿಂತನೆಯುಳ್ಳ ಪತ್ರಿಕೆ ಯಾವುದು ಅಂತಾ ಕೇಳಿದರೆ ಉತ್ತರ ಕೇವಲ ಮೂರೇ ಅಂತಾ ಹೇಳಬಹುದು. ಆದರೆ ಪ್ರಗತಿಪರ ಚಿಂತನೆಯುಳ್ಳ ಚಾನೆಲ್ ಇಲ್ಲ. ಕನ್ನಡ ಮಾಧ್ಯಮಕ್ಕೆ ಅಲ್ಪಸಂಖ್ಯಾತ, ದಲಿತ, ಹಿಂದುಳಿದ, ಶೋಷಿತರ, ಅಸ್ಪೃಶ್ಯರ ಪರ ಹಾಗೂ ನೊಂದವರ ಪರವಾಗಿರುವ ಟಿವಿ ಚಾನೆಲ್ವೊಂದು ಬೇಕು. ಜೊತೆಗೆ ಪ್ರಗತಿಪರ ಚಿಂತನೆಯುಳ್ಳ ಸಂಪಾದಕರು ಬೇಕು.. ಅದರ ಅಗತ್ಯತೆ ಜರೂರಾಗಿದೆ. ಅದು ಕೂಡಿ ಬರುವ ಕಾಲ ಸನ್ನಿಹಿತವಾಗಿದೆ..!

 

ಕನ್ನಡ ಮಾಧ್ಯಮದಲ್ಲಿ ಕೆಲಸ ಮಾಡುವವರಲ್ಲಿ ಹೆಚ್ಚಾಗಿ ಕರಾವಳಿ, ಮಲೆನಾಡು ಮಂದಿನೇ ಜಾಸ್ತಿ. ಇದಕ್ಕೆ ಕಾರಣನೂ ಇದೆ. ಯಾಕೆಂದರೆ ಈ ಭಾಗದಲ್ಲಿ ಪತ್ರಿಕೋದ್ಯಮ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಹಾಗೆಯೇ ಪತ್ರಿಕೋದ್ಯಮ ಕಲಿಸುವ ಕಾಲೇಜುಗಳಿವೆ. ಜೊತೆಗೆ ಪ್ರೋತ್ಸಾಹನೂ ಜಾಸ್ತಿ. ಅಲ್ಲದೇ ಈಗಿರುವ ನ್ಯೂಸ್ ಚಾನೆಲ್ಗಳಲ್ಲಿ ನ್ಯೂಸ್ ರೀಡರ್ ಗಳು ಸಹ ಈ ಭಾಗದ ಮಂದಿನೇ ಜಾಸ್ತಿ. ಇದೆಷ್ಟು ನಿಜವೋ, ಅಷ್ಟೇ ನಿಜವಾದ ಇನ್ನೊಂದು ಸಂಗತಿ – ಸುದ್ದಿಮನೆಯಲ್ಲಿ ಇಂದಿಗೂ ಕರಾವಳಿ, ಮಲೆನಾಡು ಭಾಗದ ಯುವಕ-ಯುವತಿಯರನ್ನ (ಅದರಲ್ಲೂ ಮುಸ್ಲಿಮ್, ದಲಿತ) ನ್ಯೂಸ್ ರೀಡರೋ, ಆ್ಯಂಕರೋ ಮಾಡೋಕೇ ಹಿಂದೇಟು ಹಾಕಲಾಗುತ್ತಿದೆ. ಕಾರಣವಲ್ಲದ ಕಾರಣ ನೀಡಿ ಅಂದರೆ ‘ಮಂಗಳೂರಿನವರಿಗೆ/ ಮುಸ್ಲಿಮರಿಗೆ ಕನ್ನಡ ಬರಲ್ಲ’ ಹೀಗೆ ಏನೇನೋ ಅಸಂಬದ್ಧ ಕಾರಣ ಹೇಳಿ ಅವಕಾಶದಿಂದ ವಂಚಿತರನ್ನಾಗಿ ಮಾಡಲು ಪ್ರಯತ್ನಿಸಲಾಗುತ್ತಿದೆ. ಅದರಲ್ಲೂ ಮುಸ್ಲಿಮ್, ದಲಿತ, ಹಿಂದುಳಿದ ವರ್ಗಗಳ ಯುವಕ-ಯುವತಿಯರಿಗೆ ಈ ವಿಷಯದಲ್ಲಿ ಟಾರ್ಚರೇ ನೀಡಲಾಗುತ್ತೆ. ಅವರಿಗೆ ‘ಟ್ರೈನಿಂಗ್’ ನೆಪದಲ್ಲಿ ತಿಂಗಳುಗಟ್ಟಲೇ ಹಿಂಸೆ ನೀಡಲಾಗುತ್ತದೆ. ಮನುಷ್ಯತ್ವವನ್ನ ಮರೆತವರೇ ಹೆಚ್ಚಾಗುತ್ತಿದ್ದಾರೆ. ‘ನನಗೆ ಮಾತ್ರ ಗೊತ್ತು’ ಅನ್ನೋರೇ ಜಾಸ್ತಿ. ತಮ್ಮ ಬಳಿ ಪ್ರತಿಭೆ ಇದ್ದರೂ ಅದನ್ನ ಬೆಳೆಸುವ ನಾಯಕರು ಕಡಿಮೆ ಇದ್ದಾರೆ.
ನನ್ನ ಪ್ರಕಾರ ಮಾಧ್ಯಮದಲ್ಲಿ ಉನ್ನತ ಹುದ್ದೆಯಲ್ಲಿರುವವರಿಗೆ ಜಾತಿಭೇದ ಇರಬಾರದು. ಪ್ರಾಂತ್ಯವಾರು ದ್ವೇಷ ಇರಬಾರದು. ಎಲ್ಲಾ ಧರ್ಮ, ಜಾತಿಯವರಿಗೂ ಪ್ರಾತಿನಿಧ್ಯ ಕೊಡಬೇಕು. ಪ್ರತಿಭೆಗೆ, ಸಾಮರ್ಥ್ಯಕ್ಕೆ, ಪ್ರಾಮಾಣಿಕವಾಗಿ ಕೆಲಸ ಮಾಡುವ ಮಂದಿಗೆ ಅವಕಾಶ ನೀಡಬೇಕು. ಇಂತಹ ದೃಢ ನಿರ್ಧಾರವನ್ನು ಮಾಡುವವರು ಸಂಪಾದಕರು ಬೇಕಾಗಿದ್ದಾರೆ. ಕನ್ನಡ, ಗುಜರಾತಿ ಹೀಗೆ ಕೆಲ ಭಾಷಾ ಮಾಧ್ಯಮದಲ್ಲಿ ಜಾತೀಯತೆ ತೊಲಗಬೇಕೆಂದರೆ ಪ್ರಗತಿಪರ ಚಿಂತನೆಯುಳ್ಳ ಸಂಪಾದಕರ ಸಂಖ್ಯೆ ಜಾಸ್ತಿಯಾಗಬೇಕು. ಸುದ್ದಿಯನ್ನ ಸುದ್ದಿಯಾಗಿ ನೀಡುವ ಪತ್ರಕರ್ತರ ಸಂಖ್ಯೆ ಹೆಚ್ಚಾಗಬೇಕು. ಇದು ಕಾಲದ ಅನಿವಾರ್ಯತೆ ಕೂಡಾ. ಜನರ ಬೇಡಿಕೆ ಕೂಡಾ.

ಮಾಧ್ಯಮದಲ್ಲೂ ‘ಅಹಿಂದ’ ಇರಬೇಕು – ದಿನೇಶ್ ಅಮೀನ್ ಮಟ್ಟು

ಇದು ಪ್ರತಿ ಪತ್ರಕರ್ತ ಕೇಳಲೇಬೇಕಾದ ಭಾಷಣ

ಭಾಷಣ: ದಿನೇಶ್ ಅಮೀನ್ ಮಟ್ಟು

ನಿರೂಪಣೆ: ಎನ್.ರವಿಕುಮಾರ್ ಶಿವಮೊಗ್ಗ

 

(ಕರ್ನಾಟಕ ಮಾಧ್ಯಮ ಅಕಾಡೆಮಿ ಅಕ್ಟೋಬರ್ 3 ರಂದು ಕರ್ನಾಟಕ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘ ಹಾಗೂ ಉರ್ದು ರಿಪೋಟರ್ಸ್ ಫೋರಂನ ಸಹಯೋಗದಲ್ಲಿ ರಾಯಚೂರಿನಲ್ಲಿ ‘ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಅಭಿವೃದ್ದಿ ಮಾಧ್ಯಮ ಕಾರ್ಯಾಗಾರ’ ವನ್ನು ಹಮ್ಮಿಕೊಂಡಿತ್ತು. ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ನಾಡಿನ ಹಿರಿಯ ಪತ್ರಕರ್ತರು, ಚಿಂತಕರಾದ ಶ್ರೀಯುತ ದಿನೇಶ್ಅಮೀನ್ ಮಟ್ಟು ಅವರು ಆಶಯ ಮಾತುಗಳನ್ನಾಡಿದ್ದರು. ಅವರ ಈ ಅರ್ಥಪೂರ್ಣ ಮಾತುಗಳನ್ನು ಇಲ್ಲಿ ದಾಖಲಿಸಲಾಗಿದೆ.)

ಕರ್ನಾಟಕ ಮಾಧ್ಯಮ ಅಕಾಡೆಮಿಗೆ ನಮ್ಮ ಪೊನ್ನಪ್ಪ ಅವರು ಅಧ್ಯಕ್ಷರಾದ ಮೇಲೆ ಇದೇ ಮೊದಲ ಬಾರಿಗೆ ಅಕಾಡೆಮಿಯ ಕಾರ್ಯಕ್ರಮದಲ್ಲಿ ನಾನು ಭಾಗವಹಿಸುತ್ತಿದ್ದೇನೆ. ಒಂದು ರೀತಿಯಲ್ಲಿ ಅಕಾಡೆಮಿ ಪಾಲಿಗೆ ನಾನೂ ಕೂಡಾ ಅಸ್ಪೃಶ್ಯನಾಗಿದ್ದೆ. ಈ ಕಾರ್ಯಾಗಾರದ ವಿಷಯ ಕೂಡಾ ಅದೇ ಆಗಿದೆ. ಅದೇನೇ ಇರಲಿ ಇಂತಹದ್ದೊಂದು ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಪೊನ್ನಪ್ಪ ಅವರನ್ನು ನಾನು ಅಭಿನಂದಿಸುತ್ತೇನೆ.

ಕೆಲವುವರ್ಷdinesh-aminmattuಗಳ ಹಿಂದೆ ದೆಹಲಿಯಲ್ಲಿದ್ದಾಗ ಕರ್ನಾಟಕದ ಪರಿಚಿತ ಬುದ್ದಿಜೀವಿರಾಜಕಾರಣಿಯೊಬ್ಬರು ಭೇಟಿಯಾಗಿದ್ದರು. ಇತ್ತೀಚೆಗೆ ಮಾಧ್ಯಮದಲ್ಲಿ ಜಾತೀಯತೆ ಜಾಸ್ತಿಯಾಗಿದೆ ಎಂದು ಅವರು ಬಹಳ ವಿಷಾದದಿಂದ ಹೇಳುತ್ತಿದ್ದರು. “ನನಗೆ ಅರ್ಥ ಆಗಲಿಲ್ಲ” ಎಂದೆ. ಅವರು “ಇಲ್ಲ ಈಗೆಲ್ಲಾ ಮಾಧ್ಯಮಗಳಲ್ಲಿ ಜಾತಿಗೊಂದು ಗುಂಪು ಹುಟ್ಟಿಕೊಂಡಿದೆ” ಅಂದರು. ನಾನು ಅವರ ಮುಖವನ್ನು ನೋಡುತ್ತಿದ್ದೆ, ಅವರು ಯಾವುದೋ ದುರುದ್ದೇಶದಿಂದ ಹೇಳುತ್ತಿದ್ದಾರೆಂದು ನನಗನಿಸಲಿಲ್ಲ. ಅವರು ಬಹಳ ಸಹಜವಾಗಿ ಹೇಳಿದ್ದರು. “ಹಿಂದೆ ಮಾಧ್ಯಮದಲ್ಲಿ ಜಾತಿ ಇರಲಿಲ್ಲವಾ?” ಎಂದು ನಾನು ಅವರನ್ನು ಕೇಳಿದೆ.

ಬಹಳಷ್ಟುಮಂದಿಗೆ ಇತ್ತೀಚೆಗೆ ಹೀಗೆ ಅನಿಸಲಿಕ್ಕತ್ತಿದೆ. ಎಲ್ಲದರಲ್ಲಿಯೂ ಜಾತಿ ಬಂದಿದೆ, ಮಾಧ್ಯಮದಲ್ಲಿ ಜಾತಿ ಬಂದಿದೆ. ರಾಜಕೀಯದಲ್ಲಿ ಜಾತಿಬಂದಿದೆ. ಎಲ್ಲಾ ಕಡೆ ಜಾತಿ ಬಂದಿದೆ ಎಂದು ಹೇಳುತ್ತಿರುತ್ತಾರೆ. ಹಾಗಾದರೆ ಜಾತಿ ಇರಲಿಲ್ಲವೇ? ಅದು ಬಹಳ ಮುಖ್ಯವಾದ ಪ್ರಶ್ನೆ. ನಾನು ಆ ರಾಜಕಾರಣಿಯನ್ನು ಮತ್ತೆ ಕೇಳಿದೆ, “ಸುಮ್ಮನೆ ಕಣ್ಮುಚ್ಚಿಕೊಂಡು ನಿಮಗೆ ಪರಿಚಯವಿರುವ ಎಲ್ಲಾ ಪತ್ರಕರ್ತರನ್ನು ನೆನೆಪಿಸಿಕೊಳ್ಳಿ. ಅದರಲ್ಲಿ ಯಾವ ಯಾವ ಜಾತಿಯವರಿದ್ದಾರೆ ಎಂಬುದು ಗೊತ್ತಾಗುತ್ತದೆ” ಅಂದೆ. ಆಗ ಅವರಿಗೆ ನಿಧಾನವಾಗಿ ಅರ್ಥವಾಗುತ್ತಾ ಹೋಯಿತು.

ಈ ದೇಶದ ಪತ್ರಿಕೆಗಳ ಸಂಪಾದಕರ ಜಾತಿಯಾವುದೆಂದು ಲೆಕ್ಕಹಾಕಿ, ಈ ಪತ್ರಿಕೆಗಳಲ್ಲಿ ಅತ್ಯಂತ ಉನ್ನತ ಸ್ಥಾನದಲ್ಲಿರುವ ಪತ್ರಕರ್ತರು ಯಾರು? ಅವರು ಯಾವ ಯಾವ ಜಾತಿಯವರು ಎಂದು ನೋಡುತ್ತಾ ಹೋದರೆ ಈ ದೇಶದ ಮಾಧ್ಯಮದಲ್ಲಿಯೂ ಎಷ್ಟೋ ವರ್ಷಗಳಿಂದ ಜಾತಿಯತೆ ಇತ್ತು ಎಂಬ ವಾಸ್ತವ ಅರ್ಥವಾಗುತ್ತದೆ. ಬಹಳಷ್ಟು ಮಂದಿ ತೀರಾ ಸಹಜವಾಗಿ ಈ ರಾಜ್ಯದಲ್ಲಿ ದೇವರಾಜಅರಸು ಅವರಿಂದ ಜಾತೀಯತೆ ಬಂತು ಎಂದು ಹೇಳ್ತಾರೆ. ಆದರೆ ವಾಸ್ತವ ಸಂಗತಿ ಬೇರೆ ಇದೆ. ಯಾವಾಗ ಹಾವನೂರು ಆಯೋಗದ ವರದಿ ಅನುಷ್ಠಾನಕ್ಕೆ ಬಂತೋ, ಯಾವಾಗ ಅವಕಾಶ ವಂಚಿತರಿಗೂ ಉದ್ಯೋಗ ಮತ್ತು ಶಿಕ್ಷಣದಲ್ಲಿ ಅವಕಾಶ ಸಿಕ್ಕಿತೊ, ರಾಷ್ಟ್ರ ಮಟ್ಟದಲ್ಲಿ ಮಂಡಲ್ ಆಯೋಗದ ವರದಿ ಯಾವಾಗ ಜಾರಿಗೆ ಬಂತೋ, ಆಗ ಅವಕಾಶ ವಂಚಿತರಿಗೂ ಅವಕಾಶಗಳು ಕೆಲವು ಕ್ಷೇತ್ರಗಳಲ್ಲಿ ಸಿಗುವಂತಾಯಿತು. ಅದರ ನಂತರ ರಾಜಕೀಯವಾಗಿ ಕೂಡಾ ಈ ಅವಕಾಶ ವಂಚಿತರು ಪ್ರಾತಿನಿಧ್ಯ ಪಡೆಯುವಂತಾಯಿತು. ಆಗ ಇದ್ದಕ್ಕಿಂತ ಹಾಗೆ ರಾಜಕೀಯದಲ್ಲಿ, ಮಾಧ್ಯಮದಲ್ಲಿ ಎಲ್ಲಾ ಕಡೆ ಜಾತಿ ಬಂದಿದೆ ಎಂಬ ಅಭಿಪ್ರಾಯ ತೇಲಿಬರಲಾರಂಭಿಸಿತು.

1996ರಲ್ಲಿ ದೆಹಲಿಯಲ್ಲಿ ವಾಷಿಂಗ್ಟನ್ ಪೋಷ್ಟ್ ನ ಬ್ಯೂರೋ ಚೀಫ್ ಆಗಿದ್ದ ಆಫ್ರಿಕನ್ ಮೂಲಕ ಅಮೆರಿಕನ್ ಕೆನ್ನತ್ ಕೂಪರ್ ಅವರು ಮೊದಲ ಬಾರಿಗೆ ಭಾರತದ ಮಾಧ್ಯಮ ಲೋಕದಲ್ಲಿರುವ ಜಾತಿಯತೆ ಬಗ್ಗೆ ಜಗತ್ತಿನ ಗಮನ ಸೆಳೆದಿದ್ದರು. ಭಾರತದ ಮಾಧ್ಯಮ ಕ್ಷೇತ್ರದಲ್ಲಿ ದಲಿತರು, ಹಿಂದುಳಿದ ಜಾತಿಗಳು, ಅಲ್ಪಸಂಖ್ಯಾತರು ಎಷ್ಟು ಪ್ರಮಾಣದಲ್ಲಿದ್ದಾರೆ ಎಂದು ಅವರು ಹುಡುಕುತ್ತಾ ಹೋಗುತ್ತಾರೆ. ಕಣ್ಣಿಗೆ ಬಹಳ ಮಂದಿ ಕಾಣೋದೆ ಇಲ್ಲ! ಉನ್ನತ ಹುದ್ದೆಗಳಲ್ಲಿ ಅವರು ಇಲ್ಲವೇ ಇಲ್ಲವೆನ್ನುವಷ್ಟು ಕಡಿಮೆ. ಯಾಕೆ ಹೀಗೆ ಎಂದು ಅವರು ಲೇಖನ ಬರೆಯುತ್ತಾರೆ. ‘ ಭಾರತದ ಮಾಧ್ಯಮಗಳಲ್ಲಿ ದೇಶದಲ್ಲಿ ಬಹುಸಂಖ್ಯೆಯಲ್ಲಿರುವ ಕೆಳಜಾತಿಗಳ ಪ್ರಾತಿನಿಧ್ಯವೇ ಇಲ್ಲ’ ಎಂದು ಅವರು ಬರೆದಿದ್ದರು.

ಅದರ ನಂತರ ಬಿ.ಎನ್ ಉನಿಯಾಲ್ ಎಂಬ ಪಯೋನಿಯರ್ ಪತ್ರಿಕೆಯ ಹಿರಿಯ ಪತ್ರಕರ್ತರೊಬ್ಬರು ಈ ಬಗ್ಗೆ ಲೇಖನದ ಮೂಲಕ ಗಮನಸೆಳೆಯುತ್ತಾರೆ. ಉತ್ತರ ಪ್ರದೇಶದಲ್ಲಿ ಮಾಯಾವತಿ ಅಧಿಕಾರಕ್ಕೆ ಬಂದ ಮೇಲೆ ಬಿಎಸ್ಪಿ ಮತ್ತು ಪತ್ರಕರ್ತರ ನಡುವೆ ಯಾಕೆ ಸಂಘರ್ಷ ನಡೆಯುತ್ತಿದೆ ಎನ್ನುವುದನ್ನು ವರದಿ ಮಾಡಲು ಮಾಹಿತಿ ಸಂಗ್ರಹಕ್ಕಾಗಿ ದಲಿತ ಪತ್ರಕರ್ತರನ್ನು ಹುಡುಕಲು ಹೊರಡುತ್ತಾರೆ. ಅವರಿಗೆ ಯಾವ ದಲಿತ ಪತ್ರಕರ್ತರು ಸಿಗುವುದಿಲ್ಲ. ಇದರಿಂದ ಕಳವಳಗೊಂಡು 30 ವರ್ಷಗಳನ್ನು ಪತ್ರಿಕಾ ವೃತ್ತಿಯಲ್ಲಿ ಕಳೆದಿದ್ದ ಅವರು ಈ ಅವಧಿಯಲ್ಲಿ ತಾನು ಭೇಟಿ ಮಾಡಿದ ದಲಿತ ಪತ್ರಕರ್ತರು ಯಾರಿದ್ದಾರೆ ಎಂದು ನೆನಪುಮಾಡಿಕೊಳ್ಳಲು ಪ್ರಯತ್ತಿಸುತ್ತಾರೆ. ಅವರಿಗೆ ಒಂದೇ ಒಂದು ಹೆಸರು ನೆನಪಿಗೆ ಬರುವುದಿಲ್ಲ. ಇದನ್ನು ಅವರು ಮೊದಲ ಬಾರಿಗೆ ಪಯೋನಿಯರ್ ಪತ್ರಿಕೆಯಲ್ಲಿ ದಾಖಲಿಸುತ್ತಾರೆ.

ಇದರ ನಂತರ ರಾಬಿನ್ ಜೆಫ್ರಿಎಂಬ ಇನ್ನೊಬ್ಬ ಅಂತರರಾಷ್ಟ್ರೀಯ ಖ್ಯಾತಿಯ ಸಂಶೋಧಕ ಪ್ರಾಧ್ಯಾಪಕ ಇದರ ಬಗ್ಗೆ ಅಧ್ಯಯನ ಮಾಡಿ ಲೇಖನ ಬರೆದಿದ್ದಾರೆ. ‘ಹೆಚ್ಚು ಕಡಿಮೆ ಭಾರತದ ಮಾಧ್ಯಮದಲ್ಲಿ ದಲಿತ ವರದಿಗಾರರು ಮತ್ತು ಉಪ ಸಂಪಾಕದರು ಇಲ್ಲವೇ ಇಲ್ಲ. ದಲಿತರ ಮಾಲಿಕತ್ವದ ಪತ್ರಿಕೆಯಾಗಲಿ, ದಲಿತ ಸಂಪಾದಕರಾಗಲಿ ಇಲ್ಲವೇ ಇಲ್ಲ’ ಎಂದು ರಾಬಿನ್ ಜೆಫ್ರಿ ಬರೆದಿದ್ದರು. ‘ಮೀಸಲಾತಿ ವಿರೋಧಿ ಚಳುವಳಿಯಲ್ಲಿ ಮುಖ್ಯವಾಗಿ ಟಿವಿ ಚಾನೆಲ್ ಗಳು ಏಕಪಕ್ಷೀಯವಾಗಿ ವರದಿ ಮಾಡಲು ಪತ್ರಿಕಾ ಕಚೇರಿಯಲ್ಲಿರುವ ಜಾತೀಯತೆ ಕಾರಣ’ ಎಂದು ಸಿದ್ದಾರ್ಥ ವರದರಾಜನ್ ‘ದಿ ಹಿಂದೂ’ ವಿನಲ್ಲಿ ಬರೆದಿದ್ದರು. ಇದರ ನಂತರ 2006ರಲ್ಲಿ ಸಿಎಸ್ ಡಿಎಸ್ ದೆಹಲಿಯಲ್ಲಿ ಮಾಡಿದ ಸಮೀಕ್ಷೆ ಇನ್ನಷ್ಟು ಕಳವಳಕಾರಿ ಅಂಶಗಳನ್ನು ಬಯಲು ಮಾಡಿತ್ತು. ಸಂಸ್ಥೆ ಸಮೀಕ್ಷೆ ನಡೆಸಿದ ದೆಹಲಿಯ 32 ಹಿಂದಿ ಮತ್ತು ಇಂಗ್ಲೀಷ್ ಪತ್ರಿಕೆಗಳ 315 ನೀತಿ ನಿರ್ಧಾರಕ ಹುದ್ದೆಗಳಲ್ಲಿ, ಹೆಚ್ಚುಕಡಿಮೆ ಇಂಗ್ಲೀಷ್ ದಿನಪತ್ರಿಕೆಗಳಲ್ಲಿ ಶೇಕಡಾ 90 ಮತ್ತು ಟಿವಿ ಚಾನೆಲ್ ಗಳಲ್ಲಿ ಶೇಕಡಾ 79ರಷ್ಟು ಮೇಲ್ಜಾತಿ ಪತ್ರಕರ್ತರೇ ತುಂಬಿದ್ದರು’ ಎಂದು ಆ ಸಮೀಕ್ಷೆ ತಿಳಿಸಿತ್ತು. ಇದು ಇಂದಿನ ಭಾರತದ ಮಾಧ್ಯಮದ ಸ್ಥಿತಿ.

ಮಾಧ್ಯಮಗಳು ಹೀಗೆ ಯಾಕೆ ವರ್ತಿಸುತ್ತಿವೆ ಎಂಬ ಬಗ್ಗೆ ಮಾತನಾಡುವ ಮೊದಲು ದಿನಪತ್ರಿಕಗೆಳ, ಟಿ.ವಿ ಚಾನಲ್ ಗಳ ಮಾಲೀಕರು, ಮುಖ್ಯಸ್ಥರು ಯಾರು, ಅಲ್ಲಿನ ಟಾಪ್ 10 ಹುದ್ದೆಗಳಲ್ಲಿ ಯಾರಿದ್ದಾರೆ ಎಂದು ತಿಳಿದು ಕೊಂಡರೆ ಸಾಕು. ಆಗ ಯಾವ ಸರ್ಕಾರದ ಬಗ್ಗೆ, ಯಾವ ರಾಜಕಾರಣಿ ಬಗ್ಗೆ, ಯಾವ ಅಧಿಕಾರಿ ಬಗ್ಗೆ ಮಾಧ್ಯಮಗಳು ಯಾಕೆ ಹೀಗೆ ವರ್ತಿಸುತ್ತಿವೆ ಎನ್ನುವುದು ಗೊತ್ತಾಗಬಹುದು. ಇದು ಅಪ್ರಿಯವಾದ ಸತ್ಯ.

ಇದಕ್ಕೆಬಹಳಷ್ಟುಕಾರಣಗಳಿವೆ, ಅಧ್ಯಯನಗಳು ಕೂಡಾ ನಡೆದಿವೆ. ಇಂತಹ ಅಧ್ಯಯನ ಕನ್ನಡ ಮಾಧ್ಯಮ ರಂಗದ ಬಗ್ಗೆಯೂ ನಡೆಯಬೇಕಾಗಿದೆ. ದೆಹಲಿಯ ಏಜಾಜ್ ಆಶ್ರಫ್ ಎಂಬ ಪತ್ರಕರ್ತರೊಬ್ಬರು ಇತ್ತೀಚೆಗೆ ಈ ಬಗ್ಗೆ ಅಧ್ಯಯನ ನಡೆಸಿದ್ದರು. ದೆಹಲಿಯಲ್ಲಿ 1965ರಲ್ಲಿಯೇ ಸ್ಥಾಪನೆಗೊಂಡ ಸರ್ಕಾರಿ ಸ್ವಾಮ್ಯದ ಐಐಎಂಸಿ ಎಂಬ ಪತ್ರಿಕೋದ್ಯಮ ಪಾಠ ಮಾಡುವ ಸಂಸ್ಥೆ ಇದೆ. ಅಲ್ಲಿ ಮೀಸಲಾತಿಯೂ ಇರುವುದರಿಂದ ಒಂದಷ್ಟು ದಲಿತರು ಖಂಡಿತ ಅಲ್ಲಿ ಶಿಕ್ಷಣ ಪಡೆದಿರುತ್ತಾರೆ. ಹೀಗಿದ್ದರೂ ಅವರ್ಯಾರೂ ಪತ್ರಿಕಾ ಕಚೇರಿಗಳಲ್ಲಿ ಯಾಕೆ ಕಾಣಿಸಿಕೊಳ್ಳುತ್ತಿಲ್ಲ ಎನ್ನುವ ಪ್ರಶ್ನೆ ಏಜಾಜ್ ಆಶ್ರಫ್ ಅವರನ್ನು ಕಾಡುತ್ತದೆ. ಸರ್ಕಾರಿ ಕಾಲೇಜುಗಳು ಮತ್ತು ಯೂನಿರ್ವಸಿಟಿಗಳಲ್ಲಿ ಮೀಸಲಾತಿ ಸೌಲಭ್ಯದ ಮೂಲಕ ದಲಿತರು, ಹಿಂದುಳಿದವರ್ಗಗಳು ಮತ್ತು ಅಲ್ಪಸಂಖ್ಯಾತರು ಅಡ್ಮೀಷನ್ ಪಡೆಯುತ್ತಾರೆ. ಆ ನಂತರ ಅವರಲ್ಲಿ ಎಷ್ಟು ಮಂದಿ ಈ ಮಾಧ್ಯಮ ಸಂಸ್ಥೆಗಳನ್ನು ಸೇರಿಕೊಳ್ಳುತ್ತಾರೆ? ಅವರಲ್ಲಿ ಎಷ್ಟು ಮಂದಿ ಉಳಿದುಕೊಳ್ಳುತ್ತಾರೆ ಎಂಬ ಬಗ್ಗೆ ಅಧ್ಯಯನ ನಡೆಸಿ ಏಜಾಜ್ ಆಶ್ರಫ್ ದಿ.ಹೂಟ್ (thehoot.org) ಎಂಬ ವೆಬ್ ಸೈಟ್ ನಲ್ಲಿ ಬಹಳ ದೀರ್ಘವಾದ ಲೇಖನ ಬರೆದಿದ್ದಾರೆ.

ಅದರಲ್ಲಿ ಸಂತೋಷ್ ವಾಲ್ಮೀಕಿ ಎಂಬ ದಲಿತ ಪತ್ರಕರ್ತನ ವ್ಯಥೆಯ ಕತೆ ಇದೆ. ಇವರು ಹಿಂದೂಸ್ಥಾನ ಟೈಮ್ಸ್ ನ ಲಕ್ನೋ ಬ್ಯೂರೋ ಚೀಫ್ ಆಗಿದ್ದಾರೆ. ಅವರೊಬ್ಬ ಕುಡುಕ ಚಾಲಕನ ಮಗ, ದೆಹಲಿಯ ಬೀದಿಗಳಲ್ಲಿ ಪತ್ರಿಕೆಗಳನ್ನು ಮಾರಾಟ ಮಾಡುತ್ತಿದ್ದರು . ಬಹಳ ಕಷ್ಟ ಪಟ್ಟು ಡಿಗ್ರಿ ಮುಗಿಸುತ್ತಾರೆ. ಆಮೇಲೆ ಸ್ನಾತಕೋತ್ತರ ಪದವಿಗಾಗಿ ಅರ್ಜಿ ಹಾಕಿದಾಗ ಇಂಟರ್ ವ್ಯೂನಲ್ಲಿ . ‘ನೀನು ಪ್ರತಿದಿನ ಎಷ್ಟು ಪೇಪರ್ ಗಳನ್ನು ಓದುತ್ತಿ?’ ಎಂದು ಕೇಳಿದ್ದರಂತೆ. ‘ನಾನು ಪ್ರತಿದಿನ ಒಂಭತ್ತು ಪೇಪರ್ ಓದುತ್ತೇನೆ’ ಎಂದು ಅವರು ಉತ್ತರಿಸಿದ್ದರಂತೆ. ಸಂದರ್ಶಕರಿಗೆ ಆಶ್ಚರ್ಯ ಆಗುತ್ತದೆ. ಪತ್ರಿಕೆ ಮಾರುತ್ತಿದ್ದ ನಾನು ಆಸಕ್ತಿಯಿಂದ ಓದುವ ಹವ್ಯಾಸ ಬೆಳೆಸಿಕೊಂಡ ಕಾರಣದಿಂದಾಗಿ ಪತ್ರಕರ್ತನಾಗಲು ಸಾಧ್ಯವಾಯಿತು ಎಂದು ಅವರು ಹೇಳಿಕೊಂಡಿದ್ದಾರೆ.. ಅದರ ನಂತರ ತಾನು ಹೇಗೆ ತಾನು ಪತ್ರಕರ್ತ ಆದೆ ಎಂದು ಅವರು ಹೇಳುತ್ತಾ ಹೋಗುತ್ತಾರೆ. ಇವತ್ತು ಇಲ್ಲಿ ಸೇರಿರುವ ನೀವು ಇದನ್ನು ತಿಳಿದುಕೊಳ್ಳಬೇಕು.

ದೆಹಲಿಯ ಇಂಗ್ಲೀಷ್ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವ ಇನ್ನೊಬ್ಬ ದಲಿತ ಪತ್ರಕರ್ತನನ್ನು ಏಜಾಜ್ ಆಶ್ರಫ್ ಭೇಟಿ ಮಾಡುತ್ತಾರೆ. ಜಾತಿಯಲ್ಲಿ ಕುರುಬನಾಗಿರುವ ಈ ಪತ್ರಕರ್ತ ತಾನು ಹೇಗೆ ಇಂಗ್ಲೀಷ್ ಕಲಿತೆ ಎನ್ನುವುದನ್ನು ಹೇಳುತ್ತಾನೆ. ಈತ ಇಂಗ್ಲೀಷ್ ಪತ್ರಿಕೆಗಳನ್ನು ಓದಿ ಅದರಲ್ಲಿ ತನಗೆ ಅರ್ಥವಾಗದ ಪದಗಳನ್ನು ನೋಟ್ ಮಾಡಿಕೊಂಡು ಅವಗಳಿಗೆ ಶಬ್ದಕೋಶ ನೋಡಿ ಅರ್ಥ ಬರೆದುಕೊಳ್ಳುತ್ತಿದ್ದನಂತೆ. ಇಂಗ್ಲೀಷ್ ವಾಕ್ಯಗಳನ್ನು ಏಕಾಂತದಲ್ಲಿ ಕೂತು ಜೋರಾಗಿ ಉಚ್ಚರಿಸಿ ಓದುತ್ತಿದ್ದನಂತೆ.ಕೊನೆಗೆ ಬಿಪಿಓ ಸೇರಿಕೊಂಡು ಅಲ್ಲಿ ವಾಯ್ಸ್ ಟ್ರೇನಿಂಗ್ ಪ್ರೋಗ್ರಾಮ್ ಮೂಲಕ ಇಂಗ್ಲೀಷ್ ಉಚ್ಚಾರ ಕಲಿತಿದ್ದನಂತೆ.

ಅಂದರೆ ಈ ಭಾರತದ ವ್ಯವಸ್ಥೆ ಹೇಗಿದೆಯೆಂದರೆ ಕೆಲವರು ಲಿಫ್ಟ್ನಲ್ಲಿ ಸರ್ರನೆ ಮೇಲೇರಿ ಹೋಗಿಬಿಡುತ್ತಾರೆ. ಇನ್ನು ಕೆಲವರು ಕಷ್ಟಪಟ್ಟು ಮೆಟ್ಟಿಲು ಹತ್ತಿಕೊಂಡು ಹೋಗಬೇಕಾಗುತ್ತದೆ. ನೀವೆಲ್ಲಾ ಏನಿಲ್ಲಿ ಸೇರಿದ್ದೀರಿ, ನೀವು ಮೆಟ್ಟಿಲುಗಳನ್ನು ಹತ್ತಿಕೊಂಡು ಹೋಗಬೇಕಾಗುತ್ತದೆ. ನಿಮಗೆ ಲಿಫ್ಟ್ ಸಿಗೋದಿಲ್ಲ. ಇದು ಭಾರತದ ಇವತ್ತಿನ ಮಾಧ್ಯಮದ ಪರಿಸ್ಥಿತಿ.

ಮಾಧ್ಯಮದಲ್ಲಿಯಾಕೆ ಎಲ್ಲ ಜಾತಿ-ಧರ್ಮಗಳಿಗೆ ಪ್ರಾತಿನಿಧ್ಯ ಸಿಗಬೇಕು ಎಂದು ಯಾರಾದರೂ ಕೇಳಬಹುದು. ನೋಡಿ, ಇತ್ತೀಚೆಗೆ ಮೀಸಲಾತಿಯಾಕೆ ಬೇಕು ಎಂಬ ಬಗ್ಗೆ ದೊಡ್ಡದಾಗಿ ಡಿಬೇಟ್ ನಡೆಯುತ್ತಿದೆ. ಈ ಪ್ರಶ್ನೆಗೆ ಮಾಧ್ಯಮ ರಂಗದಲ್ಲಿ ಉತ್ತರ ಇದೆ. ಎಲ್ಲಿ ಮೀಸಲಾತಿ ಇದೆಯೋ ಅಲ್ಲಿ ದಲಿತರು, ಹಿಂದುಳಿದ ವರ್ಗಗಳು ಮತ್ತು ಅಲ್ಪ ಸಂಖ್ಯಾತರ ಪ್ರಾತಿನಿಧ್ಯ ಇದೆ. ರಾಜಕೀಯದಲ್ಲಿ ದಲಿತರ ಪ್ರಾತಿನಿಧ್ಯ ಇರುವುದಕ್ಕೆ ಮೀಸಲಾತಿ ಕಾರಣ. ಆದರೆ ಮೀಸಲಾತಿ ಇಲ್ಲದ ಮಾಧ್ಯಮದಲ್ಲಿ, ನ್ಯಾಯಾಂಗದಲ್ಲಿ ದಲಿತರ ಪ್ರಾತಿನಿಧ್ಯ ಇಲ್ಲ. ಅಂದರೆ ಮೀಸಲಾತಿ ಕಾನೂನಿನ ಕಾರಣಕ್ಕಾಗಿ ಅವರಿಗೆ ಪ್ರಾತಿನಿಧ್ಯ ಸಿಕ್ಕಿದೆ ವಿನಃ ಅದು ಅವರ ಅರ್ಹತೆಯನ್ನು ಗುರುತಿಸಿ ಕೊಟ್ಟದ್ದಲ್ಲ.

ಮನುಷ್ಯ ಪರಿಸರದ ಕೂಸು. ದಲಿತರು, ಹಿಂದುಳಿದ ಜಾತಿಯವರು, ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ಹಳ್ಳಿಗಾಡಿನಿಂದ, ಬಡಕುಟುಂಬಗಳಿಂದ ಮತ್ತು ರೈತ ಸಮುದಾಯದಿಮದ ಬಂದವರು. ಅವರಿಗೆ ಹೊರಜಗತ್ತಿನ exposure ಬಹಳ ಕಡಿಮೆ. ನನ್ನ ಮಗಳಿಗೆ ಸಿಕ್ಕ exposure ನನಗೆ ಸಿಕ್ಕಿರಲಿಲ್ಲ. ನಾನು ಕುಗ್ರಾಮದಿಂದ ಬಂದವನು. ದೋಣಿಯಲ್ಲಿ ಹೋಗಿ ಕಾಲೇಜು ಶಿಕ್ಷಣ ಮುಗಿಸಿದವನು. ಮುಂಗಾರು ಪತ್ರಿಕೆಯಲ್ಲಿ ಕೆಲಸಮಾಡುತ್ತಿದ್ದಾಗಲೂ ನಿತ್ಯ ದೋಣಿ ದಾಟಿಕೊಂಡೇ ಮಂಗಳೂರು ಹೋಗುತ್ತಿದ್ದವನು. ನನಗೆ ಲಿಫ್ಟ್ ಸಿಕ್ಕಿರಲಿಲ್ಲ, ಮೆಟ್ಟಿಲು ಹತ್ತಿಕೊಂಡೇ ಬಂದವನು. ನಾನು ಆಗಲೆ ಹೇಳಿದ ಹಾಗೆ ನಾವೆಲ್ಲ ಮೆಟ್ಟಿಲು ಹತ್ತಿಕೊಂಡು ಹೋಗಬೇಕಾಗಿದೆ. ಪ್ರತಿಭೆ ಹುಟ್ಟಿನಿಂದಲೇ ಬರುವುದಿಲ್ಲ, ಅವಕಾಶ ಸಿಕ್ಕಿದಾಗ ಅದು ಅರಳುತ್ತದೆ ಅಷ್ಟೆ. ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದಲ್ಲಿಯೂ ಬಹಳಷ್ಟು ಪ್ರತಿಭಾವಂತರಿದ್ದಾರೆ. ಅವಕಾಶ ಸಿಗದೆ ಅವರಲ್ಲಿ ಎಷ್ಟೊ ಪ್ರತಿಭೆಗಳು ಮುದುಡಿಹೋಗುತ್ತವೆ. ಮಾಧ್ಯಮ ಕ್ಷೇತ್ರದಲ್ಲಿ ಒಬ್ಬನನ್ನು ಸುಲಭದಲ್ಲಿ ನಾಶಮಾಡಬಹುದು. ಅದು ಬಹಳ ಸುಲಭ, ಏಕೆಂದರೆ ಅವನಿಗೆ ನೀವು ಹೊಡೆಯಬೇಕಾಗಿಲ್ಲ. ಬಡಿಯಬೇಕಾಗಿಲ್ಲ, ದೈಹಿಕವಾಗಿ ಹಲ್ಲೆ ನಡೆಸಬೇಕಾಗಿಲ್ಲ. ಅವನಿಗೆ ಮಾನಸಿಕವಾಗಿ ಕಿರುಕುಳ ಕೊಟ್ಟರೆ ಸಾಕು, ಅವು ಕೆಲಸ ಬಿಟ್ಟು ಓಡಿ ಹೋಗುತ್ತಾನೆ. ದೆಹಲಿಯಲ್ಲಿ ಸರ್ವೆ ನಡೆದಾಗ ಬಹಳಷ್ಟು ಮಂದಿ ಪತ್ರಿಕೋದ್ಯಮದ ವ್ಯಾಸಂಗ ಪಡೆದು ವೃತ್ತಿಗೆ ಯಾಕೆ ಬಂದಿಲ್ಲ ಎಂದು ಕೇಳಿದರೆ ಇದೇ ಉತ್ತರ ಕೊಟ್ಟಿದ್ದಾರೆ.

ತಮಿಳುನಾಡಿನ ಒಂದಷ್ಟು ದಲಿತ ಪತ್ರಕರ್ತರು ಕೂಡಾ ಇಂತಹ ಅನುಭವಗಳನ್ನು ದಾಖಲಿಸಿದ್ದಾರೆ. ಅವನ್ನು ಓದಿದರೆ ನಿಮಗೆ ಅರ್ಥವಾಗುತ್ತದೆ. ಪತ್ರಿಕಾ ಕಚೇರಿಗಳಲ್ಲಿ ಒಬ್ಬ ದಲಿತನನ್ನು, ಹಿಂದುಳಿದ ವರ್ಗದವನನ್ನು ಹೇಗೆ ನಡೆಸಿಕೊಳ್ಳುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿದೆ, ಅದರ ವಿವರಗಳಿಗೆ ಹೋಗುವುದಿಲ್ಲ. ಈಗ ಸ್ವಲ್ಪ ಕಡಿಮೆ ಆಗಿದೆ. ಮಾನಸಿವಾಗಿ ಕಿರುಕುಳ ಕೊಟ್ಟಾಗ ಅವನ ತಲೆ ಓಡುವುದಿಲ್ಲ. ಅವನಿಂದ ತಪ್ಪುಗಳಾಗುತ್ತವೆ. ಹಳ್ಳಿಗಾಡಿನ ಜನ, ದಲಿತರು, ಹಿಂದುಳಿದವರ್ಗಗಳ ಜನ ಮಾತನಾಡುವ ಭಾಷೆ ಒರಟಾಗಿರುತ್ತದೆ. ಇವತ್ತು ಟಿ.ವಿ ಚಾನಲ್ ಗಳಲ್ಲಿ ಗ್ರಾಂಥಿಕವಾದ ಮಂಗಳೂರು ಕನ್ನಡ ಮಾತನಾಡುವವರಿಗೆ ಮಾತ್ರ ಹೆಚ್ಚಿನ ಅವಕಾಶ ಸಿಗುತ್ತಿದೆ. ಈ ಕಾರಣದಿಂದಾಗಿಯೇ  ಹೆಚ್ಚಿನ ಆ್ಯಂಕರ್ ಗಳು ಮಂಗಳೂರಿನಿಂದ ಬಂದವರಾಗಿದ್ದಾರೆ. ರಾಯಚೂರು, ಗುಲ್ಬರ್ಗಾ, ಧಾರವಾಡ ಕಡೆಯ ಭಾಷೆ ಅಲ್ಲಿ ನಡೆಯುವುದಿಲ್ಲ. ಅದೇನಿದ್ದರೂ ಸಿನಿಮಾ, ನಾಟಕಗಳಲ್ಲಿ ಹಾಸ್ಯ ಪಾತ್ರಗಳಿಗೆ ಸೀಮಿತ. ಭಾಷೆಗೂ ಐಡೆಂಟಿಟಿ ಇದೆ ಎನ್ನುವುದನ್ನು ತಿಳಿದುಕೊಂಡು ಅವರ ಅನುಭವಕ್ಕೂ ಒಂದು ಬೆಲೆ ಇದೆ ಎಂದು ಗುರುತಿಸಿ ಅವಕಾಶ ನೀಡುವ ಮಾಧ್ಯಮಗಳು ಇಲ್ಲವೇ ಇಲ್ಲವೆನ್ನುವಷ್ಟು ಕಡಿಮೆ.

 
ನಾನು ಕೆಲಸ ಮಾಡಿದ ಪ್ರHari Kumarಜಾವಾಣಿಯಲ್ಲಿ ನೀವು ಇಲ್ಲಿ ಸೇರಿರುವ ವರ್ಗದಿಂದ ಬಂದವರು ಬೇರೆ ಪತ್ರಿಕೆಗಳಿಗೆ ಹೋಲಿಸಿದರೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇಲ್ಲಿರುವ ಪೊನ್ನಪ್ಪ, ಬಿ.ಕೆ ರವಿ ಎಲ್ಲ ಪ್ರಜಾವಾಣಿ ಯಿಂದ ಬಂದವರು. ಅದರ ಬಗ್ಗೆ ನನಗೆ ಹೆಮ್ಮೆ ಇದೆ. ಇದು ಕೂಡಾ ಬಹಳ ಪ್ರಜ್ಞಾ ಪೂರ್ವಕವಾಗಿ ಮಾಡಿದ ಬದಲಾವಣೆ. ಕೆ.ಎನ್.ಹರಿಕುಮಾರ್ ಅವರು ತಮ್ಮ ಅಜ್ಜನಿಂದ ಪತ್ರಿಕೆಯ ಜವಾಬ್ದಾರಿ ತೆಗೆದುಕೊಂಡ ನಂತರ ದಲಿತರನ್ನು, ಹಿಂದುಳಿದವರನ್ನು, ಅಲ್ಪಸಂಖ್ಯಾತರನ್ನು ಸೇರಿಸಿಕೊಳ್ಳಬೇಕು ಎಂದು ಪ್ರಜ್ಞಾಪೂರ್ವಕವಾಗಿ ನಿರ್ಧಾರ ಕೈಗೊಂಡಿದ್ದರಿಂದ ಬಹಳಷ್ಟು ಜನ ಈ ವರ್ಗಕ್ಕೆ ಸೇರಿದವರಿಗೆ ಅವಕಾಶ ಸಿಗುವಂತಾಯಿತು. ಅವರೆಲ್ಲರೂ ಪ್ರತಿಭಾವಂತ ಪತ್ರಕರ್ತರು. ರಂಜಾನ್ ದರ್ಗಾ ರಿಂದ ಹಿಡಿದು ಇಂದೂಧರ್ ಹೊನ್ನಾಪುರ, ಶಿವಾಜಿ ಗಣೇಶನ್, ಡಿ.ವಿ ರಾಜಶೇಖರ್ ಮೊದಲಾದವರು ಪತ್ರಕರ್ತರಾಗಿದ್ದು ಹೀಗೆ. ಒಬ್ಬ ಸಂಪಾದಕ ಪ್ರಜ್ಞಾ ಪೂರ್ವಕವಾಗಿ ಆ ನಿರ್ಧಾರ ಮಾಡಿದ ಕಾರಣಕ್ಕಾಗಿ ಅವರ ಪ್ರತಿಭೆಗೆ ಅವಕಾಶ ಸಿಕ್ಕಿತು. ಅವರು ಬೆಳೆಯಲು ಸಾಧ್ಯವಾಯಿತು.

ಇದು ನಮ್ಮ ಇವತ್ತಿನ ಮಾಧ್ಯಮ ಕ್ಷೇತ್ರದಲ್ಲಿ ಕಾಣುತ್ತಿಲ್ಲ.

ಇದರ ಪರಿಣಾಮ ಬೇರೆ ಬೇರೆ ರೀತಿಯಲ್ಲಿ ಆಗುತ್ತಿದೆ. ಮುಖ್ಯಮಂತ್ರಿಗಳಿಗೆ ಸರಿಯಾದ ಪ್ರಚಾರ ಸಿಗ್ತಾ ಇಲ್ಲ ಎಂದು ಕೆಲವರು ಬಂದು ನನ್ನ ಹತ್ತಿರ ದು:ಖ ತೋಡಿಕೊಳ್ತಾರೆ. ಪ್ರಚಾರ ಅಂದ್ರೆ ಏನು? ಎಂದು ನನಗೂ ಆಶ್ಚರ್ಯವಾಗುತ್ತದೆ. ಇನ್ನು ಕೆಲವರು ನೀವು ಮೀಡಿಯಾವನ್ನು ಮ್ಯಾನೇಜ್ ಮಾಡಬೇಕು ಎಂದು ಸಲಹೆ ಕೊಡುತ್ತಾರೆ. ಇದನ್ನು ನಮ್ಮ ಮುಖ್ಯಮಂತ್ರಿಗಳು ಒಪ್ಪುತ್ತಿಲ್ಲ. ನನಗೂ ಅದರಲ್ಲಿ ನಂಬಿಕೆ ಇಲ್ಲ.

ಮಾಧ್ಯಮಕ್ಕೊಂದು ಧರ್ಮವಿದೆ. ಆ ಪತ್ರಿಕಾ ಧರ್ಮವನ್ನು ಸಂಪಾದಕ, ಪತ್ರಕರ್ತ ಪಾಲಿಸಿದರೆ ಯಾವುದೇ ಮ್ಯಾನೇಜ್ ಮೆಂಟ್ ಬೇಕಿಲ್ಲ. ಯಾವ ಒತ್ತಡವೂ ಬೇಕಿಲ್ಲ. ಯಾವ ಆಮಿಷಗಳು ಬೇಕಿಲ್ಲ. ಪತ್ರಿಕೆಗಳು, ಪತ್ರಕರ್ತರು ತಮ್ಮ ಕರ್ತವ್ಯಗಳನ್ನು ನಿರ್ವಹಿಸಿದರೆ ಸಾಕು. ನಮ್ಮ ಮುಖ್ಯಮಂತ್ರಿಗಳು ಇದನ್ನೆ ಹೇಳಿದ್ದಾರೆ. ಅವರ ವಿರುದ್ದ ಯಾವುದೇ ವರದಿ ಬಂದರೂ ಇಲ್ಲಿಯವರೆಗೂ ಅವರು ಯಾವ ಮಾಧ್ಯಮ ಪ್ರತಿನಿಧಿಗೂ ಪೋನ್ ಮಾಡಿ ಯಾಕೆ ಇದನ್ನು ಬರೆದಿದ್ದೀಯಾ ಅಂತ ಕೇಳಿಲ್ಲ. ನನ್ನ ಹತ್ತಿರವೂ ‘ನೀನು ಇದನ್ನು ಕೇಳಬೇಕು’ ಎಂದು ಹೇಳಿಲ್ಲ.

ಸರ್ಕಾರದ ಪರವಾಗಿ ಇಲ್ಲಿ ಪ್ರಚಾರಕ್ಕೆ ನಾನು ಬಂದಿಲ್ಲ. ಉದಾಹರಣೆಗಾಗಿ ಹೇಳುತ್ತಿದ್ದೇನೆ. ಅನ್ನಭಾಗ್ಯ ಎಂಬ ಯೋಜನೆಯಿಂದ ರಾಜ್ಯದ ಸುಮಾರು 1 ಕೋಟಿ ಕುಟುಂಬಗಳಿಗೆ ಲಾಭವಾಗುತ್ತಿದೆ. ಒಂದು ಕುಟುಂಬದಲ್ಲಿ ನಾಲ್ಕು ಮಂದಿ ಅಂತ ತಿಳಿದುಕೊಂಡರೂ 4 ಕೋಟಿ ಜನರಿಗೆ ಇದರ ಪ್ರಯೋಜನ ತಲುಪುತ್ತಿದೆ. ರಾಜ್ಯದ ಆರೂವರೆ ಕೋಟಿ ಜನಸಂಖ್ಯೆಯಲ್ಲಿ 4 ಕೋಟಿ ಜನ ಇದರ ಫಲಾನುಭವಿಗಳು. ಇದನ್ನು ಈಗ ಎಪಿಎಲ್ ಕುಟುಂಬಗಳಿಗೂ ವಿಸ್ತರಿಸಲಾಗಿದೆ. ಹೀಗಿದ್ದರೂ ಕೂಡ ಮಾಧ್ಯಮ ದಲ್ಲಿ ಅನ್ನ ಭಾಗ್ಯ ದಲ್ಲಿ ಕಲ್ಲು ಹುಡುಕಾಟದ ಪ್ರವೃತ್ತಿ ಇವತ್ತಿಗೂ ನಿಂತಿಲ್ಲ. ಯೋಜನೆಯ ಅನುಷ್ಟಾನದಲ್ಲಿ ಒಂದಷ್ಟು ಲೋಪ-ದೋಷಗಳು ಖಂಡಿತ ಇರಬಹುದು. ಕಳ್ಳ ಸಂತೆ, ದುರುಪಯೋಗ ಇತ್ಯಾದಿ ಆಗುತ್ತಿರಬಹುದು. ಲಾಭದ ಲೆಕ್ಕ ಹಾಕಿದರೆ ದೋಷಗಳು ನಗಣ್ಯವಾದುದು. ಹೀಗಿದ್ದರೂ ಯಾಕೆ ನೆಗೆಟಿವ್ ಪ್ರಚಾರ? ರಾಜ್ಯದ ಜನಸಂಖ್ಯೆಯಲ್ಲಿ ಶೇ. 80 ರಷ್ಟು ಜನ ದಲಿತರು, ಹಿಂದುಳಿದವರ್ಗಕ್ಕೆ ಸೇರಿದವರು ಮತ್ತು ಅಲ್ಪಸಂಖ್ಯಾತರು. ಅವರೆಲ್ಲರೂ ಅನ್ನಭಾಗ್ಯದ ಫಲಾನುಭವಿಗಳು. ಈ ಮಾಧ್ಯಮಗಳು ಅವರ ಅಭಿಪ್ರಾಯಗಳನ್ನು ಭಾವನೆಗಳನ್ನು ರಿಪ್ಲೆಕ್ಟ್ ಮಾಡುತ್ತಿದೆಯೇ?. ಏಕೆಂದರೆ ಈ ಫಲಾನುಭವಿಗಳು ಪತ್ರಿಕೆಗಳಿಗೆ ಲೇಖನಗಳನ್ನು ಬರೆಯುವುದಿಲ್ಲ. ಅನ್ನ ಭಾಗ್ಯದಿಂದ ನಮಗೆ ಲಾಭವಾಗಿದೆ ಎಂದು ಬೀದಿಗೆ ಬಂದು ಕೂಗಿ ಹೇಳುವುದಿಲ್ಲ. ಟಿ.ವಿ ಚಾನಲ್ ಗಳ ಸ್ಟುಡಿಯೋಗಳಲ್ಲಿ ಬಂದು ಚರ್ಚೆಯಲ್ಲಿ ಕೂರುವುದಿಲ್ಲ. ಅವರಿಗೆ ಧ್ವನಿ ಇಲ್ಲ. ದನಿ ಇಲ್ಲದವರಿಗೆ ಮಾಧ್ಯಮ ದನಿ ಅಗಬೇಕಲ್ಲವೇ?.

ಶಾದಿ ಭಾಗ್ಯಬಗ್ಗೆ ದೊಡ್ಡ ವಿವಾದ ಆಯ್ತು. ಯಾಕೆ ಆಗಬೇಕು? ಯಾರು ಅದರ ಬಗ್ಗೆ ಯೋಚನೆ ಮಾಡುತ್ತಿಲ್ಲ. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗೆ ಬಜೆಟ್ ನಲ್ಲಿ ಒಂದಿಷ್ಟು ದುಡ್ಡು ಕೊಟ್ಟಿರುತ್ತಾರೆ. ಆ ದುಡ್ಡಿನಿಂದ ಇಲಾಖೆ ಕಾರ್ಯಕ್ರಮಗಳನ್ನು ರೂಪಿಸುತ್ತದೆ. ಅವರು ಏನಾದ್ರೂ ಮಾಡ್ಲಿ, ಶಾದಿ ಭಾಗ್ಯನಾದ್ರೂ ಮಾಡ್ಲಿ, ಇನ್ನೂಂದು ಮಾಡ್ಲಿ, ಅದು ಅವರ ಬಜೆಟ್. 1000 ಕೋಟಿ ರೂಪಾಯಿ ಏನು ಕೊಟ್ಟಿದೆ ಅದು ಅವರ ದುಡ್ಡು. ಆದರೆ ಬರೀ ಮುಸ್ಲಿಮರಿಗೆ ಯಾಕೆ ಕೊಟ್ಟಿದ್ದೀರಿ? ಉಳಿದವರಿಗೆ ಯಾಕೆ ಕೊಟ್ಟಿಲ್ಲ ಅಂದ್ರೆ, ಉಳಿದವರಿಗೆ ಬೇರೆ ಸೌಲಭ್ಯಗಳಿವೆ ಅದನ್ನು ಅವರು ತಗೋಳ್ತಾರೆ. ಈ ರೀತಿ ಹೇಳುವಂತಹ ಸಮಚಿತ್ತದ ಬರವಣಿಗೆ ನಮಗೆ ಕಾಣುತ್ತಿಲ್ಲ.

ಇನ್ನು ಮೂಢನಂಬಿಕೆ ನಿಷೇಧ ಮಸೂದೆ. ಇಲ್ಲಿ ಸೇರಿರುವ ನಮಗೆಲ್ಲರಿಗೂ ಸಂಭಂಧಿಸಿದ್ದು ಮೂಢ ನಂಬಿಕೆ ನಿಷೇಧ ಕರಡು ಮಸೂದೆ ಬಗ್ಗೆ ಇಷ್ಟೆಲ್ಲಾ ವರದಿಗಳು ಬಂತಲ್ಲಾ, ಆ ರೀತಿ ವರದಿ ಮಾಡಿದವರಲ್ಲಿ ಕೆಲವರನ್ನು ಮಸೂದೆ ಪೂರ್ಣವಾಗಿ ಓದಿದ್ದೀರಾ ಎಂದು ಕೇಳೀದ್ದೇನೆ. ಬಹಳ ಮಂದಿ ಧೈರ್ಯದಿಂದ ಓದಿದ್ದೇನೆ ಎಂದು ಉತ್ತರಿಸಿಲ್ಲ. ಹೆಚ್ಚಿನವರು ಮಸೂದೆಯಲ್ಲಿನ ಪ್ರಿಯಾಂಬಲ್ ಓದಿ ಭಾವುಕರಾಗಿ ಅತಿರೇಕದ ವರದಿಗಳನ್ನು ಮಾಡಿದ್ದರು. ಮೂಲ ಮಸೂದೆಯಲ್ಲಿ ಅಂತಹ ಯಾವುದೇ ವಿಷಯಗಳಿರಲಿಲ್ಲ. ಆದರೆ ಆ ರೀತಿಯ ಪ್ರಚಾರ, ಒತ್ತಡಗಳಿಂದ ಸರ್ಕಾರವೇ ಹಿಂದೆ ಸರಿಯಬೇಕಾಯಿತು. ಇಂದು ಮೂಢನಂಬಿಕೆ ಕಾಯ್ದೆ ಯಾರಿಗೆ ಬೇಕಾಗಿದೆಯೆಂದರೆ ಅಶಿಕ್ಷಿತರಿಗೆ, ಬಡವರಿಗೆ ಬೇಕು. ದಲಿತ, ಹಿಂದುಳಿದವರಿಗೆ , ಅಲ್ಪಸಂಖ್ಯಾತರಿಗೆ ಬೇಕು. ಏಕೆಂದರೆ ಶೋಷಣೆಗೀಡಾಗುತ್ತಿರುವವರು ಇದೇ ಸಮುದಾಯದವರು. ಇದೇ ಸಮುದಾಯದ ದನಿ ಮಾಧ್ಯಮಗಳಲ್ಲಿ ಕೇಳಿಬಂದಿದ್ದರೆ ಇವತ್ತು ಮೂಢನಂಬಿಕೆ ನಿಷೇಧ ಕಾಯ್ದೆ ಜಾರಿಗೆ ಬರುತ್ತಿತ್ತು. ಬಹುಶಃ ಎಂ.ಎಂ ಕಲಬುರ್ಗಿ ಅವರ ಹತ್ಯೆಯೂ ಆಗುತ್ತಿರಲಿಲ್ಲ.

ನಮ್ಮ ಮಾಧ್ಯಮಗಳು ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಅಭಿವೃದ್ದಿ ಬಗ್ಗೆ ಮಾತನಾಡುವಾಗ ಈ ಮಾಧ್ಯಮಗಳಲ್ಲಿರುವ ತಾರತಮ್ಯ, ಪೂರ್ವಗ್ರಹಗಳನ್ನು ಮರೆತು ಮಾತನಾಡುವಂತಿಲ್ಲ. ಇಂಗ್ಲಿಷ್ ಪತ್ರಿಕೋದ್ಯಮದಲ್ಲಿ ಜಾತೀಯತೆ ಕಡಿಮೆಯಾಗುತ್ತಿದೆ. ಆದರೆ ಭಾಷಾ ಪತ್ರಿಕೋದ್ಯಮದಲ್ಲಿ, ಕನ್ನಡ ,ಹಿಂದಿ ಗುಜರಾತಿ ಮೊದಲಾದ ಭಾಷೆಗಳ ಪತ್ರಿಕೆಗಳಲ್ಲಿ ಇನ್ನೂ ಕಡಿಮೆಯಾಗಿಲ್ಲ. ಅಲ್ಲಿ ಕೆಲಸ ಮಾಡುವವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೇಳಿದರೆ ತಾವು ಅನುಭವಿಸುತ್ತಿರುವ ಅವಮಾನ, ಕಿರುಕುಳಗಳ ಕತೆ ಹೇಳಬಹುದು. ಪ್ರತಿಭೆ ಒಂದಿದ್ದರೆ ಸಾಲದು, ವೃತ್ತಿಯಲ್ಲಿ ಎದುರಾಗುವ ಅನ್ಯಾಯ, ಅವಮಾನ, ಪ್ರತಿಕೂಲಗಳನ್ನು ಎದುರಿಸಲೂ ಅವನು ರೆಡಿಯಾಗಬೇಕು. ಮತ್ತೆ ಮತ್ತೆ ನಾನು ಹೇಳುತ್ತೇನೆ ಪ್ರಜಾವಾಣಿಯಲ್ಲಿ ನಾನುprajavani ವಿವೇಕಾನಂದ ಅವರ ಬಗ್ಗೆ ಅಂಕಣ ಬರೆದೆ. ನಾನು ಸುಳ್ಳು ಬರೆದಿಲ್ಲ, ಅವರಿಗೆ ಅವಮಾನ ಮಾಡಿಲ್ಲ, ವಿವೇಕಾನಂದರು ಮಾಂಸ ತಿನ್ನುತಿದ್ದರು ಎನ್ನುವುದನ್ನು ನಾನು ಈಗಲೂ ಹೇಳುತ್ತೇನೆ, ಅದನ್ನು ವಿರೋಧಿಸುವವರು ಸಾರ್ವಜನಿಕ ವೇದಿಕೆಯಲ್ಲಿ ಚರ್ಚೆಗೆ ಕರೆದರೆ ನಾನು ಸಿದ್ದ. ವಿವೇಕಾನಂದರು ಮಾಂಸಹಾರಿಗಳಲ್ಲ ಎಂದು ಅವರು ಸಾಬೀತು ಮಾಡಿದರೆ ನಾನು ಬರೆಯುವ ಹವ್ಯಾಸದಿಂದಲೇ ನಿವೃತ್ತಿ ಆಗುತ್ತೇನೆ. ಸತ್ಯವನ್ನೇ ಹೇಳಿದ್ದೇನೆ. ಆದರೆ ಅದರ ಬಗ್ಗೆ ಅಪಪ್ರಚಾರ ವ್ಯಾಪಕವಾಗಿ ನಡೆಯಿತು.ನಮ್ಮ ಪತ್ರಿಕೆಗೆ,ನನಗೆ ಬೆದರಿಕೆ ಎದುರಾಯಿತು. ನಾನು ಇದರ ಬಗ್ಗ ಉಲ್ಲೇಖ ಮಾಡಲು ಕಾರಣ ಇದೆ. ಅಂತಹದ್ದೊಂದು ಅಂಕಣ ಬರೆದು ನಾನು ಪಾರಾಗಲೂ ಕಾರಣ ಆಗ ನನ್ನ ಸಂಪಾದಕರಾಗಿದ್ದ ಕೆ.ಎನ್ ಶಾಂತಕುಮಾರ್. ಅವರು ನನ್ನ ಪರವಾಗಿ ಕಲ್ಲು ಬಂಡೆಯಂತೆ ನಿಂತಿದ್ದರು. ಆತ ತಪ್ಪು ಬರೆದಿಲ್ಲ, ಅದಕ್ಕಾಗಿ ಅವನಾಗಲಿ, ನಾನಾಗಲಿ ಕ್ಷಮೆ ಕೇಳೋದಿಲ್ಲ ಎಂದು ಅವರು ಗಟ್ಟಿಯಾಗಿ ನಿಂತುಬಿಟ್ಟರು.ಈ ರೀತಿಯ ಸಂಪಾದಕರಿದ್ದರೆ ಮಾತ್ರ ಸಾಮಾಜಿಕ ಕಳಕಳಿಯ ಪತ್ರಿಕೋದ್ಯಮ ನಡೆಸಿಕೊಂಡು ಹೋಗಲು ಸಾಧ್ಯ.

ಮಾಧ್ಯಮ ರಂಗದಲ್ಲಿರುವ ಪೂರ್ವಗ್ರಹಕ್ಕೆ ಇತ್ತೀಚಿನ ಇಬ್ಬರು ಸ್ವಾಮಿಗಳ ಉದಾಹರಣೆ ಸಾಕು. ರಾಘವೇಶ್ವರ ಸಾಮೀಜಿಯ ಪ್ರಕರಣವನ್ನು ಬಹಳಷ್ಟು ಮಂದಿ ನಿತ್ಯಾನಂದ ಸ್ವಾಮಿ ಪ್ರಕರಣಕ್ಕೆ ಹೋಲಿಕೆ ಮಾಡುತ್ತಿದ್ದಾರೆ. ನಿತ್ಯಾನಂದ ಸ್ವಾಮೀಜಿ ಒಬ್ಬ ಹಿಂದುಳಿದ ಜಾತಿಯವ, ರಾಘವೇಶ್ವರ ಸ್ವಾಮೀಜಿ ಬ್ರಾಹ್ಮಣ. ಈ ಹೋಲಿಕೆ ತಪ್ಪು ಅಂತ ನನಗೆ ಅನಿಸುವುದಿಲ್ಲ. ನಿತ್ಯಾನಂದ ಸ್ವಾಮಿಗೆ ಮಾಧ್ಯಮದಲ್ಲಿ ಸಿಕ್ಕ ಟ್ರೀಟ್ ಮೆಂಟ್ ರಾಘವೇಶ್ವರ ಸ್ವಾಮೀಜಿಗೆ ಸಿಗಲಿಲ್ಲ. ನನಗೆ ಒಬ್ಬ ಪತ್ರಕರ್ತ ಹೇಳುತ್ತಿದ್ದ ನಿತ್ಯಾನಂದನ ಆಶ್ರಮದ ಕಾಂಪೌಂಡ್ ಹೊರಗಡೆ ಕಾಂಡೂಮ್ ಗಳನ್ನು ಹಾಕಿ ಅವರೇ ಅದನ್ನು ಶೂಟ್ ಮಾಡಿ ನೋಡಿ ನಿತ್ಯಾನಂದಸ್ವಾಮೀಜಿ ಕಾಂಪೌಂಡ್ ಹೊರಗಡೆ ಕಾಂಡೊಂಮ್ ಸಿಕ್ಕಿದೆ ಅವರು ವ್ಯಭಿಚಾರಿ ಎಂದು ತೋರಿಸಿದ್ದರಂತೆ.
ನೀವು ಖೈರ್ಲಾಂಜಿ ಬಗ್ಗೆ ಕೇಳಿದ್ದೀರಿ. ದಲಿತರ ಇಡೀ ಕುಟುಂಬವನ್ನೆ ಹತ್ಯೆ ಮಾಡಲಾಯಿತು. ಮೊದಲು ಅಲ್ಲಿಯ ಎಲ್ಲಾ ಪತ್ರಿಕೆಗಳು ಇದೊಂದು ಅನೈತಿಕ ಸಂಬಂಧ ಎನ್ನುವ ರೀತಿ ವರದಿ ಮಾಡಿವೆ. ನಂತರ ಬೇರೆ ಕಡೆಗಳಿಂದ ಹೋದ ಪತ್ರಿಕಾ ವರದಿಗಾರರು, ಕೆಲವು ದಲಿತ್ ಆಕ್ಟಿವಿಟಿಸ್ ಗಳು, ಅದರಲ್ಲೂ ಇಂಗ್ಲೀಷ್ ಪತ್ರಿಕೆಗಳು ಗಮನ ಸೆಳೆದಾಗ ನಿಜಸಂಗತಿ ಬಯಲಿಗೆ ಬಂತು. ನೀವು ಕಂಬಾಲಪಲ್ಲಿ ಸೇರಿದಂತೆ ರಾಜ್ಯದ ಬೇರೆಬೇರೆ ಭಾಗಗಳಲ್ಲಿ ದಲಿತರ ಮೇಲೆ ನಡೆದ ಎಲ್ಲಾ ದೌರ್ಜನ್ಯಗಳನ್ನು ನೋಡಿ, ಕೋಮುಗಲಭೆಗಳನ್ನು ನೋಡಿ ನಮಗೆ ಮಾಧ್ಯಮಗಳಲ್ಲಿರುವ ಜಾತಿ ಪೂರ್ವಗ್ರಹ ಗೊತ್ತಾಗುತ್ತದೆ.

ನನಗೆ ವಿಶ್ವದ ಬಹುದೊಡ್ಡ ಬುದ್ದಿಜೀವಿ ನೋಮ್ ಚಾಮ್ ಸ್ಕಿ ಹೇಳಿರುವ ‘ಸಮ್ಮತಿಯ ಉತ್ಪಾದನೆ’ (Manufacturing conseChomskynt) ನೆನಪಾಗುತ್ತದೆ. ಅಂದರೆ ಅಭಿಪ್ರಾಯಗಳನ್ನು ಉತ್ಪಾದನೆ ಮಾಡೋದು. ಉದಾಹರಣೆಗೆ ದಲಿತರ ಮೇಲೆ ಮೇಲ್ಜಾತಿಯ ಜನ ಹಲ್ಲೆ ನಡೆಸಿದಾಗ ನೀವು ಅದನ್ನು ದಲಿತರ ಮೇಲಿನ ಹಲ್ಲೆ ಅಂತಲೂ ರಿಪೋರ್ಟ್ ಮಾಡಬಹುದು, ಇಲ್ಲವೆ ಎರಡು ಗುಂಪುಗಳ ನಡುವಿನ ಘರ್ಷಣೆ ಅಂತಲೂ ರಿಪೋರ್ಟ್ ಮಾಡಬಹುದು. ಆದರೆ ಬಹಳ ಸಾರಿ ವೈಯುಕ್ತಿಕ ಕಾರಣಕ್ಕಾಗಿ ಹಲ್ಲೆ ಯಾಗಿದೆ, ಅನೈತಿಕ ಸಂಬಂಧದ ಕಾರಣಕ್ಕಾಗಿ ಹೆಣ್ಣುಮಗಳನ್ನು ಸಾಯಿಸಿದ್ದಾರೆ ಎಂದೆಲ್ಲ ವರದಿಯಾಗುತ್ತದೆ. ರೈತರ ಪ್ರತಿಭಟನೆ, ಸತ್ಯಾಗ್ರಹಗಳನ್ನು ದೊಂಬಿ ಎಂದು ಬರೆಯುವುದೂ ಉಂಟು.

 

ಕೋಮುಗಲಭೆಗಳ ವರದಿಗಳಲ್ಲಿಯೂ ಇಂತಹ ಲೋಪಗಳನ್ನು ಕಾಣಬಹುದು. ಕೋಮುಗಲಭೆಗಳಲ್ಲಿ ಸಾಮಾನ್ಯವಾಗಿ ಮುಸ್ಲಿಮರನ್ನು ವಿಲನ್ ಗಳನ್ನಾಗಿ ಮಾಡಲಾಗುತ್ತದೆ. ಮುಸ್ಲಿಮರು ಪ್ರಚೋದಿಸಿದರು, ಅದಕ್ಕಾಗಿ ಹಿಂದೂಗಳು ಸೇಡು ತೀರಿಸಿಕೊಂಡರು ಎನ್ನುವ ವರದಿಗಳು ಸಾಮಾನ್ಯ. ದೆಹಲಿಯ ಪಕ್ಕದಲ್ಲಿಯೇ ಇರುವ ಉತ್ತರ ಪ್ರದೇಶದಲ್ಲಿ ಮುಸ್ಲಿಮ್ ವ್ಯಕ್ತಿಯ ಮನೆಯಲ್ಲಿ ಭೀಫ್ ಇದೆ ಎಂಬ ಕಾರಣಕ್ಕಾಗಿ ಬೆಂಕಿ ಹಚ್ಚಿ ಕೊಂದುಬಿಟ್ಟರು. ಅಲ್ಲಿ ಬೀಫ್ ಇರಲಿಲ್ಲ ಎಂದು ತನಿಖೆ ಹೇಳುತ್ತಿದೆ. ಅರ್ನಾಬ್ ಗೋಸ್ವಾಮಿ ಇದರ ಬಗ್ಗೆ ಎಷ್ಟು ಷೋ ಮಾಡಿದರೋ ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ ಅವರು ಕಂಬಳಿ ತಗೋಂಡ್ರು, ಚಾಪೆ ತಗೋಂಡ್ರು ಅಂತ 1 ಗಂಟೆ ಬೇಕಾದರೆ ಅವರು ಚರ್ಚೆ ಮಾಡ್ತಾರೆ. ಇಂತಹ ಉದಾಹರಣೆಗಳನ್ನು ಬಹಳಷ್ಟು ಕೊಡುತ್ತಾ ಹೋಗಬಹುದು. ಆದರೆ ಇದಕ್ಕೆ ಪರಿಹಾರವೇನು? ಸುಲಭದ ಪರಿಹಾರ ನೀವೆಲ್ಲರೂ ಲಿಫ್ಟ್ ಗಾಗಿ ಕಾಯದೆ ಮೆಟ್ಟಿಲು ಹತ್ತಿಕೊಂಡು ಹೋಗಲಿಕ್ಕೆ ರೆಡಿಯಾಗಬೇಕು.
ನನ್ನ ತಾಯಿ ಅನಕ್ಷರಸ್ಥೆ, ನನ್ನ ತಂದೆ ಬ್ಯಾಂಕ್ ಜವಾನರಾಗಿದ್ದರು. ಬಿ.ಕಾಂ ಓದಿದ್ದೇ ನಾನು ಬ್ಯಾಂಕ್ ಗೆ ಸೇರಲಿಕ್ಕೆ. ಆದರೆ ಬ್ಯಾಂಕ್ ಸೇರಬೇಕೆಂದು ಅನಿಸಲಿಲ್ಲ. ಪತ್ರಿಕೋದ್ಯಮದ ಹಾದಿ ಸುಗಮವಾಗಿ ಇರಲಿಲ್ಲ. ಮುಂಗಾರು ಪತ್ರಿಕೆ ಯಲ್ಲಿ ತಿಂಗಳ ಸಂಬಳವನ್ನು ನಾಲ್ಕು ಕಂತುಗಳಲ್ಲಿ ತೆಗೆದುಕೊಂಡು, ಆರೋಗ್ಯ ಕೆಡಿಸಿಕೊಂಡು ಬಹಳ ಕಷ್ಟ ಪಟ್ಟು ಇಲ್ಲಿಯ ವರೆಗೆ ಬಂದಿದ್ದೇನೆ. ನನಗೆ ಈ ವೃತ್ತಿಯಲ್ಲಿ ಮುಂದುವರೆಯಬೇಕು ಎಂಬ ಛಲ ಇದ್ದ ಕಾರಣಕ್ಕೆ ಇದು ಸಾಧ್ಯವಾಗಿದೆ. ಪತ್ರಕರ್ತರು ಟ್ರಾನ್ಸ್ ಫರ್ ಎಂದರೆ ಕಂಗಾಲಾಗಿ ಬಿಡುತ್ತಾರೆ. ಎಲ್ಲರಿಗೂ ಬೆಂಗಳೂರು ಬೇಕು, ಜಿಲ್ಲೆಗಳಲ್ಲಿ ಕೆಲಸ ಮಾಡುವುದು ಬೇಡ. ಬೆಂಗಳೂರಿನಲ್ಲಿದ್ದ ನನ್ನನ್ನು ಟ್ರಾನ್ಸ್ ಫರ್ ಮಾಡುತ್ತೇನೆ ಎಂದು ಹೇಳಿದಾಗ ‘ಎಲ್ಲಾದ್ರೂ ಮಾಡಿ, ಮರುಭೂಮಿಗಾದ್ರೂ ಮಾಡಿ ಹೋಗ್ತೀನಿ’ ಎಂದು ಹೇಳಿದ್ದೆ. ಮರುಭೂಮಿಯಲ್ಲಿ ಒಳ್ಳೆಯ ವರದಿಗಳನ್ನು ಮಾಡಲು ಅವಕಾಶಗಳಿರುತ್ತವೆ. ಇದರಿಂದಾಗಿಯೇ ನನಗೆ ದೆಹಲಿಯಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿತು. ಮಾನಸಿಕವಾಗಿ ಇಂತಹದ್ದೊಂದು ಸಿದ್ಧತೆ ಮಾಡಿಕೊಳ್ಳದಿದ್ದರೆ, ಅಧ್ಯಯನ ಮಾಡದಿದ್ದರೆ, ಸಮಾಜವನ್ನು ಎದುರಿಸುವುದನ್ನು ಕಲಿಯದಿದ್ದರೆ ಪತ್ರಕರ್ತರಾಗಲು ಕಷ್ಟವಾಗಬಹುದು. ನಿಮ್ಮಲ್ಲಿ ಮಹತ್ವಾಕಾಂಕ್ಷೆ ಇರಬೇಕು, ಜತೆಗೆ ಅದನ್ನು ಈಡೇರಿಸಿಕೊಳ್ಳಲು ಪ್ರಯತ್ನವನ್ನೂ ಮಾಡಬೇಕು.

ಈ ನಿಟ್ಟಿನಲ್ಲಿ ಸರ್ಕಾರಮತ್ತುವೃತ್ತಿಸಂಬಂಧಿಸಂಸ್ಥೆಗಳುಕೂಡಾ ಒಂದಿಷ್ಟು ಕೆಲಸ ಮಾಡಬೇಕಾಗುತ್ತದೆ. ನಾನು ಒಂದು ಉದಾಹರಣೆ ಕೊ746px-ChicagoDefender.svgಟ್ಟು ಮಾತು ಮುಗಿಸುತ್ತೇನೆ. 1978 ರಲ್ಲಿ ಅಮೆರಿಕನ್ ಸೊಸೈಟಿ ಆಪ್ ನ್ಯೂಸ್ ಎಡಿಟರ್ಸ್ (ASNE) ಅಲ್ಲಿನ ಮಾಧ್ಯಮಗಳಲ್ಲಿ ಕಪ್ಪು ಜನಾಂಗದವರ ಪ್ರಾತಿನಿಧ್ಯ ಎಷ್ಟಿದೆ ಎಂಬ ಬಗ್ಗೆ ಸಮೀಕ್ಷೆ ನಡೆಸಿತ್ತು. ಅಲ್ಲಿನ ಜನಸಂಖ್ಯೆಯಲ್ಲಿ ಕರಿಯರು ಶೇ.36 ರಷ್ಟಿದ್ದಾರೆ. ಆದರೆ ಮಾಧ್ಯಮದಲ್ಲಿ ಅವರು ಪ್ರಾತಿನಿಧ್ಯ ಕೇವಲ ಶೇ 4 ರಷ್ಟು ಮಾತ್ರ ಎಂದು ಸಮೀಕ್ಷೆಯಿಂದ ತಿಳಿದುಬಂದಿತ್ತು. 2000 ನೇ ವರ್ಷದಲ್ಲಿ ಅಮೆರಿಕದ ಮಾಧ್ಯಮ ಕ್ಷೇತ್ರದಲ್ಲಿ ಕರಿಯರ ಜನಸಂಖ್ಯೆ ಪ್ರಮಾಣಕ್ಕೆ ಅನುಗುಣವಾಗಿ ಇರುವಂತೆ ಮಾಡಬೇಕೆಂದು ASNE ನಿರ್ಧಾರಕ್ಕೆ ಬರುತ್ತದೆ. ಅಲ್ಲಿರುವ ಒಂದು ಸಾವಿರಕ್ಕೂ ಹೆಚ್ಚಿನ ಸರ್ಕ್ಯೂಲೇಶನ್ ಇರುವ 1446 ಪತ್ರಿಕೆಗಳಲ್ಲಿ 950 ಪತ್ರಿಕೆಗಳು ಅಸೋಸಿಯೇಷನ್ನಿನ ನಿರ್ಧಾರಕ್ಕೆ ಸಹಮತ ವ್ಯಕ್ತಪಡಿಸುತ್ತವೆ. ಅವರೇನೂ ಮೀಸಲಾತಿ ಕೊಡುವುದಿಲ್ಲ. ಅವರಿಗಾಗಿ ಉದ್ಯೋಗ ಮೇಳ ನಡೆಸುತ್ತಾರೆ, ತರಬೇತಿಕೊಡುತ್ತಾರೆ, ವಿದ್ಯಾರ್ಥಿ ವೇತನಗಳನ್ನು ಸ್ಥಾಪಿಸುತ್ತಾರೆ.ಇದನ್ನು ಮಾಡ್ತಾ, ಮಾಡ್ತಾ 2000 ಇಸವಿಗೆ ಅಲ್ಲಿಯ ಕರಿಯರ ಪ್ರಾತಿನಿಧ್ಯ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚದೆ ಇದ್ದರೂ ಅದು ಶೇ.13ಕ್ಕೆ ತಲುಪಿತ್ತು. ಇವತ್ತು ಅಮೇರಿಕಾದಲ್ಲಿ ದಲಿತರದ್ದೇ ಆದ ‘ಎಬೋನಿ’ ‘ಚಿಕಾಗೋ ಡಿಫೆಂಡರ್’ ಮೊದಲಾದ ಪತ್ರಿಕೆಗಳಿವೆ.

ಚೆನ್ನೈ ನಲ್ಲಿರುವ ‘ಏಷ್ಯನ್ಸ್ಕೂಲ್ಆಫ್ಜರ್ನಲಿಸಂ’ ದಲಿತರಿಗೆ ಸ್ಕಾಲರ್ಶಿಪ್ ಕೊಡ್ತಾರೆ. ಅದಕ್ಕೆ ಬೇಕಾದ ಅಭ್ಯರ್ಥಿಗಳೇ ಸಿಕ್ತಾ ಇಲ್ಲವಂತೆ. ನಮ್ಮಲ್ಲೂ ಕೂಡ ಕೊರತೆಗಳಿವೆ. ಆ ಮಟ್ಟದ ಎಂಟ್ರೆನ್ಸ್ ಪರೀಕ್ಷೆ ಎದುರಿಸಲು ಒಂದಿಷ್ಟು ತಯಾರಿಗಳು ಬೇಕಾಗುತ್ತವೆ. ದಲಿತ ಅಭ್ಯರ್ಥಿಗಳು ಸಿಗದೆ ಇದ್ದಾಗ ಆ ಸಂಸ್ಥೆ ದೊಡ್ಡ ಮಟ್ಟದಲ್ಲಿ ಪ್ರಚಾರ ನಡೆಸಿತ್ತು. ಇತ್ತೀಚೆಗೆ ಆ ಸಂಸ್ಥೆಯ ಸ್ಕಾಲರ್ ಶಿಫ್ ಪಡೆದು ಹಲವಾರು ದಲಿತರು ಜರ್ನಲಿಸ್ಟ್ ಗಳಾಗಿದ್ದಾರೆ. ಇಂತಹ ಪ್ರಯತ್ನ ಎಲ್ಲಾ ಕಡೆಗಳಿಂದಲೂ ನಡೆಯಬೇಕು. ಇದಕ್ಕೆ ಅಮೇರಿಕನ್ ಸೊಸೈಟಿ ಆಫ್ ನ್ಯೂಸ್ ಎಡಿಟರ್ಸ್ ಮಾಡಿದ ಕೆಲಸವನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಡಬೇಕು, ಪತ್ರಕರ್ತರ ಸಂಘಗಳು ಮಾಡ ಬೇಕು, ಪತ್ರಿಕೆಗಳೂ ಮಾಡಬೇಕು.

ನಮ್ಮ ಪತ್ರಕರ್ತರ ಸಂಘಟನೆಗಳುಲಕ್ಷಾಂತರ ರೂಪಾಯಿಕಲೆಕ್ಟ್ಮಾಡಿ, ವರ್ಷಕ್ಕೊಮ್ಮೆ ಸಮ್ಮೇಳನ ನಡೆಸಿ ಒಳ್ಳೆಯ ಊಟ ಹಾಕುವುದರಿಂದ ಒಳ್ಳೆಯ ಪತ್ರಕರ್ತರನ್ನು ರೂಪಿಸಲು ಸಾಧ್ಯವಿಲ್ಲ. ನೀವು ಬಸ್ ಪಾಸ್ ತೆಗೊಳ್ಳಿ, ಸೈಟ್ ತಗೊಳ್ಳಿ, ಪರವಾಗಿಲ್ಲ, ಒಬ್ಬರಿಗೆ ಒಂದು ಸೈಟ್ ಇರಬೇಕು. ನಾನು ಅದರ ಪರವಾಗಿ ಇದೀನಿ, ಆದರೆ ಕಸುಬುಗಾರಿಕೆಯನ್ನು ಪ್ರೋಫೆಷನಲಿಸಂ ಬೆಳೆಸಲು ಏನು ಮಾಡಿದಿರಿ ಎಂಬುದನ್ನು ಸರ್ಕಾರದ ನೆರವಿನಿಂದಲೇ ನಡೆ07-asiancollegeofjournalismಯುತ್ತಿರುವ ಮಾಧ್ಯಮ ಅಕಾಡೆಮಿ ಸೇರಿದಂತೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ.

ಅಮೇರಿಕಾದ ಸೊಸೈಟಿ ಆಪ್ ನ್ಯೂಸ್ ಎಡಿಟರ್ಸ್ಡಿ ಮಾಡಿದ ಸಮೀಕ್ಷೆಯನ್ನು ನಾವೇಕೆ ಮಾಡಲಾಗುತ್ತಿಲ್ಲ. ಕನ್ನಡದ ಮಾಧ್ಯಮಗಳಲ್ಲಿ ಅಹಿಂದ ವರ್ಗಕ್ಕೆ ಸೇರಿದವರು ಎಷ್ಟು ಪ್ರಮಾಣದಲ್ಲಿದ್ದಾರೆ ಎಂಬುದನ್ನು ಸರ್ವೇ ಮಾಡಬಹುದು. ವಿರೋಧ ಎದುರಾಗಬಹುದು. ಇದೊಂದು ಅಹಿಂದ ಸರಕಾರ ಅದಕ್ಕೆ ಈ ಸರ್ವೆ ಎಂಬ ಟೀಕೆಗಳು ಬರಬಹುದು. ನಾನು ನನ್ನ ಬ್ರೀಫ್ ಮೀರಿ ಮಾತನಾಡುತ್ತಿದ್ದೇನೆ.. ಎಂದು ನನಗೂ ಅನ್ನಿಸುತ್ತಿದೆ…ನಿಮಗೂ ಅನ್ನಿಸಬಹುದು. ಆದರೆ ನಾನು ಹೃದಯದಿಂದ ಮಾತನಾಡುತ್ತಿದ್ದೇನೆ. ನನ್ನ ಹೃದಯದ ಭಾರ ಇಳಿಸಲಿಕ್ಕೆ ಮಾತನಾಡುತ್ತಿದ್ದೇನೆ.

 

ಕೇವಲ ರಾಜಕೀಯದಲ್ಲಿ ಅಹಿಂದ ಬಂದರೆ ಅದು ಯಶಸ್ವಿಯಾಗುವುದಿಲ್ಲ. ಅದು ಮಾಧ್ಯಮ, ಉದ್ಯಮ,ಶಿಕ್ಷಣ, ಸಾಹಿತ್ಯ ಎಲ್ಲ ಕ್ಷೇತ್ರಗಳಲ್ಲಿಯೂ ಬರಬೇಕು. ಸಾಮಾಜಿಕ ನ್ಯಾಯ ಎಂದರೆ ಒಬ್ಬರಿಂದ ಕಿತ್ತುಕೊಂಡು ಇನ್ನೊಬ್ಬರಿಗೆ ಕೊಡುವುದಲ್ಲ. ಎಲ್ಲರಿಗೂ ನ್ಯಾಯವನ್ನು ಕೊಡುವಂತಹುದು. ಜನಸಂಖ್ಯೆಗನುಗುಣವಾದ ಪ್ರಾತಿನಿಧ್ಯ ಎಲ್ಲರಿಗೂ ಸಿಗಬೇಕು. ಕರ್ನಾಟಕದಲ್ಲಿ ಸಾಮಾಜಿಕ ನ್ಯಾಯಕ್ಕೆ ಬಹಳ ಧೀರ್ಘವಾದ ಪರಂಪರೆ ಇದೆ. ಸಾಮಾಜಿಕ ನ್ಯಾಯದ ಮೊದಲ ಚಳುವಳಿಕಾರ ಬಸವಣ್ಣ. ಬಸವಣ್ಣನಿಂದ ಪ್ರಾರಂಭವಾದರೂ ಅದರ ನಂತರ ದೇವರಾಜ ಅರಸು, ನಾಲ್ವಡಿ ಕೃಷ್ಣರಾಜ ಒಡೆಯರ್, ಈ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದ್ದಾರೆ.

ಆದರೆ ಕೇವಲ ರಾಜಕೀಯದಲ್ಲಿ ಮಾತ್ರ ಸಾಮಾಜಿಕ ನ್ಯಾಯ ಅಂತ ನೀವು ತೀರ್ಮಾನಿಸಿಬಿಟ್ಟರೆ, ಸಾಮಾಜಿಕ ನ್ಯಾಯವನ್ನು ಅಲ್ಲಿಯೂ ಅನುಷ್ಠಾನಕ್ಕೆ ಬರಲಿಕ್ಕೆ ಈ ವ್ಯವಸ್ಥೆ ಬಿಡುವುದಿಲ್ಲ. ಬಸವಲಿಂಗಪ್ಪ ಅವರು ಕನ್ನಡ ಸಾಹಿತ್ಯವನ್ನು ಬೂಸಾ ಅಂತ ಹೇಳದೆ ಇದ್ದಿದ್ದರೆ ಇವತ್ತು ಕನ್ನಡ ಸಾಹಿತ್ಯ ಈ ಪ್ರಮಾಣದಲ್ಲಿ, ಆಳ-ಅಗಲಕ್ಕೆ ಬೇರು-ಬಿಳಲು ಬಿಟ್ಟು ಬೆಳೆಯುತ್ತಿರಲಿಲ್ಲ ಎನ್ನುವುದು ಎಲ್ಲರೂ ಒಪ್ಪಿಕೊಳ್ಳಲೇಬೇಕಾದ ವಾಸ್ತವ. ಅವರು ಆ ರೀತಿ ಹೇಳಿದಾಗ ಇಡೀ ಕನ್ನಡ ಸಾಹಿತ್ಯಲೋಕದ ಬರಹಗಾರರು ಮತ್ತು ಓದುಗರು ಬೆಚ್ಚಿಬಿದ್ದಿದ್ದರು. ಅಂತಹದ್ದೊಂದು ಶಾಕ್ ‍ಟ್ರೀಟ್ ಮೆಂಟ್ ಮಾಧ್ಯಮ ಕ್ಷೇತ್ರಕ್ಕೂ ಅಗತ್ಯ ಇದೆ. ಮಾಧ್ಯಮದಲ್ಲಿ ಸಮಾಜದ ಪ್ರತಿಬಿಂಬ ಕಾಣಬೇಕು. ಅದರಲ್ಲಿ ಒಡಕಲು ಬಿಂಬ ಕಾಣಬಾರದು. ಪರಿಪೂರ್ಣ ಚಿತ್ರ ಕಾಣಬೇಕು. ಅದು ನಮಗೆ ಕಾಣ್ತಾ ಇದೆಯಾ? ಎಂಬುದು ಇವತ್ತಿನ ಪ್ರಶ್ನೆ. ಏಕೆಂದರೆ ಮಾಧ್ಯಮವಾಗಲಿ, ಸಾಹಿತ್ಯವಾಗಲಿ, ರಾಜಕೀಯವಾಗಲಿ ಅಲ್ಲಿ ಎಲ್ಲಾ ವರ್ಗದ, ಎಲ್ಲಾ ಜಾತಿಯ ಜನರು ಭಾಗವಹಿಸದೇ ಇದ್ದರೆ, ಅದರಲ್ಲಿ ಎಲ್ಲಾ ಲೋಕದ ಅನುಭವಗಳು ಅಭಿವ್ಯಕ್ತಿಗೊಳ್ಳದೆ ಇದ್ದರೆ, ಅದು ಅಪೂರ್ಣವಾಗುತ್ತದೆ. ಅದು ಪಾರ್ಶಿಯಲ್ ಆಗಿರುತ್ತದೆ. ಬಯಾಸ್ಡ್ ಅಗಿರುತ್ತದೆ.

 

ಎಲ್ಲಾ ಕ್ಷೇತ್ರಗಳಲ್ಲಿ ಎಲ್ಲಜಾತಿಗಳ, ವರ್ಗಗಳ ಪ್ರಾತಿನಿಧ್ಯವಿರಬೇಕು. ಅವರವರ ಜನಸಂಖ್ಯೆಗನುಗುಣವಾಗಿ ಪ್ರಾತಿನಿಧ್ಯವಿರಬೇಕು. ಅದು ಅಸ್ತವ್ಯಸ್ತವಾದರೆ ಎಲ್ಲವೂ ಅಸ್ತವ್ಯಸ್ತವಾಗುತ್ತದೆ, ಮಾಧ್ಯಮ ಕೂಡಾ . ನಮ್ಮ ರಾಜಕೀಯ ಧುರೀಣರು ಪ್ರಜ್ಞಾವಂತರಿದ್ದಾರೆ ಅವರು ಸಾಮಾಜಿಕ ನ್ಯಾಯವನ್ನು ವಿರೋಧಿಸಲಾರರು. ಏಕೆಂದರೆ ಸಾಮಾಜಿಕ ನ್ಯಾಯ ಎಂಬುದು ಸಂವಿಧಾನದ ಆಶಯ. ನೀವು ಆ ನ್ಯಾಯವನ್ನು ಕೊಡದೆ ಇದ್ದರೆ ಸಂವಿಧಾನದ ಆಶಯಕ್ಕೆ ವಿರುದ್ದವಾಗಿ ನಡೆಯುತ್ತಿದ್ದೀರಿ ಎಂದೇ ಅರ್ಥ. ಬಹಳ ಕಷ್ಟ ಇದೆ. ನನ್ನ ಕಿರಿಯ ದಲಿತ ಸ್ನೇಹಿತ ಲಿಂಗರಾಜ್ ಅಂತ ಇಲ್ಲಿದ್ದಾರೆ. ಈತ ಹಟ್ಟಿ ಗೋಲ್ಡ್ ಮೈನ್ ನ ಕಾರ್ಮಿಕರ ಮಗ. ನಾಲ್ಕು ವರ್ಷದ ಹಿಂದೆ ನನ್ನ ಆಫೀಸ್ ಗೆ ಬಂದಿದ್ದ. ಅವನು ಡಿಗ್ರಿ ಮಾಡಿದ್ದ, ಪೋಸ್ಟ್ ಗ್ರಾಜುಯೇಶನ್ ಮುಗಿಸಿದ್ದ. ಅವನು ಪಿ.ಹೆಚ್.ಡಿ ಮಾಡಲಿಕ್ಕೆ ರಿಜಿಸ್ಟರ್ ಮಾಡಿದ್ರೆ ಅವನಿಗೆ ಗೈಡ್ ಮಾಡಲಿಕ್ಕೆ ಯಾರೂ ಒಪ್ತಾ ಇಲ್ಲ. ಇದು ಅವನೊಬ್ಬನ ಕಥೆಯಲ್ಲ. ಈ ಸಮುದಾಯದ ಅನೇಕ ವಿದ್ಯಾರ್ಥಿಗಳು, ಹುಡುಗರು ನನ್ನ ಸಂಪರ್ಕದಲ್ಲಿದ್ದಾರೆ. ಇಂತಹ ಸಂಘಟನೆಗಳ ಬೆಂಬಲ ಅವರಿಗೆ ಬೇಕಾಗಿದೆ.

 

ಸರ್ಕಾರವೇ ಮುಂದೆ ನಿಂತು ಎಲ್ಲವನ್ನೂ ಮಾಡಲಾಗುವುದಿಲ್ಲ. ಇಲ್ಲಿರುವ ಹಿರಿಯರು, ಸಮುದಾಯದಲ್ಲಿರುವ ಪ್ರಜ್ಞಾವಂತರು ಎಲ್ಲಾ ಜಾತಿ, ವರ್ಗದ ಜನ ಇಂತಹವರ ಬೆಂಬಲಕ್ಕೆ ನಿಂತು ಬೆಳೆಸಬೇಕಾಗಿದೆ. ಆ ಕೆಲಸವನ್ನು ಮಾಧ್ಯಮ ಅಕಾಡೆಮಿ ಮತ್ತು ಪತ್ರಕರ್ತರ ಸಂಘಟನೆಗಳು ಮಾಡುತ್ತದೆ. ರಾಜಕೀಯ ಧುರೀಣರು ಇದಕ್ಕೆ ಒತ್ತಾಸೆಯಾಗಿ ನಿಲ್ಲುತ್ತಾರೆ ಎಂಬ ಆಶಯದೊಂದಿಗೆ ಮಾತುಗಳನ್ನು ಮುಗಿಸುತ್ತೇನೆ.