Category Archives: ಆರ್ಥಿಕ

ಆರ್ಥಿಕ ವಿಷಯಗಳಿಗೆ ಸಂಬಂಧಿಸಿದ ಲೇಖನಗಳು ಮತ್ತು ವಿಡಿಯೋಗಳು…

ಉಮರ್ ಖಾಲಿದ್ ಭಾಷಣದ ಬರಹ ರೂಪ

Naveen Soorinje


-ಅನುವಾದ : ನವೀನ್ ಸೂರಿಂಜೆ


 

 

ಲಾಲ್ ಸಲಾಂ, ಲಾಲ್ ಸಲಾಂ, ವೀರ್ ಸೆಲ್ಯೂಟ್, ರೆಡ್ ಸೆಲ್ಯೂಟ್, ರೆಡ್ ಸೆಲ್ಯೂಟ್ ಟು ಕಾಮ್ರೇಡ್ ಎಂದು ವಿದ್ಯಾರ್ಥಿಗಳ ಭಾರೀ ಉದ್ಘೋಷದ ಜೊತೆ ದೇಶದ್ರೋಹಿ ಆರೋಪ ಹೊತ್ತ ಜೆ ಎನ್ ಯು ವಿದ್ಯಾರ್ಥಿ ಉಮ್ಮರ್ ಖಾಲಿದ್ ಮಾತನಾಡುತ್ತಿದ್ದಾರೆ. ಕೇಳಿ.

ಸ್ನೇಹಿತರೇ,

ನನ್ನ ಹೆಸರು ಉಮರ್ ಖಾಲಿದ್. ಆದರೆ ನಾನು ಭಯೋತ್ಪಾದಕ ಅಲ್ಲ.

ಮೊದಲನೆಯದಾಗಿ ಈ ಹೋರಾಟದಲ್ಲಿ ಭಾಗವಹಿಸಿದ ಮತ್ತು ವಿದ್ಯಾರ್ಥಿಗಳಾದ ನಮಗೆ ಬೆಂಬಲವನ್ನು ನೀಡಿದ ಪ್ರತಿಯೊಬ್ಬ ಜೆಎನ್ ಯು ಪ್ರಾಧ್ಯಾಪಕರಿಗೆ ಧನ್ಯವಾದ ಹೇಳ ಬಯಸುತ್ತೇನೆ. ಈ ಹೋರಾಟ ಕೇವಲ ನಮ್ಮ ನಾಲ್ಕೈದು ಜನರದ್ದಾಗಿರಲಿಲ್ಲ. ಈ ಹೋರಾಟ ನಮ್ಮೆಲ್ಲರ ಹೋರಾಟವಾಗಿದೆ. ಈ ಹೋರಾಟ ಕೇವಲ ಈ ಜೆಎನ್ ಯು ವಿಶ್ವವಿದ್ಯಾನಿಲಯದ ಹೋರಾಟ ಮಾತ್ರವೇ ಇಲ್ಲ, ಇದೊಂದು ದೇಶದ ಎಲ್ಲಾ ವಿಶ್ವವಿದ್ಯಾನಿಲಯಗಳ ಹೋರಾಟವಾಗಿದೆ. ಅಷ್ಟಕ್ಕೇ ಸೀಮಿತವಾಗದೆ ಇದು ಇಡೀಯ ಸಮಾಜದ ಹೋರಾಟವಾಗಿದೆ. ಮುಂದಿನ ಪೀಳಿಗೆಯ ಸಮಾಜ ಹೇಗಿರಬೇಕೆಂಬುದರ ಸೂಚಕ ಈ ಹೋರಾಟ.

ಗೆಳೆಯರೇ

ಈ ಕೆಲ ದಿನಗಳಲ್ಲಿ ನನ್ನ ಬಗ್ಗೆ ನನಗೇ ಗೊತ್ತಿಲ್ಲದ ಹಲವಾರು ವಿಷಯಗಳನ್ನು ತಿಳಿದುಕೊಂಡೆ. ನಾನು ಎರಡು ಬಾರಿ ಪಾಕಿಸ್ತಾನ ಹೋಗಿ ಬಂದಿದ್ದೇನೆ ಎಂದು ನನಗೇ ಇತ್ತಿಚೆಗೆೆ ತಿಳಿಯಿತು. ನನ್ನ ಬಳಿ ಪಾಸ್ ಪೋರ್ಟೇ ಇಲ್ಲ. ಹಾಗಿದ್ದರೂ ನಾನು ಪಾಕಿಸ್ತಾನ ಹೋಗಿ ಬಂದೆ ಎಂಬುದು ನನಗೇ ಆಶ್ಚರ್ಯ ತರುವ ವಿಚಾರ. ನನಗೆ ಆನಂತರ ಮತ್ತೊಂದು ವಿಚಾರವೂ ತಿಳಿಯಿತು. ನಾನು ಮಾಸ್ಟರ್ ಮೈಂಡ್ ಎಂದು. ಜೆಎನ್ ಯು ವಿದ್ಯಾರ್ಥಿಗಳೇ ವಂಡರಫುಲ್ ಮೈಂಡ್ ಇರುವವರು. ಅವರಲ್ಲೇ ನಾನು ಮಾಸ್ಟರ್ ಮೈಂಡ್. ಇದು ತುಂಬಾ ಚೆನ್ನಾಗಿದೆ. ನಾನು ಇಂತಹ ಕಾರ್ಯಕ್ರಮವನ್ನು ದೇಶದ 70 ರಿಂದ 80 ವಿಶ್ವವಿದ್ಯಾನಿಲಯಗಳಲ್ಲಿ ಆಯೋಜಿಸಲು ಪ್ಲ್ಯಾನ್ ಮಾಡಿದ್ದೆನಂತೆ. ನಿಜವಾಗಲೂ ನನ್ನ ಲೀಡರ್ ಶಿಫ್ ಇಷ್ಟೊಂದು ವಿಸ್ತಾರವಾಗಿ ಬೆಳೆದಿದ್ದು ನನಗೇ ಗೊತ್ತಿರಲಿಲ್ಲ. ಈ ಕಾರ್ಯಕ್ರಮ ಆಯೋಜಿಸಲು ನಾವು ನಾಲ್ಕೈದು ತಿಂಗಳು ತಯಾರಿ ಮಾಡಿದ್ದೆವಂತೆ. ಜೆಎನ್ ಯು ನಲ್ಲಿ ಒಂದೊಂದು ಕಾರ್ಯಕ್ರಮ ಸಂಘಟಿಸಲು ಐದು-ಹತ್ತು ತಿಂಗಳು ಪಡೆದುಕೊಂಡರೆ ಜೆಎನ್ ಯು ಕತೆ ಏನಾಗಬಹುದು? ಅದೂ ಇರಲಿ. ನಾನು ಕೆಲ ದಿನಗಳಿಂದ 800 ಕರೆಗಳನ್ನು ಮಾಡಿದ್ದೇನಂತೆ. ಈ ಮಾಧ್ಯಮಗಳಿಗೆ ಯಾವ ನಾಚಿಕೆಯೂ ಇಲ್ಲ. ಸುದ್ದಿ ಪ್ರಸಾರಕ್ಕೆ ಮುನ್ನ ದಾಖಲೆಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ. ಯಾವುದೇ ದಾಖಲೆಯಿಲ್ಲದೆ, ಸತ್ಯಾಂಶವಿಲ್ಲದ ಸುದ್ದಿಗಳನ್ನು ಮಾಡಿದ್ರು. ನನಗೆ ಜೈಶ್ ಎ ಮಹಮ್ಮದ್ ಸಂಘಟನೆಯ ಕೈವಾಡ ಇದೆ ಎಂದು ಹೇಳಿದ್ರು. ಅದಕ್ಕೂ ಯಾವುದೇ ದಾಖಲೆ ಇಲ್ಲ. ನನಗೆ ನಿಜಕ್ಕೂ ಆಗ ನಗು ಬಂದಿತ್ತು. ನಿಜವಾಗಿಯೂ ಆ ಸಂಧರ್ಭದಲ್ಲಿ ಜೈಶ್ ಎ ಮಹಮ್ಮದ್ ಸಂಘಟನೆಯವರು ಪ್ರತಿಭಟನೆ ಮಾಡಬೇಕಿತ್ತು. ನನ್ನಂತವನನ್ನು ಅವರ ಸಂಘಟನೆಯವನು ಎಂದು ಹೇಳಿದ್ದಕ್ಕಾದರೂ ಅವರು ಪ್ರತಿಭಟಿಸಬೇಕಿತ್ತು. ಕೊನೆಗೆ ಕೇಂದ್ರ ಸರಕಾರದ ಗುಪ್ತಚರ ಇಲಾಖೆಯೇ ಸ್ಪಷ್ಟಪಡಿಸಿ, ಜೈಶ್ ಎ ಮಹಮ್ಮದ್ ಸಂಘಟನೆಗೂ ಈ ಹೋರಾಟಕ್ಕೂ ಸಂಬಂಧ ಇಲ್ಲ ಎಂದು ಹೇಳಿದರೂ ಮಾಧ್ಯಮಗಳು ಕ್ಷಮೆ ಕೇಳಲಿಲ್ಲ. ಈ ಮೀಡಿಯಾಗಳು ನಮ್ಮನ್ನು ಮೂರ್ಖರನ್ನಾಗಿಸುತ್ತಿವೆ. ಮೀಡಿಯಾಗಳು ಪೂರ್ವನಿರ್ಧರಿತವಾಗಿ ನಮ್ಮನ್ನು ಮಿಡಿಯಾ ಟ್ರಯಲ್ ಗೆ ಒಳಪಡಿಸಿದ್ವು. ಯಾವ ನಾಚಿಕೆಯೂ ಇಲ್ಲದೆ ವರ್ತಿಸಿದ್ರು.

ಮಾಧ್ಯಮಗಳ ಈ ರೀತಿಯ ವರ್ತನೆ ಇದೇ ಮೊದಲಲ್ಲ. ಅವುಗಳು ಏನು ಮಾಡಿದ್ರೂ ನಡೀತದೆ ಅಂದುಕೊಂಡಿದ್ದಾರೆ. ಮುಸ್ಲೀಮರನ್ನು ಭಯೋತ್ಪಾದಕರನ್ನಾಗಿಯೂ, ಆದಿವಾಸಿಗಳನ್ನು ನಕ್ಸಲರನ್ನಾಗಿಯೂ ಚಿತ್ರಿಸಿ ಅವರಿಗೆ ಅಭ್ಯಾಸವಾಗಿ ಬಿಟ್ಟಿದೆ. ಆದರೆ ಈ ಬಾರಿ ನೀವು ತಪ್ಪು ಜನರಿಗೆ ತಗಳ್ಳಾಕ್ಕೊಂಡಿದ್ದೀರಿ. ನಾವು ಪ್ರತೀ ಚಾನೆಲ್ ಗಳು ನಮ್ಮ ಬಗ್ಗೆ ಮಾಡಿದ ಸುದ್ದಿಗೆ ವಿವರಣೆ ನೀಡುವಂತಹ ಸಂಧರ್ಭ ಸೃಷ್ಠಿ ಮಾಡುತ್ತೇವೆ.

ಈ ಪ್ರಕರಣ ಈ ರೀತಿ ಸುದ್ದಿಯಾದ ನಂತರ ನಂತರ ನನ್ನ ತಂಗಿ, ತಂದೆಗೆ ಬೆದರಿಕೆ ಒಡ್ಡಲಾಯ್ತು. ತಂಗಿಗೆ ಅತ್ಯಾಚಾರದ ಬೆದರಿಕೆ ಒಡ್ಡಲಾಯ್ತು. ಕೊಲೆ ಬೆದರಿಕೆಯನ್ನೂ ನೀಡಲಾಯ್ತು. ಈ ಜನಗಳು ಏನೂ ಮಾಡಲೂ ಹೇಸದವರು. ತಂಗಿಗೆ ಅತ್ಯಾಚಾರದ ಬೆದರಿಕೆ ನೀಡಿದ ಈ ದೇಶಪ್ರೇಮಿಗಳ ಕಂದಮಾಲ್ ಘಟನೆ ಆ ಸಂಧರ್ಭ ನನಗೆ ನೆನಪಿಗೆ ಬಂದಿತ್ತು. ನಿಮಗೂ ನೆನಪಿರಬಹುದು. ಕಂದಮಾಲ್ ನಲ್ಲಿ ಭಜರಂಗದಳದವರು ಕ್ರಿಶ್ಚಿಯನ್ ಸನ್ಯಾಸಿನಿ ಮೇಲೆ ಅತ್ಯಾಚಾರ ಮಾಡಿ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದರು. ಆದುದರಿಂದ ನನಗೆ ತಂಗಿಯ ಬಗ್ಗೆ ಆತಂಕ ಉಂಟಾಗಿತ್ತು. ಇವರು ಅತ್ಯಾಚಾರ ಮಾಡಿಯೂ ಭಾರತ ಮಾತೆಗೆ ಜೈ ಎನ್ನುವವರು. ಇಂತಹ ಮಾತೆ ನಮಗೆ ಬೇಕಾಗಿಲ್ಲ. ಇಂತಹ ಮಾತೆ ನಮ್ಮದಲ್ಲ.

ನನ್ನ ತಂದೆಯನ್ನು ಕೆಲವು ಮಾಧ್ಯಮಗಳು ಮಾತನಾಡಿಸಿದ್ವು. ಅದನ್ನು ಸಂದರ್ಶನ ಅನ್ನೋದಕ್ಕಿಂತ ಮಾಧ್ಯಮಗಳ ವಿಚಾರಣೆ ಅನ್ನಬಹುದು. ನಮ್ಮಲ್ಲಿ ಕೆಲವು ಪತ್ರಕರ್ತರಿದ್ದಾರೆ. ಟೈಮ್ಸ್ ನೌ ನಲ್ಲಿ ಒಬ್ಬ ಪತ್ರಕರ್ತ ಇದ್ದಾರೆ. ಅವರ ಹೆಸರು ಹೇಳಲು ನಾನು ಬಯಸೋದಿಲ್ಲ. ಈ ಪತ್ರಕರ್ತರಿಗೆಲ್ಲಾ ನಮ್ಮ ವಿಚಾರದಲ್ಲಿ ಇಷ್ಟೊಂದು ಕೋಪ ಯಾಕೆ ಎಲ್ಲಿಂದ ಬರುತ್ತದೆ ಎಂಬುದೇ ಗೊತ್ತಾಗ್ತಾ ಇಲ್ಲ. ಆ ರೀತಿಯಲ್ಲಿ ಮಾಧ್ಯಮಗಳ ಕೋರ್ಟ್ ನಡೆಸಿದ್ವು.

ಒಂದು ವಿಷಯವನ್ನು ನಾನಿಲ್ಲಿ ಹೇಳಲೇ ಬೇಕು. ಕಳೆದ ಆರು ವರ್ಷಗಳಿಂದ ಈ ಕ್ಯಾಂಪಸ್ಸಿನಲ್ಲಿ ವಿದ್ಯಾರ್ಥಿ ರಾಜಕಾರಣವನ್ನು ಮಾಡಿಕೊಂಡು ಬಂದಿದ್ದೇನೆ. ನಾನು ಇಲ್ಲಿಯವರೆಗೂ ನನ್ನನ್ನು ನಾನು ಮುಸ್ಲೀಮನೆಂದು ಅಂದುಕೊಂಡಿಲ್ಲ. ಈ ಸಮಾಜದಲ್ಲಿ ಮುಸ್ಲೀಮರು ಮಾತ್ರ ದಮನಕ್ಕೊಳಗಾಗ್ತಿಲ್ಲ. ಆದಿವಾಸಿಗಳು, ದಲಿತರು ಈ ಸಮಾಜದ ಶೋಷಿತರಾಗಿದ್ದಾರೆ. ನಾನು ಇವರೆಲ್ಲರ ಪರವಾಗಿ ಹೋರಾಟ ಮಾಡಿದ್ದೇನೆ. ದಲಿತರು, ಆದಿವಾಸಿಗಳು, ಶೋಷಿತರ ಪರವಾಗಿ ಮಾತನಾಡಿದಷ್ಟೇ ಶೋಷಿತ ಮುಸ್ಲೀಮರ ಪರವಾಗಿ ಮಾತನಾಡಿದ್ದೇನೆ. ಆದರೆ ಕಳೆದ ಹತ್ತು ದಿನಗಳಿಂದ ನಾನು ಮುಸ್ಲೀಂ ಎಂದು ನನಗೆ ಗೊತ್ತಾಯಿತು. ಈ ಮಾಧ್ಯಮಗಳಿಗೆ ನಾಚಿಕೆಯಾಗಬೇಕು.

ನಾನು ಪಾಕಿಸ್ತಾನಿ ಏಂಜೆಂಟ್ ಅಂತ ಹೇಳಿದ್ರು. ಈ ಸಂಧರ್ಭದಲ್ಲಿ ನನಗೆ ಒಂದು ಶಾಹಿರಿ ನೆನಪಾಗ್ತಿದೆ.

ಹಿಂದೂಸ್ತಾನವೂ ನನ್ನದೇ,
ಪಾಕಿಸ್ತಾನವೂ ನನ್ನದೇ….
ಹಿಂದೂಸ್ತಾನ ಪಾಕಿಸ್ತಾನದಲ್ಲಿ ಅಮೇರಿಕಾ ಟೆಂಟ್ ಹಾಕಲು ಬಯಸುತ್ತಿದೆ.
ನೀವೆಲ್ಲರೂ ಆ ಅಮೇರಿಕಾದ ಏಜೆಂಟರು.

ನಮ್ಮ ಸರಕಾರ ಕೂಡಾ ಅಮೇರಿಕಾದ ಏಜೆಂಟರಂತೆ ವರ್ತಿಸುತ್ತಿದೆ. ಮಲ್ಟಿ ನ್ಯಾಶನಲ್ ಕಂಪನಿಗಳಿಗೆ ಜನ ಪೂರೈಸೋ ಕೆಲಸವನ್ನು ಸರಕಾರ ಮಾಡುತ್ತಿದೆ. ಅದಕ್ಕಾಗಿ ಶಿಕ್ಷಣವನ್ನು ಸರಕಾರ ಮಾರಿದೆ. ಅದನ್ನು ಪ್ರಶ್ನಿಸಿದ್ರೆ ನಾವು ದೇಶದ್ರೋಹಿಗಳಾಗ್ತಿವೆ. ಈಗ ನಾವು ನೀವೆಲ್ಲಾ ದೇಶದ್ರೋಹಿಗಳು. ಜನರನ್ನು ಅಗಾಧವಾಗಿ ಪ್ರೀತಿಸುವ ನಾವುಗಳು ದೇಶದ್ರೋಹಿಗಳು. ನಮ್ಮ ಪ್ರೀತಿಗೆ ಗಡಿಗಳು ಇಲ್ಲ. ಈ ದೇಶ ಮಾತ್ರ ಅಲ್ಲ. ಇಡೀನ ಜಗತ್ತಿನ ಜನರನ್ನು ನಾವು ಪ್ರೀತಿಸುತ್ತೇವೆ. ನಾನು ಈ ನ್ಯಾಶನಿಲಿಸಂ ಅನ್ನು ನಂಬೋದಿಲ್ಲ. ಭಾರತದ ನ್ಯಾಶನಲಿಸಂ ಮಾತ್ರವಲ್ಲ. ಅಮೇರಿಕಾ ಸೇರಿದಂತೆ ಯಾವುದೇ ದೇಶದ ನ್ಯಾಶನಲಿಸಂ ಅನ್ನು ನಾನು ಒಪ್ಪೋದಿಲ್ಲ. ಇಡೀ ವಿಶ್ವವೇ ನಮ್ಮದು. ವಿಶ್ವದ ಎಲ್ಲರೂ ನಮ್ಮವರು.

ನಾವು ಈ ಜನರಿಗೆಲ್ಲಾ ಹೆದರಬೇಕಿಲ್ಲ. ಅವರ ಬಳಿ ಬಹುಮತ ಇರಬಹುದು. ಮೀಡಿಯಾಗಳೂ, ಪೊಲೀಸರೂ ಇರಬಹುದು. ಆದರೆ ಅವರು ಹೆದರುಪುಕ್ಕಲರು. ಅವರು ನಮ್ಮ ಜನರಿಗೆ ಹೆದರುತ್ತಾರೆ. ಆವರು ನಮ್ಮ ಹೋರಾಟಗಳಿಗೆ ಹೆದರುತ್ತಾರೆ. ಅದಕ್ಕಾಗಿಯೇ ನೀವು ಜನರ ಪರವಾಗಿ ಯೋಚಿಸಲು ಶುರು ಮಾಡಿದ್ರೆ ನಿಮ್ಮನ್ನು ದೇಶದ್ರೋಹಿ ಎನ್ನುವ ಮೂಲಕ ಹೆದರಿಸಲಾಗ್ತಿದೆ.

ನಮ್ಮ ಜನರಿಗೆ ಹೆದರಿಯೇ ಈ ಜನರು ಹಲವು ವಿಶ್ವವಿದ್ಯಾನಿಲಯಗಳಿಗೆ ತೆರಳಿ ಗಲಭೆ ಎಬ್ಬಿಸಲು ಯಶಸ್ವಿಯಾದ್ರು. ಆದರೆ ಈ ವಿದ್ವವಿದ್ಯಾಲಯಕ್ಕೆ ಮಾತ್ರ ತಪ್ಪಾಗಿ ಬಂದ್ರಿ. ಇಲ್ಲಿ ನಿಮ್ಮ ಆಟ ನಡೆಯಲ್ಲ.

ಹೈದರಾಬಾದ್ ವಿಶ್ವವಿದ್ಯಾನಿಲಯದಲ್ಲಿ ರೋಹಿತ್ ವೆಮೂಲ ಹತ್ಯೆಯಾಯ್ತು. ಬನರಾಸ್ ವಿಶ್ವವಿದ್ಯಾನಿಲಯದಲ್ಲಿ ಸಂದೀಪ್ ಪಾಂಡೆ ಮೇಲೆ ದೌರ್ಜನ್ಯವಾಯಿತು. ಅ ಸಂಧರ್ಭದಲ್ಲಿ ನಡೆದ ಪ್ರತೀ ಹೋರಾಟದಲ್ಲಿ ಜೆ ಎನ್ ಯು ವಿದ್ಯಾರ್ಥಿಗಳು ಹೆಗಲು ಕೊಟ್ಟು ಸಾಥ್ ನೀಡಿದ್ದೇವೆ. ಅದು ನಮ್ಮ ಜವಾಬ್ದಾರಿ ಕೂಡಾ. ನೀವೇನಾದ್ರೂ ಜೆಎನ್ ಯು ವನ್ನು ಮುಗಿಸುತ್ತೇವೆ ಎಂದು ಒಂದಿರೋದಾದ್ರೆ ಒಂದಂತೂ ತಿಳಿದುಕೊಳ್ಳಿ. ಈ ಹಿಂದೆಯೂ ಈ ರೀತಿ ಯೋಚನೆ ಇಟ್ಟುಕೊಂಡು ತುಂಬಾ ಜನ ಇಲ್ಲಿಗೆ ಬಂದಿದ್ದರು. ಅಂತಹ ಹಲವು ಪ್ರಯತ್ನಗಳಾಗಿತ್ತು. ಅದನ್ನು ಅಷ್ಟೇ ನಾಜೂಕಾಗಿ ನಾವು ನಿಭಾಯಿಸಿ ನಾವು ಗೆದ್ದಿದ್ದೇವೆ.

ಬಹುಶಃ ನೀವು ಇಂದಿರಾಗಾಂಧಿಯನ್ನು ಮರೆತಿದ್ದೀರಿ. ತುರ್ತು ಪರಿಸ್ಥಿತಿ ನಂತರ ಅವರು ಜೆ ಎನ್ ಯು ಕಡೆಗೆ ಬಂದಿದ್ದರು. ನಾವು ಅವರನ್ನು ಬರಲು ಬಿಟ್ಟಿರಲಿಲ್ಲ. ನಂತರ ನೀವು ಮನಮೋಹನ ಸಿಂಗ್ ರನ್ನೂ ಮರೆತಿದ್ದೀರಿ. ದೇಶವನ್ನು ಮಾರಾಟ ಮಾಡಲು ಹೊರಟ ಮನಮೋಹನ ಸಿಂಗ್ ಇಲ್ಲಿಗೆ ಬಂದಾಗ ಅವರಿಗೂ ಕಪ್ಪು ಬಾವುಟ ತೋರಿಸಿದ್ವಿ. ನಂತರ ಚಿದಂಬರಂ ಬಂದ್ರು. ಆಗ ಇಲ್ಲಿನ ವಿದ್ಯಾರ್ಥಿಗಳು ಚಿದಂಬರಂ ಅನ್ನು ಸ್ವಾಗತ ಮಾಡ್ತಾರೆ ಅಂದುಕೊಂಡಿದ್ರು. ಆದರೆ ಇಲ್ಲಿನ ವಿದ್ಯಾರ್ಥಿಗಳು ಯಾರ ಜೊತೆ ಇರ್ತೀವಿ ಎಂಬುದನ್ನು ತೋರಿಸಿಕೊಟ್ಟರು. ಇಲ್ಲಿನ ವಿದ್ಯಾರ್ಥಿಗಳು ಯಾವತ್ತೂ ಶೋಷಿತ ಜನರ ಜೊತೆ ಇರ್ತಾರೆ. ಈಗಿನ ಸರಕಾರ ನಾವು ಹೆದರುತ್ತೇವೆಯೋ ಎಂದು ಪರೀಕ್ಷೆ ಮಾಡುತ್ತಿದೆ. ನಾವು ಹೆದರುವುದಿಲ್ಲ. ನಾವು ಸಂಘರ್ಷ ಮಾಡುತ್ತೇವೆ.

ಗೆಳೆಯರೇ,

ನಾವು ಈ ಜನಗಳಿಗೆಲ್ಲಾ ಹೆದರುವ ಅಗತ್ಯವೇ ಇಲ್ಲ. ಈ ಕ್ಯಾಂಪಸ್ಸಿನಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಎಂಬ ವಾನರ ಸೇನೆ ಇದೆ. ಇಲ್ಲೂ ಕೂಡಾ ಹೈದರಾಬಾದ್ ನ ದತ್ತಾತ್ರೆಯ ರೀತಿಯವರು ಇದ್ದಾರೆ. ಆದರೆ ಇಲ್ಲಿ ಮತ್ತೊಬ್ಬ ರೋಹಿತನನ್ನು ನಾವು ನಿಮ್ಮ ಕೈಗೆ ಕೊಡೋದಿಲ್ಲ ಎಂದು ಸ್ಪಷ್ಟಪಡಿಸುತ್ತೇವೆ. ನಾವು ಸಂಘರ್ಷಕ್ಕೆ ಸಿದ್ದರಿದ್ದೇವೆ. ರೋಹಿತನ ಸಾವಿಗೆ ಉತ್ತರ ಕೊಡಲು ಸಿದ್ದರಿದ್ದೇವೆ.

ಅವರಿಗೆ ಜನರ ಬಳಿ ಹೋಗಿ ಸಂಘಟನೆ ಮಾಡಲು ಆಗುವುದಿಲ್ಲ. ಅವರೇನಿದ್ದರೂ ಮಧ್ಯಮಗಳನ್ನು ಬಳಸಿಕೊಂಡು ದೇಶಪ್ರೇಮ ಉಕ್ಕುವಂತೆ ಮಾಡುತ್ತಾರೆ. ಅಷ್ಟೊಂದು ಮಾಧ್ಯಮಗಳನ್ನು ಬಳಸಿಯೂ ಅವರು ಸಾವಿರ ಜನ ಸೇರಿಸಲು ಕಷ್ಟಪಟ್ಟರು. ಆದರೆ ಇಲ್ಲಿ ನಮ್ಮವರು 15 ಸಾವಿರಕ್ಕೂ ಮಿಕ್ಕಿ ಜಮಾವಣೆಗೊಂಡರು. ಆದರೆ ಚೀ ನ್ಯೂಸ್ ಮಾತ್ರ ಸುಳ್ಳೇ ಸುದ್ದಿ ಪ್ರಸಾರ ಮಾಡ್ತು. ನಾಚಿಗೆ ಇಲ್ಲದೆ ಸುಳ್ಳು ಹೇಳ್ತಾರೆ ಈ ಜನಗಳು.

ಜೆ ಎನ್ ಯು ನಲ್ಲಿ ಅವರು ನಡೆಸಿದ ದೌರ್ಜನ್ಯಕಾರಿ ತಂತ್ರಗಾರಿಕೆಯನ್ನು ಬೇರೆಡೆಯಲ್ಲೂ ಯಶಸ್ವಿಯಾಗಿ ಮಾಡಿದ್ದಾರೆ. ಈ ರೀತಿಯ ತಂತ್ರಗಾರಿಕೆ ನಮ್ಮಲ್ಲಿ ನಡೆಯಲ್ಲ. ಇದೇ ರೀತಿಯ ದೌರ್ಜನ್ಯವನ್ನು ಹೋಂಡಾ ಕಾರ್ಮಿಕರ ಮೇಲೆ, ಸೋನಿ ಸೋರಿ ಆದಿವಾಸಿ ಮೇಲೆ ಪ್ರಯೋಗಿಸಿದ್ರು. ಇವೆಲ್ಲವನ್ನೂ ನೋಡಿದ್ರೆ ಇದು ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದ ಹೋರಾಟ ಮಾತ್ರವಲ್ಲ. ಈ ಹೋರಾಟವು ಇಡೀ ದೇಶದ ಹೋರಾಟವನ್ನು ಸಂಧಿಸಬೇಕು.

ಧನ್ಯವಾದಗಳು
ಇಂಕ್ವಿಲಾಬ್ ಜಿಂದಾಬಾದ್

ಸರ್ಕಾರೇತರ ವಲಯಗಳಲ್ಲಿ ಸಾಮಾಜಿಕ ಪ್ರಾತಿನಿಧ್ಯ


– ಶ್ರೀಧರ್ ಪ್ರಭು


 

ಸುಮಾರು ವರ್ಷಗಳಿಂದ ಜನಪರ ಕಾಳಜಿಯ ಪತ್ರಕರ್ತ ಪಿ. ಸಾಯಿನಾಥ್ ತಮ್ಮ ಲೇಖನಗಳಲ್ಲಿ ನಮ್ಮ ದೇಶದ ಸರಕಾರಗಳು ಬೃಹತ್ ಉದ್ದಿಮೆಗಳಿಗೆ ನೀಡಿರುವ ಸಬ್ಸಿಡಿ ಹಣದ ಬಗ್ಗೆ ಬರೆಯುತ್ತಿದ್ದಾರೆ. ಜುಲೈ ೨೮, ೨೦೧೪ ರಲ್ಲಿ ಔಟ್ಲುಕ್ ಪತ್ರಿಕೆಗೆ ಬರೆದ ‘How Much Can We Forgo To India Inc?’ ಎಂಬ ತಮ್ಮ ಲೇಖನದಲ್ಲಿ ಒಂದು ಆಸಕ್ತಿಕರ ವಿಚಾರವನ್ನು ಸಾಯಿನಾಥ್ ಬರೆದರು:

ನಮ್ಮ ದೇಶದ ಉದ್ಯೋಗಪತಿಗಳಿಗೆ ಸರಕಾರ ಕೊಟ್ಟ ಸಬ್ಸಿಡಿ ಹಣ ಸರಾಸರಿ ಪ್ರತಿ ಒಂದು ಗಂಟೆಗೆ ಏಳು ಕೋಟಿ ರೂಪಾಯಿಗಳು, ಪ್ರತಿ ದಿನಕ್ಕೆ ೧೬೮ ರೂಪಾಯಿಗಳು ಹಾಗೆ ಒಟ್ಟಾರೆ ೨೦೧೩-೨೦೧೪ ರ ಅರ್ಥಿಕ ವರ್ಷದಲ್ಲಿ ನಮ್ಮ ದೇಶದ ಸರಕಾರ ಬಂಡವಾಳಶಾಹಿಗಳಿಗೆ ಒಟ್ಟಾರೆಯಾಗಿ ಕೊಟ್ಟ ನೇರ ಸಬ್ಸಿಡಿ ಮೊತ್ತ ರೂ.೫.೩೨ ಲಕ್ಷ ಕೋಟಿಗಳು (ರೂ. ೫,೩೨,೦೦೦,೦೦೦೦೦೦೦). ಈ ಮೊತ್ತವು ೨೦೧೦-೨೦೧೧ ರ ಅರ್ಥಿಕ ವರ್ಷದಲ್ಲಿ ರೂ. ೩.೭೩ ಲಕ್ಷ ಕೋಟಿ ರೂಪಾಯಿ (ರೂ. ೫,೩೨,೦೦೦,೦೦೦೦೦೦೦) ಆಗಿದ್ದಿತು. ಯು ಪಿ ಎ ಸರಕಾರ ಆಡಳಿತದಲ್ಲಿದ್ದ 2005-06 ರಿಂದ 2013-14 ವರೆಗಿನ ಅರ್ಥಿಕ ವರ್ಷಗಳಲ್ಲಿ ಒಟ್ಟಾರೆಯಾಗಿ ೩೬.೫ ಲಕ್ಷ ಕೋಟಿ ಗಳಷ್ಟು ಔದ್ಯಮಿಕ ಸಾಲ ಮನ್ನಾ ಮಾಡಲಾಗಿದೆ.

ನಮ್ಮ ದೇಶದಲ್ಲಿ ಔದ್ಯೋಗಿಕ ಪ್ರಗತಿ, ನಿರುದ್ಯೋಗ ನಿವಾರಣೆ ಇತ್ಯಾದಿ ಸಾಧ್ಯವಾಗಿದ್ದರೆ outlookindia-how-much-can-we-forgo-to-india-inc-psainathಉದ್ದಿಮೆಗಳಿಗೆ ಸಬ್ಸಿಡಿ ಕೊಡುವುದನ್ನು ಸಮರ್ಥಸಿಕೊಳ್ಳಲು ಸಾಧ್ಯವಿದೆ. ಆದರೆ ಇವ್ಯಾವೂ ಸಾಧ್ಯವಾಗಿಲ್ಲ. ೨೦೧೧-೧೪ ವರೆಗಿನ ಮೂರು ಅರ್ಥಿಕ ವರ್ಷಗಳಲ್ಲಿ ಸುಮಾರು ೧.೬೭ ಲಕ್ಷ ಕೋಟಿಗಳಷ್ಟು ಹಣವನ್ನು ಬಂಗಾರ ಬೆಳ್ಳಿಗಳ ಮೇಲಿನ ಕಸ್ಟಮ್ ಸುಂಕ ಮನ್ನಾ ರೂಪದಲ್ಲಿ ಕೊಡಲಾಗಿದೆ. ಬೆಳ್ಳಿ ಬಂಗಾರ ಕೊಳ್ಳಲು ಸಬ್ಸಿಡಿ ಕೊಟ್ಟರೆ ಉದ್ಯೋಗಗಳು ಹುಟ್ಟಿಕೊಳ್ಳುವುದಿಲ್ಲ. ಇದರಿಂದ ಬಂಡವಾಳಶಾಹಿಗಳ ಹೊಟ್ಟೆ ಮಾತ್ರ ತುಂಬುತ್ತದೆ.

ತಳ ಸಮುದಾಯಗಳ ಜಮೀನು ಮತ್ತು ಬದುಕು ಕಿತ್ತುಕೊಂಡು ಜನರು ದುಡಿದ ಹಣವನ್ನು ಅವ್ಯಾಹತವಾಗಿ ಭಿಕ್ಷೆರೂಪದಲ್ಲಿ ಸ್ವೀಕರಿಸುತ್ತಿರುವ ಕಾರ್ಪೊರೇಟ್ ವರ್ಗಕ್ಕೆ ಜನರಿಗೆ ಈವರೆಗೆ ಯಾವುದೇ ಪಾಪ ಪ್ರಜ್ಞೆ ಕಾಡಿಲ್ಲ. ಕಾರ್ಪೊರೇಟ್ ವಲಯಗಳಲ್ಲಿ ತಳ ಸಮುದಾಯಗಳಿಗೆ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಈವರೆಗೆ ಯಾವ ಸರಕಾರಗಳಿಗೂ ಎನ್ನಿಸಿಲ್ಲ. ಜನರ ಹಣವನ್ನು ಉದ್ದಿಮೆದಾರರಿಗೆ ಸಬ್ಸಿಡಿ ರೂಪದಲ್ಲಿ ಕೊಡುವಾಗ ಯಾವ ಹಂತದಲ್ಲಾದರೂ ಸರಿ ದುಡಿಯುವ ಸಮುದಾಯಗಳಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಯಾವ ಸರಕಾರಗಳಿಗೂ ಎನ್ನಿಸಲಿಲ್ಲ.

ಒಂದು ಉದ್ದಿಮೆಯ ಒಡೆತನ ಹೇಗೆ ನಿರ್ಧರಿತವಾಗುತ್ತದೆ? ಆ ಉದ್ದಿಮೆಯಲ್ಲಿ ಯಾರ ಹಣ ಹೆಚ್ಚು ಹೂಡಿಕೆಯಾಗಿದೆಯೋ ಅವರೇ ಅದರ ಮಾಲೀಕರು. ಯಾವ ರೀತಿಯಲ್ಲಿ ನೋಡಿದರೂ ನಮ್ಮ ಉದ್ದಿಮೆಗಳಲ್ಲಿ ಸರಕಾರದ ಮತ್ತು ಸರಕಾರಿ ವಲಯದ ಬ್ಯಾಂಕುಗಳ ಹಣವೇ ಹೂಡಿಕೆಯಾಗಿದೆ. ನಮ್ಮ ಮನೆಗಳಿಗೆ ಹಾಕಿಸಿಕೊಳ್ಳುವ ಸೌರ ವಿದ್ಯುತ್ ಯಂತ್ರಗಳನ್ನು ಅಳವಡಿಸಲು Industrial_Mangaloreಹತ್ತು ಸಾವಿರ ಸಾಲ ಕೊಡುವಾಗ ಕೂಡ ಈ ಬ್ಯಾಂಕುಗಳು ನೂರಾರು ಪುಟಗಳಷ್ಟು ಕಾಗದದ ಮೇಲೆ ಏನೇನೂ ಬರೆಸಿದುಕೊಂಡು ನಮ್ಮ ಸಹಿ ಹಾಕಿಸುತ್ತವೆ. ಕಣ್ಣ ಮುಚ್ಚಿ ಸಹಿ ಹಾಕುವುದು ಬಿಟ್ಟರೆ ನಮ್ಮ ಬಳಿ ಯಾವುದೇ ಅನ್ಯ ಮಾರ್ಗವಿರುವುದಿಲ್ಲ. ಉದ್ದಿಮೆದಾರರಿಗೆ ಇಷ್ಟೊಂದು ಷರತ್ತು ಕರಾರುಗಳನ್ನು ವಿಧಿಸುವ ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳು ಈ ಉದ್ದಿಮೆಗಳಲ್ಲಿ ತಳಸಮುದಾಯಗಳಿಗೆ ಪ್ರಾತಿನಿಧ್ಯ ಕಲ್ಪಿಸುವ ಒಂದೇ ಒಂದು ಕರಾರು ವಿಧಿಸಿಲ್ಲ. ಪ್ರತಿ ಸಾಲ ಪತ್ರದಲ್ಲಿ ಒಂದೇ ಒಂದು ಇಂಥಹ ಕರಾರು ವಿಧಿಸಿದರೆ ಯಾವ ಸಾಲಗಾರ ಉದ್ದಿಮೆದಾರ ಅದನ್ನು ನಿರಾಕರಿಸಲು ಸಾಧ್ಯ? ಅದು ಹೋಗಲಿ ಪ್ರಾತಿನಿಧ್ಯ ಕಲ್ಪಿಸಿದರೆ ಬಡ್ಡಿ ದರದಲ್ಲಿ ವಿನಾಯತಿ ನೀಡುವ ಪ್ರಸ್ತಾವನೆ ಇದ್ದರೆ ಯಾವ ಉದ್ದಿಮೆದಾರ ಇಂದು ಪ್ರಾತಿನಿಧ್ಯ ಕಲ್ಪಿಸುವುದಿಲ್ಲ. ಒಬ್ಬ ಅಥವಾ ಕೆಲವೇ ದಲಿತ-ಹಿಂದುಳಿದ ಉದ್ದಿಮೆದಾರರಿಗೆ ನೇರ ಸಬ್ಸಿಡಿ ಕೊಡುವ ಬದಲು ಒಬ್ಬ ಉದ್ದಿಮೆದಾರ ಎಷ್ಟು ದಲಿತ- ಹಿಂದುಳಿದ ವರ್ಗದ ಕಾರ್ಮಿಕರನ್ನು ನೇಮಿಸಿಕೊಂಡಿದ್ದಾನೆ/ಳೆ ಎಂಬುದರ ಮೇಲೆ ಸಬ್ಸಿಡಿ ನಿರ್ಧಾರಿತವಾದರೆ ಹೆಚ್ಚು ಸೂಕ್ತ.

ಒಟ್ಟಿನಲ್ಲಿ ಸರಕಾರ ಮನಸ್ಸು ಮಾಡಿದರೆ ಯಾವುದೇ ಕಾನೂನು ಸರ್ಜರಿ ಅಗತ್ಯವಿಲ್ಲದೇ ಸೂಕ್ತ ಪ್ರಾತಿನಿಧ್ಯ ಸುಲಭ ಸಾಧ್ಯ. ಇದ್ದ ಕಾನೂನಿಗೆ ಸಣ್ಣ ಪುಟ್ಟ ಬದಲಾವಣೆ ಮಾಡಿದರೆ ಹೆಚ್ಚಿನದನ್ನು ಕೆಲವೇ ವರ್ಷಗಳಲ್ಲಿ ಸಾಧಿಸಬಹುದು. ಪ್ರಾತಿನಿಧಿಕವಾಗಿ ಕೆಲವು ಅಂಶಗಳನ್ನು ಇಲ್ಲಿ ಚರ್ಚಿಸೋಣ:

  • ಒಂದು ಕಂಪನಿ ಮತ್ತು ಒಂದು ಸಹಕಾರ ಸಂಘಕ್ಕೆ ಅತ್ಯಂತ ಹತ್ತಿರದ ‘ಸಂಬಂದಿ’ ಎಂದು ಹೇಳಬಹುದು. ಹಾಗಾಗಿ ಕಾರ್ಪೊರೇಟ್ ವಲಯದ ಪ್ರಾತಿನಿಧ್ಯದ ಸೂತ್ರವನ್ನು ಹೊಸದಾಗಿ ಹುಡುಕಿಕೊಳ್ಳುವ ಅಗತ್ಯವಿಲ್ಲ. ಸಹಕಾರ ಸಂಘಗಳಲ್ಲಿ ಕಲ್ಪಿಸಿದ ಮಹಿಳಾ ಮತ್ತು ದಲಿತ ಪ್ರಾತಿನಿಧ್ಯದ ಸೂತ್ರವನ್ನೇ ಕಂಪನಿಗಳಿಗೆ ವಿಸ್ತರಿಸಬಹುದು. ಸಹಕಾರ ಸಂಘಗಳಿಗೆ ಸಂಬಂದಿಸಿದ ಹೊಸ ಕಾನೂನನ್ನು ತಂದ ಸಂದರ್ಭದಲ್ಲಿ ಸಂವಿಧಾನದಲ್ಲಿ ಸೂಕ್ತ ಪರಿಷ್ಕರಣೆ ಮಾಡಲಾಯಿತು. ಇದೇ ಮಾದರಿಯನ್ನು ಕಂಪನಿವಲಯಕ್ಕೆ ವಿಸ್ತರಿಸುವುದು ಸುಲಭ ಸಾಧ್ಯ. ಹಾಗೆ ನೋಡಿದರೆ ಕಂಪನಿಗಳಿಗೆ ಹೋಲಿಸಿದರೆ ಸಾಮಾಜಿಕ ಮೇಲ್ವರ್ಗಗಳ ಹಿಡಿತದಲ್ಲಿರುವ ಸಹಕಾರ ಸಂಘಗಳಲ್ಲಿ ಪ್ರಾತಿನಿಧ್ಯ ಕಲ್ಪಿಸುವುದೇ ಅತ್ಯಂತ ಕಷ್ಟಕರವಾಗಿತ್ತು. ಇದು ಸಾಧ್ಯವಾದ ಮೇಲೆ ಕಂಪನಿಗಳಲ್ಲಿ ಪ್ರಾತಿನಿಧ್ಯ ಸುಲಬವಾಗಿ ಸಾಧಿಸಬಹುದು.
  • ೨೦೧೩ ರಲ್ಲಿ ಬಂದ ಹೊಸ ಕಂಪನಿ ಕಾಯಿದೆಯ ಪ್ರಕಾರ ಐನೂರು ಕೋಟಿಗಳಷ್ಟು ನಿವ್ವಳ ಸಂಪತ್ತಿರುವ (net worth) ಅಥವಾ ಒಂದು ಸಾವಿರ ಕೋಟಿಗಳಷ್ಟು ವಾರ್ಷಿಕ ವಹಿವಾಟಿರುವ (turnover) ಒಂದು ಕಂಪನಿ ತನ್ನ ಕಳೆದ ಮೂರು ವರ್ಷಗಳ ನಿವ್ವಳ ಆದಾಯದ ೨% ಮೊತ್ತವನ್ನು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಹೆಸರಿನಲ್ಲಿ ಖರ್ಚು ಮಾಡಲೇಬೇಕು. ಇದೇ ಕಾನೂನಿನಡಿಯಲ್ಲಿ ತಮ್ಮ ಕಂಪನಿಗಳಲ್ಲಿ ಎಲ್ಲ ಹಂತದಲ್ಲೂ, ಅದರಲ್ಲೂ ಉನ್ನತ ಹುದ್ದೆಗಳಲ್ಲಿ ಸೂಕ್ತ ಸಾಮಾಜಿಕ ಪ್ರಾತಿನಿಧ್ಯ ಕಲ್ಪಿಸಿದ ಕಂಪನಿಗಳಿಗೆ ಸಾಮಾಜಿಕ ಜವಾಬ್ದಾರಿಯಿಂದ ಸೂಕ್ತ ವಿನಾಯತಿ ಕಲ್ಪಿಸಿದರೆ ಅನೇಕ ಕಂಪನಿಗಳು ತಾವೇ ಮುಂದೆ ಬಂದು ಸೂಕ್ತ ಪ್ರಾತಿನಿಧ್ಯ ಕಲ್ಪಿಸಬಹುದು.
  • ನಮ್ಮ ದೇಶದ ಎಲ್ಲಾ ಬ್ಯಾಂಕುಗಳು ನಡೆಯುವದು ರಿಸರ್ವ್ ಬ್ಯಾಂಕ್ ನೀಡುವ ಪರವಾನಗಿಯ ಮೇಲೆ. ಹೀಗಾಗಿ ಬ್ಯಾಂಕುಗಳನ್ನು ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರದ ಬ್ಯಾಂಕುಗಳು ಎಂದು ವಿಂಗಡಣೆ ಮಾಡುವುದು ಅಸಮಂಜಸ. ೧೬-೧೨-೨೦೧೫ ರಲ್ಲಿ ಬಂದ ರಿಸರ್ವ್ ಬ್ಯಾಂಕ್ ಮತ್ತು ಜಯಂತಿಲಾಲ್ ಮಿಸ್ತ್ರಿ ಪ್ರಕರಣದಲ್ಲಿ ಖಾಸಗಿ ಬ್ಯಾಂಕುಗಳೂ ಸೇರಿದಂತೆ ಎಲ್ಲ ಬ್ಯಾಂಕುಗಳೂ ಸಾರ್ವಜನಿಕ ಪ್ರಾಧಿಕಾರಗಳಾಗಿದ್ದು (Public Authority) ಮಾಹಿತಿ ಹಕ್ಕು ಕಾಯಿದೆಯಡಿ ಸಾರ್ವಜನಿಕ ಹಿತಾಸಕ್ತಿ ಇರುವ ಯಾವುದೇ ಮಾಹಿತಿಯನ್ನು ಕೊಡಲೇಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ. ಹೀಗಾಗಿ ಪ್ರಾತಿನಿಧ್ಯದ ಪ್ರಶ್ನೆ ಬಂದಾಗ ಎಲ್ಲ ಬ್ಯಾಂಕುಗಳನ್ನೂ ಸಮಾನವಾಗಿ ನೋಡಬೇಕಿದೆ.
  • ವಿದ್ಯುತ್ ಉತ್ಪಾದನೆ, ನೀರಾವರಿ, ವಿಮಾನ ನಿಲ್ದಾಣ ನಿರ್ಮಾಣ, ಹೆದ್ದಾರಿ ನಿರ್ಮಾಣ ಮತ್ತಿತರ ಮೂಲಭೂತ ಸೌಕರ್ಯ ಯೋಜನೆಗಳನ್ನು ಸಾರ್ವಜನಿಕ ಮತ್ತು ಖಾಸಗಿ ಸಹಯೋಗದ (Private Public Partnership – PPP) ಮಾದರಿಯಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ನಿಜಕ್ಕೂ ನೋಡಿದರೆ ಖಾಸಗಿ ಸಹಭಾಗಿತ್ವ ಇಲ್ಲಿ ನಗಣ್ಯ. ಯೋಜನೆಗಳಿಗೆ ಬೇಕಾದ ಭೂಮಿಯನ್ನು ಸರಕಾರವೇ ಕೊಡಮಾಡುತ್ತದೆ. ಈ ಯೋಜನೆಗಳಲ್ಲಿ ಭೂಮಿಯೇ ೨೦%-೩೦% ಮೂಲ ಬಂಡವಾಳವೆಂದು ತೋರಿಸಿ ಸಾರ್ವಜನಿಕ ಕ್ಷೇತ್ರದ ಬ್ಯಾಂಕು ಮತ್ತು ಹಣಕಾಸು ಸಂಸ್ಥೆ ಗಳಿಂದ ೭೦%-೮೦% ರಷ್ಟು ಸಾಲ ಪಡೆಯಲಾಗುತ್ತದೆ. ಅದರೊಂದಿಗೆ ಈ ಯೋಜನೆಗಳಿಗೆ ಕಡಿಮೆ ಬಡ್ಡಿ ದರದ ಸಾಲ, ತೆರಿಗೆ ವಿನಾಯತಿ ರೂಪದಲ್ಲಿ ಪರೋಕ್ಷ ಮತ್ತು ಪ್ರತ್ಯಕ್ಷ ರೂಪದಲ್ಲಿ ಸಾಕಷ್ಟು ಹಣಕಾಸಿನ ನೆರವು ನೀಡುತ್ತದೆ. ಅನೇಕ ಬಾರಿ ಈ ಯೋಜನೆಗಳಿಗೆ ಸರಕಾರವೇ ಮುಖ್ಯ ಗ್ರಾಹಕನಾಗಿ ಹೆಚ್ಚಿನ ಬೆಂಬಲ ಬೆಲೆ ಕೊಟ್ಟು ಸಿದ್ಧ ವಸ್ತುಗಳನ್ನು ಖರೀದಿ ಮಾಡುತ್ತದೆ. ಉದಾಹರಣೆಗೆ ನವೀಕೃತ ಮೂಲಗಳ ವಿದ್ಯುತ್ ಉತ್ಪಾದನೆ ಯೋಜನೆಗಳಲ್ಲಿ ಉತ್ಪಾದನೆಯಾಗುವ ವಿದ್ಯುತ್ತನ್ನು ಸರಕಾರವೇ ತನ್ನ ಒಡೆತನದ ಕಂಪನಿಗಳ ಮೂಲಕ ಹೆಚ್ಚಿನ ಬೆಲೆಗೆ ಖರೀದಿಸುತ್ತದೆ, ಪವನ ವಿದ್ಯುತ್ ಮತ್ತು ಸೌರ ಶಕ್ತಿ ಯೋಜನೆಗಳಿಂದ ಉತ್ಪಾದನೆಯಾಗುವ ವಿದ್ಯುತ್ತಿಗೆ ಸಾಮಾನ್ಯವಾಗಿ ೩೦-೩೦% ಹೆಚ್ಚಿನ ದರ ನಿಗದಿಯಾಗಿರುತ್ತದೆ. ಇದನ್ನು ಸರಕಾರವೇ ತನ್ನ ಕಂಪನಿಗಳ ಮುಖೇನ ಖರೀದಿಸಿ ಯೋಜನೆಗಳಿಗೆ ೩೦ ವರ್ಷಗಳವರೆಗೆ ದರ ಖಾತರಿ ನೀಡುತ್ತದೆ. ಸರಕಾರಿ ಒಡೆತನದ ಸಂಸ್ಥೆಗಳೇ ಈ ಯೋಜನೆಗಳಿಗೆ ಬೇಕಾಗುವ ನಾನಾ ಪರವಾನಗಿಗಳನ್ನು ತೆಗೆಸಿಕೊಡುತ್ತವೆ. ಕಂದಾಯ ಇಲಾಖೆಯ ಸರಕಾರಿ ಭೂಮಿ ಅಥವಾ ಅರಣ್ಯ ಭೂಮಿಯನ್ನು ಉಪಯೋಗಿಸಿಕೊಂಡು ಇಷ್ಟೆಲ್ಲಾ ಸವಲತ್ತುಗಳನ್ನೂ ಪಡೆಯುವ ಈ ಸಂಸ್ಥೆಗಳಿಗೆ ಮಾರ್ಗದರ್ಶಿ ಸೂತ್ರಗಳನ್ನು ನಿರೂಪಿಸಿ ಉದ್ಯೋಗ ಮತ್ತು ಒಡೆತನಗಳಲ್ಲಿ ತಳ ಸಮುದಾಯಗಳು ಮತ್ತು ಮಹಿಳೆಯರಿಗೆ ಪ್ರಾತಿನಿಧ್ಯ ಕಲ್ಪಿಸಿದ ಉದಾಹರಣೆಗಳೇ ಇಲ್ಲ.
  • ಸರಕಾರಿ ಮಾನ್ಯತೆ ಮತ್ತು ಅನುದಾನ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾತಿನಿಧ್ಯವನ್ನು ಜಾರಿಗೊಳಿಸಬೇಕಾದ ಅಗತ್ಯವಿದೆ. ಸಮಾನ ಶಿಕ್ಷಣವನ್ನು ಜಾರಿಗೊಳಿಸಿದ ಸರಕಾರ (ಕನಿಷ್ಟ ಕಾಗದದಲ್ಲಾದರೂ ಸರಿ) ಪ್ರಾತಿನಿಧ್ಯವನ್ನು ಜಾರಿಗೊಳಿಸದಿರುವುದಕ್ಕೆ ಯಾವ ಸಕಾರಣಗಳೂ ಇಲ್ಲ. ಪ್ರಾಥಮಿಕ ಶಿಕ್ಷಣ ಒಂದು ಮೂಲಭೂತ ಹಕ್ಕು ಎಂದಾದರೆ ಅದನ್ನು ಒದಗಿಸುವ ಜವಾಬ್ದಾರಿಯನ್ನು ಹೊತ್ತಿರುವ ವಿದ್ಯಾ ಸಂಸ್ಥೆಗಳು ಸರಕಾರದ ಕೆಲಸವನ್ನೇ ಮಾಡುತ್ತಿವೆ. ಅದಕ್ಕಾಗಿ ಸರಕಾರ ಅನುದಾನವನ್ನೂ ಕೊಡುತ್ತಿದೆ ಎಂದಾದರೆ ಅವು ಸರಕಾರದ ನಿಯಂತ್ರಣಕ್ಕೆ ಒಳಪಡಲೇಬೇಕಲ್ಲವೇ?
  • ನಮ್ಮ ದೇಶದ ಮೂರು ಔದ್ಯೋಗಿಕ ಸಂಘಟನೆಗಳಾದ ಸಿಐಐ, ಫಿಕ್ಕಿ ಮತ್ತು ಅಸ್ಹೊಚೆಮ್ ಗಳು ಪ್ರಾತಿನಿಧ್ಯದ ವಿಚಾರದಲ್ಲಿ ಸರಕಾರದ ಹಸ್ತಕ್ಷೇಪವನ್ನು ವಿರೋಧಿಸುತ್ತಲೇ ತಾವೇ ಸ್ವಯಂ ಪ್ರೇರಿತವಾಗಿ ದಲಿತ ಪ್ರಾತಿನಿಧ್ಯ ಕೊಡುವುದಾಗಿ ಹೇಳಿಕೊಂಡು ಮುಂದೆ ಬಂದಿವೆ. ಪ್ರಾತಿನಿಧ್ಯವನ್ನು ಕಲ್ಪಿಸಲು ತಾವೇ ಸ್ವಯಂ ಪ್ರೇರಿತ ನಿಯಮಗಳನ್ನು (Voluntary Code of Conduct) ಮಾಡಿಕೊಂಡಿರುವುದಾಗಿ ಘೋಷಿಸಿ ೨೦೧೪ ಡಿಸೆಂಬರನಲ್ಲಿ ಅವುಗಳೇ ಕೆಲವು ಅಂಕಿ ಅಂಶಗಳ ಪ್ರಕಟಿಸಿ ತಾವು ಕೈಗೊಂಡ ಕ್ರಮಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿವೆ. ಅವರೇ ಘೋಶಿಸಿಕೊಂಡಂತೆ ದೇಶದ ಮೂರೂ ಬೃಹತ್ ಸಂಘಟನೆಗಳು ಸೇರಿ ದೇಶದ ಎಂಟು ಜಿಲ್ಲೆಗಳನ್ನು ದತ್ತು ಪಡೆದಿವೆ. ೬೭೬ ಜಿಲ್ಲೆಗಳಿರುವ ಈ ಬೃಹತ್ ದೇಶದಲ್ಲಿ ಏಳೆಂಟು ಜಿಲ್ಲೆಗಳಲ್ಲಿ ಕೆಲಸ ಮಾಡಿದರೆ ಸಾಕೇ? ಇನ್ನು ಉದ್ದಿಮೆಗಳಿಗೆ ಸ್ವಯಂ ನಿಯಂತ್ರಣ ಸಾಧ್ಯವಾಗಿರುತ್ತಿದ್ದರೆ ನಮ್ಮ ದೇಶದಲ್ಲಿ ಕಾನೂನು ಕಟ್ಟಳೆಗಳು ಬೇಕಿತ್ತೇ? ಉದ್ದಿಮೆಗಳು ಸ್ವಯಂ ಪ್ರೇರಣೆಯಿಂದ ಸರಿಯಾದ ಸಮಯದಲ್ಲಿ ಕಾನೂನು ರೀತ್ಯಾ ತೆರಿಗೆ, ಸಾಲಪಾವತಿ ಮತ್ತು ವಿದ್ಯುತ್ ದರ ಕಟ್ಟಿದ್ದರೆ ನಮ್ಮ ದೇಶ ಇಂದು ಅಮೇರಿಕಾವನ್ನೂ ಮೀರಿಸುತ್ತಿತ್ತು. ಹೀಗಾಗಿ ಪ್ರಾತಿನಿಧ್ಯದ ವಿಚಾರದಲ್ಲಿ ಸ್ವಯಂ ನಿಯಂತ್ರಣದಿಂದ ಸಾರ್ವಜನಿಕ ನಿಯಂತ್ರಣಕ್ಕೆ ನಾವು ಸಾಗಬೇಕಿದೆ.
  • ಮಠಮಾನ್ಯಗಳಿಗೆ ಸಾಕಷ್ಟು ಸರಕಾರಿ ಅನುದಾನ ಸಂದಿದೆ. ಧರ್ಮಬೇದವಿಲ್ಲದೆ ಸರಕಾರದ ಹಣ / ಅನುದಾನ ಪಡೆಯುತ್ತಿರುವ ಎಲ್ಲ ಜಾತಿ ಧರ್ಮಗಳ ಮಠ- ಮದರಸ- ಇಗರ್ಜಿಗಳಲ್ಲಿ ಮತ್ತು ಮುಖ್ಯವಾಗಿ ಅವರು ನಡೆಸುತ್ತಿರುವ ಸಂಸ್ಥೆಗಳಲ್ಲಿ ಪ್ರಾತಿನಿಧ್ಯವನ್ನು ಕಲ್ಪಿಸಬೇಕಿದೆ. ಮಠಗಳನ್ನು ನಡೆಸುವುದು ಧಾರ್ಮಿಕ ಕಾರ್ಯ ಅದರಲ್ಲಿ ಸರಕಾರದ ಹಸ್ತಕ್ಷೇಪವಿರಬಾರದು ಎಂಬುದು ದಿಟ. ಆದರೆ ಮಠಮಾನ್ಯಗಳು ಲಾಭಕ್ಕಾಗಿ ನಡೆಸುವ ಸಂಸ್ಥೆಗಳನ್ನು ಇತರ ವಾಣಿಜ್ಯ ಸಂಸ್ಥೆಗಳ ಜೊತೆಯಲ್ಲಿಯೇ ಪರಿಗಣಿಸಬೇಕಾಗುತ್ತದೆ. ತಮ್ಮ ಧರ್ಮದ ಮೂಲ ಆಶಯ ಸಮಾನತೆ ಎಂದು ಸಾರುವ ಧಾರ್ಮಿಕ ಮುಖಂಡರು ಧಾರ್ಮಿಕ ಸಂಸ್ಥೆಗಳು ನಡೆಸುವ ವಾಣಿಜ್ಯ ಚಟುವಟಿಕೆಗಳಲ್ಲಿ ಪ್ರಾತಿನಿಧ್ಯವನ್ನು ಕಲ್ಪಿಸುವುದನ್ನು ಸ್ವಾಗತಿಸಬೇಕಿದೆ. ಸಾಚಾರ್ ಆಯೋಗದ ಶಿಫಾರಸ್ಸನ್ನು ಮೊದಲ್ಗೊಂಡು ಮುಸ್ಲಿಂ ಸಮುದಾಯದ ಸಂಸ್ಥೆಗಳಲ್ಲಿ ವರದಿಯಲ್ಲಿ ತಿಳಿಸಿರುವ ಅಶ್ರಫ್, ಅಜ್ಲಫ಼್ ಮತ್ತು ಅರ್ಜಲ್ ಸಮುದಾಯಗಳಿಗೆ ವಿಶೇಷ ಪ್ರಾತಿನಿಧ್ಯ ಕಲ್ಪಿಸುವ ಕುರಿತು ಮಾಡಿರುವ ಪ್ರಸ್ತಾವನೆಗಳನ್ನು ಮುಸ್ಲಿಂ ಸಮುದಾಯದ ನಡೆಸುತ್ತಿರುವ ಸಂಸ್ಥೆಗಳಲ್ಲೇ ಮೊದಲಿಗೆ ಜಾರಿಗೆ ತರಬೇಕಿದೆ. ಹಾಗೆಯೇ ದಲಿತ ಕ್ರೈಸ್ತರ ವಿಚಾರದಲ್ಲಿ ಕ್ರೈಸ್ತ ಧರ್ಮದ ಅಡಿಯಲ್ಲಿ ನಡೆಯುತ್ತಿರುವ ಸಂಸ್ಥೆಗಳಲ್ಲಿ ಪ್ರಾತಿನಿಧ್ಯ ಕಲ್ಪಿಸುವ ನಿರ್ಧಾರ ತೆಗೆದುಕೊಳ್ಳಬೇಕಿದೆ.
  • ಇಂದು ಎಲ್ಲ ಕ್ಷೇತ್ರಗಳಿಗಿಂತ ಉನ್ನತ ನ್ಯಾಯಾಂಗದಲ್ಲಿ ಪ್ರಾತಿನಿಧ್ಯವನ್ನು ಕಲ್ಪಿಸುವುದು ಅತ್ಯಗತ್ಯವಾಗಿದೆ. ಇದರ ಸಂಬಂಧವಾಗಿ ಇದೇ ಲೇಖಕ ಬರೆದ “ನ್ಯಾಯಾಂಗದಲ್ಲಿ ದಲಿತ ಮತ್ತು ಹಿಂದುಳಿದವರ ಪ್ರಾತಿನಿಧ್ಯದ ಪ್ರಶ್ನೆ” ಎಂಬ ಲೇಖನದ ಕೆಲ ಅಂಶಗಳನ್ನು ಇಲ್ಲಿ ಗಮನಿಸಬಹುದು:

೧೯೫೦ ರಿಂದ ಇಂದಿನವರೆಗೂ ಸರ್ವೋಚ್ಚ ನ್ಯಾಯಾಲಯದಲ್ಲಿ ನೇಮಕವಾದ ದಲಿತರ ಸಂಖ್ಯೆ ಕೇವಲ ನಾಲ್ಕು – ಎ. ವರದರಾಜನ್, ಬಿ. ಸಿ. ರಾಯ್, ಕೆ. ರಾಮಸ್ವಾಮಿ ಮತ್ತು ಕೆ. ಜಿ. ಬಾಲಕೃಷ್ಣನ್. ಕಳೆದ ಅರವೈತ್ತೈದು ವರ್ಷಗಳಲ್ಲಿ ಈ ದೇಶದ ದಲಿತರಲ್ಲಿ ನಾಲ್ಕು ಜನ ಮಾತ್ರ Supreme Courtಸುಪ್ರೀಂ ಕೋರ್ಟ್ ಲ್ಲಿ ಕೂರಲು ಲಾಯಕ್ಕದವರೇ?

ಹಾಗೆಯೆ, ಒಂದು ಅಂದಾಜಿನ ಪ್ರಕಾರ ಸುಪ್ರೀಂ ಕೋರ್ಟ್ ನ ಸುಮಾರು ೫೬% ರಷ್ಟು ನ್ಯಾಯಾಧೀಶರು ಬ್ರಾಹ್ಮಣರು. ಒಟ್ಟು ಹೈ ಕೋರ್ಟ್ ನ್ಯಾಯಾಧೀಶರಲ್ಲಿ ಕೂಡ ಬ್ರಾಹ್ಮಣರ ಅನುಪಾತ ೫೦% ನಷ್ಟು. ೨೦೦೯ ರ ಸುಮಾರಿಗೆ ಕೇಂದ್ರ ಗೃಹ ಇಲಾಖೆ ಸುಪ್ರೀಂ ಕೋರ್ಟ್ ಗೆ ಒಂದು ಮನವಿ ಸಲ್ಲಿಸಿ ನ್ಯಾಯಾಂಗದಲ್ಲಿ ದಲಿತರಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಲು ಮಾರ್ಗದರ್ಶಿ ಸೂತ್ರಗಳನ್ನು ನಿರೂಪಿಸಲು ಕೋರಿತು. ಆದರೆ ಈವರೆಗೂ ಸರ್ವೋಚ್ಚ ನ್ಯಾಯಾಲಯವೂ ಸೇರಿದಂತೆ ಯಾವುದೇ ಉಚ್ಚ ನ್ಯಾಯಾಲಯವೂ ಯಾವ ಸೂತ್ರ ಯಾ ನಿರ್ದೇಶನಗಳನ್ನೂ ಜಾರಿ ಮಾಡಲಿಲ್ಲ. ಕೇಶವಾನಂದ ಭಾರತಿ ಪ್ರಕರಣದಿಂದ ಮೊದಲ್ಗೊಂಡು ಅನೇಕ ತೀರ್ಮಾನಗಳಲ್ಲಿ ಸುಪ್ರೀಂ ಕೋರ್ಟ್ ಹೇಳಿದೆ: ನ್ಯಾಯಾಂಗವೆಂದರೆ “ಪ್ರಭುತ್ವ” (State). ಪ್ರಭುತ್ವದ ಇನ್ನೆರಡು ಅಂಗಗಳಲ್ಲಿ ಮೀಸಲಾತಿ ಇರುವುದು ನಿಜವಾದರೆ ನ್ಯಾಯಾಂಗ ಇದಕ್ಕೆ ಹೊರತಾಗಿರಬೇಕೇ? ಇನ್ನು ನ್ಯಾಯಾಲಯಗಳ ಸಿಬ್ಬಂದಿಗಳ ನೇಮಕದಲ್ಲಿ ಮೀಸಲಾತಿ ಇದೆ. ಆದರೆ ನ್ಯಾಯಮೂರ್ತಿಗಳ ನೇಮಕದಲ್ಲಿ ಏಕಿಲ್ಲ? ರಾಷ್ಟ್ರೀಯ ನ್ಯಾಯಾಂಗ ಸೇವಾ ಆಯೋಗ ರಚಿಸಲು ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಆಯೋಗ ರಚನೆಯಾದರೆ ಎಲ್ಲಿ ಮೀಸಲಾತಿ ಜಾರಿಮಾಡುವ ಪ್ರಮೇಯ ಬಂದೀತೋ ಎಂದು ಈವರೆಗೆ ಯಾವ ಸರಕಾರವೂ ನ್ಯಾಯಾಂಗ ಸೇವೆಗಳ ಆಯೋಗ ರಚನೆ ಮಾಡುವ ಸಾಹಸ ಮಾಡಿಲ್ಲ. ಕೊಲಿಜಿಯಂ ಪದ್ಧತಿ ರದ್ದಾಗಿ ಈ ಕುರಿತ ಪ್ರಕರಣ ಸುಪ್ರೀಂ ಕೋರ್ಟ್ ನ ಮುಂದಿದೆ. ಈ ಕೊಲಿಜಿಯಂ ಪದ್ಧತಿಯಡಿ ದಲಿತರಿಗೆ ಸೇರಿದಂತೆ ಅನೇಕ ಜನಪರ ಕಾಳಜಿಯ ನ್ಯಾಯಾಧೀಶರಿಗೆ ಹಿನ್ನಡೆಯಾಗಿದೆಯೆಂದು ಬಹುತೇಕ ಎಲ್ಲ ವಕೀಲರೂ ವಾದಿಸಿದ್ದಾರೆ.

ಯಾವುದೇ ರಾಜ್ಯ ಮತ್ತು ಕೇಂದ್ರ ಸರಕಾರಗಳು ತಮ್ಮನ್ನು ಪ್ರತಿನಿಧಿಸುವ ಅಟಾರ್ನಿ ಜನರಲ್, ಸಾಲಿಸಿಟರ್ ಜನರಲ್,ಅಡ್ವೋಕೇಟ್ ಜನರಲ್ ಹೋಗಲಿ ಸಾಮಾನ್ಯ ಸರಕಾರೀ ವಕೀಲರ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಪಾಲಿಸಿಲ್ಲ. ಸರಕಾರದ ಯಾವ ಬ್ಯಾಂಕ್, ನಿಗಮ, ಮಂಡಳಿಗಳು ಕೂಡ ತಮ್ಮ ಪ್ಯಾನೆಲ್ ಗಳಲ್ಲಿ ಮೀಸಲಾತಿ ಹೋಗಲಿ ದಲಿತರ ಬಗ್ಗೆ ಕನಿಷ್ಠ ಪ್ರಾತಿನಿಧ್ಯದ ಬಗ್ಗೆ ಕೂಡ ಗಮನ ಹರಿಸಿಲ್ಲ. ಇಂಥ ನೇಮಕಾತಿಗಳಲ್ಲಿ ಮೀಸಲಾತಿ ಬಗ್ಗೆ ಯಾವುದೇ ಕಾನೂನು ಅಥವಾ ನಿಯಮಗಳು ಹೋಗಲಿ ಕನಿಷ್ಠ ನಿರ್ದೇಶನ ಸೂತ್ರಗಳು ಕೂಡ ಇಲ್ಲ. ಎಲ್ಲಾ ಸರಕಾರಗಳು ದಲಿತರ ಪರ ಮೊಸಳೆ ಕಣ್ಣೀರು ಹಾಕುವುದು ಎಲ್ಲರಿಗೂ ಗೊತ್ತಿರುವುದೇ. ಆದರೆ ಈವರೆಗೆ ದಲಿತರ ಪರವಾಗಿ ದಲಿತ ವಕೀಲರೇ ಧ್ವನಿ ಎತ್ತಿಲ್ಲ ಎಂದರೆ ಎಂಥ ಬೇಸರದ ವಿಷಯ. ವಕೀಲರ ಸಾರ್ವತ್ರಿಕ ಪ್ರಾತಿನಿಧ್ಯದ ಸಂಸ್ಥೆ ವಕೀಲರ ಪರಿಷತ್ತು (ಬಾರ್ ಕೌನ್ಸಿಲ್) ನಲ್ಲಿ ಕೂಡ ಯಾವ ಪ್ರಾತಿನಿಧ್ಯವಿಲ್ಲ. ಇಂದು ವಕೀಲರಾಗಿ ನೊಂದಣಿ ಬಾರ್ ಕೌನ್ಸಿಲ್ ಪರೀಕ್ಷೆ ತೇರ್ಗಡೆ ಕಡ್ಡಾಯ. ಆದರೆ ಈ ಪರೀಕ್ಷೆ ಗಳಲ್ಲಿ ಕೂಡ ಮೀಸಲಾತಿಯಿಲ್ಲ. ದಲಿತ ವಿದ್ಯಾರ್ಥಿಗಳಿಗೆ, ಹಿಂದುಳಿದ ವರ್ಗ ಹೋಗಲಿ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಕೂಡ ಕನಿಷ್ಠ ಶುಲ್ಕ ವಿನಾಯತಿ ಕೊಡುವ ಔದಾರ್ಯವನ್ನೂ ವಕೀಲರ ಪರಿಷತ್ತು ತೋರಿಲ್ಲ. ತನ್ನ ವೆಬ್ಸೈಟ್ ನಲ್ಲಿ ನಮೂದಿಸಿರುವ ಪ್ರಶ್ನಾವಳಿ (FAQ) ಗಳಲ್ಲಿ ವಕೀಲರ ಪರಿಷತ್ತು “ನಮ್ಮ ಪರೀಕ್ಷೆಗಳಲ್ಲಿ ದಲಿತ ವಿದ್ಯಾರ್ಥಿಗಳಿಗೆ ಯಾವುದೇ ವಿಶೇಷ ಸೌಲಭ್ಯಗಳಿಲ್ಲ” ಎಂದು ಘೋಷಿಸಿ ಕೊಂಡಿದೆ.

ವಿಪರ್ಯಾಸವೆಂದರೆ ವಕೀಲರ ಪರಿಷತ್ತಿನ ವೆಬ್ಸೈಟ್ ನಲ್ಲಿ ದೊಡ್ಡದೊಂದು ಅಂಬೇಡ್ಕರ್ ಪಟವಿದೆ! ದುರಂತವೆಂದರೆ ಇಂದು ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ದಲಿತ ವಕೀಲರನ್ನು ಪ್ರತಿನಿಧಿಸುವ ಯಾವುದೇ ಸಂಘ ಸಂಸ್ಥೆಗಳಿಲ್ಲ. ಸಣ್ಣ ಪುಟ್ಟ ಕಾರ್ಖಾನೆಗಳಲ್ಲಿಯೂ ದಲಿತ ಕಾರ್ಮಿಕ ಸಂಘಟನೆಗಳನ್ನು ರಚಿಸಿಕೊಳ್ಳುವ ದಲಿತರು ಇಂದಿನವರೆಗೂ ವಕೀಲರ ಮಧ್ಯೆ ಸಂಘಟನೆ ಕಟ್ಟಿಲ್ಲ. ಸಂಘಟಿತರಾಗದವರೆಗೂ ದಲಿತರಿಗೆ ಮುಕ್ತಿಯಿಲ್ಲ ಎಂಬುದಕ್ಕೆ ಈ ಕ್ರೂರ ವಾಸ್ತವಗಳಿಗಿಂತಲೂ ಹೆಚ್ಚಿನ ಸಾಕ್ಷಿಗಳು ದಲಿತರಿಗೆ, ಅದರಲ್ಲೂ ಮುಖ್ಯವಾಗಿ ವಕೀಲರಿಗೆ ಬೇಕಿಲ್ಲ ಎಂದು ಕೊಳ್ಳೋಣ. ೨೦೧೧ ರಲ್ಲಿ ಸಂವಿಧಾನ ತಿದ್ದುಪಡಿ ತಂದು ಸಹಕಾರ ಸಂಘಗಳ ಕಾನೂನಿಗೆ ಸಮಗ್ರ ಸರ್ಜರಿ ಮಾಡಲಾಯಿತು. ಸಹಕಾರಿ ಸಂಘಗಳನ್ನು ರಚಿಸಿಕೊಳ್ಳುವುದು ಮೂಲಭೂತ ಕರ್ತವ್ಯವೆಂದು ಸಾರಲಾಯಿತು. ಜೊತೆಗೆ, ಸಹಕಾರ ಸಂಘಗಳಲ್ಲಿ ಸಾಮಾಜಿಕ ಮತ್ತು ಮಹಿಳಾ ಮೀಸಲಾತಿ ಜಾರಿಗೊಳಿಸಲಾಯಿತು. ಆದರೆ ವಕೀಲರ ಸಂಘಗಳಲ್ಲಿ ಈ ಮೀಸಲಾತಿ ಜಾರಿಯಾಗಿಲ್ಲ. ವಕೀಲರ ಸಂಘಗಳಿಗೆ ಸರಕಾರಗಳು ಸಾಕಷ್ಟು ಸಹಾಯ ಧನ ನೀಡಿವೆ. ಏಷ್ಯಾದಲ್ಲಿಯೇ ಅತೀ ದೊಡ್ಡದು ಎನ್ನಿಸಿಕೊಳ್ಳುವ ಬೆಂಗಳೂರು ವಕೀಲರ ಸಂಘದ ಬೈ ಲಾ ಗಳನ್ನು ಅನುಮೋದಿಸಿದ್ದು ಸ್ವತಃ ಸಹಕಾರ ಸಂಘಗಳ ಪ್ರಬಂಧಕರು. ಆದರೆ ಇಲ್ಲಿ ಮಹಿಳಾ, OBC ಮತ್ತು ದಲಿತ ಮೀಸಲಾತಿಯ ಪ್ರಶ್ನೆಯೇ ಇಲ್ಲ. ಈವರೆಗೆ ಯಾವ ದಲಿತರೂ ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳಾಗಿಲ್ಲ. ಈವರೆಗೆ ಯಾವ ದಲಿತರೂ ಹಿಂದುಳಿದವರು ಮತ್ತು ಮಹಿಳೆಯರು ಈ ಬಗ್ಗೆ ಪ್ರಶ್ನೆ ಮಾಡಿಲ್ಲ. ದಲಿತ, ಮಹಿಳಾ ಮತ್ತು ಹಿಂದುಳಿದ ವರ್ಗಗಳು ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಮರ್ಪಕವಾಗಿ ಪ್ರನಿಧಿಸುತ್ತಿಲ್ಲ ಎಂಬುದು ಕೇವಲ ಈ ವರ್ಗ ವಿಭಾಗಗಳ ಪ್ರಶ್ನೆಯಲ್ಲ. ಇದು ನಮ್ಮ ಇಡೀ ಸಮಾಜದ ಆತ್ಮಸಾಕ್ಷಿಯನ್ನು ಕಾಡಬೇಕಿರುವ ಪ್ರಶ್ನೆ. ‘ದಲಿತರು ಎಲ್ಲರಿಗೂ ಸಮನಾಗಿ ಬದುಕುತ್ತಿದ್ದಾರೆ’, ‘ಜಾತಿ ವ್ಯವಸ್ಥೆ ಸತ್ತು ಹೋಗಿದೆ’ ಅಥವಾ ‘ಬರೀ ವರ್ಗವೊಂದೇ ಸತ್ಯ ಜಾತಿ ಮಿಥ್ಯ’ ಎಂದು ವಾದಿಸುವ ಸಿದ್ಧಾಂತಿಗಳು ನ್ಯಾಯಾಂಗದಲ್ಲಿ ಏಕೆ ಇಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಯೋಚಿಸುವರೆ?”

*******

ವಿಷಯದ ವ್ಯಾಪ್ತಿ ಅಗಾಧವಾಗಿರುವ ಕಾರಣ ಇಲ್ಲಿ ಕೆಲವೇ ಕೆಲವು ನಿದರ್ಶನಗಳನ್ನು ಚರ್ಚಿಸಲಾಗಿದೆ. ಇದು ಕೇವಲ ಚರ್ಚೆಗೆ ಅನುವಾಗುವ ರೀತಿಯಲ್ಲಿನ ಒಂದು ಪ್ರಾಥಮಿಕ ಪ್ರಯತ್ನ ಮಾತ್ರ. ಇಲ್ಲಿರುವ ಸಲಹೆಗಳು ಕಾರ್ಯಸಾಧುವೇ ಅಲ್ಲವೇ ಎಂಬುದು ವಿಸ್ತ್ರತ ಚರ್ಚೆಗೆ ಒಳಪಡಬೇಕಾದ ವಿಚಾರ.

ಸಾಮಾಜಿಕ ಪ್ರಾತಿನಿಧ್ಯದ ಜೊತೆಯಲ್ಲೇ ಚರ್ಚೆಗೆ ಒಳಪಡಬೇಕಾದ ವಿಚಾರ ಅನುಷ್ಥಾನದ್ದು. ಇಂದು ಸರಕಾರಿ ವಲಯದಲ್ಲೇ ಬ್ಯಾಕ್ ಲಾಗ್ ಸಮಸ್ಯೆ ಬೃಹತ್ತಾಗಿ ಬೆಳೆದು ನಿಂತಿರುವಾಗ ಸರ್ಕಾರೇತರ ವಲಯಗಳಲ್ಲಿ ಪ್ರಾತಿನಿಧ್ಯವನ್ನು ಸಮರ್ಪಕವಾಗಿ ಅನುಷ್ಥಾನಗೊಳಿಸಬಹುದೇ? ಸಮಸ್ಯೆಗಳು ಮತ್ತು ಸವಾಲುಗಳು ಸಾಕಷ್ಟಿವೆ. ಸರಕಾರೇತರ ವಲಯದಲ್ಲಿ ಅರ್ಥಿಕ ಹಿಂಜರಿತ, ಲಾಭ ಹೆಚ್ಚಿಸುವ ಒತ್ತಡಗಳು, ಉದ್ಯೋಗ ಕಳೆದುಕೊಳ್ಳುವ ಭಯ, ಅಸಂಘಟಿತ ಕಾರ್ಮಿಕರ ಶೋಷಣೆ ಅತ್ಯಂತ ಹೆಚ್ಚಾಗಿದೆ. ವಿಶೇಷ ವಿತ್ತ ವಲಯಗಳಿಗೆ ಮತ್ತು ಸಾಫ್ಟ್ವೇರ್ ಕಂಪನಿಗಳಿಗೆ ಕಾರ್ಮಿಕ ಕಾನೂನುಗಳೂ ಸೇರಿದಂತೆ ದೇಶದ ಕಲ್ಯಾಣದ ಸದುದ್ದೇಶವುಳ್ಳ ಅನೇಕ ಕಾನೂನುಗಳು (Welfare Legislation) ಅನ್ವಯಿಸುವುದೇ ಇಲ್ಲ. ಹೆಚ್ಚಿನ ಕಡೆಗಳಲ್ಲಿ ಯಾವುದೇ ಕಾರ್ಮಿಕ ಸಂಘಟನೆಗಳಿಗೆ ಅವಕಾಶವಿಲ್ಲ. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲವರ್ಗಗಳಿಗೆ ಸೇರಿದವರಿಗೆ ಸಹ ಇನ್ನೂ ನ್ಯಾಯ ದೊರೆತಿಲ್ಲ. ಅದರಲ್ಲಿ ತಳ ಸಮುದಾಯಗಳ ಪ್ರಾತಿನಿಧ್ಯವನ್ನು ಅರಗಿಸಿಕೊಳ್ಳುವಷ್ಟು ನಮ್ಮ ಸಮಾಜ ಇನ್ನೂ ಬೆಳೆದಿಲ್ಲ ಎನ್ನುವುದು ಸತ್ಯವೇ.

ಆದರೆ ಸಣ್ಣ ಪುಟ್ಟ ವಿಚಾರಗಳಿಗೆ ಒಂದು ಆಯೋಗ ರಚಿಸುವ ಸರಕಾರಗಳು ಸರಕಾರೇತರ ವಲಯಗಳ ಪ್ರಾತಿನಿಧ್ಯದ ವಿಶ್ಲೇಷಣೆಗೆ ಯಾವುದೇ ಒಂದು ಆಯೋಗವನ್ನು ರಚಿಸದಿರುವುದು ವಿಷಾದನೀಯ. ರಾಜ್ಯ ಮತ್ತು ರಾಷ್ಟ್ರದ ಕಾನೂನು ಅಯೋಗಗಳೂ (Law Commissions) ಕೂಡ ಈ ಬಗ್ಗೆ ಕಣ್ಣು ಹರಿಸಿಲ್ಲ. ಸಧ್ಯದ ಸಂವಿಧಾನದ ಮತ್ತು ಕಾನೂನುಗಳ ಚೌಕಟ್ಟಿನಲ್ಲೇ ಅಥವಾ ಅವುಗಳನ್ನು ವಿಸ್ತರಿಸಿ ಪ್ರಾತಿನಿಧ್ಯವನ್ನು ಕಲ್ಪಿಸುವ ಪ್ರಯತ್ನ ಮುಂದಿನ ದಿನಗಳಲ್ಲಿ ಸಾಗಬೇಕಿದೆ.

ಇಂಥಹ ಒಂದು ಪ್ರಾಮಾಣಿಕ ಪ್ರಯತ್ನ ನಮ್ಮ ರಾಜ್ಯದ ‘ಅಹಿಂದ’ ಸರಕಾರದಿಂದಲೇ ಪ್ರಾರಂಭವಾದರೆ ತುಂಬಾ ಸಂತೋಷ.

ಕಾನ್ಶಿರಾಂ – ಕಲ್ಲಿದ್ದಲ ಕಗ್ಗತ್ತಲೆಯನ್ನು ಕೊಹಿನೂರೊಂದು ಕಳೆದ ಕಥೆ : ಭಾಗ- ೩

ಮಂಡಲ ವರದಿ ಜಾರಿಗೆ ತರಲು ಹೋರಾಡಿದ ಮೊಟ್ಟ ಮೊದಲ ದೃಷ್ಟಾರ

-ಶ್ರೀಧರ ಪ್ರಭು

sridhar-2

ಈ ದೇಶದಲ್ಲಿ ಹಿಂದುಳಿದ ವರ್ಗಗಳು (OBC) ಅತ್ಯಂತ ಹೆಚ್ಚು ಋಣಿಯಾಗಿರಬೇಕಿರುವುದು ಬಾಬಾಸಾಹೇಬ್ ಅಂಬೇಡ್ಕರರಿಗೆ. ಬಾಬಾಸಾಹೇಬರು ನೆಹರು ಸಂಪುಟಕ್ಕೆ ರಾಜೀನಾಮೆ ಸಲ್ಲಿಸಿದ ನಾಲ್ಕು ಮುಖ್ಯ ಕಾರಣಗಳಲ್ಲಿ ಮೊಟ್ಟ ಮೊದಲ ಮತ್ತು ಪ್ರಮುಖ ಕಾರಣ ಸಂವಿಧಾನದ ೩೪೦ ನೆ ವಿಧಿಯ ಪ್ರಕಾರ ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ ದೊರಕೆದೇ ಇದ್ದದ್ದು.
ಹಿಂದುಳಿದ ವರ್ಗಗಳ ಅಭಿವೃದ್ದಿಗೆ ಬರೀ ಆಯೋಗವೊಂದನ್ನು ರಚಿಸುವ ಪ್ರಸ್ತಾವನೆ ಇಟ್ಟು ಸರಕಾರ ತನ್ನ ನೇರ ಜವಾಬ್ದಾರಿಯನ್ನು ಆಯೋಗಕ್ಕೆ ವರ್ಗಾಯಿಸಿ ಕೈತೊಳೆದುಕೊಂದಿದ್ದಲ್ಲದೇ ಆಯೋಗಕ್ಕೆ ನೇಮಕಾತಿ ಕೂಡ ಮಾಡದ ಕ್ರಮವನ್ನು ಖಂಡಿಸಿ ಹೊರಬಂದರು. ಸ್ವತಂತ್ರ ಭಾರತದ ಮೊದಲ ಸರಕಾರ ಅಂಬೇಡ್ಕರರಿಗೆ ಸಂಸತ್ತಿನಲ್ಲಿ ತಮ್ಮ ರಾಜೀನಾಮ ಕುರಿತು ಹೇಳಿಕೆ ನೀಡಲೂ ಅವಕಾಶ ಒದಗಿಸಲಿಲ್ಲ. ಹಾಗಾಗಿ ಅವರು ಯಾವ ಕಾರಣಗಳಿಗೋಸ್ಕರ ರಾಜೀನಾಮೆ ಇತ್ತದ್ದು ಎಂದು ದೇಶಕ್ಕೆ ಗೊತ್ತಾಗಲೇ ಇಲ್ಲ. ಅಂದಿನ ಮನುವಾದಿ ನಿಯಂತ್ರಿತ ಮಾಧ್ಯಮಗಳು ಭಾಷಣದ ಪಾಠವನ್ನು ಕೂಡ ಪ್ರಕಟಿಸಲಿಲ್ಲ. ಬಾಬಾ ಸಾಹೇಬರ ಈ ಐತಿಹಾಸಿಕ ತೀರ್ಮಾನ ನಂತರದಲ್ಲಿ (೧೯೫೩) ಕಾಕಾ ಕಲೇಲ್ಕರ್ (ಪುಣೆಯ ಗಾಂಧಿವಾದಿ ಬ್ರಾಹ್ಮಣ ಮುಖಂಡ – ಹುಟ್ಟಿದ್ದು ಬೆಳಗಾವಿ ತಾಲೂಕಿನ ಬೆಳಗುಂಡಿಯಲ್ಲಿ) ನೇತೃತ್ವದಲ್ಲಿ ದೇಶದ ಮೊಟ್ಟ ಮೊದಲ ಹಿಂದುಳಿದ ವರ್ಗಗಳ ಆಯೋಗ – ‘ಕಲೇಲ್ಕರ್ ಹಿಂದುಳಿದ ವರ್ಗಗಳ ಆಯೋಗ’ ರಚನೆಯಾಗಲು ನಾಂದಿಯಾಯಿತು.
ಈ ಕಾಲೇಲ್ಕರ್ ವರದಿ ತುಂಬಾ ಮಜವಾಗಿತ್ತು. ಅಲ್ಲಿ ಇಲ್ಲಿ ಏನಾದರೂ ಪ್ರಾತಿನಿಧ್ಯ ಕೊಡುವುದಾದರೆ ಶಾಲೆಗಳಲ್ಲಿ ಜವಾನನ ಹುದ್ದೆ ಮತ್ತು ಪೌರ ಕಾರ್ಮಿಕರ ಹುದ್ದೆ, ಇಂಥಹ ಹುದ್ದೆಗಳಿಗೆ ಬೇಕಾದರೆ ಕೊಡಬಹುದು; ಆದರೆ ಯಾವುದೇ ಕಾರಣಕ್ಕೂ ಮೊದಲ ಮತ್ತು ಎರಡನೇ ದರ್ಜೆಯ ಕೆಲಸಗಳಲ್ಲಿ ಪ್ರಾತಿನಿಧ್ಯ ಇರಲೇ ಬಾರದು ಎಂದು ಶಿಫಾರಸ್ಸು ಮಾಡಲಾಯಿತು! ಸ್ವತಃ ಆಯೋಗದ ಅಧ್ಯಕ್ಷರೇ ತಮ್ಮ ವರದಿಯ ಶಿಫಾರಸ್ಸುಗಳಿಗೆ ವಿರೋಧ ವ್ಯಕ್ತ ಪಡಿಸಿ ಸರಕಾರದ ಹುದ್ದೆಗಳಲ್ಲಿ ಹಿಂದುಳಿದವರಿಗೆ ಪ್ರತಿನಿಧ್ಯವೇ ಇರಬಾರದು ಬೇಕಾದರೆ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೇಕಾದರೆ ಕೊಡಿ ಎಂದರು. ಸರಕಾರಕ್ಕೆ ವರದಿ ಸಲ್ಲಿಸುವಾಗ ಬರೆದ ಪತ್ರದಲ್ಲೇ ತಮ್ಮ ವರದಿಗೆ ತಮ್ಮದೇ ವಿರೋಧವಿದೆ ಎಂದೂ ಹೇಳಿ ಬಿಟ್ಟರು. ಇನ್ನು ಇಂತಹ periyar-ambedkarಉಗುರು-ಹಲ್ಲಿಲ್ಲದ ಕಾಕಾ ಕಲೇಲ್ಕರ್ ವರದಿಗೆ ಕೂಡ ಅಂದು ಸಾಕಷ್ಟು ವಿರೋಧ ವ್ಯಕ್ತವಾಗಿ ಕಲೇಲ್ಕರ್ ಅವರಿಂದಲೇ ಮಣ್ಣು ಕೊಡಿಸಲಾಯಿತು. ಕೊಡಲಾಯಿತು. ಅಂಬೇಡ್ಕರರ ಸತತ ಪ್ರಯತ್ನದ ಫಲವಾಗಿಯೇ ಹಿಂದುಳಿದ ವರ್ಗಗಳಿಗೆ ಇಂದು ಮೀಸಲಾತಿ ದೊರೆತದ್ದು.
ಬಾಬಾಸಾಹೇಬರ ನಂತರದಲ್ಲಿ ಈ ದೇಶದ ಹಿಂದುಳಿದ ವರ್ಗಗಳು ಅತ್ಯಂತ ಹೆಚ್ಚು ಋಣಿಯಾಗಿರಬೇಕದದ್ದು ಯಾರಿಗೆ ಎಂದು ರಾಜಕೀಯ ಇತಿಹಾಸ ತಜ್ಞರು ಪ್ರಾಮಾಣಿಕ ಸಂಶೋದನೆ ಮಾಡಿದರೆ ಗೋಚರಿಸುವ ಮೊಟ್ಟ ಮೊದಲ ಹೆಸರು ದಾದಾಸಾಹೇಬ್ ಕಾನ್ಶಿರಾಂ. ಎಲ್ಲರೂ ನಂಬಿದಂತೆ ಮಂಡಲ ವರದಿಯ ರೂವಾರಿ ವಿ ಪಿ ಸಿಂಗ್ ಅಲ್ಲ. ಬದಲಿಗೆ ಮಾನ್ಯವರ ಕಾನ್ಶಿರಾಂ. ೧೯೮೭ ರಲ್ಲಿ ಹರ್ಯಾಣ ವಿಧಾನಸಭೆಗೆ ಚುನಾವಣಾ ಪ್ರಚಾರ ಭಾಷಣದಲ್ಲಿ ಮೊಟ್ಟ ಮೊದಲ ಬಾರಿಗೆ ಮಂಡಲ ಆಯೋಗದ ಶಿಫಾರಸ್ಸು ಜಾರಿಗೆ ಮಾಡಬೇಕು ಎಂದು ಗರ್ಜಿಸಿದ್ದು ಕಾನ್ಶಿರಾಂ. ಅಂದಿನವರೆಗೆ ಯಾರಿಗೂ ಮಂಡಲ ವರದಿ ಎಂದರೆ ಏನು ಎಂದೇ ಗೊತ್ತಿರಲಿಲ್ಲ. ೧೯೮೭ ರಲ್ಲಿ ಕಾನ್ಶಿರಾಮರು ಹರ್ಯಾಣ ಚುನಾವಣಾ ಪ್ರಚಾರ ಭಾಷಣಗಳು ಸಂಪಾದಿಸಿದರೆ ಅದು ಇಡೀ ಭಾರತದ ಹಿಂದುಳಿದ ವರ್ಗದ ಪಾಲಿಗೆ ಧರ್ಮ ಗ್ರಂಥವಾದೀತು.

 

ಬಹುಜನ ಸಮಾಜ ಪಕ್ಷದ ಮೊದಲ ಎರಡು ಐತಿಹಾಸಿಕ ಘೋಷಣೆಗಳು – “ಮಂಡಲ್ ಅಯೋಗ್ ಜಾರಿ ಕರೋ ನಹಿ ತೋ ಕುರ್ಸಿ ಖಾಲಿ ಕರೋ” ಮತ್ತು “ವೋಟ್ ಹಮಾರಾ – ರಾಜ್ ತುಮ್ಹಾರಾ ನಹಿ ಚಲೇಗಾ ನಹಿ ಚಲೇಗಾ” ಹರ್ಯಾಣ ಚುನಾವಣೆಯ ಈ ಎರಡು ಚುನಾವಣಾ ಘೋಷಣೆಗಳು ದೇಶದಾದ್ಯಂತ ಮನೆಮಾತಾದವು. ಕಾನ್ಶಿರಾಂ ಒಂದು ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳುತ್ತಾರೆ
“ಈ ದೇಶದ ೪೫೦ ಜನ ಜಿಲ್ಲಾಧಿಕಾರಿಗಳಲ್ಲಿ ೧೨೫ ಜನ ದಲಿತರು. ದೇಶದ ಶೇಕಡಾ ಐವತ್ತರಷ್ಟು ಜನಸಂಖ್ಯೆಯ ಹಿಂದುಳಿದ ವರ್ಗದವರು ವರು ಇಲ್ಲವೇ ಇಲ್ಲ ಎನ್ನುವಷ್ಟು ಸಂಖ್ಯೆಯಲ್ಲಿ ಜಿಲ್ಲಾಧಿಕಾರಿ ಗಳಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ೪೫೦ ಜನ ಐಎಎಸ್ ಅಧಿಕಾರಿಗಳಿದ್ದಾರೆ ಅದರಲ್ಲಿ ೧೩೭ ಜನ ದಲಿತರು ಆದರೆ ಹಿಂದುಳಿದವರು ಕೇವಲ ೭ (ಅದರಲ್ಲಿ ಆರು ಜನ ಯಾದವರು). ಏಕೆ ಎಂದು ಯೋಚಿಸಿ”
ಅನೇಕರಿಗೆ ಗೊತ್ತಿಲ್ಲದ ವಿಚಾರವೆಂದರೆ ಬಹುಜನ ಸಮಾಜ ಪಕ್ಷದ ಮೊಟ್ಟ ಮೊದಲ ಲೋಕ ಸಭಾ ಸದಸ್ಯ ಭೀಮ್ ಸಿಂಗ್ ಪಟೇಲ್ ( ೧೯೯೧ ರ ಲೋಕ ಸಭಾ ಚುನಾವಣೆಯಿಂದ ಮಧ್ಯ ಪ್ರದೇಶದ ರೀವಾ ಲೋಕ ಸಭಾ ಕ್ಷೇತ್ರ) ಹಿಂದುಳಿದ ವರ್ಗದ ಕುರ್ಮಿ ಜನಾಂಗದವರು. ಅಷ್ಟೇ ಅಲ್ಲ, ೧೯೯೬ ರಲ್ಲಿ ಮತ್ತು ಮೇಲ್ವರ್ಗದ ಭದ್ರ ಕೋಟೆ ಎನಿಸಿಕೊಂಡ ಮಧ್ಯ ಪ್ರದೇಶದ ಸತ್ನಾ ಲೋಕ ಸಭಾ ಕ್ಷೇತ್ರದಲ್ಲಿ ಬಹುಜನ ಸಮಾಜ ಪಕ್ಷದಿಂದ ಪ್ರಥಮ ಬಾರಿಗೆ ಸ್ಪರ್ಧಿಸಿದ ಸುಖ್ ಲಾಲ್ ಕುಶ್ವಾಹ ಅರ್ಜುನ ಸಿಂಗರನ್ನು ಸೋಲಿಸಿ ಬಿಟ್ಟರು. ವಾಜಪೇಯಿಯವರ ಅಲೆ ಇದ್ದಾಗ್ಯೂ ಭಾಜಪ ಮೂರನೇ ಸ್ಥಾನಕ್ಕೆ ಹೋಯಿತು. ಉತ್ತರ ಭಾರತದಲ್ಲಿ, ಅದರಲ್ಲೂ ಮುಖ್ಯವಾಗಿ ಉತ್ತರ ಪ್ರದೇಶ, ಹರ್ಯಾಣ, ವಿಂಧ್ಯ ಪ್ರದೇಶ (ಮಧ್ಯಪ್ರದೇಶದ ಉತ್ತರ ಭಾಗ) ದಲ್ಲಿ ಬಹು ದೊಡ್ಡ ಸಂಖ್ಯೆಯಲ್ಲಿ ಹಿಂದುಳಿದ ವರ್ಗ ಬಹುಜನ ಸಮಾಜ ಪಾರ್ಟಿಯ ಜೊತೆ ಗುರುತಿಸಿ ಕೊಂಡಿತು. ಹೀಗೆ ಅಧುನಿಕ ಭಾರತದ ರಾಜಕೀಯ ಸಂದರ್ಭದಲ್ಲಿ ಹಿಂದುಳಿದ ವರ್ಗಗಳಲ್ಲಿ ಮೊಟ್ಟ ಮೊದಲು ಜಾಗೃತಿ ಮೂಡಿಸಿದ ಕೀರ್ತಿ ಸಲ್ಲಬೇಕಿರುವುದು ಕಾನ್ಶಿರಾಂ ಅವರಿಗೆ.

kanshiram
ವಿಶೇಷವೆಂದರೆ ಕುಶ್ವಾಹ ಮತ್ತು ಪಟೇಲ್ ಸಂಸದರಾದಾಗ ಅವರ ವಯಸ್ಸು ಮೂವತ್ತೈದು ವರ್ಷ ಮೀರಿರಲಿಲ್ಲ. ಹೀಗೆ ಹಿಂದುಳಿದ ವರ್ಗಗಳಲ್ಲಿನ ಹೊಸ ತಲೆಮಾರಿಗೆ ಅವಕಾಶಗಳನ್ನು ಕೊಟ್ಟು ಬೆಳೆಸಿದ ಕಾನ್ಶಿರಾಂ ಬರದೇ ಇದ್ದಿದ್ದರೆ ಇಡೀ ಉತ್ತರ ಭಾರತದ ರಾಜಕೀಯ ಕೇಸರಿಮಯವಾಗಿರುತ್ತಿತ್ತು.
೧೯೯೧ ರಲ್ಲಿ ಉತ್ತರ ಪ್ರದೇಶದಲ್ಲಿ ೨೨೧ ಸ್ಥಾನ ಗಳನ್ನು ಗೆದ್ದು ಅಧಿಕಾರದಲ್ಲಿದ್ದ ಭಾರತೀಯ ಜನತಾ ಪಾರ್ಟಿ ಸರಕಾರವನ್ನು ಬಾಬರಿ ಮಸೀದಿ ಧ್ವಂಸದ ಹಿನ್ನೆಲೆಯಲ್ಲಿ ವಿಸರ್ಜಿಸಿ ರಾಷ್ಟ್ರಪತಿ ಆಡಳಿತ ತರಲಾಯಿತು. ನಂತರ ನಡೆದ ಚುನಾವಣೆಗಳಲ್ಲಿ ಎಲ್ಲರೂ ಭಾವಿಸಿದ್ದು ಭಾಜಪ ಸಂಪೂರ್ಣ ಬಹುಮತ ಪಡೆಯುತ್ತದೆ ಎಂದು. ಆದರೆ ಎಲ್ಲರ ನಿರೀಕ್ಷೆ ಹುಸಿಗೊಳಿಸಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ-ಬಹುಜನ ಸಮಾಜ ಪಾರ್ಟಿಯ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದಿತು. ಕೋಮು ಜ್ವಾಲೆಯಲ್ಲಿ ಬೆಂದು ಹೋಗಿದ್ದ ಈ ಚುನಾವಣೆಯಲ್ಲಿ ಕೋಮುವಾದಿ ರಾಜಕಾರಣವನ್ನು ಹತ್ತಿಕ್ಕಿ ಜನಪರ ಆಶಯ ಹೊತ್ತ ಹಿಂದುಳಿದ ವರ್ಗಗಳಿಗೆ ಅಧಿಕಾರ ದೊರಕಿಸಿಕೊಡಲು ಕಾರಣ ಕಾನ್ಶಿರಾಂ ಅವರ ಸಂಘಟನಾ ಚಾತುರ್ಯ. ಮೊತ್ತ ಮೊದಲ ಬಾರಿಗೆ ಯಶಸ್ಸಿಗೆ ಕಾರಣ.
ಅದರೊಂದಿಗೇ ೧೯೯೮ ರ ಮಧ್ಯ ಪ್ರದೇಶದ ವಿಧಾನ ಸಭಾ ಚುನಾವಣೆಯಲ್ಲಿ ಕಾನ್ಶಿರಾಂ ತಮ್ಮ ಪ್ರಸಿದ್ದ ಘೋಷಣೆ “ಜಿಸ್ಕಿ ಜಿತನಿ ಸಂಖ್ಯಾ ಭಾರಿ – ಉಸ್ಕಿ ಉತನಿ ಭಾಗಿದಾರಿ” (ಅವರವರ ಸಂಖ್ಯೆ ಯಷ್ಟು ಅವರ ಪ್ರಾತಿನಿಧ್ಯ’) ಯನ್ನು ಸಂಪೂರ್ಣ ಜಾರಿ ಗೊಳಿಸಿ ೫೦.೫ % ರಷ್ಟು ಟಿಕೆಟ್ ಗಳನ್ನು ಹಿಂದುಳಿದ ವರ್ಗಗಳಿಗೆ ಕೊಟ್ಟರು. ಬಿ.ಎಸ್.ಪಿ ಗೆದ್ದುಕೊಂಡ ಹನ್ನೊಂದು ಕ್ಷೇತ್ರ ಗಳಲ್ಲಿ ಹೆಚ್ಚಿನ ಕ್ಷೇತ್ರಗಳು ಸಾಮಾನ್ಯ ಕ್ಷೇತ್ರಗಳಾಗಿದ್ದವು. ಅವರ ಜೀವನ ಕಾಲದಲ್ಲಿ ಮಧ್ಯ ಪ್ರದೇಶದ ಹಿಂದುಳಿದ ವರ್ಗ ಕಾನ್ಶಿರಾಂರ ನಾಯಕತ್ವ ಮತ್ತು ಸಿದ್ಧಾಂತಗಳ ಜೊತೆ ಸಂಪೂರ್ಣವಾಗಿ ಸಮಾವೇಶಗೊಂಡಿತ್ತು.
ಒಂದು ಲೆಕ್ಕದಲ್ಲಿ ನೋಡಿದರೆ ಕಲ್ಯಾಣ್ ಸಿಂಗ್, ವಿನಯ್ ಕಟಿಯಾರ್, ಉಮಾ ಭಾರತಿಯವರಿಗೆ ಸಂಘ ಪರಿವಾರ ನಾಯಕತ್ವ ಕೊಡಲು ಕಾರಣ ಉತ್ತರ ಪ್ರದೇಶದಲ್ಲಿ ಬಹಳ ದೊಡ್ಡ ಸಂಖ್ಯೆಯಲ್ಲಿ ಹಿಂದುಳಿದವರು ಸಾಮಾಜಿಕವಾಗಿ ಸಮಾಜವಾದಿ ಮತ್ತು ಬಹುಜನ ಚಳುವಳಿಯ ಜೊತೆ ಗುರಿತಿಸಿಕೊಂಡಿದ್ದೇ ಆಗಿತ್ತು. ಹೀಗಾಗಿ ಒಂದು ಲೆಕ್ಕದಲ್ಲಿ ಸಂಘಪರಿವಾರಕ್ಕೆ ಒಬಿಸಿಗಳನ್ನ ಮುಂಚೂಣಿಗೆ ತರುವ ಅನಿವಾರ್ಯತೆ ಬಂದದ್ದು ಬಹುಜನ ರಾಜಕಾರಣದಿಂದ.
‘ಅಯೋಧ್ಯಾ ಕಾಂಡ’ ಜರುಗಿದ ಮೂರು ವರ್ಷಗಳಲ್ಲಿ (೧೮, ೧೯, ಸೆಪ್ಟೆಂಬರ್, ೧೯೯೫) ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಾರ್ಟಿಯ ಸರಕಾರ ರಚನೆಯಾಗಿದ್ದಲ್ಲದೆ, ಮನುವಾದದ ಹೃದಯ ಕೇಂದ್ರ ಲಖನೌ ನಲ್ಲಿ ಪೆರಿಯಾರ್ ಮೇಳ ಆಯೋಜಿಸಲಾಯಿತು. ದಕ್ಷಿಣ ಭಾರತದ ಅದರಲ್ಲೂ ರಾಮನನ್ನು ವಿರೋಧಿಸಿದ ತಮಿಳುನಾಡಿನ ರಾಜಕೀಯ ಚಿಂತಕರೊಬ್ಬರ ನೆನಪಿನಲ್ಲಿ ಬೃಹತ್ ಮೇಳವೊಂದನ್ನು ಭಾಜಪದ ನೆರವು ಪಡೆದುಕೊಂಡೇ ಇದ್ದ ಕಾಲದಲ್ಲಿ ಆಚರಿಸಿದ ಛಾತಿ ಕನ್ಶಿರಾಂರಿಗೆ ಮಾತ್ರ ಸಾಧ್ಯವಿತ್ತು.
ಒಂದು ವೇಳೆ ಅನೇಕರು ಆರೋಪಿಸಿದ ಹಾಗೆ ಕಾನ್ಶಿರಾಂ ಅವಕಾಶವಾಗಿದ್ದರೆ, ರಿಪಬ್ಲಿಕನ್ ಪಾರ್ಟಿಯ ಅಠವಳೆ, ಉದಿತ್ ರಾಜ್, ಪಾಸ್ವಾನ್ ಮಾದರಿಯಲ್ಲಿ ಬಿಜೆಪಿ ತಾಳಕ್ಕೆ ಕುಣಿದು ಅವರಲ್ಲೇ ಲೀನವಾಗುತ್ತಿದ್ದರು. ಬಿಜೆಪಿಗೆ ಕಾನ್ಶಿರಾಂ ಅನಿವಾರ್ಯರಾಗಿದ್ದರೆ ಹೊರತು ಕಾನ್ಶಿರಾಂ ಭಾಜಪವನ್ನು ನೆಚ್ಚಿಕೊಂಡಿರಲಿಲ್ಲ. ಹಾಗಲ್ಲದಿದ್ದರೆ, ಉತ್ತರ ಪ್ರದೇಶದಲ್ಲಿ ಮಾಯಾವತಿ ಸರಕಾರಕ್ಕೆ ಬಾಹ್ಯ ಬೆಂಬಲ ಕೊಡುವುದಾಗಿ ಘೋಷಣೆ ಮಾಡಿದ ಯಾರ ಮುಲಾಜೂ ಇಲ್ಲದೆ, ನಮ್ಮ ಗುರಿ ಸಾಧನೆಗೆ ನಾವು ಭಾಜಪವನ್ನು ಬಳಸಿಕೊಳ್ಳುತ್ತಿದ್ದೇವೆ ಎಂದು ಬಹಿರಂಗವಾಗಿ ಅವರು ಘೋಷಣೆ ಮಾಡುತ್ತಿರಲಿಲ್ಲ. ಮತ್ತೆ ಅಧಿಕಾರಕ್ಕೆ ಅಂಟಿಕೊಳ್ಳಲು ಬೇಕಾದ ‘ನಾಜೂಕಯ್ಯನ’ ಅವತಾರವೆತ್ತುತ್ತಿದ್ದರು.
ಕಾನ್ಶಿರಾಂ ಅವರ ಅಂತರಂಗ ಮತ್ತು ಬಹಿರಂಗ ಒಂದೇ ಆಗಿತ್ತು.

ಪ್ರತಿ ಸವಾಲಿಗೂ ಸಿದ್ಧ ಉತ್ತರ – ಬುದ್ಧ-ಚಾಣಕ್ಯರ ಬಿಹಾರ


– ಶ್ರೀಧರ್ ಪ್ರಭು


ಪರಿಹಾರವೇ ಇಲ್ಲವೇನೋ ಎಂಬಂಥ ಪ್ರಶ್ನೆಗಳನ್ನು ಸವಾಲಾಗಿ ಸ್ವೀಕರಿಸಿ ಇತಿಹಾಸದುದ್ದಕ್ಕೂ ದಿಟ್ಟ ಮತ್ತು ಸರ್ವಕಾಲಿಕ ಪರಿಹಾರ ನೀಡಿದ ನಾಡು ಬಿಹಾರ. ಸಿದ್ಧಾರ್ಥ ಗೌತಮನನ್ನು ಬುದ್ಧನನ್ನಾಗಿ, ಚಂಡ ಅಶೋಕನನ್ನು ದೇವನಾಂಪ್ರಿಯನನ್ನಾಗಿ, ಜಯಪ್ರಕಾಶರನ್ನು ಲೋಕನಾಯಕನನ್ನಾGautama-Buddhaಗಿ ಮಾಡಿ ಸಮಸ್ತ ನಾಡಿಗೆ ಬೆಳಕು ನೀಡಿದ ನಾಡು ಬಿಹಾರ.  ಆರ್ಯಭಟ, ಕೌಟಿಲ್ಯ, ಚಂದ್ರಗುಪ್ತ ಮೌರ್ಯ, ಗುರು ಗೋವಿಂದ ಸಿಂಹ ಹೀಗೆ ಸಾವಿರ ಸಾವಿರ ರತ್ನಗಳ ಖನಿ ಬಿಹಾರ. ನಳಂದದ (ನಳಂದಾ ಎಂದರೆ ಕೊನೆಯಿಲ್ಲದೆ ಮಾಡುವ ದಾನ) ವಿಶ್ವವಿದ್ಯಾಲಯದಿಂದ ಮೊದಲ್ಗೊಂಡು ಶಿಕ್ಷಣದ ಉತ್ತುಂಗವನ್ನು ಸಾಧಿಸಿದವರ, ಬೌದ್ಧ ಧರ್ಮವನ್ನು ಪ್ರಪಂಚಕ್ಕೆ ಮುಟ್ಟಿಸಿದವರ ಬಿಹಾರ ಅತ್ಯಂತ ಜಾಗೃತ ಭೂಮಿ. ನಮ್ಮ ದೇಶದ ಪ್ರತಿ ಹತ್ತು ಐಎಎಸ್ ಅಧಿಕಾರಿಗಳಲ್ಲಿ ಒಬ್ಬರು ಬಿಹಾರದವರು. ಅನೇಕ ಪ್ರತಿಭಾವಂತ ವಿಜ್ಞಾನಿಗಳು, ರಾಜಕೀಯ ವಿಶ್ಲೇಷಕರು, ವಿಜ್ಞಾನಿಗಳನ್ನು ಕೊಡುಗೆ ನೀಡಿದ ಬಿಹಾರ ಇಂದು ತನ್ನ ಮುಂದಿದ್ದ ಬಹುದೊಡ್ಡ ಸವಾಲಿಗೆ ತನ್ನದೇ ಛಾತಿ ಮೆರೆದು ಉತ್ತರಿಸಿದೆ.

ಬಿಹಾರ್ ರಾಜಕಾರಣದ ಹಿನ್ನೋಟ

ಹಲವು ಸಾಮಾಜಿಕ, ರಾಜಕೀಯ ಚಳುವಳಿಗಳಿಗೆ ಮಡಿಲಾಗಿದ್ದ ಬಿಹಾರವನ್ನು ಸ್ವಾತಂತ್ರ್ಯಾ ನಂತರ ನಾನಾ ಕಾರಣಗಳಿಗಾಗಿ ನಿರ್ಲಕ್ಷಿಸಲಾಯಿತು. ಭಾರತದ ಮೊದಲ ರಾಷ್ಟ್ರಪತಿಗಳು ಬಿಹಾರದವರೇ ಅದರೂ, ರಾಜಕೀಯ ಇಚ್ಛಾ ಶಕ್ತಿ ಮತ್ತು ಒಂದು ನಿರ್ದಿಷ್ಟ ಗೊತ್ತು ಗುರಿಯಿಲ್ಲದ ನೀತಿಗಳಿಂದಾಗಿ ಬಿಹಾರವನ್ನು ಸಂಪೂರ್ಣವಾಗಿ ಕೊನೆಗಾಣಿಸಲಾಯಿತು.

ಹಾಗೆ ನೋಡಿದರೆ ನೆಹರೂ ಸಂಪುಟದಲ್ಲಿ ಬಿಹಾರಕ್ಕ ಎರಡೇ ಸ್ಥಾನ ಸಿಕ್ಕಿದ್ದು. ಒಬ್ಬರು ಸಂಸದೀಯjp-jayaprakash-narayan ವ್ಯವಹಾರಗಳ ಖಾತೆ ಸಚಿವ ಸತ್ಯನಾರಾಯಣ ಸಿನ್ಹಾ ಇನ್ನೊಬ್ಬರು ಕಾರ್ಮಿಕ ಸಚಿವ ಬಾಬು ಜಗಜೀವನ ರಾಮ. ಬೌದ್ಧಿಕ ವಲಯಗಳಲ್ಲಿ ಬಿಹಾರ ಅಪಾರ ಸಾಧನೆ ಮೆರೆದಿತ್ತು. ಜಗಜೀವನ್ ರಾಮ್ ಇನ್ನೊಬ್ಬ ಬಿಹಾರದ ನಾಯಕ ಅನುಗ್ರಹ ನಾರಾಯಣ ಸಿನ್ಹಾ ಜೊತೆಗೆ ೧೯೪೭ ರಲ್ಲಿ ಅಂತರರಾಷ್ಟ್ರೀಯ ಕಾರ್ಮಿಕ ಸಂಘಟನೆಗೆ ಹೋಗಿ ಉಪನ್ಯಾಸ ನೀಡಿ ಬಂದಿದ್ದರು. ಹೀಗೆ ಬಿಹಾರದ ಪ್ರಭಾವಳಿ ಸಾಕಷ್ಟಿದ್ದರೂ, ಸಾಮಾಜಿಕ ಅಸಮಾನತೆಯ ನಿರ್ಮೂಲನೆಗೆ ಒತ್ತು ಸಿಗದ ಕಾರಣ ಬಿಹಾರದ ದಲಿತ ಮತ್ತು ಹಿಂದುಳಿದವರ ಬದುಕು ಒಂದು ದೊಡ್ಡ ಕಾರಾಗೃಹದಲ್ಲಿ ಬಂಧಿತ ಕೈದಿಗೂ ಕೀಳಾಗಿತ್ತು. ಇಡೀ ಬಿಹಾರವೇ ಒಂದು ಜೀತದ ಮನೆಯಾಗಿತ್ತು. ಬಿ ಪಿ ಮಂಡಲ್ (ಮಂಡಲ ಆಯೋಗದ ಕರ್ತ) ಕೆಲ ಸಮಯ ಮುಖ್ಯ ಮಂತ್ರಿಯಾದದ್ದು ಬಿಟ್ಟರೆ ದಲಿತ ಮತ್ತು ಹಿಂದುಳಿದವರಿಗೆ ಇಲ್ಲಿ ಅಧಿಕಾರವೇ ಸಿಗಲಿಲ್ಲ.

ಆದರೆ ೧೯೭೦ ರಲ್ಲಿ ಮೊದಲ ಬಾರಿಗೆ ಅಂದಿನ ಸಮಾಜವಾದಿ ಪಕ್ಷ  ಅಧಿಕಾರಕ್ಕೆ ಬಂದು ಕರ್ಪೂರಿ ಠಾಕುರ್ ಮುಖ್ಯ ಮಂತ್ರಿಯಾದರು. ಹೆಸರಿಗೆ ಮಾತ್ರ ಠಾಕುರ್ ಆಗಿದ್ದ ಇವರು ನೈಜ ಅರ್ಥದಲ್ಲಿ ಬಿಹಾರದ ತಳಸಮುದಾಯಕ್ಕೆ ನಾಯಕತ್ವ ನೀಡಿದರು. ಲಾಲು ಪ್ರಸಾದ್, ನಿತೀಶ್, ಪಾಸ್ವಾನ್ ಸೇರಿದಂತೆ ಇಂದಿನ ಬಿಹಾರದ ಬಹುತೇಕ ದಲಿತ ಮತ್ತು ಹಿಂದುಳಿದವರ ನಾಯಕರನ್ನು ಬೆಳೆಸಿದರು. ಬಿಹಾರವನ್ನು ಮೇಲ್ಜಾತಿಗಳ ಹಿಡಿತದಿಂದ ಮುಕ್ತಿಗೊಳಿಸಿದ  ಮೊದಲ ಕೀರ್ತಿ ಸಲ್ಲಬೇಕಾದದ್ದು ಜನನಾಯಕರಾದ ಕರ್ಪೂರಿಯವರಿಗೆ.

ಅವರ ಸಮಾಜವಾದಿ ಗರಡಿಯಲ್ಲಿ ಬೆಳೆದ ನಾಯಕತ್ವ ೧೯೭೫ ರಲ್ಲಿ ಹೇರಿದ ತುರ್ತು ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿತು. devegowda-vpsingh-chandrashekar-gujralತುರ್ತು ಪರಿಸ್ಥಿತಿಯ ವಿರೋಧಿಸಿ ಕಟ್ಟಿದ ಚಳುವಳಿಯ ಕಾವಿನಲ್ಲಿ ನೆಂದ ಬಿಹಾರದ ಜನಮಾನಸ ಮತ್ತೆ ಕರ್ಪೂರಿ ಯವರನ್ನು ನಾಯಕನನ್ನಾಗಿ ಆರಿಸಿತು. ಆದರೆ ನಂತರದಲ್ಲಿ ಬಂದ ಕಾಂಗ್ರೆಸ್ ಪಕ್ಷ ೧೯೯೦ ರ ವರೆಗೂ  ಅಧಿಕಾರದಲ್ಲಿತ್ತು. ಜಗನ್ನಾಥ ಮಿಶ್ರಾ ಸರಕಾರದ ಆಡಳಿತದಿಂದ ಬೇಸತ್ತು ಹೋಗಿದ್ದ ಜನತೆ ಅಂದಿನ ಯುವ ನಾಯಕ ಲಾಲೂ ಪ್ರಸಾದರನ್ನು ಸಿಂಹಾಸನದ ಮೇಲೆ ಕೂರಿಸಿತು. ಬಾಬರಿ ಮಸೀದಿ ಕೆಡವುವ ಆಂದೋಲನದಲ್ಲಿ ಮಗ್ನವಾಗಿದ್ದವರು ಕೋಮು ದಳ್ಳುರಿ ಅಂಟಿಸಿ ಬಿಟ್ಟಿದ್ದರೂ ಅದರ ಬೇಗುದಿಯಿಂದ ಬಿಹಾರ ಬಚಾವಾಗಿತ್ತು.

ಇಂದಿಗೆ ಇಪ್ಪತ್ತೈದು ವರ್ಷಗಳ ಹಿಂದೆ ಅಡ್ವಾಣಿಯವರ ರಥಯಾತ್ರೆಯನ್ನು ತಡೆದ ಲಾಲೂ ಪ್ರಸಾದ್ ಇಂದು ಬಿಹಾರದ ಜನತೆಯ ಮಧ್ಯೆ ಮತ್ತೆ ಕಿಂಗ್ ಮೇಕರ್ ಆಗಿ ಪ್ರಸ್ತುತರಾಗಿದ್ದಾರೆ. ಬಿಹಾರದ ಚುನಾವಣಾ ಫಲಿತಾಂಶ ಬಂದ ಮೇಲೆ ನಿತೀಶ್ ಗೆಲುವಿಗೆ ಕಾರಣವಾದ ಅನೇಕಾನೇಕ ಅಂಶಗಳನ್ನು ಪ್ರಸ್ತಾಪಿಸಲಾಗುತ್ತಿದೆ. ಕೆಲ ಪ್ರಮುಖ ಮಾಧ್ಯಮಗಳು ಇಡೀ ಚುನಾವಣೆಯ ಯಶಸ್ಸಿಗೆ ಪ್ರಶಾಂತ್ ಕಿಶೋರ್ ಎಂಬ ಮೋದಿಯವರ ಆಪ್ತ ವಲಯದ ಚುನಾವಣಾ ತಂತ್ರ ನಿಪುಣ ಕಾರಣ ಎಂದು ಹೊಗಳಿವೆ. ಕೆಲವರು ಜಾತಿ ಸಮೀಕರಣದ ಕಾರಣ ನೀಡಿ ಇದು ಜಾತಿ ಲೆಕ್ಕಾಚಾರಗಳ ಮೇಲಿನ ಗೆಲುವು ಎಂದಿದ್ದಾರೆ.

ಒಂದು ಚುನಾವಣೆಯ ಯಶಸ್ಸು ಒಬ್ಬ ವ್ಯಕ್ತಿ ಅಥವಾ ಬರಿ ಜಾತಿ ಲೆಕ್ಕಾಚಾರಗಳ ಮೊತ್ತವಾಗಿ  ನೋಡದೇ ಬಿಹಾರದ ಜನಸಾಮಾನ್ಯ ಇಷ್ಟೊಂದು ಸ್ಪಷ್ಟ ಬಹುಮತ ನೀಡಲು ಕಾರಣವಾದ ಬಹು ಮುಖ್ಯ ಆದರೆ ಮುಖ್ಯವಾಹಿನಿಯಲ್ಲಿ ಚರ್ಚೆಯಾಗದ ಅಂಶಗಳನ್ನು ನಾವು ಗಮನಿಸಬೇಕಿದೆ.

ಲಾಲೂ ಎಂಬ ಮಾಂತ್ರಿಕ

ನಮ್ಮ ಚಡ್ಡಿ ಚತುರರು ಇಂಗ್ಲೀಷ್ ಬರದ ಗಾವಂಟಿ ಗಮಾರ ಎಂದು ಬಿಂಬಿಸುವ ಲಾಲೂ ಪ್ರಸಾದ್ ಎಂಬ lalu-sharad-biharಅದ್ಭುತ ಶಕ್ತಿ ಈ ಗೆಲುವಿನ ರೂವಾರಿ ಮೊದಲ ಕಾರಣ. ಲೋಕಸಭಾ ಚುನಾವಣೆಯಲ್ಲಿಯೇ ಪಾಸ್ವಾನ್ ಎಂಬ ದಲಿತ ನಾಯಕ ಬಿಜೆಪಿ ಬುಟ್ಟಿಗೆ ಬಿದ್ದಿದ್ದರು. ನಂತರದಲ್ಲಿ ಮಾಂಝಿಯವರನ್ನು ಓಲೈಸಿ ಮಹದಲಿತರನ್ನು ಸೆಳೆಯುವ ಪ್ರಯತ್ನವಾಯಿತು. ದಲಿತರ ಅಲ್ಪ ಸ್ವಲ್ಪ ಮತ ಪಡೆಯಬಲ್ಲ ಸಮರ್ಥ್ಯವಿದ್ದ ಬಿಎಸ್ಪಿ ಮತ್ತು ಎಡ ಪಕ್ಷಗಳು ಈ ಚುನಾವಣೆಗಳು ಶುರುವಾಗುವ ಮೊದಲೇ ತಾವು ಸ್ವಾತಂತ್ರ್ಯ ವಾಗಿ ಹೋರಾಟ ಮಾಡುವುದಾಗಿ ಘೋಷಿಸಿ ಬಿಟ್ಟಿದ್ದವು. ಲಾಲೂ ಅವರ ಸಮೀಪವರ್ತಿ ಪಪ್ಪು ಯಾದವರನ್ನು ಕೂಡ ಬಿಜೆಪಿ ಸೆಳೆದುಬಿಟ್ಟಿತ್ತು. ಹೀಗೆ ದಲಿತ ಮತ್ತು ಯಾದವ ಮತದಾರದ ಮಧ್ಯೆ ಬಿಜೆಪಿ ಬೇರೂರಲು ಸಾಕಷ್ಟು ಪ್ರಯತ್ನ ಮಾಡಿ ತಕ್ಕ ಮಟ್ಟಿಗೆ ಸಫಲವಾಯಿತು. ಇವ್ಯಾವುದನ್ನೂ ಲಕ್ಷಿಸದ ಲಾಲೂ ಬಿಹಾರದ ಅಸಲಿ ಸಂಘಟನಾ ಸಾಮರ್ಥ್ಯ ಮೆರೆದರು. ಬಿಹಾರದ ಹೃದಯವನ್ನು ಬಲ್ಲ ಲಾಲೂ ತಮ್ಮ ಸಂಪೂರ್ಣ ಶಕ್ತಿಯನ್ನು ಪಣಕ್ಕೆ ಒಡ್ಡಿ ಪರಿಹರಿಸಲು ಸಾಧ್ಯವೇ ಇಲ್ಲದ ಸವಾಲುಗಳನ್ನು ಸ್ವೀಕರಿಸಿದರು. ನಿತೀಶ್ ರನ್ನು  ಮುಖ್ಯಮಂತ್ರಿ ಎಂದು ಬಿಂಬಿಸಿ ಕಾಂಗ್ರೆಸ್ ಪಕ್ಷದ ಸಮರ್ಥನೆಯನ್ನೂ ಪಡೆದರು. ಸೋನಿಯಾ ಮತ್ತು ರಾಹುಲ್ರನ್ನು ಎಷ್ಟು ಬೇಕೋ ಅಷ್ಟೇ ಪ್ರಯೋಗಿಸಿದ ಲಾಲೂ ಸಂಪೂರ್ಣವಾಗಿ ಚುನಾವಣೆಯನ್ನು ಬೇರುಮಟ್ಟದ ಸಂಘಟನೆಯ ಭಾರ ಹೊತ್ತರು. ಅಪ್ರತಿಮ ವಾಗ್ಮಿ ಮತ್ತು ಮನಸೆಳೆಯುವ ಮಾತುಗಳಿಗೆ ಹೆಸರಾದ ಲಾಲೂ ಚುನಾವಣೆಯ ಮೊದಲು ಮತ್ತು ನಂತರದಲ್ಲಿ ನಡೆದ ಯಾವುದೇ ಭಾಷಣ ಮತ್ತು ಪತ್ರಿಕಾಗೋಷ್ಠಿಗಳಲ್ಲಿ  ನಿತೀಶ್ ತಮ್ಮ ಜೊತೆಗಿದ್ದರೆ ಮೊದಲ ಪ್ರಾಶಸ್ತ್ಯ ನಿತೀಶ್ ಗೇ ನೀಡಿದರು. ಸೀಟು ಹೊಂದಾಣಿಕೆಯಲ್ಲಿ ನಿತೀಶ್ ಮತ್ತು ಲಾಲೂ ತಾದಾತ್ಮ್ಯ ಅನುಕರಣೀಯ ವಾಗಿತ್ತು. ಸಣ್ಣ ಪುಟ್ಟ ಸ್ಥಳೀಯ ಗಲಾಟೆಗಳನ್ನು ಸಮರ್ಥವಾಗಿ ಲಾಲೂ ನಿಭಾಯಿಸಿದರು.

ನಿತೀಶ್ ಎಂಬ ಮೌನ ಸಾಧಕ

ಎರಡನೇ ಬಹು ಮುಖ್ಯ ಅಂಶ ನಿತೀಶ್ ಆಡಳಿತಾವಧಿಯಲ್ಲಿನ ಅವರ ಅದ್ಭುತ ಸಾಧನೆ. ಎಲೆಕ್ಟ್ರಿಕಲ್ ಎಂಜಿನೀರಿಂಗ್ ಪದವೀಧರ ನಿತೀಶ್ ಭಾರತೀಯ ತಾಂತ್ರಿಕ ಸೇವೆಯಲಿದ್ದು ನಂತರ ರಾಜಕೀಯಕ್ಕೆ ಹೊರಳಿದವರು. ನಿತೀಶ್ ಅತ್ಯಧ್ಭುತ lalu_nitishಪ್ರತಿಭಾವಂತ ಆಡಳಿತಗಾರ. ೨೦೦೯ ರಲ್ಲಿ ಲೋಕಪಾಲದ ಸುದ್ದಿಯೇ ಇಲ್ಲದಾಗ ಅತ್ಯಂತ ಪುರೋಗಾಮಿ ಬಿಹಾರ ವಿಶೇಷ ನ್ಯಾಯಾಲಯಗಳ ಕಾಯಿದೆ, ೨೦೦೯ ನ್ನು ಜಾರಿಗೆ ತಂದು ಸದ್ದಿಲ್ಲದೇ ಬ್ರಷ್ಟಾಚಾರವನ್ನು ಮಟ್ಟ ಹಾಕಿದರು. ಬ್ರಷ್ಟ ಅಧಿಕಾರಿಗಳ ಮನೆಗಳನ್ನು ಜಪ್ತಿ ಮಾಡಿ ಶಾಲೆ, ಆಸ್ಪತ್ರೆ, ಗ್ರಂಥಾಲಯ ಮತ್ತು ಸಮುದಾಯ ಭವನಗಳನ್ನಾಗಿ ಪರಿವರ್ತಿಸಿಬಿಟ್ಟರು. ಬಿಹಾರ ಅರ್ಥಿಕ ಪ್ರಗತಿಯ ಹೊಸ ಮೈಲುಗಲ್ಲು ಮೀಟಿತು. ನಿತೀಶ್ ಹಳ್ಳಿ ಹಳ್ಳಿ ಗಳಲ್ಲಿ ಹೆಣ್ಣುಮಕ್ಕಳ ಬಗ್ಗೆ ವಿಶೇಷ ಗಮನ ಹರಿಸಿ  ಶಾಲೆ ಮತ್ತು ಉದ್ಯೋಗ ಪಸರಿಸಿದರು. ಹೆಣ್ಣು ಮಕ್ಕಳಿಗೆ ಉಚಿತ ಸಮವಸ್ತ್ರ, ಸೈಕಲ್ ಮತ್ತು ವಿದ್ಯಾರ್ಥಿ ವೇತನ ಜಾರಿ ಮಾಡಿದರು. ಮಧ್ಯಾಹ್ನದ ಊಟ ಯೋಜನೆ ಅತ್ಯಂತ ಸಮರ್ಪಕವಾಗಿ ಜಾರಿ ಮಾಡಿದರು. ಆರು ಗಂಟೆಯ ಮೇಲೆ ಹೆಣ್ಣುಮಕ್ಕಳು ಹೋಗಲಿ ಗಂಡಸರೇ ಮನೆಯಿಂದ ಹೊರಬರುವ ಪ್ರಮೇಯವಿರಲಿಲ್ಲ. ಕೆಲವೇ ತಿಂಗಳುಗಳಲ್ಲಿ ನಿತೀಶ್ ಈ ಚಿತ್ರಣ ಬದಲಿಸಿಬಿಟ್ಟರು. ಕಾನೂನು ಸುವ್ಯವಸ್ಥೆ ಸ್ಥಾಪನೆಯಾದ ನಂತರದಲ್ಲಿ ಬಿಹಾರದ ಅತ್ಯಂತ ಪ್ರಭಾವಿ ಮತ್ತು ಪ್ರತಿಭಾನ್ವಿತ ವರ್ಗ ಭಾರತದ ಮತ್ತು ಪ್ರಪಂಚದ ಬೇರೆ ಬೇರೆ ಭಾಗಗಳಿಂದ ಬಂದು ಬಿಹಾರದಲ್ಲಿ ನೆಲೆಸಿ ಉದ್ಯೋಗ ಮತ್ತು ವ್ಯಾಪಾರ ಕೈಗೊಂಡರು. ೨೦೧೩ ರಲ್ಲಿ ವಾಣಿಜ್ಯ ಸಂಸ್ಥೆ ಬಿಹಾರ ಮತ್ತು ಗುಜರಾತ್ ಮಧ್ಯೆ ಹೋಲಿಕೆ ಮಾಡಿ ಒಂದು ವರದಿ ಮಾಡಿತು. ಈ ವರದಿಯ ಪ್ರಕಾರ ಗುಜರಾತ್ ಖಾಸಗಿ ವಲಯಕ್ಕೆ ಮಣೆ ಹಾಕಿ ಬಂಡವಾಳ ಹೂಡಿಸಿ ಲಾಭ ಮಾಡಿಸಿದ್ದರೆ, ಬಿಹಾರದಲ್ಲಿ ಸರಕಾರವೇ ಅಗತ್ಯ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಿ ಲಾಭ ಜನರಿಗೇ ದಕ್ಕುವಂತೆ ಮಾಡಿತ್ತು. ಬಡವರ ಹೊಟ್ಟೆ ಮೇಲೆ ಹೊಡೆದು ಭೂಮಿ ವಶಪಡಿಸಿಕೊಳ್ಳದೇ, ಯಾವುದೇ ಅಬ್ಬರದ ಪ್ರಚಾರ ವಿಲ್ಲದೆ, ಸೇಡು ದ್ವೇಷದ ರಾಜಕಾರಣ ಮಾಡದೇ ನಿತೀಶ್ ಅತ್ಯಧ್ಭುತವನ್ನು ಸಾಧಿಸಿ ತೋರಿಸಿದ್ದರು. ಲಾಲೂ ಬಗ್ಗೆ ಅಲ್ಲಲ್ಲಿ ಅಸಮಾಧಾನವಿದ್ದ ಮೇಲ್ವರ್ಗ ಕೂಡ ನಿತೀಶ್ ಎಂದರೆ ಗೌರವಿಸುತ್ತಿತ್ತು. ಮೋದಿಯವರು ನಿತೀಶ್ರ ಕುರಿತು ವಯಕ್ತಿಕ ಟೀಕೆ ಮಾಡಿದಾಗ ನಿತೀಶ್ ಆಡಳಿತದ ಸಮಬಾಳ್ವೆಯ ಮಹತಿ ಅರಿತಿದ್ದ ಈ ವರ್ಗ ತನ್ನ ಸೇಡು ತೀರಿಸಿಕೊಂಡಿತು.

ಕೇಂದ್ರದ ಕುರಿತ ಹತಾಶೆ    

ಮೂರನೆಯ ಕಾರಣ,  ಬಿಹಾರದ ಜನತೆಗೆ ಮೋದಿ ಆಡಳಿತದ ಕುರಿತು ಆದ ತೀವ್ರ ಹತಾಶೆ. ಲೋಕಸಭಾ ಚುನಾವಣೆಯಲ್ಲಿ ನಲವತ್ತರಲ್ಲಿ ಮೂವತ್ತೊಂದು ಸ್ಥಾನ ಗೆದ್ದ ಬಿಜೆಪಿಯಿಂದ ಜನತೆಗೆ ಅಪಾರ ನಿರೀಕ್ಷೆಗಳಿದ್ದವು. ಬಿಹಾರ ಆರ್ಯಭಟನ ನಾಡು ಇಲ್ಲಿಯ ಜನಸಾಮಾನ್ಯರೂ ಗಣಿತದಲ್ಲಿ ಮಹಾ ಪ್ರಕಾಂಡರು! ಮೋದಿಯವರ ಲೋಕ ಸಭಾ ಚುನಾವಣೆಯಲ್ಲಿ ಆಶ್ವಾಸನೆ ನೀಡಿದ ಪ್ಯಾಕೇಜ್ ನ ಒಂದೊಂದು ರೂಪಾಯಿಯ ಲೆಕ್ಕವನ್ನೂ ಬಾಯಲ್ಲೇ ಹೇಳುವಷ್ಟು ಬುದ್ಧಿವಂತರು. ಇವರ ನಿರೀಕ್ಷೆಗಳು ಸಂಪೂರ್ಣ bihar-modi-nitishಸುಳ್ಳಾಗಿ ಜನಜೀವನ ಇನ್ನಷ್ಟು ದುರ್ಭರವಾದಾಗ ಮೋದಿಯವರ ಮೂವತ್ತೈದು ಸಭೆಗಳ ಸೇಡುಭರಿತ ವಯಕ್ತಿಕ ಟೀಕೆಭರಿತ ಭಾಷಣಗಳು ಜನತೆಗೆ ಕರ್ಕಶ ಶಬ್ದದಂತೆ ಕೇಳಿಸಿದವು.

ನಿತೀಶ್ ಲಾಲೂ ಜೋಡಿಯ ಬಿಹಾರದ ಗೆಲುವಿಗೆ ದೀರ್ಘಕಾಲೀನ ಐತಿಹಾಸಿಕ ಕಾರಣಗಳಿವೆ. ಬರಿ ಪ್ರಚಾರ ವೈಖರಿ, ಸೇಡಿನ ಭಾಷಣ, ಒಬ್ಬ ವ್ಯಕ್ತಿಯ ಚಾತುರ್ಯ ಯಾವ ಚುನಾವಣೆಯನ್ನು ಗೆಲ್ಲಿಸಲೂ ಸಾಧ್ಯವಾಗದು.

ಕೋಮು ಭಾವನೆಗಳ ತಿರಸ್ಕಾರ

ಇನ್ನೊಂದು ಕಾರಣ ಬಿಹಾರದ ಮತದಾರ MIM ನಂಥಹ ಮುಸ್ಲಿಂ ಮೂಲಭೂತವಾದಿ ಪಕ್ಷಗಳ ಬಗ್ಗೆ ಸ್ಪಷ್ಟತೆ ಮೆರೆದದ್ದು. ನಿತೀಶರ ಒಂದು ಕಾಲದ ಬಿಜೆಪಿ ಮೈತ್ರಿಯನ್ನು ಮುಂದಿಟ್ಟು ಮುಸ್ಲಿಮರಿಗೆ ತಮ್ಮದೇ ಜನಾಂಗದ ನಾಯಕತ್ವದ ನೆಲೆ ಬೇಕು ಎಂದು ಪ್ರಚಾರ ಮಾಡಿ ಒಂದು ಒಕ್ಕೂಟದ ಭಾಗವಾಗಿ ಸ್ಪರ್ಧಿಸಿದ ಪಪ್ಪು ಮತ್ತು ಒವೈಸಿಗಳು ಗಾಳಿಯಲ್ಲಿ ತೂರಿಹೊಗಿದ್ದಾರೆ. ಮಹಾರಾಷ್ಟ್ರದಲ್ಲಾದಂತೆ ಮುಸ್ಲಿಂ ಮೂಲಭೂತವಾದಿ ಪಕ್ಷ MIM ಗೆ ಯಾವ ಬೆಂಬಲವೂ ಸಿಕ್ಕಿಲ್ಲ. ‘ಅತಿಂ ಸರ್ವತ್ರ ವರ್ಜಯೇತ್’ bjp-bihar-election-amitshahಎಂಬಂತೆ ಹಿಂದೂ ಮತ್ತು ಮುಸ್ಲಿಂ ಕೋಮುವಾದಕ್ಕೆ ಬಲಿಯಾಗದೇ ಬಿಹಾರದ ಜನತೆ ತಮ್ಮ ಬೌದ್ಧಿಕ ಮತ್ತು ನೈತಿಕ ಬಲ ಪ್ರದರ್ಶಿಸಿದ್ದಾರೆ. ತಮ್ಮ ವೋಟು ಒಡೆಯಲು ಮಾಡಿದ ಸಂಚನ್ನು ಮತದಾರರು ತುಂಬಾ ಸರಿಯಾಗಿ ಗ್ರಹಿಸಿದರು. ಗೋವನ್ನು ಬಳಸಿ ಸಮಾಜವನ್ನು ಕೋಮು ಆಧಾರದ ಮೇಲೆ ಒಡೆಯುವ ಎಷ್ಟೇ ಪ್ರಯತ್ನ ಮಾಡಿದರೂ ಜನತೆ ಅದಕ್ಕೆ ಸೊಪ್ಪು ಹಾಕಲಿಲ್ಲ.

ಶರದ್ ಯಾದವ್ ಎಂಬ ಮುತ್ಸದ್ದಿ

ಇನ್ನೊಂದು ಮುಖ್ಯ ಕಾರಣ ರಾಷ್ಟ್ರ ಮಟ್ಟದಲ್ಲಿ ಮೀಡಿಯಾ ಮತ್ತು ಬುದ್ಧಿಜೀವಿಗಳನ್ನು ತಮ್ಮೊಂದಿಗೆ ಸೆಳೆಯಲು ಸಮರ್ಥರಾದ ಜೆಡಿಯು ಅಧ್ಯಕ್ಷರಾದ ಶರದ್ ಯಾದವ್. ಇವರು ಇಂಜಿನಿಯರಿಂಗ್ ಪದವಿಯಲ್ಲಿ ಸ್ವರ್ಣ ಪದಕ ಪಡೆದ ಪ್ರತಿಭಾವಂತ. ಇವರ ನಿರೀಕ್ಷೆ ಎಷ್ಟು ನಿಖರವಾಗಿತ್ತೆಂದರೆ ಚುನಾವಣಾ ಫಲಿತಾಂಶ ಬರುವ ಕೆಲವೇ ದಿನಗಳ ಮೊದಲು ಶರದ್ ಯಾದವ್ ತಮಗೆ ೧೫೦ ಸ್ಥಾನಗಳು ಖಚಿತ ಎಂದು ನುಡಿದಿದ್ದರು. ನಿತೀಶ ಗಿಂತ ಸಾಕಷ್ಟು ಹಿರಿಯರೂ ಆದ ಇವರು ನಿತೀಶ್ ನೇತೃತ್ವವನ್ನು ಶರತ್ತಿಲ್ಲದೇ ಒಪ್ಪಿ ಒಬ್ಬ ನೈಜ ಮುತ್ಸದ್ದಿಯಂತೆ ಕಾರ್ಯ ನಿರ್ವಹಿಸಿ ಪಕ್ಷದ ಅಧ್ಯಕ್ಷರ ಸ್ಥಾನಕ್ಕೆ ಗೌರವ ತಂದು ಕೊಟ್ಟರು.

ಮಮತೆಯ ಕರೆಯೋಲೆ

ಒಂದು ಚಿಕ್ಕ ಆದರೆ ಕಡೆಗಣಿಸಲು ಆಗದ ಅಂಶವೆಂದರೆ, ಮಮತಾ ಬ್ಯಾನರ್ಜಿ ಬಿಹಾರದ swabhimaan-rally_sonia-nitish-laluಜನತೆಗೆ ಮಹಗಠ ಬಂಧನದ ಪರ ನಿಲ್ಲಲು ಕರೆ ಕೊಟ್ಟರು. ಸೀಮಂಚಲವೆಂದು ಕರೆಯಲ್ಪಡುವ ಪುರ್ನಿಯ, ಕಟಿಹಾರ್, ಕಿಷೆನ್ ಗಂಜ್, ಅರಾರಿಯ, ಮಿಥಿಲ ಪ್ರಾಂತ ಗಳಲ್ಲಿ ಸಾಕಸ್ಟು ಸಂಖ್ಯೆಯಲ್ಲಿರುವ ಬಂಗಾಳಿಗಳು ಲಾಲೂ ನಿತೀಶ್ ಪರ ನಿಂತರು. ಜಾತ್ಯತೀತ ವೋಟಿನ ವಿಭಜನೆಯಾಗದಂತೆ ತಡೆಯುವಲ್ಲಿ  ಕೆಜ್ರಿವಾಲ್ ಮತ್ತು ಮಮತಾ ಬೆಂಬಲ ರಾಷ್ಟ್ರೀಯ ವಾಗಿಯೂ ಮಹತ್ತರವಾಗಿತ್ತು. ಬಿಹಾರದ ಚುನಾವಣಾ ರಂಗ ಸಮಾನ ಮನಸ್ಕರನ್ನು ಒಂದು ಮಾಡಿತು.

ಕಾಂಗ್ರೆಸ್ ಪುನರುಜ್ಜೀವನ

ಕಾಂಗ್ರೆಸ್ ಪ್ರಚಾರವನ್ನು ಸಾಕಷ್ಟು ಕಡಿಮೆ ಗೊಳಿಸಿದ ಬಿಹಾರದ ಸ್ಥಳೀಯ ನಾಯಕತ್ವ ಅನಗತ್ಯ ಗೊಂದಲಗಳನ್ನು ನಿವಾರಿಸಿತು. ರಾಹುಲ್ ಭಾಷಣದ ಟೀಕೆ, ಸೋನಿಯಾರ ಭಾಷೆಯ ಕುರಿತು ಅನಗತ್ಯ ವಿವಾದ ಇತ್ಯಾದಿ ಇಲ್ಲಿ ಕಾಣಸಿಗಲೇ ಇಲ್ಲ. ಕಾಂಗ್ರೆಸ್ ಈ ಚುನಾವಣೆಯಲ್ಲಿ ಮರುಜೀವ ಪಡೆದಿದೆ. ಉತ್ತರ ಪ್ರದೇಶ ಮತ್ತು ಬಿಹಾರಗಳಲ್ಲಿ ವೋಟು ಸಿಗದೇ ಹೋಗಬಹುದು ಆದರೆ ಕಾಂಗ್ರೆಸ್ಸಗೆ ಅಲ್ಲಿ ಬಹು ದೊಡ್ಡ ಸಂಘಟನೆಯಿದೆ. ಇದರ ಸಂಪೂರ್ಣ ಲಾಭ ಈ ಬಾರಿ ದಕ್ಕಿದೆ.

ಪ್ಯಾಕೇಜ್ ಮರೆಯದಿರಲಿ

ಇನ್ನೊಂದು ಮಾತು. ಜನರು ತಮ್ಮ ನಾಯಕರ ಗುಣಾವಗುಣಗಳನ್ನು ತುಂಬಾ ಸೂಕ್ಷ್ಮವಾಗಿ ಗಮನಿಸುತ್ತಾರೆ. ಒಂದು ಕಡೆ ತುಂಬಾ ನಿರೀಕ್ಷೆ ಇಟ್ಟುಕೊಂಡ ಒಬ್ಬ ಪ್ರಧಾನ ಮಂತ್ರಿಯವರು ರಾಜಕೀಯ ವಿರೋಧಿಗಳ ಕುಟುಂಬ, ಮಕ್ಕಳು ಇತ್ಯಾದಿಗಳ ಕುರಿತು ಟೀಕೆ ಮಾಡುತ್ತಿದ್ದಾರೆ, ಒಬ್ಬ ನೈಜ ಮುತ್ಸದ್ದಿಯ ಮಾದರಿಯಲ್ಲಿ ಯಾವುದಕ್ಕೂ ತೀಕ್ಷ್ಣವಾಗಿ ಮತ್ತು ವಯಕ್ತಿಕ ಮಟ್ಟಕ್ಕಿಳಿದು ಪ್ರತಿಕ್ರಯಿಸದ ಲಾಲೂ-ನಿತೀಶರನ್ನೂ ಮೌನವಾಗಿ ತುಲನೆ ಮಾಡುತ್ತಿತ್ತು. ಜನತೆಯ ತೀರ್ಮಾನ ಈಗ ದೇಶದ ಮುಂದಿದೆ. ತಮ್ಮ ಒಂದು ಕಾಲದ ಬಲಗೈ modi-in-biharಬಂಟ ಪಪ್ಪು ಯಾದವ್ ಮತ್ತವರ ಹೆಂಡತಿಯ ತಮ್ಮ ಸುಭಾಷ್ ಯಾದವ್ ಇದೇ ಸೆಪ್ಟೆಂಬರ್ ತಿಂಗಳಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತ, ‘ಲಾಲು ಸುಮ್ಮನೇ ವೋಟು ಒಡೆಯಲು ಕಣದಲ್ಲಿದ್ದಾರೆ; ಗೆಲವು ಖಂಡಿತಾ ನಮ್ಮದೇ ಎಂದಾಗ’, ಲಾಲೂ ಅವರಿಗೆ ಸೊಪ್ಪು ಕೂಡ ಹಾಕಲಿಲ್ಲ. ಮೋದಿಯವರು ಅತಿಯಾಗಿ ಕೆಣಕಿದಾಗ ಮಾತ್ರ ಲಾಲೂ ಮೋದಿಯವರಿಗೆ ತಾಕತ್ತಿದ್ದರೆ ತಮ್ಮೊಂದಿಗೆ ಇಂಗ್ಲಿಷ್ ಸಂವಾದಕ್ಕೆ ಬರಲಿ ಎಂದು ಸವಾಲು ಹಾಕಿದರು. ಈ ಸವಾಲನ್ನು ಮೋದಿಯವರು ಸ್ವೀಕರಿಸುವ ಔದಾರ್ಯ ತೋರಲಿಲ್ಲವೇಕೋ?

ಬಿಹಾರದ ಗೆಲುವು ಮೈಮರೆಸಬಾರದು. ಜನತೆಯ ಹೆದರಿಕೆ ಬರುವಷ್ಟು ಅಪಾರ ಪ್ರಮಾಣದ ನಿರೀಕ್ಷೆ ನೋಡಿದರೆ ನಿತೀಶ್ ರ ಜವಾಬ್ದಾರಿ ಎಷ್ಟು ದೊಡ್ಡದು ಎಂದು ಗೋಚರವಾಗುತ್ತದೆ.

ಹಾಗೆಯೇ, ನಿತೀಶರನ್ನು ಒಬ್ಬ ವೈರಿಯಂತೆ ಕಾಣದೇ ಈ ದೇಶದ ಪ್ರಧಾನಿಗಳು ತಾವು ಆಶ್ವಾಸನೆ ನೀಡಿದಂತೆ ಬಿಹಾರದ ಜನತೆಗೆ ಒಂದೂ ಕಾಲು ಲಕ್ಷ ಕೋಟಿ ರೂಪಾಯಿಗಳ ಪ್ಯಾಕೇಜನ್ನು ಕೊಟ್ಟು ಒಬ್ಬ ನೈಜ ಮುತ್ಸದ್ದಿಯಂತೆ ನಡೆದುಕೊಳ್ಳಬೇಕು.

ಲಾಲೂ ಅವರೊಂದಿಗೆ ಇಂಗ್ಲಿಷ್ ಸಂವಾದದ ಸವಾಲು ಮರೆತರೂ ಪರವಾಗಿಲ್ಲ ಮೂವತ್ತೊಂದು ಸಂಸದರನ್ನು ತಮಗೆ ಕೊಟ್ಟ ಬಿಹಾರದ ಅಭಿವೃದ್ಧಿಯ ಪ್ಯಾಕೇಜ್ ಮಾತ್ರ ಮರೆಯಬಾರದು.

ಬುದ್ಧ ನಕ್ಕ ನಾಡು ಬಿಹಾರ ಹೌದಾದರೂ, ಮಾತಿಗೆ ತಪ್ಪಿದರೆ, ಪಾಟಲಿಪುತ್ರದ ಚಾಣಕ್ಯನ ಮಾದರಿ ಸೇಡು ತೀರಿಸದೆ ಸುಮ್ಮನಿರುವ ಜಾಯಮಾನದ್ದಲ್ಲ!

ಸಿರಿಯಾ : ಬದುಕಬೇಕು ಮತ್ತು ಬದುಕಲು ಬಿಡಬೇಕು


– ಡಾ.ಎಸ್.ಬಿ. ಜೋಗುರ


ಸಿರಿಯಾ ಹೊತ್ತಿ ಉರಿಯುತ್ತಿದೆ. ಐಸಿಸ್ ಉಗ್ರರು ಮತ್ತು ಕುದ್ರಿಸ್‌ಗಳ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಸಿರಿಯಾ ಬದುಕು ನರಕಸದೃಶವಾಗುತ್ತಿದೆ. ಸೇಡು ಮತ್ತು ಕ್ರೌರ್ಯ ಎನ್ನುವುದು ಕೇವಲ ಜನಜೀವನದ ಮೇಲೆ ಮಾತ್ರ ಬಯಲಾಗದೇ ಅಲ್ಲಿರುವ ಐತಿಹಾಸಿಕ ಸ್ಮಾರಕಗಳ ಮೇಲೂ ಬಯಲಾಗಿದೆ. ಅಲ್ಲಿರುವ ಅನೇಕ ಸ್ಮಾರಕಗಳನ್ನು ಪುಡಿ ಪುಡಿ ಮಾಡಲಾಗಿದೆ. ಅಲ್ಲಿಯ ಜನರಂತೂ ಎಲ್ಲಾದರೂ ಬೇರೆಡೆ ಬದುಕನಡೆ ಜೀವವೇ ಎಂದು ಸುತ್ತಮುತ್ತಲಿನ ಇತರೆ ಪ್ರದೇಶಗಳಿಗೆ ತೆರಳಿ ಹೊಸ ಜೀವನ ರೂಪಿಸಿಕೊಳ್ಳುವ ಭರಾಟೆಯಲ್ಲಿ ತಮ್ಮ ನೆಲೆಯನ್ನು ತೊರೆದು ಗ್ರೀಕ್ ನಡುಗಡ್ಡೆಗಳಿಗೆ ಸಮುದ್ರ ಮಾರ್ಗವಾಗಿ ತೆರಳುತ್ತಿದ್ದಾರೆ. ಹೀಗೆ ತೆರಳುವ ತವಕದಲ್ಲಿ ಅಪಾರ ಪ್ರಮಾಣದ ಸಾವು ನೋವುಗಳು ಸಂಭವಿಸುತ್ತಿವೆ. migrant-child-dead-beach-turkeyಹೇಗಾದರೂ ಮಾಡಿ ಆ ಸಂಘರ್ಷಮಯ ಪರಿಸರದಿಂದ ದೂರ ತೆರಳಿ ನೆಮ್ಮದಿಯ ನಿಟ್ಟುಸಿರು ಬಿಡಬೇಕೆಂದರೂ ಸಾಧ್ಯವಾಗುತ್ತಿಲ್ಲ. ಹೀಗೆ ಅಪಾರ ಪ್ರಮಾಣದಲ್ಲಿ ನಿರಾಶ್ರಿತರಾಗಿ ಹರಿದು ಬರುವದನ್ನು ನೆರೆಯ ರಾಷ್ಟ್ರಗಳು ಖುಷಿಯಿಂದ ಬರಮಾಡಿಕೊಳ್ಳುವ ಸ್ಥಿತಿಯಲ್ಲಿಲ್ಲ. ಹೀಗೆ ತಂಡತಂಡವಾಗಿ ತಮ್ಮ ನೆಲೆಗಳನ್ನು ನಿರಾಶ್ರಿತರಾಗಿ ನುಗ್ಗುವ ಕ್ರಮದ ಬಗ್ಗೆ ಒಳ್ಳೆಯ ಅಭಿಪ್ರಾಯಗಳಿಲ್ಲ. ಅನೇಕ ಬಗೆಯ ರೋಗರುಜಿನಗಳಿಗೆ ಈ ಬಗೆಯ ನಿರಾಶ್ರಿತರ ವಲಸೆ ಕಾರಣವಾಗಲಿದೆ ಎನ್ನುವದು ನೆರಯ ರಾಷ್ಟ್ರಗಳ ಅಭಿಮತ. ಈಚೆಗೆ ಗ್ರೀಕ್ ನಡುಗಡ್ಡೆ ಕೋಸ್ ನ್ನು ತಲುಪುವ ಬರಾಟೆಯಲ್ಲಿ ಸುಮಾರು 12 ಜನ ನಿರಾಶ್ರಿತರು ನೀರಲ್ಲಿ ಮುಳುಗಿ ಅಸುನೀಗಿರುವದಿದೆ. ಅದರಲ್ಲಿ 3 ವರ್ಷದ ಒಬ್ಬ ಬಾಲಕ ಮತ್ತು 5 ವರ್ಷದ ಇನ್ನೊಬ್ಬ ಬಾಲಕ ಇಬ್ಬರೂ ಸಹೋದರರು ಅಸುನೀಗಿದ್ದು ಮನಕಲಕುವಂತಿದೆ. ಬಾಲ್ಯದ ಖುಷಿಯ ಪರಿಚಯವೂ ಆಗದೇ ಅಸು ನೀಗಿದ ಆ ಮಕ್ಕಳು ಯಾವ ತಪ್ಪಿಗಾಗಿ ಈ ಬಗೆಯ ಸ್ಥಿತಿಯನ್ನು ಅನುಭವಿಸಬೇಕಾಯಿತು..? ಈ ಬಗೆಯ ಸನ್ನಿವೇಶಗಳನ್ನು ಮುಂದಿಟ್ಟುಕೊಂಡೇ ಬರ್ಟಂಡ್ ರಸಲ್ ರಂಥಾ ಚಿಂತಕರು ದೇವರ ಅಸ್ಥಿತ್ವದ ಬಗ್ಗೆ ಸಂಶಯ ಪಡುವದಿತ್ತು. ಯಾವ ತಪ್ಪನ್ನೂ ಮಾಡದ ಈ ಮಕ್ಕಳಿಗೇಕೆ ಶಿಕ್ಷೆ ಎಂದು ರಸಲ್ ಮತ್ತೆ ಮತ್ತೆ ಕೇಳುವದಿತ್ತು.ಆತನ ನಾಸ್ತಿಕತೆಗೆ ಈ ಬಗೆಯ ಘಟನೆಗಳು ಇನ್ನಷ್ಟು ಪುಷ್ಟಿ ಕೊಟ್ಟಂತಿತ್ತು. ಹೇಗಾದರೂ ಮಾಡಿ ಬೇರೆ ಎಲ್ಲಾದರೂ ತೆರಳಿ ಬದುಕಿ siriya-migrantsಉಳಿಯಬೇಕೆಂದು ಬಯಸಿ ದಡದಲ್ಲಿ ಸಿಕ್ಕ ದೋಣಿಗಳನ್ನು ಹತ್ತಿ ಪ್ರಯಾಣ ಬೆಳೆಸಿದ ಇವರು ಮೂಲತ: ಉತ್ತರ ಸಿರಿಯಾದ ಪಟ್ಟಣ ಕೊಬಾನಿಯ ನಿವಾಸಿಗಳು. ಅಲ್ಲಿಯ ಪರಿಸ್ಥಿತಿ ಈ ಮಕ್ಕಳನ್ನು ಅಲ್ಲಿಂದ ಕಾಲು ಕೀಳುವಂತೆ ಮಾಡಿತ್ತು. ದುರಂತವೆಂದರೆ ಹೊಸ ಬದುಕನ್ನು ಕಟ್ಟಿಕೊಳ್ಳುವ ಹಂಬಲದಲ್ಲಿ ಊರು ತೊರೆದ ಈ ಬಾಲಕರು ತಲುಪಬೇಕೆಂದುಕೊಂಡ ನೆಲೆಯನ್ನು ತಲುಪಲಾಗದೇ ಗ್ರೀಕ್ ನಡುಗಡ್ಡೆ ಕೊಸ್ ನ್ನು ತಲುಪಲಾಗದೇ ನೀರಲ್ಲಿ ಮುಳುಗಿ ಅಸುನೀಗಿರುವದಿದೆ.

ಸಿರಿಯಾದಲ್ಲಿ ಆವೃತವಾಗಿರುವ ಯುದ್ಧದ ವಾತಾವರಣ ಯಾರನ್ನೂ ನೆಮ್ಮದಿಯಿಂದ ಬದುಕಲು ಬಿಡುವ ಸ್ಥಿತಿಯಲ್ಲಿಲ್ಲ. ಐಶಿಷ ಉಗ್ರರು ಇಡೀ ಸಿರಿಯಾ ಮೇಲೆ ತಮ್ಮ ಪ್ರಭುತ್ವವನ್ನು ಸ್ಥಾಪಿಸುವದು ಮಾತ್ರವಲ್ಲದೇ ಅಲ್ಲಿಯ ಬದುಕನ್ನೇ ರೌರವ ನರಕ ಮಾಡಹೊರಟಿದ್ದಾರೆ. ಅದರ ಭೀಕರತೆಯನ್ನು ಸಹಿಸಲಾಗದೇ ತಮ್ಮ ನೆಲೆಯನ್ನು ಬಿಟ್ಟು ನಿರಾಶ್ರಿತರಾಗಿ ಬೇರೆಡೆ ತೆರಳುತ್ತಿದ್ದಾರೆ. ದಿನಾಲು ಈ ನಡುಗಡ್ಡೆಗಳಿಗೆ ನಿರಾಶ್ರಿತರಾಗಿ ಬರುವವರ ಪ್ರಮಾಣ ಸಾವಿರ ಸಾವಿರ ಮಟ್ಟದಲ್ಲಿದೆ. ಲೆಸ್ಬೊಸ್ ಎನ್ನುವ ಪ್ರಾಂತದಲ್ಲಿಯೇ ಸುಮಾರು 15 ಸಾವಿರಕ್ಕಿಂತಲೂ ಹೆಚ್ಚಿನ ಪ್ರಮಾಣದ ನಿರಾಶ್ರಿತರಿದ್ದಾರೆ. ಮೆಸಿಡೋನಿಯಾ, ಸರ್ಬಿಯಾ, ಹಂಗೇರಿಯಾ, ಜರ್ಮನಿ ಮುಂತಾದ ಕಡೆಗಳಲ್ಲಿಯೂ ಇದೇ ರೀತಿಯ ನಿರಾಶ್ರಿತರ ತಲೆನೋವು ಆರಂಭವಾಗಿದೆ. ಗ್ರೀಸ್ ನಡುಗಡ್ಡೆಗಳ ಮೇಲೆ ಅಸಂಖ್ಯಾತ ಪ್ರಮಾಣದ ನಿರಾಶ್ರಿತರು ವಲಸೆ ಬರುತ್ತಿದ್ದಾರೆ. ಹೀಗೆ ನಿರಾಶ್ರಿತರಾಗಿ ಬರುವವರಿಗೆ ವಸತಿ ಸೌಲಭ್ಯಗಳನ್ನು ಒದಗಿಸುವುದು ಕೂಡಾ ಸಾಧ್ಯವಾಗುತ್ತಿಲ್ಲ ಹೀಗಾಗಿ ನಿರಾಶ್ರಿತರ ಜನಜಂಗುಳಿ ಅನಾರೋಗ್ಯಕರ ಪರಿಸರದ ನಿರ್ಮಾಣಕ್ಕೆ ಕಾರಣವಾಗುತ್ತಿದೆ. ಜೊತೆಗೆ ಮೆಡಿಟರೇನಿಯನ್ ಮೂಲಕ ಯುರೋಪಗೆ ತೆರಳುವಾಗ ಸುಮಾರು 2500 ರಷ್ಟು ನಿರಾಶ್ರಿತರು ಅಸುನೀಗಿರುವದಿದೆ ಎಂದು ಗಾರ್ಡಿಯನ್ ಎಂಬ ಪತ್ರಿಕೆ ವರದಿ ಮಾಡಿರುವದಿದೆ. siriya-tragedyಕಾಸ್ ಮತ್ತು ಲೆಸ್ಬಾಸ್ ನಡುಗಡ್ದೆಯಲ್ಲಿ ಬಂದಿಳಿಯುವ ನಿರಾಶ್ರಿತರಾಗಿ ಅನೇಕ ಬಗೆಯ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಅಲ್ಲಿಯ ಸರಕಾರಗಳು ಯತ್ನಿಸುತ್ತಿವೆಯಾದರೂ ಸಂಪೂರ್ಣವಾಗಿ ಅವರಿಗೆ ಅವಶ್ಯಕತೆಗಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ.

ಸಿರಿಯಾದಂಥಾ ನೆಲೆಗಳು ಮನುಷ್ಯರಾದವರು ವಾಸಿಸಲು ಯೋಗ್ಯವಲ್ಲ ಎನ್ನುವ ಸ್ಥಿತಿಯನ್ನು ತಲುಪಿದಂತಾಗಿದೆ. ಇಲ್ಲಿಯ ಜನರಿಗೆ ಎಲ್ಲಾದರೂ ನೆರೆಯ ಪ್ರದೇಶಗಳಲ್ಲಿ ಬದುಕಿ ಉಳಿಯುವದೇ ಒಂದು ಜೀವನದ ಮಹತ್ತರವಾದ ಗುರಿಯಂತಾಗಿದೆ. ಆ ಬದಿಯ ದಡ ತಲುಪುವ ಬಗ್ಗೆ ಯಾವ ಭರವಸೆಗಳೂ ಇಲ್ಲದಿರುವಾಗಲೂ ರಿಶ್ಕ್ ತೆಗೆದುಕೊಂಡು ತೆರಳುತ್ತಿದ್ದಾರೆ. ಹಾಗೆ ತೆರಳುವಾಗ ಅಪಾರ ಪ್ರಮಾಣದ ಸಾವು ನೋವುಗಳು ಸಂಭವಿಸುತ್ತಿವೆ. ಪ್ರಥಮ ಮತ್ತು ದ್ವಿತೀಯ ಜಾಗತಿಕ ಮಹಾಯುದ್ಧಗಳ ಸಂದರ್ಭದಲ್ಲಿ ಜರ್ಮನಿಯಿಂದ ನಿರಾಶ್ರಿತರಾಗಿ ವಲಸೆ ಹೋಗುವವರಿಗೆ ವಿಶ್ವದ ಬೇರೆ ಬೇರೆ ರಾಷ್ಟ್ರಗಳು ಬರ ಮಾಡಿಕೊಂಡವು. ಆಗಿನ ಸಂದರ್ಭವನ್ನು ಈಗ ನೆನೆಪಿಸಿ ಜರ್ಮನಿ ಮತ್ತು ಇತರ ಯುರೋಪಿನ ನೆಲೆಗಳಿಗೆ ನೀವು ಹಾಗೆ ಸಿರಿಯಾದಿಂದ ನಿರಾಶ್ರಿತರಾಗಿ ಬರುವವರನ್ನು ಯಾಕೆ ಸ್ವಾಗತಿಸಬಾರದು ಎಂದು ಕೇಳುವ ಪರಿಸ್ಥಿತಿಯೂ ಈಗ ಉಳಿದಿಲ್ಲ. ವಲಸೆ ಬರುವವರ ಧರ್ಮ, ಭಾಷೆ, ಜನಾಂಗಗಳು ಈಗ ತೀರಾ ಮುಖ್ಯವಾಗತೊಡಗಿವೆ. ಮುಂಚಿನಂತೆ ಮಾನವೀಯ ನೆಲೆಯಲ್ಲಿ ನಿರಾಶ್ರಿತರನ್ನು ಬರಮಾಡಿಕೊಳ್ಳುವಷ್ಟು ಸದ್ಯದ ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿಸರ ಅಷ್ಟೊಂದು ಸಲೀಸಾಗು ಉಳಿದಿಲ್ಲ. ಧರ್ಮ ಎನ್ನುವುದು ಈಗ ಕೇವಲ ಆಚರಣೆ ಮತ್ತು ಅನುಸರಣೆಯ ಮಾರ್ಗವಾಗಿ ಮಾತ್ರ ಉಳಿಯದೇ ಆ ಮಿತಿಯನ್ನು ಮೀರುವ ಮೂಲಕ ಸಂದಿಗ್ದವಾದ ಸ್ಥಿತಿಯನ್ನು ಅವು ತಲುಪುತ್ತಿವೆ. ಇಂದು ಧರ್ಮಗಳು ಮಾನವೀಯ ಪ್ರೀತಿ ಮತ್ತು ದಯೆಯನ್ನು ಹಂಚುವ ಬದಲಾಗಿ ದ್ವೇಷ ಮತ್ತು ಭಯವನ್ನು ಸೃಷ್ಟಿಸುವ ಸಂಗತಿಗಳಾಗಿ ಕೆಲಸ ಮಾಡುತ್ತಿವೆ. ಮನುಷ್ಯ ಎಷ್ಟೇ ಉನ್ನತವಾದ ಮಾರ್ಗವಾಗಿ ಮಾತ್ರ ಉಳಿಸಾಧನೆಯನ್ನು ಮಾಡಿದ ಮೇಲೂ ನೆಮ್ಮದಿಯಿಂದ ಬದುಕುವ ಮತ್ತು ಬದುಕಲು ಬಿಡುವ ಗುಣವನ್ನು ಮಾತ್ರ ಕಲಿಯಲಿಲ್ಲ.