Category Archives: ರಾಜಕೀಯ

ರಾಜಕೀಯ ವಿಷಯಗಳಿಗೆ ಸಂಬಂಧಿಸಿದ ಲೇಖನಗಳು ಮತ್ತು ವಿಡಿಯೋಗಳು…

Deccan Herald - Mining Payments

ವಿವೇಚನಾ ಖೋಟಾದ ಲಾಭವೇಕೆ?

– ಭೂಮಿ ಬಾನು

ಬರವಣಿಗೆ ಬಲ್ಲವನಿಗೆ ಅಹಂ ನೆತ್ತಿಗೇರುವುದು ಸಹಜ. ಪತ್ರಕರ್ತರ ಬಳಗದಲ್ಲಂತೂ ಅಹಂ ಸರ್ವೇ ಸಾಮಾನ್ಯ. ಇತ್ತೀಚೆಗಂತೂ ಟಿವಿ ಪರದೆಯಲ್ಲಿ ಕಾಣಿಸಿಕೊಳ್ಳುವ ಅವಕಾಶ ಇದೆ ಎನ್ನುವ ಕಾರಣಕ್ಕೆ ತೀರಾ ಅಸಹಜ ಎನ್ನವಷ್ಟು ಅಹಂ ಅನೇಕ ಟಿವಿ ಪತ್ರಕರ್ತರ ನೆತ್ತಿಯೇರಿ ಕೂತಿದೆ. ಪರಿಣಾಮವಾಗಿ, ಸುತ್ತಲ ಸಮಾಜದಿಂದ ಅಂತಹವರು ನಿರೀಕ್ಷಿಸುವುದೂ ಹೆಚ್ಚಾಗಿದೆ. ಮಾಧ್ಯಮ ಮಂದಿ ಪದೇ ಪದೇ ಅಲ್ಲಲ್ಲಿ ಟೀಕೆಗೆ, ಮೂದಲಿಕೆಗೆ ಒಳಗಾಗುವುದು ಇದೇ ಕಾರಣಕ್ಕೆ. ತಾವು ಪತ್ರಕರ್ತರು, ಮಾಧ್ಯಮದವರು ಎಂಬ ಕಾರಣಕ್ಕೆ ವಿಶೇಷ ಸವಲತ್ತು ಪಡೆಯುವುದು ಜನ್ಮ ಸಿದ್ಧ ಹಕ್ಕು ಎಂದು ಈ ಸಮುದಾಯ ಭಾವಿಸಿದಂತಿದೆ.

ಇತ್ತೀಚೆಗೆ ಅಲ್ಲಲ್ಲಿ ಕೇಳಿ ಬರುತ್ತಿರುವ ‘ಪತ್ರಕರ್ತರ ಸೈಟು’ ಪುರಾಣ ನನ್ನ ಈ ಅಭಿಪ್ರಾಯಕ್ಕೆ ಮೂಲ ಕಾರಣ. ಬೆಂಗಳೂರಿನ ಕೆಲ ಹಿರಿಯ ಪತ್ರಕರ್ತರು ಅನಾದಿ ಕಾಲದಿಂದಲೂ ಮುಖ್ಯಮಂತ್ರಿಯ ವಿವೇಚನಾ ಖೋಟಾದ ಫಲಾನುಭವಿಗಳಾಗಿ ಬಿಡಿಎ ಸೈಟನ್ನು ಪಡೆದುಕೊಂಡಿದ್ದಾರೆ. ಅದಕ್ಕೆ ಅವರು ಅನುಸರಿಸಿದ ವಿಧಾನ ನಾನಾ ರೀತಿಯದ್ದು. ಅವರಲ್ಲೊಬ್ಬರು ಹೆಂಡತಿಗೆ ಸುಳ್ಳೇ ವಿಚ್ಛೇದನ ಕೊಡುವ ಮಟ್ಟಿಗೆ ಹೋದರು ಎಂದರೆ ಅವರ ಸೈಟು ದಾಹ ಎಷ್ಟಿತ್ತು ಎನ್ನುವುದು ಗೊತ್ತಾಗುತ್ತದೆ.

ಬೆಂಗಳೂರಿನಲ್ಲಿ ಹುಟ್ಟಿಕೊಂಡ ಜಾಡ್ಯ ರಾಜ್ಯದ ಇತರೆ ಜಿಲ್ಲೆಗಳಿಗೂ ಹಬ್ಬುತ್ತಿದೆ. ಅಲ್ಲಲ್ಲಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಸ್ಥಳೀಯ ಪತ್ರಕರ್ತ ಸಂಘದವರು ಅಥವಾ ಅವರಲ್ಲೇ ಇರುವ ಪ್ರಭಾವಿ ಪತ್ರಕರ್ತರು ಮಂತ್ರಿಗಳ ಮೇಲೆ ಸೈಟುಗಳಿಗಾಗಿ ಒತ್ತಾಯ ಮಾಡುತ್ತಿರುವುದು ಗುಟ್ಟಿನ ಸಂಗತಿ ಅಲ್ಲ.

ಶಿವಮೊಗ್ಗದಲ್ಲೂ ಇಂತಹದೇ ಪ್ರಕರಣ ಚರ್ಚೆಯಾಗುತ್ತಿದೆ. ಅಲ್ಲಿನ ಪತ್ರಕರ್ತರು ಬಹುಸಂಖ್ಯೆಯಲ್ಲಿ ಒಟ್ಟುಗೂಡಿ ಸೈಟು ಬೇಕೆಂದು ಅರ್ಜಿ ಹಾಕಿದ್ದಾರೆ. ಅರ್ಜಿ ಹಾಕಿದವರ ಪಟ್ಟಿಯಲ್ಲಿ ಪತ್ರಕರ್ತರಲ್ಲದವರು ಇದ್ದಾರೆಂದು ಕೆಲವರು ಚಕಾರ ಎತ್ತಿದ್ದಾರೆ. ಜೊತೆಗೆ ಒಂದು ಬಾರಿ ಸೈಟು ಪಡೆದವರು ಮತ್ತೆ ಅರ್ಜಿ ಹಾಕಿದ್ದಾರೆ ಎಂಬ ಟೀಕೆಯೂ ಇದೆ. ಆದರೆ ಕೆಲವು ವೇದಿಕೆಗಳ ಹೊರತಾಗಿ ಮತ್ತೆಲ್ಲಿಯೂ – ಇಂತಹದೊಂದು ಸೈಟು ಹಂಚಿಕೆ ಪ್ರಕ್ರಿಯೆಯೇ ತಪ್ಪು ಎನ್ನುವ ಅಭಿಪ್ರಾಯ ಕೇಳಿ ಬರುತ್ತಿಲ್ಲ. ಇಂತಹ ವಾಮ ಮಾರ್ಗಗಳಿಂದ ಸೈಟು ಪಡೆಯದವರ ದೊಡ್ಡ ಗುಂಪೇ ಇದೆ. ಮತ್ತು ಆ ಗುಂಪು ಸದಾ ತಮಗೆ ಸಿಗಬೇಕಿದ್ದ ಒಂದು ಅವಕಾಶ ಅಥವಾ ಲಾಭದಿಂದ ವಂಚಿತರಾಗಿದ್ದೇವೆ ಎಂಬ ಭಾವನೆಯಿಂದ ಸದಾ ಬಳಲುತ್ತಿರುತ್ತದೆ. ಜೊತೆಗೆ ಮತ್ತಿತರರಿಂದ ಅವರಿಗಾದ ‘ವಂಚನೆ’ ಕಾರಣ ಸಿಂಪತಿಯನ್ನು ಬಯಸುತ್ತದೆ. ಆದರೆ ತಾವು ಅಂತಹ ಸೈಟಿಗಾಗಿ ಆಸೆ ಪಡುವುದೇ ತಪ್ಪು, ಅಪ್ರಾಮಾಣಿಕತೆ ಎಂದೇಕೆ ಅನಿಸುವುದಿಲ್ಲ?.

ಮುಖ್ಯವಾಹಿನಿಯ ಯಾವ ಪತ್ರಿಕೆಯೂ ಹೀಗೊಂದು ಸಂಪಾದಕೀಯ ಬರೆದಂತಿಲ್ಲ (ಬರೆದಿದ್ದರೆ ಸಂತೋಷ). ಮುಖ್ಯಮಂತ್ರಿಗಿರುವ ವಿವೇಚನಾ ಅಧಿಕಾರದ ಬಗ್ಗೆ ಅಲ್ಲಲ್ಲಿ ಚರ್ಚೆಯಾಗಿದೆ ಯೇ ಹೊರತು, ಪತ್ರಕರ್ತರು ವಿವೇಚನಾ ಕೋಟಾದ ಲಾಭ ಪಡೆಯುವುದು ಚರ್ಚೆಗೆ ಬಂದಿಲ್ಲ.

ಯಾಕೆ ಹೀಗೆ?

ಮಾಧ್ಯಮ ಕ್ಷೇತ್ರಕ್ಕೆ ಸುದೀರ್ಘ ಇತಿಹಾಸವಿದೆ. ಧಾರ್ಮಿಕ ಕಾರಣಗಳಿಗಾಗಿ ಹುಟ್ಟಿಕೊಂಡ ಪತ್ರಿಕೋದ್ಯಮ ಸಹಜವಾಗಿ ಸಾಮಾಜಿಕ ಚಳವಳಿಗಳಲ್ಲಿ ಮುಖ್ಯ ಪಾತ್ರ ವಹಿಸಿತು. ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಚಳವಳಿಯ ಭಾಗವಾಗಿಯೇ ಪತ್ರಿಕೆಗಳು ಕೆಲಸ ಮಾಡಿದವು. ಆಗ ಲಾಭದ ಉದ್ದೇಶ ಕಡಿಮೆ ಇತ್ತು. ಸ್ವಾತಂತ್ರ್ಯ ನಂತರ ಬಹು ವಿಸ್ತಾರವಾದ ಕ್ಯಾನ್ವಾಸ್ ಪತ್ರಕರ್ತರ ಎದುರು ತೆರೆದುಕೊಂಡಿತು. ಅದರ ಪರಿಣಾಮ ತನಿಖೆ, ವಿಶ್ಲೇಷಣೆ, ಅಭಿವೃದ್ಧಿ, ಜನಾಭಿಪ್ರಾಯ – ಎಂಬ ವಿವಿಧ ಆಯಾಮಗಳ ಅಡಿಯಲ್ಲಿ ಸುದ್ದಿಯ ಹರವು ವಿಸ್ತಾರಗೊಂಡಿತು. ಅದರಂತೆಯೇ ಮಾಧ್ಯಮ ಯಾವುದೇ ಚಳವಳಿಯ ಭಾಗವಾದಂತೆ ಆಗಾಗ ಕಂಡರೂ ಅದರ ವ್ಯಾಪ್ತಿ ಚಳವಳಿಯ ಘಟನಾವಳಿಗಳನ್ನು ವರದಿ ಮಾಡುವಷ್ಟು ಮಟ್ಟಕ್ಕೆ ಸೀಮಿತಗೊಂಡಿತ್ತು. ಇತ್ತೀಚಿನ ವರ್ಷಗಳಲ್ಲಿ ಪತ್ರಿಕೋದ್ಯಮ strictly ಒಂದು ಉದ್ಯಮ. ಪತ್ರಕರ್ತರದು ಇತರೆ ಎಲ್ಲಾ ಕ್ಷೇತ್ರಗಳ ನೌಕರರಂತೆ ಒಂದು ವೃತ್ತಿ. ಅಲ್ಲಲ್ಲಿ ಕೆಲ ಪತ್ರಕರ್ತರು ಈ ಸೀಮಿತ ಅರ್ಥ ಗಳಾಚೆ ನಿಂತು ಕೆಲಸ ಮಾಡುತ್ತಿದ್ದಾರೆ ಎಂದರೆ ಅವರ ಕರ್ತವ್ಯ – ರೋಗಿಯ ಬಗ್ಗೆ ವಿಶೇಷ ಕಾಳಜಿಯಿಂದ ನಿಗದಿತ ಸಮಯದಾಚೆಗೂ ಕೆಲಸ ಮಾಡುವ ವೈದ್ಯ, ವಿದ್ಯಾರ್ಥಿಗಳ ಒಳಿತಿಗಾಗಿ ವಿಶೇಷ ಆಸಕ್ತಿವಹಿಸಿ ಪಾಠ ಮಾಡುವ ಶಿಕ್ಷಕ ಅಥವಾ ಇನ್ನಾವುದೇ ವೃತ್ತಿಯಲ್ಲಿರುವ ಪ್ರಾಮಾಣಿಕ ವ್ಯಕ್ತಿಯ ಕರ್ತವ್ಯಕ್ಕೆ ಸಮ.

ಇತರೆ ಎಲ್ಲಾ ಕ್ಷೇತ್ರಗಳಲ್ಲಿರುವಂತೆ ಇಲ್ಲಿಯೂ ಭ್ರಷ್ಟರಿದ್ದಾರೆ. ಬಹುಕೋಟಿ ಮೊತ್ತದ ಹಗರಣಗಳಲ್ಲಿ ಭಾಗಿಯಾದವರಿದ್ದಾರೆ. ಅವರ ಹೆಸರು ಅವರ ‘ವ್ಯವಹಾರಗಳ’ ಕಾರಣ ಪ್ರಮುಖ ತನಿಖಾ ವರದಿಗಳಲ್ಲಿ ಪ್ರಕಟಗೊಂಡರೂ ಒಂದಿಷ್ಟೂ ನಾಚಿಕೆ, ಪಾಪಪ್ರಜ್ಞೆ ಇಲ್ಲದೆ ಹಿತಬೋಧನೆ ಮುಂದುವರಿಸಿದ್ದಾರೆ. ಹಾಗಾದರೆ ಪತ್ರಕರ್ತರು ವಿಶೇಷ ಪ್ರತಿಭೆಗಳು, ಆಕಾಶದಿಂದ ಇಳಿದು ಬಂದವರಂತೆ ಪರಿಭಾವಿಸುವುದು ಎಷ್ಟು ಸರಿ? ಇವರಿಗೆ ವಿವೇಚನಾ ಕೋಟಾದ ಲಾಭ ಏಕೆ?

Smoke rising from vehicle set ablaze during the riots around the viewing of Rajkumar.

Rajkumar’s fans were mostly Bangalore’s underclass – Wikileaks

This is what Chennai Consulate of United States thought and reported to their bosses in the US when Rajkumar died and violence errupted in Bangalore:

SUBJECT: VIOLENCE IN BANGALORE FOLLOWS FILM STAR’S DEATH

1. (U) SUMMARY: Street violence rocked Bangalore on April 12 and 13, following the death of Kannada language film superstar Rajkumar. Widespread street riots left eight persons dead and more than 150 injured. The city’s famed information technology industry was forced to shut down operations and now fears a loss of customer confidence.
END SUMMARY

—————————–
ACTOR’S DEATH SPARKS VIOLENCE
—————————–

2. (U) Kannada movie star Rajkumar, aged 77, died at 1:50 PM on April 12, 2006 following a cardiac arrest. The actor, who had appeared in over 200 Kannada movies and was known as a champion of the Kannada language, had a fan following drawn mostly from Bangalore’s underclass. As news of Rajkumar’s death spread, his emotional fans hit the streets, forcing shops and business establishments to draw their shutters. As the afternoon progressed, the mourners became more emotional and began stoning state-owned Bangalore Municipal Transport Corporation buses as well as private cars and some shops and office buildings. City police adopted a low profile which encouraged the violence that left scores injured. The state government closed schools and announced a two day mourning period. Bangalore’s famed information technology industry shut down operations early on April 12 and declared April 13, 2006 a holiday.

——————————————— —-
FUNERAL PROCESSION LEAVES DESTRUCTION IN ITS WAKE
——————————————— —-

3. (SBU) Violence continued following the actor’s funeral procession on April 13 as fans attempted to get close to the cortege. Unlike on the previous day, police reacted aggressively. “We opened fire on 12 occasions,” Mr. Subash Bharani, Additional Director General of Police Law and Order, told Post. A total of eight persons including a training constable died in the violence and 47 police officers received injuries that required hospitalization. In addition, 10 police vehicles were destroyed. Bharani estimated that beyond the injured police officers, 120 members of the general public sustained injuries.

——————————–
VIOLENCE DENTS BANGALORE’S IMAGE
——————————–

4. (U) The overall cost to Bangalore of the violence is estimated at $160 million, according to newspaper reports. None of Bangalore’s information technology companies reported any physical damage but all were forced to shut down their operations during the violence. Infosys CFO T.V. Mohandas Pai estimated that the city’s software firms lost $40 million in revenues during the shutdown as well as some of the luster from their image. “Bangalore’s image took a beating,” Mr. Ashok Soota, CEO, MindTree Consulting and former President of the Confederation of Indian Industry told Post. He believes that customers may begin asking companies to have backup establishments in other locations, a requirement that would hurt profitability.

———————————-
NEW CHIEF MINISTER WAS SLOW TO ACT
———————————-

5. (SBU) New Karnataka Chief Minister Kumarasamy’s administration, caught on the wrong foot by the violence, responded belatedly to the crisis and appears not to have communicated effectively with the police leaders. “There clearly was a breakdown in communication between the police and the political executive,” R.V. Deshpande, Congress leader and former state Industries Minister, told Post.

—————————–
IMPACT ON BANGALORE”S FUTURE?
—————————–

6. (SBU) COMMENT: Already beset by infrastructure growing pains which are causing some companies to think twice about expansion in the city, Bangalore now faces another blow to its image. How the state government and industry leaders react will be important determiners of Bangalore’s future as India’s information technology capital. END COMMENT

(Courtesy: wikileaks.org)

ಪೋಸ್ಕೊ ಕ೦ಪನಿಯ ರಾಜಕಾರಣ – ಹೋರಾಟದ ದಾರಿಯಲ್ಲಿ ಹಲವು ಪ್ರಶ್ನೆಗಳು – ಕೆಲವೇ ಉತ್ತರಗಳು

ಹು.ಬಾ.ವಡ್ಡಟ್ಟಿ

ಪೋಸ್ಕೊ ಸ್ಟೀಲ್ ಕ೦ಪನಿಯ ಸ್ಥಾಪನೆಯು ಗದಗ ಜಿಲ್ಲೆಯಲ್ಲಿ ಅಭಿವೃದ್ಧಿಗೆ ಪೊರಕವಾಗಿರುತ್ತದೆ. ಅಭಿವೃದ್ಧಿಯ ನಕ್ಷೆಯಲ್ಲಿ ಗದಗ ಜಿಲ್ಲೆ ಗುರುತಿಸಲ್ಪಡುತ್ತದೆ. ಅಭಿವೃದ್ದಿ ನಾಗಾಲೋಟವು ಯಾವುದೇ ಅಡೆ-ತಡೆಯಿಲ್ಲದೇ ಸಾಗುತ್ತದೆ ಅನ್ನುವ ಪು೦ಕಾನುಪು೦ಕವಾದ ತಲೆ ಬುಡವಿಲ್ಲದ ವಾದಗಳನ್ನು ಬಿಜೆಪಿ ಪರವಾಗಿರುವ ದಲ್ಲಾಳಿಗಳು ಬಿಡತೊಡಗಿದರು. ಗದಗ ಜಿಲ್ಲೆಯಲ್ಲಿ ಕಳೆದ 50 ವರ್ಷಗಳಲ್ಲಿ ದೊಡ್ಡ ಗಾತ್ರದ ಕೈಗಾರಿಕೆಗಳು ಸ್ಧಾಪಿಸಲ್ಪಟ್ಟಿರಲಿಲ್ಲ. ಪೋಸ್ಕೊ ಕ೦ಪನಿಯಿ೦ದಾಗಿ ಕೈಗಾರಿಕಾ ಬೆಳವಣಿಗೆ ಹಾಗೂ ಜನರ ಜೀವನಮಟ್ಟ ಸುಧಾರಿಸುತ್ತದೆ. 2-3 ಚೀಲ ಗೋಧಿ-ಜೋಳ ಬೆಳೆಯುವ ಭೊಮಿಯನ್ನು ಮಾರಿದರೆ ಲಕ್ಷ-ಲಕ್ಷಗಟ್ಟಲೇ ಹಣವನ್ನು ಪಡೆದುಕೊ೦ಡು ಆರಾಮವಾಗಿ ಐಷಾರಾಮಿ ಜೀವನ ಸಾಗಿಸಬಹುದೆ೦ಬ ಕಲ್ಪನೆಯನ್ನು ಬಡ ರೈತರಲ್ಲಿ ಕನಸೆ೦ಬ೦ತೆ ದಲ್ಲಾಳಿಗಳು, ಪುಡಿ ರಾಜಕಾರಣಿಗಳು ಬಿತ್ತ ತೊಡಗಿದರು.

ಜಿಲ್ಲೆಯಲ್ಲಿಯೇ ದೊಡ್ಡ ಕೈಗಾರಿಕೆಗಳು ಎ೦ದರೆ ಹುಲಕೋಟಿಯ ಸ್ಪಿನ್ನಿ೦ಗ್ ಜಿನ್ನಿ೦ಗ್ ಮಿಲ್, ಲಕ್ಷ್ಮೇಶ್ವರದ ನೂಲಿನ ಗಿರಣಿ, ಮತ್ತು ಮು೦ಡರಗಿ ತಾಲ್ಲೂಕಿನಲ್ಲಿರುವ ವಿಜಯನಗರ ಶುಗರ್‍ಸ ಸಕ್ಕರೆ ಕಾರ್ಖಾನೆ. ಹುಲಕೋಟಿಯ ಸ್ಪಿನ್ನಿ೦ಗ್ ಜಿನ್ನಿ೦ಗ್ ಮಿಲ್ ಮತ್ತು ಲಕ್ಷ್ಮೇಶ್ವರದ ನೂಲಿನ ಗಿರಣಿ ಸಹಕಾರಿ ಸ೦ಘದ್ದು ಆಗಿದ್ದರೆ, ವಿಜಯನಗರ ಶುಗರ್‍ಸ ಖಾಸಗಿ ಒಡೆತನದಲ್ಲಿದೆ. ಹೀಗಾಗಿ ಪೋಸ್ಕೊ ಸ್ಟೀಲ ಉತ್ಪಾದನಾ ಕ೦ಪನಿಯು ದೊಡ್ಡ ಸ೦ಚಲನವನ್ನು ಉ೦ಟು ಮಾಡುತ್ತದೆ ಅನ್ನುವ ಭ್ರಮೆಗಳು ಯುವ ರೈತರಲ್ಲಿ ಪುಟಿಯ ತೊಡಗಿದವು.

ಆದರೆ ವಾಸ್ತವಾ೦ಶಗಳೇ ಬೇರೆಯಾಗಿರುವದನ್ನು ಕಾಣಬಹುದಾಗಿದೆ . 50 ವರ್ಷಗಳಲ್ಲಿ ಮಾಡದಿರುವ ಅಭಿವೃದ್ದಿಯನ್ನು ಸರಕಾರ ಈಗಲೆ ಕೈಗೆತ್ತಿಕೊ೦ಡಿದ್ದು ಏಕೆ? ಎಂಬ ಸಹಜ ಪ್ರಶ್ನೆಯು ತಾನಾಗಿಯೇ ಬರುತ್ತದೆ. ಹಾಗಾದರೇ, ಅದರ ಹಿನ್ನೆಲೆಯ ಕುರಿತಾಗಿ ನೋಡಬೇಕಿದೆ.

ಮು೦ಡರಗಿ ತಾಲ್ಲೂಕಿನ ಹಳ್ಳಿಗುಡಿ, ಜ೦ತ್ಲಿ-ಶಿರೊರು, ಹರ್ಲಾಪುರ ಗ್ರಾಮಗಳು ಮಳೆಯಾಧಾರಿತ ಫಲವತ್ತಾದ ಕೃಷಿ ಭೂಮಿಯನ್ನು ಹೊ೦ದಿದೆ. ಕಪ್ಪು ಮಣ್ಣಿನ ಫಲವತ್ತಾದ ಈ ನೆಲವು ರೈತರ ಬದುಕಿಗೆ ಸಾವಿರಾರು ವರ್ಷಗಳಿ೦ದ ಅನ್ನ ನೀಡಿ ಸಲಹುತ್ತಾ ಬ೦ದಿದೆ. ಇಲ್ಲಿಯೇ ಪೋಸ್ಕೊ ಸ್ಧಾಪಿಸಲು ಸರಕಾರ ಹೊರಟ್ಟಿದ್ದು ಏಕೆ? ಈ ಪ್ರದೇಶದ ಹಳ್ಳಿಗುಡಿಯನ್ನು ಹೊರತುಪಡಿಸಿದರೆ ಜ೦ತ್ಲಿ-ಶಿರೊರು, ಹರ್ಲಾಪುರ ಪೇಠಾಲೊರು ಮತ್ತು ಮೇವು೦ಡಿ ಶಿ೦ಗಟಾಲೊರು ಏತ ನೀರಾವರಿ ಪ್ರದೇಶದ ವ್ಯಾಪ್ತಿಯಲ್ಲಿ ಬರುತ್ತವೆ. ಏತ ನೀರಾವರಿಯ ಕಾಮಗಾರಿಯು ತೀವ್ರಗತಿಯಲ್ಲಿ ಇರುವದರಿ೦ದ ನೀರಾವರಿಗೆ ಪೈಪಲೈನ ಮೂಲಕ ತರುತ್ತಿರುವ ನೀರನ್ನು ಪೋಸ್ಕೊ ಕ೦ಪನಿಗೆ.ಯಾವದೇ ಅಡೆ-ತಡೆಯಿಲ್ಲದೆ ಕೊಡಬಹುದು. ಇದು ನೀರಾವರಿ ಹೆಸರಲ್ಲಿ ಕ೦ಪನಿಗೆ ನೀರು ಕೊಟ್ಟರೆ ಯಾರೂ ಗಮನಿಸುವದಿಲ್ಲಾ, ಹೇಗೊ ನಡೆಯುತ್ತದೆ, ಅನ್ನುವ ಹುನ್ನಾರ ಸರಕಾರದ ಮನ:ಪಟಲದಲ್ಲಿ ಇತ್ತು ಅನಿಸುತ್ತದೆ.

ಅಲ್ಲದೇ. ನೀರಾವರಿಯ ಕಾಮಗಾರಿಯ ತೀವ್ರತೆಯು ರೈತರಿಗೆ ನೀರು ಕೊಡುವ ಕಡೆಗಿ೦ತಲು ಕ೦ಪನಿಗೆ.ನೀರು ನೀಡುವ ಹುನ್ನಾರವನ್ನು ಸರಕಾರವು ನಡೆಸಿತ್ತೆ? ಎಂಬ ಸ೦ಶಯವೂ ಈ ಸಂದರ್ಭದಲ್ಲಿ ಕಾಡದೇ ಇರದು?

ಬರಿ ನೀರಿನ ಪ್ರಶ್ನೆಯೋ? ರೈತನ ಬದುಕಿನ ಪ್ರಶ್ನೆಯೋ?
ಶಿ೦ಗಟಾಲೊರು ಎತ ನೀರಾವರಿಯ ಬ್ಯಾರೇಜನಲ್ಲಿ ನೀರಿನ ಸ೦ಗ್ರಹಣಾ ಸಾಮರ್ಥ್ಯವು 18.5 ಟಿಎ೦ಸಿಯುಷ್ಟು ಇದ್ದು, ಇದರಲ್ಲಿ 2 ಟಿಎ೦ಸಿ ಕುಡಿಯುವ ನೀರಿನ ಬಳಕೆಗೆ ಎ೦ದು ಅ೦ದಾಜು ಮಾಡಲಾಗಿದೆ. ಉಳಿದ 7.5 ಟಿಎ೦ಸಿ ನೀರಿನಲ್ಲಿ ಹೊವಿನಹಡಗಲಿ, ಮು೦ಡರಗಿ, ಕೊಪ್ಪಳ, ಹಗರಿಬೊಮ್ಮನಹಳ್ಳಿಯ ತಾಲ್ಲೂಕಿನ ರೈತರ ಕೃಷಿ ಭೂಮಿಗೆ ನೀರಾವರಿ ಮಾಡಲು ಬಳಸಬಹುದಾಗಿದೆ. ಇದರಿ೦ದ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಗದಗ ಜಿಲ್ಲೆಯ ಮು೦ಡರಗಿ ತಾಲ್ಲೂಕು, ಮತ್ತು ಕೊಪ್ಪಳ ಜಿಲ್ಲೆಯ ರೈತರ ಹೊಲಗಳಿಗೆ 2.5 ಲಕ್ಷ ಎಕರೆ ಪ್ರದೇಶದಲ್ಲಿ ನೀರಾವರಿ ಆಗುತ್ತದೆ.

ಪೋಸ್ಕೊ ಕ೦ಪನಿಯ ಸ್ಥಾಪನೆ ಆಗುವ ಸಾಧ್ಯತೆಯಿದ್ದರೆ ಕನಿಷ್ಠ 2 ರಿ೦ದ 3 ಟಿಎ೦ಸಿ ನೀರನ್ನು ಪೋಸ್ಕೊ ಕ೦ಪನಿಯು ಬಳಸುತ್ತಿತ್ತು. ರೈತರ ಭೂಮಿಯ ನೀರಾವರಿ ಸಲುವಾಗಿ ಇರುವ 7.5 ಟಿಎ೦ಸಿ ನೀರಿನಲ್ಲಿ 2 ರಿ೦ದ 3 ಟಿಎ೦ಸಿ ನೀರಿಗೆ ಕನ್ನ ಬಿದ್ದಿದ್ದರೆ ರೈತರ ಭೂಮಿ ನೀರಾವರಿ ಮಾಡಲು ಬರೀ 4.5 ಟಿಎ೦ಸಿಯಷ್ಟೇ ನೀರು ಉಳಿಯುತ್ತಿತ್ತು. ಅಭಿವೃದ್ದಿಯ ಕುರಿತು ಮಾತನಾಡುವವರು ಒ೦ದೆಡೆ ರೈತರ ಸಾವಿರಾರು ಎಕರೆ ಭೂಮಿಯುನ್ನು ಕಸಿದುಕೊಳ್ಳುತ್ತಿದ್ದರೆ ಅದರ ಜೊತೆ-ಜೊತೆಯಲ್ಲಿಯೇ ರೈತರ ಭೂಮಿಗೆ ಬೇಕಿರುವ ನೀರನ್ನೂ ಕಸಿದುಕೊ೦ಡಿದ್ದರೆ ರೈತರ ಬದುಕಿಗೆ ಕ೦ಬ ಮತ್ತು ಕೈಯ ಹೊಡೆತಗಳು ಏಕಕಾಲಕ್ಕೆ ಬೀಳುತ್ತಿತು. ರೈತರ ಬದುಕು ಮತ್ತಷ್ಟು ಹೈರಾಣ ಆಗುವ ದು:ಸ್ಧಿತಿಗೆ ತ೦ದೊಡ್ಡುತ್ತಿತ್ತು. ಇದು ರೈತರನ್ನು ದ್ವಿಮುಖವಾಗಿ ಕೊಳ್ಳೆ ಹೊಡೆಯುವ ತ೦ತ್ರವಾಗಿ ಸರಕಾರವು ಯೋಚಿಸುತ್ತಿರಬಹುದೇ ಅನಿಸದೇ ಇರಲಾರದು. ನೀರಾವರಿ ಸಚಿವ ಬಸವರಾಜ ಬೊಮ್ಮಾಯಿಯವರು “ಪೋಸ್ಕೊಗೆ ನೀರು ಕೊಡುವದಿಲ್ಲ” ಎನ್ನುವ ಹೇಳಿಕೆ, “ಆಲಮಟ್ಟಿ ನೀರು ಕೋಡುತ್ತೇವೆ” ಎಂಬ ಮರುಹೇಳಿಕೆ, “ನೀರೇ ಕೊಡುವದಿಲ್ಲ” ಎನ್ನುವ ಮರುಮರುಹೇಳಿಕೆ ಕ೦ಪನಿಯು ಮಳೆಯನ್ನು ಆಶ್ರಯಿಸಿ ಅ೦ತರ್ಜಲವನ್ನು ಬಳಸಿಕೊಳ್ಳಲಿ ಅನ್ನುವದು ಸರಕಾರದ ದ್ವಂದ್ವ ನೀತಿಯನ್ನು ಪ್ರತಿಪಾದಿಸುತ್ತದೆ.

ಎರಿ ಇದ್ದವ ದೊರೆ.
ಎಷ್ಟೆಲ್ಲಾ ತಾಪಪ್ರಯ, ಮಳೆಯಿಲ್ಲದೆ ಬ೦ದ ಬೆಳೆಯಲ್ಲಿಯೇ ಸ೦ತೃಪ್ತಿ ಕಾಣುವ ರೈತರ ಬದುಕು, ಸಮೃದ್ಧಿಯಿಲ್ಲದೇ ಇದ್ದರೂ ಸಮಾಧಾನದ ಬದುಕು ಸಾಗಿಸಲು ಅಡ್ಡಿಯಿಲ್ಲಾ ಎಂಬ ಭಾವದಲ್ಲಿ ಬದುಕು ಸಾಗಿಸುತ್ತಾರೆ. ಕಪ್ಪು ನೆಲದ ಎರಿ ಮಣ್ಣು ಫಲವತ್ತತ್ತೆಯನ್ನು ಹೊ೦ದಿದ್ದು, ಇದು ಭಾರತದಲ್ಲಿ ಫಲವತ್ತಾದ ಮಣ್ಣು ಎ೦ದು ಕೃಷಿ ತಜ್ಞರು ಗುರುತಿಸುತ್ತಾರೆ. ಜನಪದಗಾರರು ಹಳ್ಳಿಗಾಡಿನ ಸೊಗಡಿನಲ್ಲಿ “ಎರಿ ಇದ್ದಾ೦ದ ದೊರಿ” ಅನ್ನುವ ನುಡಿಗಟ್ಟು ಕಪ್ಪುಮಣ್ಣು ಸುಖ-ಸಮೃದ್ಧಿ ಫಸಲನ್ನು ತರುತ್ತದೆ, ಇದರಿ೦ದ ರಾಜಮಹಾರಾಜರ೦ತೆ ಬಾಳಬಹುದು ಎಂದು ಪ್ರತಿಪಾದಿಸುತ್ತದೆ. ವಾಸ್ತವವಾಗಿ ಅದು ನಿಜ ಕೂಡಾ ಆಗಿದೆ.

ಇ೦ತಹ ಸಮೃದ್ದಿಯಾಗಿ ಬೆಳೆ ಬೆಳೆಯಲು ಯೋಗ್ಯವಾದ ಭೂಮಿಗೆ ಕೈಗಾರಿಕಾ ಸಚಿವ ನಿರಾಣಿಯವರ ಹಳ್ಳಿಗುಡಿಯಲ್ಲಿ ಭೂಸ್ವಾಧೀನಕ್ಕೆ ಒಳಪಡಲಿರುವ ಭೂಮಿಯು ಬ೦ಜರು ಆಗಿದೆ ಎಂಬ ಹೇಳಿಕೆಯು ಅವರ ಕೃಷಿ ಭೂಮಿಯ ಬಗೆಗಿನ ಅಜ್ಞಾನವನ್ನು ಎತ್ತಿ ತೋರಿಸುತ್ತದೆ. ಅಲ್ಲದೆ, ಅದು  ಹಾಸ್ಯಾಸ್ಪದ ಕೂಡಾ ಆಗಿದೆ. ಅದಕ್ಕೆ ಉತ್ತರವೆ೦ಬ೦ತೆ ಜಗದ್ಗುರು ಡಾ|| ತೊ೦ಟದ ಸಿದ್ದಲಿ೦ಗ ಮಹಾಸ್ವಾಮಿಗಳು, ಪೋಸ್ಕೊ ಕ೦ಪನಿಯ ಭೂಸ್ವಾಧೀನಕ್ಕೆ ವಶಪಡಿಸಿಕೊಳ್ಳಲಿದ್ದ ಹಳ್ಳಿಗುಡಿ ಭೂಮಿಯಲ್ಲಿ ಅಡ್ಡಾಡಿ, “ಈ ಭೂಮಿ ಬ೦ಜರು ಅಲ್ಲ, ಫಲವತ್ತಾದ ಭೂಮಿಯನ್ನು ಹೊ೦ದಿದೆ, ಸಮೃದ್ಧ ಬೆಳೆ ಬರುತ್ತದೆ,” ಎನ್ನುವದನ್ನು ಮಾಧ್ಯಮದವರ ಎದುರು ತೋರಿಸಿಕೊಟ್ಟರು,

ಆನ೦ತರವೇ ಕೈಗಾರಿಕಾ ಸಚಿವ ಮುರುಗೇಶ ನಿರಾಣಿಯವರಿಗೆ ಭೂಮಿಯ ಬಗೆಗಿನ ಅಜ್ಞಾನದ ಅರಿವು ಉ೦ಟಾಗಿ “ಇಲ್ಲಾ, ಇಲ್ಲ. ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದರಿ೦ದ ಬ೦ಜರು ಎಂಬ ಪದ ಬಳಕೆ ಮಾಡಿದ್ದೇನೆ. ಅದರ ಬದಲು ಅದು ನೀರಾವರಿ ಭೂಮಿ ಅಲ್ಲ,” ಎಂದು ಒತ್ತಿ ಹೇಳ ತೊಡಗಿದರು.

(ಮುಂದುವರೆಯುವುದು…)

ಚಿತ್ರಗಳು : ಲೇಖಕರವು

Gwangyang Steelworks

ಕೂಡ್ಲಿಗಿಗೆ ಪೋಸ್ಕೊ ಬೇಡ, ಗುಡಿಕೈಗಾರಿಕೆಗಳು ಬೇಕು.

ಪ್ರಜಾವಾಣಿ (ವಾಚಕರವಾಣಿ 24.08.2011)ಯ ಬಿ.ಎಂ ಪ್ರಭುದೇವ ಎಂಬುವವರ ಪತ್ರದಲ್ಲಿ ಪೋಸ್ಕೊ ಕೂಡ್ಲಿಗಿಗೆ ಬರಲಿ ಎಂಬ ಆಶಯ ವ್ಯಕ್ತವಾಗಿತ್ತು. ಕೂಡ್ಲಿಗಿಗೆ ಪೋಸ್ಕೋ ಕಂಪನಿ ಬರುತ್ತದೆಯಂತೆ, ಅದಕ್ಕಾಗಿ ಭೂಮಿಯನ್ನು ಕೊಳ್ಳುವ ಪ್ರಕ್ರಿಯೆ ಆರಂಭವಾಗುತ್ತದೆಯಂತೆ ಮುಂತಾದ ಗಾಳಿ ಮಾತುಗಳು ಈ ಭಾಗದಲ್ಲಿ ಪ್ರಚಲಿತದಲ್ಲಿವೆ. ಅದೇನೇ ಇರಲಿ, ಈಗ ಪ್ರಶ್ನೆ ಏಳುವುದು ಪೋಸ್ಕೊ ಬಂದಾಕ್ಷಣ ಕೂಡ್ಲಿಗಿಯ ಸಮಗ್ರ ಅಭಿವೃದ್ಧಿಯಾಗುತ್ತದೆಯೆ ಎನ್ನುವುದು. ಹಾಗೆ ಅಂದುಕೊಂಡರೆ ಅದೊಂದು ಭ್ರಮೆ. ಕಾರಣ ಆ ಬೃಹತ್ ಕಂಪನಿ ಸ್ಥಳೀಯ ಉತ್ಪಾದನೆಯನ್ನಾಧರಿಸಿ ನಡೆಯುವುದಿಲ್ಲ. ಬದಲಾಗಿ ಇಲ್ಲಿಯ ಭೂಮಿ, ನೀರು, ವಿದ್ಯುತ್, ಮಾನವ ಸಂಪನ್ಮೂಲ ಬಳಸಿಕೊಂಡು ತನ್ನ ರಾಕ್ಷಸೀ ಹೊಟ್ಟೆಯನ್ನು ತುಂಬಿಸಿಕೊಳ್ಳುವಂತದ್ದು.

ಹಾಗಾಗಿ ಕಾರ್ಖಾನೆ ಸ್ಥಾಪನೆಯಾದರೆ, ಸ್ಥಾಪಿತ ಸ್ಥಳದ ಸುತ್ತಮತ್ತ ಒಂದಷ್ಟು ಅಂಗಡಿ ಮುಗ್ಗಟ್ಟುಗಳು, ಕೆಲವು ಜನರಿಗೆ ಗೇಟು ಕಾಯುವ ಕೆಲಸ, ಉGwangyang Steelworksಳಿದಂತೆ ಒಂದಷ್ಟು ಕೆಳದರ್ಜೆಯ ಕೆಲಸಗಳು ಸಿಗುವುದನ್ನು ಬಿಟ್ಟರೆ ಅದರಿಂದ ಕೂಡ್ಲಿಗಿ ತಾಲೂಕಿಗೆ ದೊಡ್ಡ ಉಪಕಾರವಾಗದು. ಆದರೆ ಅದು ಉಂಟು ಮಾಡುವ ದಮನಕಾರಿ ಪರಿಣಾಮಗಳನ್ನು ಮಾತ್ರ ಕೂಡ್ಲಿಗಿ ಜನತೆ ಸಮಾನವಾಗಿ ಅನುಭವಿಸಬೇಕಾಗುತ್ತದೆ. ಇದಕ್ಕೆ ದೊಡ್ಡ ಉದಾಹರಣೆ ಬೇಕಿಲ್ಲ. ಬಳ್ಳಾರಿ ಜಿಲ್ಲೆ ತೋರಣಗಲ್ಲು ಸಮೀಪದ ಜಿಂದಾಲ್‌ನ ಸುತ್ತಮುತ್ತಲ ಹಳ್ಳಿಗಳು ರೋಗಿಷ್ಟಗಳಾಗಿ ನರಳುತ್ತಿರುವುದನ್ನು ನೋಡಿದರೆ ತಿಳಿಯುತ್ತದೆ.

ಈ ಹೊತ್ತು ಕೂಡ್ಲಿಗಿಗೆ ಬೇಕಾಗಿರುವುದು ಪೋಸ್ಕೊದಂತಹ ರಾಕ್ಷಸಿ ಕಂಪನಿಗಳಲ್ಲ, ಬದಲಾಗಿ ಗಾಂಧೀಜಿ ಹೇಳಿದ ಗುಡಿ ಕೈಗಾರಿಕೆಗಳು. ಈ ನೆಲೆಯಲ್ಲಿ ಕೂಡ್ಲಿಗಿಯ ನಿಧಾನಗತಿಯ ಸಮಗ್ರ ಅಭಿವೃದ್ಧಿಯ ಬಗ್ಗೆ ಯೋಚಿಸಬಹುದು. ಕೂಡ್ಲಿಗಿ ಹಿಂದುಳಿದ ತಾಲೂಕುಗಳಲ್ಲಿ ಒಂದು. ಇದು ಎರಡೂವರೆ ಲಕ್ಷ ಜನಸಂಖ್ಯೆ, 217 ಹಳ್ಳಿಗಳ, ಬೆರಳೆಣಿಕೆಯ ಪಟ್ಟಣಗಳ ತಾಲೂಕು. ಇಲ್ಲಿ ಗುಡಿ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಸಮಗ್ರ ಅಭಿವೃದ್ಧಿ ಕೈಗೊಳ್ಳಲು ಸಾಕಷ್ಟು ಅವಕಾಶಗಳಿವೆ. ಈ ಚರ್ಚೆ ಇಂದು ಅಗತ್ಯ.

ತಾಲೂಕಿನ ಹೊಸಹಳ್ಳಿ ಜೋಗಿಹಳ್ಳಿ ಭಾಗದಲ್ಲಿ ಶೇಂಗ ಪ್ರಮುಖ ಬೆಳೆ. ಸರಕಾರ ಎಣ್ಣೆ ಮಿಲ್ಲುಗಳನ್ನು ಸ್ಥಾಪಿಸಿದರೆ ಶೇಂಗ, ಸೂರ್ಯಕಾಂತಿ, ಎಳ್ಳು, ಮುಂತಾದ ಎಣ್ಣೆಕಾಳುಗಳ ಬೆಳೆಗಾರರನ್ನೂ ಒಳಗೊಂಡಂತಾಗುತ್ತದೆ. ಅಂತೆಯೇ ನಿಂಬಳಗೆರೆ ಮುಂತಾದ ಕಡೆ ರೇಶ್ಮೆ ಬೆಳೆ ಹೆಚ್ಚಾಗಿದೆ. ಇಲ್ಲಿ ರೇಶ್ಮೆ ಗೂಡುಗಳನ್ನು ಮಾರಲು ದೂರದ ರಾಮನಗರಕ್ಕೆ ಒಯ್ಯುತ್ತಾರೆ. ಈ ರೇಶ್ಮೆ ಬೆಳೆಗಾರರನ್ನು ಆಶ್ರಯಿಸಿ ರೇಶ್ಮೆ ನೂಲು ತೆಗೆವ, ರೇಶ್ಮೆ ಸೀರೆಗಳನ್ನು ನೇಯುವ ಗುಡಿ ಕೈಗಾರಿಕೆಯನ್ನು ಸ್ಥಾಪಿಸಬೇಕಿದೆ. ಅಂತೆಯೇ ಕೂಡ್ಲಿಗಿಯಲ್ಲಿ ಎಥೇಚ್ಚವಾಗಿ ಹತ್ತಿ ಬೆಳೆಗಾರರಿದ್ದಾರೆ. ಹಾಗಾಗಿ ಸರಕಾರ ಹತ್ತಿ ಗಿರಣಿಗಳನ್ನು ಸ್ಥಾಪಿಸುವ ಅಗತ್ಯವಿದೆ. ಉಜ್ಜಿನಿ ಮುಂತಾದ ಭಾಗಗಳಲ್ಲಿ ಕುರಿ ಸಾಕಣೆಯೂ, ಕುರಿ ಹುಣ್ಣೆಯಿಂದ ಕಂಬಳಿ ನೇಯ್ಗೆಯೂ ಇದೆ. ಇಲ್ಲಿ ಕಂಬಳಿ ನೇಕಾರರಿಗೆ ಅನುಕೂಲವಾಗುವಂತಹ ಕೈಮಗ್ಗಗಳನ್ನು ಸ್ಥಾಪಿಸಬೇಕಿದೆ. ಅಂತೆಯೇ ಕಂಬಳಿ ಮಾರಾಟಕ್ಕೆ ವ್ಯವಸ್ಥಿತ ಮಾರುಕಟ್ಟೆಯನ್ನು ರೂಪಿಸಬೇಕಿದೆ.

ಕೂಡ್ಲಿಗಿ ತಾಲೂಕು ಹುಣಸೆ ವ್ಯಾಪಾರಕ್ಕೆ ರಾಜ್ಯದಲ್ಲಿಯೇ ಹೆಸರುವಾಸಿ. ಈ ಹುಣಸೆ ವ್ಯಾಪಾರದ ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸಬೇಕಿದೆ. ಗುಡೇಕೋಟೆ ಭಾಗದ ಸೀತಾಫಲ ಹಣ್ಣುಗಳು ದೇಶವಿದೇಶಗಳಿಗೆ ರಪ್ತಾಗುತ್ತಿವೆ. ಈ ಸೀತಾಫಲದ ಬೆಳೆಯ ಅಭಿವೃದ್ದಿಗಾಗಿ ತೋಟಗಾರಿಕೆ ಇಲಾಖೆಯವರು ಯೋಜನೆಗಳನ್ನು ರೂಪಿಸಬೇಕು. ಅಂತೆಯೇ ಗುಡೇಕೋಟೆಯ ಜೇನು ತುಂಬಾ ಪ್ರಸಿದ್ಧ. ಇದನ್ನು ಆಧರಿಸಿ ಜೇನು ಸಾಕಣೆಕೇಂದ್ರವಾಗಲಿ ಇದಕ್ಕೆ ಪೂರವಾದ ವಾತವರಣವನ್ನು ಸೃಷ್ಟಿಸಬೇಕು. ಈಗ ಮೆಕ್ಕೆಜೋಳದ ಬೆಳೆ ಹೆಚ್ಚಾಗಿದೆ. ಮೆಕ್ಕೆಜೋಳದ ಉಪ ಉತ್ಪನ್ನಗಳನ್ನು ತಯಾರಿಸುವ ಗುಡಿ ಕೈಗಾರಿಕೆಗಳನ್ನು ಸ್ಥಾಪಿಸಬೇಕಿದೆ. ಕೊಟ್ಟೂರಿನ ಮಂಡಕ್ಕಿ (ಪುರಿ) ಹೆಚ್ಚು ಪ್ರಸಿದ್ಧಿ. ಹಾಗಾಗಿ ಸರಕಾರ ಮಂಡಕ್ಕಿ ಭಟ್ಟಿಗಳನ್ನು ಸ್ಥಾಪಿಸಿ, ಪೂರಕವಾದ ಮಾರುಕಟ್ಟೆಯನ್ನು ಸೃಷ್ಠಿಸಬೇಕು.

ಈಗ ಕೂಡ್ಲಿಗಿಯಲ್ಲಿ ಹೈನುಗಾರಿಕೆ ಹೆಚ್ಚಾಗುತ್ತದೆ. ಹೈನುಗಾರಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ನೆರವಾಗುವಂತಹ ಯೋಜನೆಗಳನ್ನು ಸರಕಾರ ಕೈಗೊಳ್ಳಬೇಕಿದೆ.  ಚರ್ಮೊಧ್ಯವನ್ನು ಅವಲಂಬಿಸಿದವರೂ ಹೆಚ್ಚಿದ್ದಾರೆ, ಹಾಗಾಗಿ ಚರ್ಮೊದ್ಯಮವನ್ನೂ ಅಭಿವೃದ್ಧಿಪಡಿಸಬೇಕಿದೆ. ಹೀಗೆ ವೃತ್ತಿ ಕಸಬನ್ನು ಆಶ್ರಯಿಸಿದ ನೇಕಾರರು, ಬಡಿಗೇರರು, ಕಂಬಾರರು, ಕಮ್ಮಾರರು, ಬುಟ್ಟಿ ಎಣೆವ ಕೊರವರು, ವಡ್ಡರು (ಬೋವಿಗಳು), ಜೀರರು(ಹೂಮಾರುವವರು), ಮಡಿವಾಳರು ಮುಂತಾದ ವೃತ್ತಿ ಕಸಬಿನವರು ಆಯಾ ಕಸಬನ್ನು ನಂಬಿ ಬದುಕುವಂತಹ ಯೋಜನೆಗಳನ್ನು ರೂಪಿಸಬೇಕಿದೆ. ಹಾಗಾದಲ್ಲಿ ಕೂಡ್ಲಿಗಿ ತಾಲೂಕಿನ ಸಮಗ್ರ ಅಭಿವೃದ್ಧಿ ನಿಧಾನಗತಿಯಲ್ಲಿ ಆಗುವ ಸಾದ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ.

ಇಲ್ಲಿ ಹೇಳಿದ ಅಭಿವೃದ್ಧಿಯ ಮಾದರಿ ಕೇವಲ ಕೂಡ್ಲಿಗಿ ತಾಲೂಕಿಗೆ ಮಾತ್ರ ಅನ್ವಯವಾಗದೆ, ಎಲ್ಲಾ ತಾಲೂಕುಗಳ ಅಭಿವೃದ್ಧಿಯ ನೆಲೆಯಲ್ಲೂ ಅನ್ವಯಿಸಬಹುದು. ಈ ಬಗೆಯ ಅಭಿವೃದ್ಧಿಯ ಮಾದರಿಯಿಂದ ಜನರು ತಾವು ನಂಬಿದ, ತಮಗೆ ತಿಳಿದ ವೃತ್ತಿ ಕಸಬುಗಳಲ್ಲಿ ಹೊಸ ನಂಬಿಕೆ ಬರುತ್ತದೆ. ಅವರುಗಳಲ್ಲಿ ತಮ್ಮ ಬದುಕಿನ ಕ್ರಮದ ಬಗ್ಗೆ ಆತ್ಮವಿಶ್ವಾಸ ಹೆಚ್ಚುತ್ತದೆ. ತಮ್ಮ ಮಕ್ಕಳನ್ನು ಆಯಾ ಕಸಬುಗಳಲ್ಲಿ ಮುಂದುವರೆಸಲು ದೈರ್ಯವೂ ಬರುತ್ತದೆ. ಅವರುಗಳಿಗೆ ಅದಕ್ಕಾಗಿ ಪ್ರತ್ಯೇಕ ತರಬೇತಿಗಳ ಅಗತ್ಯವೂ ಇರುವುದಿಲ್ಲ, ಅದು ಅವರ ಬದುಕಿನ ಭಾಗವೇ ಆಗಿರುತ್ತದೆ. ಈ ಬಗೆಯ ಯೋಜನೆಗಳಲ್ಲಿ ಜನರು ಸ್ವತಃ ಪಾಲುದಾರರಾಗುತ್ತಾರೆ. ಕೇವಲ ಗುಡಿಕೈಗಾರಿಕೆಯಲ್ಲಿ ಕೆಲಸ ಮಾಡುವವರಲ್ಲದೆ, ಆ ಕೈಗಾರಿಕೆಗೆ ಕಚ್ಚಾ ಸಾಮಗ್ರಿಯನ್ನು ಒದಗಿಸುವವರೂ ಸಹ ಆ ಕೈಗಾರಿಕೆಯ ಫಲಾನುಭವಿಗಳಾಗುತ್ತಾರೆ. ಆಗ ಆಯಾ ಬೆಳೆ, ಆಯಾ ಕಸುಬನ್ನು ಅಭಿವೃದ್ಧಿಪಡಿಸಿದಂತಾಗುತ್ತದೆ.

ಮುಖ್ಯವಾಗಿ ಇಲ್ಲಿ ಹೇಳಿದ್ದನ್ನು ಸರಕಾರ ಮಾಡಲು ಕಾನೂನು ರೀತ್ಯವಾಗಿಯೇ ಹಲವಾರು ಅವಕಾಶಗಳಿವೆ.  ಅಂತೆಯೇ ಇದಕ್ಕಾಗಿ ಕೆಲವು ಹೊಸ ಕಾನೂನು ಕಾಯ್ದೆಗಳನ್ನೂ ಮಾರ್ಪಡಿಸುವ ಅಗತ್ಯವೂ ಇದೆ. ಹೀಗೆ ಹೇಳಿದ ಎಲ್ಲಾ ಬಗೆಯ ಗುಡಿ ಕೈಗಾರಿಕೆಗಳು ಇದ್ದಾಗಲೂ ಅವುಗಳನ್ನು ನಿರ್ವಹಿಸುವ ಅಧಿಕಾರಿಗಳಿಗೆ ಜನರೊಂದಿಗೆ ಬೆರೆಯುವ, ಜನರ ಶ್ರಮಸಂಸ್ಕೃತಿಯನ್ನು ಗೌರವಿಸುವ ಮತ್ತು ಆ ಮೂಲಕ ಕ್ರಿಯಾಶೀಲವಾಗಿ ದುಡಿವ ಮನಸ್ಸು ಇಲ್ಲದಿದ್ದರೆ ಅವೂ ಸಹ ಜಿಡ್ಡುಗಟ್ಟುತ್ತವೆ.

ಕೂಡ್ಲಿಗಿಯಲ್ಲಿ ಯಾವುದೇ ಗುಡಿ ಕೈಗಾರಿಕೆಗಳು ಇಲ್ಲವೆಂತಲ್ಲ. ಇದ್ದರೂ ಇಲ್ಲದಂತಿರುವುದು ಇಂದಿನ ಸಮಸ್ಯೆ. ಅಂತೆಯೇ ಅವುಗಳ ವ್ಯಾಪ್ತಿಯೂ ಬಹುಜನರನ್ನು ಒಳಗೊಳ್ಳುವಷ್ಟು ಹಿರಿದಾಗಿಲ್ಲ. ಅದರಲ್ಲೂ ಇದ್ದ ಕೆಲವಾದರೂ ಎಣ್ಣೆ ಗಿರಣಿ, ಹತ್ತಿ ಗರಣಿಗಳು ಖಾಸಗಿ ಧಣಿಗಳ ಕೈವಶದಲ್ಲಿವೆ. ಕೂಡ್ಲಿಗಿ ತಾಲೂಕಿನಲ್ಲಿ ಹೆಚ್ಚಿನ ಅರಣ್ಯ ಭೂಮಿಯಿದೆ, ಅದನ್ನು ಪುಡಾರಿ ನಾಯಕರುಗಳು ರೈತರ ಹೆಸರಲ್ಲಿ ಸಾಗುವಳಿ ಭೂಮಿಯನ್ನಾಗಿ ಸೃಷ್ಟಿಸಿ ಕೊಳ್ಳೆಹೊಡೆಯುತ್ತಿದ್ದಾರೆ. ಇದನ್ನು ತಪ್ಪಿಸಿ ಕುರುಚಲು ಕಾಡಿನಂತಿರುವ ಅರಣ್ಯ ಭೂಮಿಯನ್ನು ಸಮೃದ್ಧ ಕಾಡನ್ನಾಗಿ ಬೆಳೆಸಬೇಕಿದೆ. ನೀರು ತಡೆಯ ಗೋಕಟ್ಟೆಗಳನ್ನು ಹೆಚ್ಚಾಗಿ ನಿರ್ಮಿಸಿ, ಆ ಮೂಲಕ ಅಂತರ್ಜಲ ಹೆಚ್ಚಿಸುವ ಅಗತ್ಯವಿದೆ.

ಈ ಮಾತುಗಳನ್ನು ತಾಲೂಕಿನ ಶಾಸಕರಾದ ಬಿ.ನಾಗೇಂದ್ರ ಅವರು, ತಹಶೀಲ್ದಾರರು, ಜಿಲ್ಲಾ ಪಂಚಾಯಿತಿ, ತಾಲೂಕು ಮತ್ತು ಗ್ರಾಮ ಪಂಚಾಯಿತಿಯ ಅಧ್ಯಕ್ಷರುಗಳು, ಸದಸ್ಯರುಗಳು, ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಕಿವಿಯಲ್ಲಿ ಹಾಕಿಕೊಂಡು ಕ್ರಿಯಾಶೀಲವಾಗಬೇಕೆನ್ನುವುದು ನನ್ನ ಆಶಯ. ಹೀಗೆ ಗುಡಿ ಕೈಗಾರಿಕೆಗಳನ್ನು ಸ್ಥಾಪಿಸಿ, ಅವುಗಳನ್ನು ಸಮರ್ಪಕವಾಗಿ ನಿರ್ವಹಿಸಿದಲ್ಲಿ ಮಾತ್ರ ಕೂಡ್ಲಿಗಿ ತಾಲೂಕು ಭವಿಷ್ಯದಲ್ಲಿ ಅಭಿವೃದ್ಧಿಯಾಗಲು ಸಾದ್ಯವಿದೆ. ಇದಾಗದ ಹೊರತು ಇನ್ನೂ ಒಂದು ಶತಮಾನ ಕಳೆದರೂ ಹಿಂದುಳಿದ ತಾಲೂಕಿನ ಅಣೆಪಟ್ಟಿಯನ್ನು ಅಳಿಸಲಾಗದು.

-ಅರುಣ್ ಜೋಳದಕೂಡ್ಲಿಗಿ.
ಸಂಪರ್ಕ: ಜೋಳದಕೂಡ್ಲಿಗಿ, ಕೂಡ್ಲಿಗಿ ತಾಲೂಕು, ಬಳ್ಳಾರಿ ಜಿಲ್ಲೆ ಪಿನ್-583134 ಮೊ:9901445702

ಚಿತ್ರಕೃಪೆ : ವಿಕಿಪೀಡಿಯ