Category Archives: ರಾಜಕೀಯ

ರಾಜಕೀಯ ವಿಷಯಗಳಿಗೆ ಸಂಬಂಧಿಸಿದ ಲೇಖನಗಳು ಮತ್ತು ವಿಡಿಯೋಗಳು…

ಪೋಸ್ಕೋ ಪಲಾಯನದ ಹಿಂದಿನ ರಾಜಕಾರಣ ಮತ್ತು ಕಾಡುತ್ತಿರುವ ಪ್ರಶ್ನೆಗಳು

ಹು.ಬಾ. ವಡ್ಡಟ್ಟಿ

ಪೋಸ್ಕೋ ಎಂಬ ಸ್ಟೀಲ್ ಉತ್ಪಾದಿಸುವ ದ.ಕೋರಿಯಾದ ಕಂಪನಿ ಗದಗ ಜಿಲ್ಲೆಯ ಹಳ್ಳಿಗುಡಿಯ ರೈತರ ಹೊಲಗಳಲ್ಲಿ ಸ್ಟೀಲ್ ಉತ್ಪಾದನೆ ಮಾಡುವ ಘಟಕವನ್ನು ಸ್ಥಾಪನೆ ಮಾಡುತ್ತಾರೆ ಎನ್ನುವ ಗಾಳಿ ಸುದ್ಧಿ ಮೊದಲು ದಲ್ಲಾಳಿಗಳ ಕಿವಿ ತಲುಪಿದಾಗ ದಲ್ಲಾಳಿಗಷ್ಟು ಖುಷಿ ಪಟ್ಟವರು ಈ ಜಗತ್ತಿನಲ್ಲಿ ಯಾರು ಇರಲಾರರು ಅನಿಸುತ್ತದೆ. ಆದರೆ 2011 ರ ಜೂನ್ ಕೊನೆಯ ವಾರದಲ್ಲಿ ಧಾರವಾಡದ ಕೆಐಎಡಿಬಿ(ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ದಿ ಮಂಡಳಿ)ಯಿಂದ ರೈತರ ಮನೆ ಬಾಗಿಲಿಗೆ “ನಿಮ್ಮ ಭೂಮಿಯನ್ನು ಪೋಸ್ಕೋಗಾಗಿ ವಶಪಡಿಸಿಕೊಳ್ಳಲಾಗುತ್ತದೆ, ಆಕ್ಷೇಪಣೆಗಳು ಇದ್ಧರೆ ಧಾರವಾಡಕ್ಕೆ ಬಂದು ಕೆಐಎಡಿಬಿ ಗೆ ಸಲ್ಲಿಸಬಹುದು,” ಅನ್ನುವ ಸೂಚನೆಯು ತಲೆತಲಾಂತರಿಂದ ಭೂಮಿ ನಂಬಿ ಬದುಕಿರುವ ರೈತಾಪಿ ಜೀವಗಳಿಗೆ ಒಮ್ಮಿ೦ದೊಮ್ಮೆಲೆ ಬರಸಿಡಿಲು ಬಡಿದಂತೆ ಆಗಿ, ರೈತರು ಭೂಮಿ ಜೊತೆ ಹೊಂದಿರುವ ಭಾವನಾತ್ಮಾಕವಾದ ಸಂಬಂಧ ಹಾಗೂ ಭೂಮಿ ಆಧರಿಸಿ ಬದುಕು ಸಾಗಿಸುವುದಕ್ಕೆ ಕೊಡಲಿ ಪೆಟ್ಟುಬೀಳುತ್ತದೆ, ಆದ್ದರಿಂದ ಬದುಕು ಮುಂದೇನು ಎನ್ನುವ ಪ್ರಶ್ನೆಯನ್ನು ಹುಟ್ಟುಹಾಕಿತು.

ಅಭಿವೃದ್ದಿಯೆಂಬ ಬಿಸಿಲುಕುದುರೆಯ ನಾಗಾಲೋಟಕ್ಕೆ ಹಳ್ಳಿಗುಡಿ, ಜಂತ್ಲಿಶಿರೂರ್ , ಮೇವುಂಢಿ, ರೈತರು ಭೂಮಿಯನ್ನು ಕೊಡುವದರ ಮೂಲಕ ಅಭಿವೃದ್ದಿಯಲ್ಲಿ ಪಾಲ್ಗೊಳ್ಳಬಹುದೆಂಬ ಹುಸಿ ಕಲ್ಫನೆಯನ್ನು ಆಡಳಿತಾರೂಢ ಬಿಜೆಪಿಯ ಬೆಂಬಲಿಗರು ಜನರಲ್ಲಿ ಹುಟ್ಟುಹಾಕಿದರು. ಆದರೆ ಪೋಸ್ಕೋ ಆಗಮನದಿಂದ ಇಲ್ಲಿನ ಜನರ ಬದುಕಿಗೆ ನೆಮ್ಮದಿ ಸಿಗುತ್ತಾ ಮೂಲಭೂತ ಕಾಳಜಿಯಿಂದ ಪರಿಸರದ ಮೇಲೆ ಎಂಥ ಪರಿಣಾಮ ಉಂಟಾಗಬಹುದು ಎಂಬ ಆತಂಕ ಪರಿಸರವಾದಿಗಳು, ಪ್ರಗತಿಪರರು, ಮಠಾಧೀಶರದ್ದಾಗಿತ್ತು.ಆದರೂ ಪೋಸ್ಕೋ ಕಂಪನಿಯು ಉಕ್ಕು ಘಟಕ ಸ್ಥಾಪಿಸಲು ಪೂರಕವಾದ ಮೂಲಭೂತ ಸೌಕರ್ಯಗಳಾದ ರಸ್ತೆ, ರೈಲು, ನೀರು ಸುಲಭವಾಗಿ ಕೈ ಅಳತೆಯಲ್ಲಿ ನಿರಾಯಾಸವಾಗಿ ದೊರಕುವುದು ಎಂದು ರಾಜಕಾರಣಿಗಳು, ದಲ್ಲಾಳಿಗಳು, ಅಭಿವೃದ್ದಿಯ ಮಂತ್ರ ಜಪಿಸುವ ಭೂಮಾಫೀಯಾದ ಕುಳಗಳು, ಪೋಸ್ಕೋ “ಯಜ್ಙ”ಕ್ಕೆ ಹಳ್ಳಿಗುಡಿಯ ರೈತರನ್ನು, ಭೂಮಿಯನ್ನು ಸಮಿತ್ತಾಗಿ ಸಿದ್ದಗೊಳಿಸತೊಡಗಿದರು.

ಇದರ ಹಿಂದಿರುವ ಹುನ್ನಾರ ಎಂದರೆ ಪಕ್ಕದಲ್ಲಿಯೇ ಇರುವ ರಾಷ್ಟ್ರೀಯ ಹೆದ್ದಾರಿ – 63 ಹುಬ್ಬಳ್ಳಿ- ಗುಂಟಕಲ್ಲನ್ನು ಜೊಡಿಸುವ ಬ್ರಾಡಗೇಜ್ ರೈಲು ಅದಕ್ಕಿಂತಲು, ಶಿಂಗಟಾಲುರುಗಳಂತಿರುವ  ಏತ ನೀರಾವರಿಯ ನೀರನ್ನು ಉಕ್ಕು ಘಟಕಕ್ಕೆ ಬಳಸಬಹುದು. ಜೊತೆಗೆ ಉಕ್ಕು ಘಟಕಕ್ಕೆ ಬೇಕಾಗುವ ಆದಿರನ್ನು 15 ಕಿ ಮೀ ಅಂತರದಲ್ಲಿರುವ ಕಪ್ಪತ್ತ ಗುಡ್ಡದಿಂದ ಕೊಳ್ಳೆಹೂಡೆಯಲು ಅನೂಕೂಲವಾಗುತ್ತದೆ ಎನ್ನುವ ದೂ(ದು)ರಾಲೊಚನೆಯೊಂದಿಗೆ ಪೋಸ್ಕೋ ಕಂಪನಿಗೆ, ಭೂಮಿ ಕಬಳಿಸುವ ದುಷ್ಟ ಯೋಜನೆಗೆ, ಸರ್ಕಾರವು ಕೈ ಹಾಕಿತು.

ಸರ್ಕಾರವು 2011 ರ ಮಾರ್ಚನಲ್ಲಿ ಕೈಗಾರಿಕೆಯ ಸಲುವಾಗಿ ಲ್ಯಾಂಡ್ ಬ್ಯಾಂಕ್ ಮಾಡಲು ಭೂಮಿ ಒಳಪಡಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆಯನ್ನು ನೀಡಿ ರಾಜ್ಯ ಪತ್ರದಲ್ಲಿ ಪ್ರಕಟಿಸಿತ್ತು. ಈ ಪ್ರಕಟಣೆಯು ಜನರಿಗೆ, ರೈತರ ಗಮನಕ್ಕೆ ಬಂದಿರಲಿಲ್ಲ. ಈ ಮೊದಲೇ ಗದಗ್ ಜಿಲ್ಲಾ ಉಸ್ತಾವಾರಿ ಸಚಿವಾರಾಗಿದ್ದ ಬಿ.ಶ್ರೀ ರಾಮುಲು ಅವರು ಹಳ್ಳಿಗುಡಿ – ಹಳ್ಳಿಕೇರಿ ರಾಷ್ಟೀಯ ಹೆದ್ದಾರಿಯ ಪಕ್ಕದಲ್ಲಿಯೇ 2 ಸಾವಿರ ಕೋಟಿ ರೂಪಾಯಿವೆಚ್ಚದಲ್ಲಿ ಉಕ್ಕು ಕಾರ್ಖಾನೆಯನ್ನು  ಸ್ಥಾಪಿಸಲಾಗುತ್ತದೆ  ಎನ್ನುವ ಮುನ್ಸುಚನೆ, 2009 ರಲ್ಲಿಯೇ ನೀಡಿದ್ದರಲ್ಲದೆ, ಉಕ್ಕು ಕಾರ್ಖಾನೆಯು ಗದಗ್ ಜಿಲ್ಲೆಯನ್ನು  ಅಭಿವೃದ್ಧಿಯತ್ತ ಕೊಂಡೊಯ್ಯುತ್ತದೆ, ಗದಗ್ ಜಿಲ್ಲೆಯಲ್ಲಿ ಕಾರ್ಖಾನೆಯಿಂದಾಗಿ  , ಅಭಿವೃದ್ಧಿಯು, ತಾನೇ-ತಾನಾಗಿ ಜನರ ಬದುಕಿನಲ್ಲಿ  ಫಲಗಳನ್ನು ತಂದುಹಾಕುತ್ತದೆ. ಇನ್ನು ಮುಂದೆ ಸುಖದ, ನೆಮ್ಮದಿಯ ದಿನಗಳು ಬರಲಿವೆ ಎನ್ನುವ ಕನಸು ಕಾಣ ತೊಡಗಿದರು.

ಇದಕ್ಕೆ ಪೂರಕವಾಗುವಂತೆ ಎಪ್ರಿಲ್ 15-2011 ರಲ್ಲಿ ಮೊದಲ ನೋಟಿಸ್, ‘1966 ರ ಕಲಂ 28 (2) ಮೇರೆಗೆ ಭೂಮಿಯು ಸ್ವಾಧೀನಪಡಿಸಿಕೊಳ್ಳುವ  ದಿಶೆಯಲ್ಲಿ ರೈತರಿಗೆ  ನಿಮ್ಮ ಆಕ್ಷೇಪಣೆಗಳಿದ್ದರೆ ಲಿಖಿತ ರೂಪದಲ್ಲಿ 30 ದಿನಗಳ ಒಳಗಾಗಿ ಸಲ್ಲಿಸಲು,’ ಕೆಐಎಡಿಬಿಯ ಧಾರವಾಡದ ಕಾರ್ಯಾಲಯವು ಗಡುವು ನೀಡಿತ್ತು.

ಜೂನ್ 23-2011 ರಂದು ಧಾರವಾಡ ಕೆಐಎಡಿಬಿಯು ಪುನಃ ರೈತರ ಮನೆಯಬಾಗಿಲಿಗೆ ಬಂದಾಗ, ಆ ನೋಟಿಸ್‌ನಲ್ಲಿ ಸ್ಪಷ್ಟವಾಗಿ ನಮೂದಿಸಿದಂತೆ ಕೈಗಾರಿಕೆ ಸ್ಥಾಪನೆ ಸಂಬಂಧಿಸಿ, ಹಳ್ಳಿಗುಡಿ ಗ್ರಾಮದ 3382-ಏಕರೆ ಭೂಮಿಯನ್ನು ಪೋಸ್ಕೋ ಇಂಡಿಯ ಪ್ರೈ.ಲಿ. ಕೈಗಾರಿಕೆ ಸ್ಥಾಪನೆಗೆ ಬೇಕಾಗಿದೆ ಅದರ ಸಲುವಾಗಿ ಆಪೇಕ್ಷೇಣೆಗಳನ್ನು ಸಲ್ಲಿಸಲು, ರೈತರಿಗೆ 10 ದಿನಗಳ ಗಡುವು ನೀಡಿತು. ರೈತರು, ಮಠಾಧೀಶರು, ಪ್ರಗತಿಪರ ಸಂಘಟನೆ, ರೈತರ ಸಂಘಟನೆಯವರು , ಐತಿಹಾಸಿಕ ಹೋರಾಟಕ್ಕೆ ಸಜ್ಜಾಗತೊಡಗಿದರು.  ಪೋಸ್ಕೋ  ಉಕ್ಕು ಕಾರ್ಖಾನೆಯಿಂದ ಉಂಟಾಗಬಹುದಾದ ಪರಿಣಾಮಗಳನ್ನು ಕುರಿತು ಹಲವು ಸುದ್ದಿಗಳು ಪ್ರಕಟವಾದವು.

ರೈತರು ಸರ್ಕಾರಕ್ಕೆ ಭೂಮಿ ಕೊಡದಿರುವ ಗಟ್ಟಿ ನಿರ್ಧಾರಕ್ಕೆ  ಮಠಾಧೀಶರು, ಪ್ರಗತಿಪರರು, ಮಾಧ್ಯಮದವರು ಬೆಂಬಲವಾಗಿ  ನಿಂತರು. ಹೋರಾಟವು ಮುಂದುವರೆಯಲು ಹೇಗೆ ಸಾಧ್ಯವಾಯಿತು? ಜೊತೆಗೆ ಅಭಿವೃದ್ದಿಯ ಟೊಳ್ಳು-ಗಟ್ಟಿಯು ಜನರ, ರೈತರ, ಬದುಕಿನೊಂದಿಗೆ ಹೇಗೆ ಚೆಲ್ಲಾಟವಾಡುತ್ತಿದೆ ಎನ್ನುವ ಮುಂದಿರುವ ಪ್ರಶ್ನೆಗಳನ್ನು ಇಟ್ಟುಕೊ0ಡು ಮುಂದಿನ ಭಾಗದಲ್ಲಿ ನೊಡೋಣ.

  • ಗದಗ ಜಿಲ್ಲೆಯ ಅಭಿವೃದ್ದಿಗೆ ಪೋಸ್ಕೋ ಬೇಕೆ?
  • ಕೃಷಿ ಆಧಾರಿತ ಕೈಗಾರಿಕೆಗಳು, ಅನುಕೂಲಕರವೇ?
  • ಪೋಸ್ಕೋದಿಂದ ಪರಿಸರ – ಕಪ್ಪತಗುಡ್ಡದ ಮೇಲಾಗುವ ದುಷ್ಟಪರಿಣಾಮಗಳು ಏನು?
  • ಕಳೆದ 50 ವರ್ಷಗಳಿಂದ ಕೈಗಾರಿಕೆ ಏಕೆ ಸ್ಥಾಪನೆ ಆಗಿರಲಿಲ್ಲ?
  • ಸಿಂಗಾಟಲೂರು ಏತ ನೀರಾವರಿ ಈ ಭಾಗದಲ್ಲಿ ಕನಿಷ್ಟ ರೈತರ ಬದುಕಿಗೆ ಆಸರೆಯಾಗಲಿದೆಯೇ?
  • ರೈತರ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು ಸರ್ಕಾರ ಹಣವನ್ನು ರೈತರಿಗೆ ನೀಡಿದರೆ ರೈತರ ಬದುಕಿನ ಪಯಣ ಯಾವ ದಿಕ್ಕಿನ ಕಡೆಗೆ?
  • ಭೂಸ್ವಾಧೀನ, “ಹಣ ಕೊಡುವ-ತೆಗೆದುಕೊಳ್ಳುವ” ಪ್ರಕ್ರಿಯೆಗಷ್ಟೆ ಸೀಮಿತವೆ?
  • ಪೋಸ್ಕೋ ಕಂಪನಿಯಿಂದ ಗದಗ್ ಜಿಲ್ಲೆಯಲ್ಲಿ ಎಷ್ಟು ಉದ್ಯೋಗಗಳು ಸೃಷ್ಟಿಯಾಗುತ್ತವೆ?
  • ಭೂಸ್ವಾಧೀನದಿಂದ ಭೂಹೀನವಾಗುವ ರೈತರ ಕುಟುಂಬಗಳು ಎಷ್ಟು? ಅವರು ಬದುಕಿನ ನೆಲೆ ಕಳೆದುಕೊಂಡಾಗ ಪರ್ಯಾಯ ಉದ್ಯೋಗ ಕಲ್ಪಿಸುವರು ಯಾರು?
  • ಪೋಸ್ಕೋಗೆ ಕೊಡುತ್ತಿರುವ ರೈತರ ಭೂಮಿಯು ಕೃಷಿ ಯೋಗ್ಯವಲ್ಲದ ಬಂಜರು, ಭೂಮಿ – ಕೈಗಾರಿಕೆ ಸಚಿವ ನಿರಾಣಿಯವರ ಹೇಳಿಕೆ.
  • ಪೋಸ್ಕೋಗೆ ತುಂಗಾಭದ್ರೆಯಿಂದ ನೀರು ಕೊಡದೇ, ಆಲಮಟ್ಟಿದಿಂದ ನೀರು ಕೊಡುತ್ತೆವೆ – ನೀರಾವರಿ ಸಚಿವ ಬಸವರಾಜ ಬೊಮ್ಮಾಯಿ.

(ಮುಂದುವರೆಯುವುದು…)

ಚಿತ್ರಗಳು: ಲೇಖಕರವು

Anna_Hazare

ಅಣ್ಣಾ ಹಜಾರೆ ಹೋರಾಟವನ್ನು ಗ್ರಹಿಸಬೇಕಾದ ರೀತಿ…

ಅಣ್ಣಾ ಹಜಾರೆಯವರ ಹೋರಾಟ ಈಗ ನಿರ್ಣಾಯಕ ಹಂತ ತಲುಪಿದೆ. ಯಾವುದೋ ಒಂದು ಲೊಕಪಾಲ್ ಮಸೂದೆ ಮುಂದಿನ ಒಂದೆರಡು ತಿಂಗಳಿನಲ್ಲಿ ಅಂಗೀಕಾರವಾಗುವುದು ಈಗ ನಂಬಬಹುದಾದ ವಿಚಾರ. ಇಂದಲ್ಲ ನಾಳೆ ಯಾವುದೋ ಒಂದು ಲೋಕ್‌ಪಾಲ್ ಬರುತ್ತಿತ್ತು. ಆದರೆ, ಅಣ್ಣಾ ಹಜಾರೆಯ ಉಪವಾಸ ಸತ್ಯಾಗ್ರಹ ಇಲ್ಲದೇ ಹೋಗಿದ್ದರೆ ಅದು ಇಷ್ಟು ಬೇಗ ಆಗುತ್ತಿರಲಿಲ್ಲ. ಮತ್ತು ಇಷ್ಟು ಪರಿಣಾಮಕಾರಿಯಾಗಿಯೂ ಇರುತ್ತಿರಲಿಲ್ಲ.

Anna_Hazare

Anna_Hazare

ನಮ್ಮ ದೇಶದಲ್ಲಿ ಭ್ರಷ್ಟಾಚಾರದ ಮೂಲ ಬೇರು ಇರುವುದು ನಮ್ಮ ಸಮಾಜದಲ್ಲಿ ಸಾರ್ವತ್ರಿಕವಾಗಿಲ್ಲದ ಮೌಲ್ಯಗಳಿಂದ ಮತ್ತು ಪ್ರಜಾಪ್ರಭುತ್ವದ ಆಳವಾದ ಕಲ್ಪನೆ ನಮ್ಮ ಬಹುತೇಕ ದೇಶವಾಸಿಗಳಿಗೆ ಇಲ್ಲದಿರುವುದರಿಂದ. ಮೂರ್ನಾಲ್ಕು ದಶಕಗಳ ಹಿಂದೆ ಕಳ್ಳತನ-ಕೊಲೆ-ಸುಲಿಗೆಯಲ್ಲಿ ತೊಡಗಿದ ಜನರನ್ನು, ಲಂಚ ತೆಗೆದುಕೊಂಡು ಸಿಕ್ಕಿಬೀಳುತ್ತಿದ್ದವರನ್ನು ಸಮಾಜ ಒಂದು ರೀತಿ ನೋಡುತ್ತಿತ್ತು. ಅಘೋಷಿತ ಬಹಿಷ್ಕಾರ ಹಾಕುತ್ತಿತ್ತು. ಆದರೆ ಯಾವಾಗ ದುಡ್ಡು ಮತ್ತು ನಮ್ಮ ಈಗಿನ ಬುದ್ಧಿಗೇಡಿ ಭ್ರಷ್ಟ ರಾಜಕಾರಣಿಗಳ ಅಭಿವೃದ್ಧಿಯ ಕಲ್ಪನೆ ಸಮಾಜದಲ್ಲಿ ಸ್ಥಾನ ಪಡೆದುಕೊಂಡಿತೊ, ಆಗ ನಮ್ಮ ಸಮಾಜದಲ್ಲಿದ್ದ ಅಷ್ಟಿಷ್ಟು ನೀತಿ-ನಿಜಾಯಿತಿಗಳೆಲ್ಲ ಮೂಲೆಗುಂಪಾದವು. ನ್ಯಾಯವಾಗಿರುವುದು, ಸರಳ-ಆದರ್ಶ ಜೀವನ ನಡೆಸುವುದು ಸಮಾಜದ ಪ್ರಕಾರ ಕೇವಲ ಸೋತವರ ಮೌಲ್ಯಗಳಾದವೇ ಹೊರತು ಸಮಾಜದ ಮೌಲ್ಯಗಳಾಗಲಿಲ್ಲ. ನಮ್ಮದೇ ದೇಶದಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಕಾನೂನಿನ ಪ್ರಕಾರ ನಡೆದುಕೊಳ್ಳುವುದಕ್ಕೆ, ಕಾನೂನು ಪಾಲಿಸುವುದಕ್ಕೆ ನಾವು ಯಾಕಾಗಿ ಲಂಚ ನೀಡಬೇಕು ಎಂದು ಜನ ನಿಂತು ಯೋಚಿಸಲಿಲ್ಲ. ಕೊಡದಿದ್ದರೆ ಕೆಲಸ ಆಗುವುದಿಲ್ಲ; ಎಲ್ಲರೂ ಕೊಡುತ್ತಾರೆ, ನಾವೂ ಕೊಡುವುದರಲ್ಲೇನು ತಪ್ಪು; ಇದು ಲೋಕಸಮ್ಮತ ಎನ್ನುವ ತೀರ್ಮಾನಕ್ಕೆ ಬಹುತೇಕ ಜನ ಬಂದ ಸಂದರ್ಭ ಇದು.

ಇದೇ ಸಮಯದಲ್ಲಿ ನಮ್ಮ ಜನರಿಗೆ ರಾಜಕೀಯ ಪಕ್ಷಗಳಲ್ಲಿ ಆಯ್ಕೆಗಳೂ ಇರಲಿಲ್ಲ. ನಾನು ಇತ್ತೀಚೆಗೆ ಎಲ್ಲರಿಗೂ ಹೇಳುವ ವಿಷಯ ಏನೆಂದರೆ, ’ಯಾವುದಾದರೂ ಒಂದು ಒಳ್ಳೆಯ ನಾಯಕನ ಅಥವ ಪಕ್ಷದ ಆಯ್ಕೆ ಕರ್ನಾಟಕದ ಜನಕ್ಕೆ ಇದ್ದಿದ್ದರೆ ಇಲ್ಲಿ ವರ್ಷದ ಹಿಂದೆಯೇ ಕ್ರಾಂತಿಯಾಗಿಬಿಡುತ್ತಿತ್ತು,’ ಎಂದು. ನಿಸ್ಸಂಶಯವಾಗಿ ಯಡ್ಡಯೂರಪ್ಪ ಮತ್ತವರ ಪಕ್ಷದ ಆಡಳಿತ ಹಗಲುದರೋಡೆಕೋರರದ್ದು. ಆ ಹಗಲುದರೋಡೆಯಿಂದಲೇ ಇಷ್ಟರಲ್ಲಿಯೇ ಮತ್ತೊಂದಷ್ಟು ಕರ್ನಾಟಕದ ರಾಜಕಾರಣಿಗಳು ಜೈಲು ಸೇರಬೇಕಾಗಿ ಬರಬಹುದು. ಆದರೆ ಮಿಕ್ಕ ಪಕ್ಷಗಳ ಕತೆ ಏನು? ಬಿಜೆಪಿಯದು ಹಗಲುದರೋಡೆಯಾದರೆ ಇತರರದು ಒಂದು ರೀತಿಯಲ್ಲಿ ರಾತ್ರಿದರೋಡೆ. ಕರ್ನಾಟಕದ ಕಾಂಗ್ರೆಸ್‌ನಲ್ಲಾಗಲಿ, ಜೆಡಿಎಸ್‌ನಲ್ಲಾಗಲಿ ಆದರ್ಶ ಮತ್ತು ಪ್ರಾಮಾಣಿಕತೆಯನ್ನು ಜನರಲ್ಲಿ ಉತ್ತೇಜಿಸುವ, ತಮ್ಮ ಮಾತುಗಳಲ್ಲಿ ಜನರಿಗೆ ನಂಬಿಕೆ ಉಂಟುಮಾಡುವಂತಹ ಒಬ್ಬನೇ ಒಬ್ಬ ಸಮೂಹನಾಯಕನಿಲ್ಲ. ’ಬಿಜೆಪಿಯವರಿಗೆ ಮಾತ್ರ ಆಡಳಿತ ನಡೆಸುವುದಕ್ಕೆ ಮತ್ತು ಅಕ್ರಮ ರೀತಿಯಲ್ಲಿ ಹಣ ಮಾಡುವುದಕ್ಕೆ ಅವಕಾಶ ಇದೆ, ನಮಗಿಲ್ಲ, ದಯವಿಟ್ಟು ನಮಗೂ ಆ ಅವಕಾಶ ಮಾಡಿಕೊಡಿ,’ ಎನ್ನುವಂತಹ ಮಾತುಗಳು ಇವರಿಂದ ಬರುತ್ತಿತ್ತೇ ಹೊರತು, ’ನಾವು ಅಕ್ರಮ-ಭ್ರಷ್ಟಾಚಾರಗಳಿಲ್ಲದ ರಾಜಕಾರಣ ಮತ್ತು ಆಡಳಿತ ನಡೆಸುತ್ತೇವೆ,’ ಎಂದು ಅವರು ಹೇಳಲು ಆಗಲೇ ಇಲ್ಲ. ಈಗಲೂ ಹೇಳುತ್ತಿಲ್ಲ. ಅವರು ಈ ಸಂದರ್ಭದಲ್ಲಿ ಬಿಜೆಪಿಗಿಂತ ಭಿನ್ನವಾದ ಆಡಳಿತ ಕೊಡಬಲ್ಲರು ಎನ್ನುವಂತಹ ನಂಬಿಕೆ ಕರ್ನಾಟಕದ ಜನಕ್ಕೆ ಬರದೇ ಇದ್ದುದರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಸ್ವಯಂ‍ಕೃತಾಪರಾಧಗಳು ಕಾರಣವೇ ವಿನಃ ಅನ್ಯವಲ್ಲ.

Sansad_Bhavan

Sansad_Bhavan

ಬಹುಶಃ ಇಂತಹ ಕಾರಣಗಳಿಂದಲೇ ಕರ್ನಾಟಕದ ಜನ ಕಳೆದ ಎರಡು ಮೂರು ವರ್ಷಗಳ ಭ್ರಷ್ಟಾಚಾರ ವಿರೋಧಿ ಹೋರಾಟಕ್ಕೆ ಸಾಕಷ್ಟು ಬೆಂಬಲ ಕೊಡದೇ ಇದ್ದದ್ದು. ಅದರ ಜೊತೆಗೆ ಜನರ ವೈಯಕ್ತಿಕ ಜಾತಿ ಮೂಲದ ಭ್ರಷ್ಟತೆಯೂ ಸೇರಿತ್ತು. ನಮ್ಮ ಜಾತಿಯವನು ಮಾಡಿದರೆ ಮಾತ್ರ ತಪ್ಪಾ ಎನ್ನುವಂತಹ ಸಮರ್ಥನೆ ನೀಚತನದ್ದು, ಅದನ್ನು ಆಡಲು ಸಂಕೋಚಪಟ್ಟುಕೊಳ್ಳಬೇಕು ಎಂದು ಜಾತಿವಾದಿಗಳು ಅಂದುಕೊಳ್ಳಲಿಲ್ಲ.

ಈ ಹಿನ್ನೆಲೆಯಲ್ಲಿಯೇ ನಾವು ಇಂದಿನ ಅಣ್ಣಾ ಹಜಾರೆ ಹೋರಾಟಕ್ಕೆ ಕರ್ನಾಟಕದಲ್ಲಿ ದೊರೆಯುತ್ತಿರುವ ಜನಬೆಂಬಲವನ್ನು ಗ್ರಹಿಸಲು ಯತ್ನಿಸಬೇಕು. ಇಷ್ಟೂ ದಿನ ಭ್ರಷ್ಟಾಚಾರದ ವಿರುದ್ಧ ಹೋರಾಡಿಕೊಂಡು ಬಂದ ಕರ್ನಾಟಕದ ಹಲವು ಆಕ್ಟಿವಿಸ್ಟ್‌ಗಳಿಗೆ ಹಜಾರೆ ಹೋರಾಟಕ್ಕೆ ದೊರೆಯುತ್ತಿರುವ ಬೆಂಬಲ ಕಸಿವಿಸಿ ಉಂಟುಮಾಡಿರುವುದು ಸಹಜ. ಆದರೆ ಈ ಹೋರಾಟಗಾರರು ಮುಟ್ಟಲು ಸಾಧ್ಯವಾಗದಿದ್ದ ಜನವರ್ಗವನ್ನು ಈ ಅಣ್ಣಾ ಹಜಾರೆ ತಂಡ ಮುಟ್ಟಿದೆ ಎಂದು ಅವರು ತಿಳಿದುಕೊಂಡರೆ ಅವರ ಕಸಿವಿಸಿ ಮತ್ತು ಕೋಪ ಸ್ವಲ್ಪ ಮಟ್ಟಿಗೆ ತಣ್ಣಗಾಗಬಹುದು. ಈ ಹೋರಾಟಕ್ಕೆ ಅಜ್ಜ-ಗಾಂಧೀವಾದಿ-ಅಹಿಂಸೆ-ಉಪವಾಸ ಎಂಬಂತಹ ಸಾಂಸ್ಕೃತಿಕ-ಸಾಮಾಜಿಕ ರೂಪ ಇದೆ ಮತ್ತು ಅದಕ್ಕೆ ಟಿವಿ-ಪತ್ರಿಕಾ ಮಾಧ್ಯಮಗಳ ಅತಿಯಾದ ಉತ್ತೇಜನ ಮತ್ತು ಪ್ರಚಾರವೂ ದೊರಕಿದೆ. ಇದೊಂದು ರೀತಿಯಲ್ಲಿ ಈ ಸಂದರ್ಭದಲ್ಲಿ ಮಾತ್ರವೇ ಸಾಧ್ಯವಾಗಬಹುದಾದ ಘಟನೆಯೇ ಹೊರತು ಎರಡು-ಮೂರು ವರ್ಷಗಳ ಮೊದಲು ಘಟಿಸಲು ಸಾಧ್ಯವೇ ಇರಲಿಲ್ಲ. ಇದು 2G-CWG-ಗಣಿ ಮುಂತಾದ ಬಯಲಿಗೆ ಬಂದಂತಹ ಹಗರಣಗಳ ತದನಂತರದ ಕಾಲಘಟ್ಟದಲ್ಲಿ ಘಟಿಸಿದ ಕ್ರಿಯೆಯೇ ಹೊರತು, ಅವು ಈ ಮಟ್ಟದಲ್ಲಿ ಬಯಲಿಗೆ ಬರದೇ ಹೋಗಿದ್ದಲ್ಲಿ ಇದೇ ಅಣ್ಣಾ ಹಜಾರೆ ಎಷ್ಟೇ ಉಪವಾಸ ಕೂತಿದ್ದರೂ ಜನರಾಗಲಿ ಅಥವ ಮಾಧ್ಯಮಗಳಾಗಲಿ ಈ ಪರಿ ಪ್ರತಿಕ್ರಿಯಿಸುತ್ತಿರಲಿಲ್ಲ.

ಅಣ್ಣಾ ಹಜಾರೆ ಮತ್ತವರ ತಂಡದ ಬಗ್ಗೆ ಚಿಂತಕರ ಒಂದು ಗುಂಪಿನ ತಕರಾರು ಏನೇ ಇರಲಿ, ಅದು ಜನಸಾಮಾನ್ಯರಿಗೆ ಅಷ್ಟೇನೂ ಮುಖ್ಯವಾದದ್ದಲ್ಲ. ಸೈದ್ಧಾಂತಿಕ ಹಿನ್ನೆಲೆ ಮತ್ತು ಅದಕ್ಕೆ ಬೇಕಾದ ಓದು ಇಲ್ಲದ ಜನತೆ ಯಾವುದೇ ಸಂದರ್ಭದಲ್ಲಾಗಲಿ ಕೆಟ್ಟತನದ ವಿರುದ್ಧ ಮಾತನಾಡುತ್ತಿರುವವನ ಪರ ನಿಲ್ಲುವುದು ನಿಜಕ್ಕೂ ಉತ್ತಮ ಬೆಳವಣಿಗೆಯೇ. ಈ ಹಿನ್ನೆಲೆಯಲ್ಲಿ ಅಣ್ಣಾ ಹಜಾರೆ ಹೋರಾಟಕ್ಕೆ ದೊರಕುತ್ತಿರುವ ಜನಬೆಂಬಲ ನಿಜಕ್ಕೂ ಪ್ರಶಂಸನಾರ್ಹ. ಜನರಿಗೆ ಒಂದಲ್ಲ ಒಂದು ಸಮಯದಲ್ಲಿ ಆದರ್ಶಗಳು ಬೇಕು. ನ್ಯಾಯ-ನೀತಿಗಳು ಬೇಕು. ಅದರ ಪರ ನಿಲ್ಲಬೇಕು. ಅದನ್ನೇ ಈಗ ಬಹುತೇಕರು ಮಾಡುತ್ತಿರುವುದು.

ಹಾಗೆಂದ ಮಾತ್ರಕ್ಕೆ ಹಜಾರೆ ತಂಡದ ಕಾರ್ಯವೈಖರಿ ಮತ್ತು ಅವರು ಮುಂದೊಡ್ಡೂತ್ತಿರುವ ಮಸೂದೆಯಲ್ಲಿನ ಲೋಪದೋಷಗಳನ್ನು ವಿಮರ್ಶಿಸುತ್ತಿರುವವರನ್ನು ವಿಮರ್ಶಿಸುವುದಾಗಲಿ, ಅವರನ್ನು ಕೀಳುಮಾಡುವುದಾಗಲ್ಲಿ ಸರಿಯಲ್ಲ. ಇದು ಒಂದು ರೀತಿಯಲ್ಲಿ ಜನಪ್ರೀಯತೆ ಕಳೆದುಕೊಳ್ಳುವ ಕೆಲಸವಾದರೂ ಆಗಲೇಬೇಕಾದ ಕೆಲಸ. ಈ ನಿಟ್ಟಿನಲ್ಲಿ ನಾವು ಅರುಣಾ ರಾಯ್ ಮತ್ತವರ ಸಹಚರರನ್ನು ಮತ್ತು ಆರುಂಧತಿ ರಾಯ್‌ರಂತಹವರನ್ನು ಅಭಿನಂದಿಸಲೇಬೇಕು. ಈ ಸಂದರ್ಭದಲ್ಲಿ ನಾವು ಗಮನವಿಟ್ಟು ಅವಲೋಕಿಸಿದಾಗ, ಅಣ್ಣಾ ಹಜಾರೆ ತಂದದವರ್‍ಯಾರೂ ಅರುಣಾ ರಾಯ್ ಮತ್ತವರ ತಂಡದವರ ವಿರುದ್ಧ ವೈಯಕ್ತಿಕ ದಾಳಿ ಮಾಡುವುದಾಗಲಿ ಅವಹೇಳನ ಮಾಡುವುದಾಗಲಿ ಮಾಡುತ್ತಿಲ್ಲ ಎನ್ನುವುದು ಗೊತ್ತಾಗುತ್ತದೆ. ಜನ್‌ಲೋಕ್‍ಪಾಲ್ ನೈಜ ರೀತಿಯಲ್ಲಿ ಜನರ ಕಾನೂನಾಗುವುದಕ್ಕೆ ಈ ರೀತಿಯ ವಿಮರ್ಶೆ ಅಗತ್ಯ ಎನ್ನುವ ಅರಿವು ಮತ್ತು ತಮ್ಮ ನಿಲುವಿನಲ್ಲಿಯೂ ಕೆಲವೊಂದು ತಪ್ಪುಗಳಿರಬಹುದು ಎನ್ನುವಂತಹ ವಿನಯ ಹಜಾರೆ ತಂಡದಲ್ಲಿರುವುವರಲ್ಲಿ ಇರುವ ಲಕ್ಷಣಗಳಿವೆ. ಅರುಣಾ ರಾಯ್ ಮತ್ತು ಅಣ್ಣಾ ಹಜಾರೆ ತಂಡದವರ ಸೌಜನ್ಯಯುತವಾದ ಭಿನ್ನಾಭಿಪ್ರಾಯ ಮಾದರಿಯಾದಂತಹುದು.

ಇದೇ ಸಂದರ್ಭದಲ್ಲಿ ದೇಶದ ಕೆಲವು ದಲಿತ ವರ್ಗದ ಹಿನ್ನೆಲೆಯ ಚಿಂತಕರು ಈ ಚಳವಳಿ ಮೇಲ್ಜಾತಿಯ-ಮೇಲ್ವರ್ಗಗಳ ಪಿತೂರಿ ಎನ್ನುವಂತೆ ಅಭಿಪ್ರಾಯ ಪಡುತ್ತಿದ್ದಾರೆ. ಅವರು ಹಾಗೆ ಹೇಳಲು ಸಾಕಷ್ಟು ಸಾಕ್ಷ್ಯಗಳು ಮೇಲ್ನೋಟಕ್ಕೇ ಕಾಣಿಸುತ್ತವೆ. ಆಧ್ಯಾತ್ಮ ಎಂಬ ಢೋಂಗಿಯ ಪುಂಗಿಯನ್ನು ಊದುವವರೂ ಈ ಚಳವಳಿಯ ಮುಖ್ಯಪಾತ್ರಧಾರಿಗಳಾಗಿರುವುದು ಈ ಚಳವಳಿಯ ಮಿತಿಗಳಲ್ಲಿ ಒಂದು. ಪ್ರಗತಿಪರ ಚಿಂತನೆ ಮತ್ತು ಸಮಾನತಾವಾದದ ವಿರೋಧಿಗಳು ಈ ಚಳವಳಿಯ ಮೂಲಕ ಜನಮಾನಸದಲ್ಲಿ ಚಲಾವಣೆಯಾಗಲು ಶಕ್ತಿಮೀರಿ ಯತ್ನಿಸುತ್ತಿದ್ದಾರೆ. ಆದರೆ ಮೇಧಾ ಪಾಟ್ಕರ್‌ರಂತಹವರು, ಹಿಂದೂ ಸಮಾಜದ ಕೆಟ್ಟ ಆಚರಣೆಗಳ ವಿರುದ್ಧ ಧ್ವನಿಯೆತ್ತುತ್ತಲೆ ಬಂದಿರುವ, ಕೋಮುವಾದವನ್ನು ವಿರೋಧಿಸುವ ಅಗ್ನಿವೇಶ್‌ರಂತಹವರೂ ಈ ಚಳವಳಿಯ ಮುಂಚೂಣಿಯಲ್ಲಿರುವುದರಿಂದ ನಮ್ಮ ವಿಮರ್ಶೆ ಸಂಯಮದಿಂದ ಕೂಡಿರಬೇಕಾದ ಮತ್ತು ಕೆಲವು ವ್ಯಕ್ತಿ-ಗುಂಪುಗಳಿಗೆ ಸೀಮಿತಗೊಳಿಸಬೇಕಾದ ಅವಶ್ಯಕತೆ ಇದೆ. ಆಡಳಿತದಲ್ಲಿನ ಭ್ರಷ್ಟಾಚಾರ ಕಡಿಮೆಯಾಗಿ, ಭ್ರಷ್ಟರಿಗೆ ಶಿಕ್ಷೆಯಾದರೆ, ಅದರ ಒಳಿತು ಸಮಾಜದ ಎಲ್ಲಾ ವರ್ಗಗಳಿಗೂ ಇರುತ್ತದೆಯೇ ಹೊರತು ಕೇವಲ ಕೆಲವೇ ಜನವರ್ಗಗಳಿಗೆ ಅಲ್ಲ. ಮಿಕ್ಕ ವಿಷಯಗಳನ್ನು ಪ್ರಸ್ತಾಪಿಸಲು, ಹೋರಾಡಲು, ಮತ್ತೊಂದು ಸಮಯ-ಸಂದರ್ಭ ಇದ್ದೇ ಇರುತ್ತದೆ. ಆ ವಿಷಯಗಳನ್ನು ಪ್ರಾಮಾಣಿಕವಾಗಿ ಎತ್ತಬಲ್ಲ ಜನರೂ ಇರುತ್ತಾರೆ. ಅಣ್ಣಾ ಹಜಾರೆ ಸಮಾಜದ ಎಲ್ಲಾ ವಿಚಾರಗಳನ್ನು ಯೋಚಿಸಬಲ್ಲಂತಹ ಚಿಂತಕರಾಗಲಿ, ಸಮಾಜ ಸುಧಾರಕರಾಗಲಿ ಅಲ್ಲ. ನಮ್ಮ ಎಲ್ಲಾ ವಿಚಾರಗಳಿಗೆ, ಸಮಸ್ಯೆಗಳಿಗೆ ಅವರೇ ನಾಯಕರಾಗಲಿ, ಆದರ್ಶವಾಗಲಿ, ಪರಿಹಾರವಾಗಲಿ, ಅಲ್ಲ. ಆದರೆ, ಈ ಸಂದರ್ಭದಲ್ಲಿ, ಸರ್ಕಾರದ ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ, ಅವರನ್ನು ನಾಯಕರನ್ನಾಗಿ, ಆದರ್ಶವನ್ನಾಗಿ ತೆಗೆದುಕೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ. ಅವರ ಇಲ್ಲಿಯವರೆಗಿನ ಜೀವನದಲ್ಲಿ ಅವರು ಇಂತಹ ಹೋರಾಟವನ್ನು ಮಾಡಿಕೊಂಡೂ ಬಂದಿದ್ದಾರೆ. ಹಾಗಾಗಿ ಅವರು ಯೋಗ್ಯರೂ ಹೌದು, ಸಮರ್ಥರೂ ಹೌದು.

ಮತ್ತು, ಅಣ್ಣಾ ಹಜಾರೆ ನಮ್ಮ ಈಗಿನ ವಿಸ್ಮೃತಿಯಲ್ಲಿದ್ದ ಸಮಾಜವನ್ನು ಗಾಂಧಿಗೆ, ಅವರ ವಿಚಾರಕ್ಕೆ, ಆಚಾರಕ್ಕೆ ಎದುರು ತಂದು ನಿಲ್ಲಿಸಿದ್ದಾರೆ. ಗಾಂಧಿಯವರ ಅವಹೇಳನೆ ಮಾಡುವುದನ್ನೇ ಒಂದು ಮೌಲ್ಯ ಎಂದುಕೊಂಡ ಗುಂಪನ್ನೂ ಅವರು ತಮ್ಮ ಹಿಂದೆ ಬರುವಂತೆ ಮಾಡಿದ್ದಾರೆ. ದೇಶ ಈ ಮೂಲಕವಾದರೂ ಗಾಂಧಿಯನ್ನು ಮತ್ತೊಮ್ಮೆ ಪರಿಚಯಿಸಿಕೊಂಡರೆ ಅದು ಈ ಚಳವಳಿಯ ಸಾರ್ಥಕ್ಯದಲ್ಲೊಂದೆಂದು ನಾವು ಭಾವಿಸಬೇಕು. ದೇಶದ ಅನೇಕ ಕಡೆ ಅಕ್ಷರಶಃ ಲಕ್ಷಾಂತರ ಜನರು ಬೀದಿಗಿಳಿದಿದ್ದರೂ ಈ ಚಳವಳಿ ಅಹಿಂಸೆ ಮತ್ತು ಸೌಜನ್ಯತೆಯನ್ನು ಕಾಪಾಡಿಕೊಂಡಿದೆ ಎಂದರೆ ಅದು ಕೋಮು ಉನ್ಮಾದದಲ್ಲಿ ಆಗಾಗ ಜ್ವಲಿಸುವ ದೇಶದಲ್ಲಿ ಗಾಂಧಿಮಾರ್ಗದ ಜಯವಾಗಿಯೇ ಕಾಣಿಸುತ್ತಿದೆ.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ನೋಡಿದರೆ, ಇಲ್ಲಿ ಅನೇಕ ಜನ ಅನೇಕ ವಿಷಯಗಳನ್ನು ಪ್ರಸ್ತಾಪಿಸುತ್ತಿದ್ದಾರೆ. ಇವರು ಕೇವಲ ಒಂದು ಪಕ್ಷದ ಭ್ರಷ್ಟಾಚಾರವನ್ನು ಮಾತ್ರ ಟೀಕಿಸುತ್ತಿಲ್ಲ. ಎಲ್ಲರ ಭ್ರಷ್ಟಾಚಾರವನ್ನೂ ಟೀಕಿಸುತ್ತಿದ್ದಾರೆ, ಕೇವಲ ಅದಷ್ಟನ್ನೇ ಅಲ್ಲ, ಅವರು ಮಠಗಳ ಭ್ರಷ್ಟಾಚಾರವನ್ನೂ ಎತ್ತುತ್ತಿದ್ದಾರೆ. ಸಮಾಜದ ಅನೇಕ ಲೋಪದೋಷಗಳನ್ನೂ ಎತ್ತುತ್ತಿದ್ದಾರೆ, ಹಾಗೆಯೇ ಪ್ರಜಾಪ್ರಭುತ್ವದ ಪಾಠವನ್ನೂ ಮಾಡುತ್ತಿದ್ದಾರೆ. ಅತಿರೇಕಗಳೂ ಇರುತ್ತವೆ, ನಿಜ. ಆದರೆ, ಅವೆಲ್ಲವುಗಳ ಮಧ್ಯೆ ಮುಕ್ತವಾದ ವಾತಾವರಣದಲ್ಲಿ ಜನರನ್ನು ಮುಕ್ತವಾಗಿ ಮಾತನಾಡಲು ಬಿಟ್ಟಿರುವುದು ಗಮನಿಸಬೇಕಾದ ಅಂಶ. ಕನ್ನಡದ ಚಿಂತಕ ವರ್ಗ ಮತ್ತು ಕ್ರಾಂತಿಗೀತೆಗಳನ್ನು ಹಾಡಿಕೊಂಡೇ ಒಂದೆರಡು ತಲೆಮಾರುಗಳನ್ನು ಪ್ರಭಾವಿಸುತ್ತ ಬಂದಂತಹ ಗಾಯಕರು ಇಲ್ಲಿ ಮಾಯವಾಗಿರುವುದು ವಿಪರ್ಯಾಸ. ಇದು ಆಯೋಜಕರ ಆಲೋಚನೆಯ ಮಿತಿಯೂ ಹೌದು, ಮತ್ತು ಈ ಚಿಂತಕ-ಗಾಯಕರ ಬದ್ಧತೆಯ ಪ್ರಶ್ನೆಯೂ ಹೌದು. ಇಲ್ಲಿ ನನಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿಗಿಂತ ವೈಯಕ್ತಿಕ ದೌರ್ಬಲ್ಯಗಳೇ ಕಾರಣವಾಗಿ ಕಾಣಿಸುತ್ತವೆ.

ದುಡ್ಡು ಕೊಟ್ಟು ಜನರನ್ನು ಸೇರಿಸಿ ರ್‍ಯಾಲಿ ಸಂಘಟಿಸುವುದನ್ನು ಕಂಡೂಕಂಡು ನಮ್ಮ ಪ್ರಜಾಪ್ರಭುತ್ವದ ಅಧೋಗತಿಯ ಬಗ್ಗೆ ಚಿಂತಿತರಾಗಿದ್ದವರಿಗೆ ಇಲ್ಲೊಂದು ಉದಾಹರಣೆ ಇದೆ. ಈ ಚಳವಳಿಗೆ ಮಧ್ಯವಯಸ್ಕರು, ಉದ್ಯೋಗದಲ್ಲಿರುವವರು, ಜನಸಾಮಾನ್ಯರು, ಸ್ವಯಂಪ್ರೇರಿತರಾಗಿ ಬರುತ್ತಿರುವುದು ಬಹಳ ಆಶಾದಾಯಕ ಬೆಳವಣಿಗೆ. ನಮ್ಮ ಮುಂದಿನ ಚಳವಳಿಗಳು ಮತ್ತು ರಾಜಕಾರಣ ನಡೆಯಬೇಕಿರುವುದೇ ಈ ರೀತಿಯಲ್ಲಿ. ಆದರೆ, ಈಗ ಯಾವುದೋ ಹುಮ್ಮಸ್ಸಿನಲ್ಲಿ ಇದರಲ್ಲಿ ಪಾಲ್ಗೊಳ್ಳುತ್ತಿರುವ ಜನತೆ ಮತ್ತೆ ಚುನಾವಣಾ ಸಮಯದಲ್ಲಿ ತಮ್ಮ ಬೇಜವಾಬ್ದಾರಿ ತೋರಿಸಿದರೆ ಆಗ ಈ ಚಳವಳಿಯ ಮಿತಿ ಗೊತ್ತಾಗುತ್ತದೆ. ಕಳೆದ ಒಂದೆರಡು ಚುನಾವಣೆಗಳಲ್ಲಿ ಇದೇ ಜನ ಯೋಗ್ಯರಾದವರನ್ನು ಆರಿಸಿಕೊಂಡಿದ್ದರೆ ಈ ಚಳವಳಿಯ ಜರೂರತ್ತೇ ಇರುತ್ತಿರಲಿಲ್ಲ. ದೇಶಕ್ಕೆ ಅಗತ್ಯವಾದ ಕಾನೂನುಗಳನ್ನು ಸಂಸದರು ಮತ್ತು ಶಾಸಕರೇ ಬರೆಯುತ್ತಿದ್ದರು. ಪ್ರಜಾಪ್ರಭುತ್ವದ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದೆ ಇಂತಹುದೊಂದು ಚಳವಳಿಯಲ್ಲಿ ಮಾತ್ರ ಪಾಲ್ಗೊಳ್ಳಲು ಬರುತ್ತಿರುವವರೇ ಇಲ್ಲಿ ದೋಷಿಗಳು. ಭ್ರಷ್ಟಾಚಾರದ ವಿರುದ್ಧ ಕೂಗುವ ಧಿಕ್ಕಾರ ಇವರ ಭ್ರಷ್ಟಾಚಾರಕ್ಕೂ ಮತ್ತು ಬೇಜವಾಬ್ದಾರಿತನಕ್ಕೂ ಕೂಗುವ ಧಿಕ್ಕಾರವೂ ಹೌದು. ಪಕ್ಷಾತೀತವಾದ ಈ ಹೋರಾಟದ ನಂತರ ಜನ ಮತ್ತೆ ತಮಗಿಷ್ಟವಾದ ಪಕ್ಷವನ್ನು ವಿಮರ್ಶೆಗೊಳಪಡಿಸದೇ ಬೆಂಬಲಿಸಿದರೆ ಅದು ಅವರು ಈ ಚಳವಳಿಯಿಂದ ಏನನ್ನೂ ಕಲಿಯಲಿಲ್ಲ ಎಂದಾಗುತ್ತದೆ. ಜಾತಿವಾದಕ್ಕೆ, ಕೋಮುವಾದಕ್ಕೆ, ಹಣಕ್ಕೆ, ಬಲಕ್ಕೆ, ವಿವಿಧ ಲಾಲಸೆಗಳಿಗೆ ಬಲಿಯಾಗದೆ ಬಹುಸಂಖ್ಯಾತ ಜನ ಪ್ರಾಮಾಣಿಕವಾಗಿ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಂಡಾಗಲಷ್ಟೇ ನಮ್ಮ ಬಹುತೇಕ ಸಮಸ್ಯೆಗಳು ನಿವಾರಣೆ ಆಗುತ್ತವೆ. ಅದು ನಿಜವಾದ ಬದ್ಧತೆ.

(ಚಿತ್ರಕೃಪೆ: ವಿಕಿಪೀಡಿಯ)

ರವಿ ಕೃಷ್ಣಾ ರೆಡ್ಡಿ

Arundhati Roy’s reading

It is an interesting development. Now slowly a few pertinent questions are raised about means and demands of so called Anna movement. Fortunately media houses which were, by and large, one-sided since Anna went on a fast, have begun giving space for different views also.

Noted writer and social activist Arundhati Roy has raised serious issues about the demands in her article published by The Hindu on Monday. She discusses role of foreign funded NGOs in the event and also how professionally the show is being organized to suit the requirements of TV media.

pic:wikipedia

Deccan Herald - Mining Payments

Anna, why leave out media?

– Bhoomi Banu

Media has been giving unprecedented coverage to a social movement. Anna Hazare has been projected as Mahatma Gandhi, though he does not match him intellectually. New Delhi correspondent of Suvarna News 24/7 Prashanth Natu, while reporting general mood at Ramlila Maidan just before Anna landed there, explained his viewers how news channels were prepared to cover the event live

Each channel had deployed a camera crane to capture long and wide shots of the gathering with precision. Because the channels wanted to show how many are behind Anna and with that how many are against corruption in the country. And, with that the channels also wanted to convey the public that they are also with Anna in his struggle.

It is high time to look how far our media houses are morally right to raise voice against corruption. Are channels free of corrupt practices? An owner of a media house in Karnataka, who owns a newspaper as well as news channel, sent a letter expressing his support to Anna’s movement to the Freedom Park, where protesters were staging a dharna. Interestingly a reporter covering the event from the Park read out the letter for his viewers and with that officially the channel endorsed its support. The same media mugal in the making had played a major role in welcoming Anna to Bangalore and organizing his events in Bangalore.

It is a well known fact among those covering politics for the past few years that he entered Rajya Sabha as an Independent candidate through unholy means. He had got support of both the JD(S) and BJP votes. And, needless to say he had bought votes for his victory. It is well established fact that if an independent candidate does not purchase votes it is impossible for him to get elected in elections to Rajya Sabha. The MLAs, who got elected after wooing voters, do not vote for others unless they are wooed.

Deccan Herald - Mining PaymentsTell me, what moral rights he has to support Anna? Anna and his team need to understand that their movement has been taken over by corrupt people like him. The other day half a dozen ministers staged a dharna and said they are in support of Anna. Fortunately Yeddyurappa did not take part.

Let us come back to media again. Deccan Herald and Prajavani (Aug 19) carried reports stating that friends of BJP national president Nitin Gadkari were among those got favours from people involved in illegal mining, as per the contents of the Lokayukta report on illegal mining. In the same report both the newspapers have published certain names of people who reportedly received monetary benefits from close associates of mining barons of Bellary. “R.B” and “V.Bhat” are names prominent among those given in the news report. Besides, Press Club has been paid Rs 5 lakh, while “Sanjay Sir” spent some money for journalists of Bangalore. In the name of Deccan Chronicle Rs 25 lakh has been paid. Purpose of money transferred is not mentioned. The news report only replicates the data recovered from a henchman of powerful people in Bellary.

According to the report, R.B was paid Rs 10 lakh, while V.Bhat was paid Rs 75 lakh in two installments in a gap of five days. Any layman in Karnataka media can guess whom these names suggest to. They are popular and known for preaching through their columns. And, yet they have been in support of Anna. There may be many of their colleagues in the field engaged in dubious deals to make money. But neither Anna nor their supporters speak about cleansing the media world, whose corrupt practices end up misleading the public.

 

Screenshot Courtesy: Deccan Herald.

Karnataka High Court

ಸುಪ್ರೀಂಕೋರ್ಟಿನ ತೀರ್ಪು ರಾಜ್ಯದ ಹೈಕೋರ್ಟನ್ನೂ ಟೀಕಿಸಿಲ್ಲವೆ?

(ಈ ಲೇಖನ ಸುಮಾರು ಮೂರು ತಿಂಗಳಿನ ಹಿಂದೆ (16/05/11) ಬರೆದದ್ದು. ಕಾರಣಾಂತರಗಳಿಂದ ಇದು ಪ್ರಕಟವಾಗಬೇಕಾದ ಕಡೆ ಪ್ರಕಟವಾಗಲಿಲ್ಲ. ನೆನ್ನೆ (18/08/11) ರಾಜ್ಯಸಭೆಯಲ್ಲಿ ಬಂಗಾಳದ ಹೈಕೋರ್ಟ್ ನ್ಯಾಯಾಧೀಶರನ್ನು ಕೆಲಸದಿಂದ ವಜಾ ಮಾಡುವ ಪ್ರಕ್ರಿಯೆ ಮೇಲೆ ಚರ್ಚೆ ಮತ್ತು ಮತ ಚಲಾವಣೆ ನಡೆದು ಜಡ್ಜ್ ವಿರುದ್ದ ತೀರ್ಮಾನ ಕೈಗೊಳ್ಳಲಾಗಿದೆ. ಅದೇ ಪ್ರಕ್ರಿಯೆ ಲೋಕಸಭೆಯಲ್ಲಿ ಪೂರ್ಣಗೊಂಡಾಗ ಆ ಜಡ್ಜ್ ವಜಾ ಆಗಲಿದ್ದಾರೆ. ಆದರೆ, ನ್ಯಾಯಾಧೀಶರ ಭ್ರಷ್ಟಾಚಾರದ ವಿರುದ್ಧ ಮಾತು ಕೇಳಬರುತ್ತಿರುವುದು ಇದೇ ಮೊದಲಲ್ಲ. ಲೊಕಪಾಲ ಮಸೂದೆಯಲ್ಲಿ ನ್ಯಾಯಾಂಗವನ್ನು ಹೊರಗಿಡುವ ಬಗ್ಗೆ ಮಾತು ಕೇಳಿ ಬರುತ್ತಿರುವ ಸಂದರ್ಭದಲ್ಲಿ ಮೂರು ತಿಂಗಳ ಹಿಂದೆ ಬರೆದ ಈ ಲೇಖನ ಈಗಲೂ ಪ್ರಸ್ತುತ ಇಂದು ಇಲ್ಲಿ ಪ್ರಕಟಿಸುತ್ತಿದ್ದೇನೆ… ರವಿ…)

Karnataka High Courtಕಳೆದ ಶುಕ್ರವಾರ ( ಮೇ 13, 2011 )  ಸುಪ್ರೀಂಕೋರ್ಟ್ ಕರ್ನಾಟಕದ 16 ಶಾಸಕರ ಅನರ್ಹತೆಯನ್ನು ರದ್ದುಪಡಿಸಿ ಆದೇಶ ಹೊರಡಿಸುವುದರ ಜೊತೆಗೆ, ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಮತ್ತು ರಾಜ್ಯದ ಮುಖ್ಯಮಂತ್ರಿಯನ್ನು ಕಟುಶಬ್ದಗಳಲ್ಲಿ ಟೀಕಿಸಿತು. ಆದರೆ, ಇದಕ್ಕೂ ಮುಖ್ಯವಾದುದನ್ನು ಸುಪ್ರೀಂಕೋರ್ಟ್ ನೇರವಾಗಿ ಹೇಳಲಿಲ್ಲ. ಅದೇನೆಂದರೆ, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ (11 ಬಿ.ಜೆ.ಪಿ. ಶಾಸಕರ ಅನರ್ಹತೆ ಮತ್ತು ಐವರು ಪಕ್ಷೇತರ ಶಾಸಕರ ಅನರ್ಹತೆ) ಕರ್ನಾಟಕ ರಾಜ್ಯದ ಉಚ್ಚನ್ಯಾಯಾಲಯ ಕೊಟ್ಟಿದ್ದ ತೀರ್ಪಿನಲ್ಲಿ ನ್ಯಾಯ ಇರಲಿಲ್ಲ ಎನ್ನುವುದು.

ಕಳೆದ ಅಕ್ಟೋಬರ್ 11ರ ವಿಶ್ವಾಸಮತ ಯಾಚನೆಯ ಹಿಂದಿನ ರಾತ್ರಿ ತರಾತುರಿಯಲ್ಲಿ ವಿಧಾನಸಭೆಯ ಸ್ಪೀಕರ್ ಮೇಲೆ ಉಲ್ಲೇಖಿಸಿದ 16 ಶಾಸಕರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದರು. ಅವರು ಹಾಗೆ ಮಾಡಲು ಕಾನೂನು ಮತ್ತು ನ್ಯಾಯಪಾಲನೆಗಿಂತ ಹೆಚ್ಚಾಗಿ ತಮ್ಮ  ಬಿ.ಜೆ.ಪಿ. ಪಕ್ಷದ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಜಯ ಲಭಿಸುವಂತೆ ಮಾಡುವುದೇ ಆಗಿತ್ತು. ಸ್ಪೀಕರ್‌ರ ಈ ಕ್ರಮ ಅನೈತಿಕ ಮತ್ತು ಅಕ್ರಮವಾದದ್ದು ಎಂದು ಎದ್ದು ಕಾಣಿಸುವಷ್ಟು ಲಜ್ಜಾಹೀನವಾಗಿತ್ತು. ಸ್ಪೀಕರ್‌ರ ಈ ಕ್ರಮವನ್ನು ಪ್ರಶ್ನಿಸಿ ಅನರ್ಹಗೊಂಡ ಬಿ.ಜೆ.ಪಿ.ಯ 11 ಬಂಡಾಯ ಶಾಸಕರು, ಮತ್ತು ಐವರು ಪಕ್ಷೇತರ ಶಾಸಕರು ಪ್ರತ್ಯೇಕವಾಗಿ ಹೈಕೋರ್ಟ್‌ಗೆ ದೂರು ನೀಡಿದರು.

ಬಂಡಾಯ ಶಾಸಕರ ಅನರ್ಹತೆಯ ವಿಚಾರಣೆಯನ್ನು ಕೈಗೆತ್ತಿಕೊಂಡ ಹೈಕೋರ್ಟಿನ ಮುಖ್ಯನ್ಯಾಯಮೂರ್ತಿ ಜೆ.ಎಸ್. ಖೇಹರ್ ಮತ್ತು ನ್ಯಾಯಮೂರ್ತಿ ಎನ್. ಕುಮಾರ್ ಸಾಕಷ್ಟು ವಿಚಾರಣೆಯನ್ನು ನಡೆಸಿ, ಲಭ್ಯವಿದ್ದ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದ ನಂತರ ಅಕ್ಟೋಬರ್ 18ರಂದು ಪರಸ್ಪರ ಒಮ್ಮತವಿಲ್ಲದ ನ್ಯಾಯತೀರ್ಮಾನಕ್ಕೆ ಬಂದರು. ನ್ಯಾ. ಖೇಹರ್ ಸ್ಪೀಕರ್ ಮಾಡಿದ್ದು ಸರಿ ಎಂದರೆ, ನ್ಯಾ. ಕುಮಾರ್ ಸ್ಪೀಕರ್‌ರ ಕ್ರಮದಲ್ಲಿ ಲೋಪವನ್ನು ಗುರುತಿಸಿದರು. ಹೀಗೆ ಒಮ್ಮತದ ತೀರ್ಪಿಲ್ಲದ ಕಾರಣವಾಗಿ ಈ ಪ್ರಕರಣವನ್ನು ಮೂರನೆ ನ್ಯಾಯಮೂರ್ತಿಯ ಅಭಿಪ್ರಾಯಕ್ಕಾಗಿ ನ್ಯಾ. ಸಭಾಹಿತರಿಗೆ ಕಳುಹಿಸಲಾಯಿತು.

ಪ್ರಕರಣವನ್ನು ಪ್ರತ್ಯೇಕವಾಗಿ ಪರಿಶೀಲಿಸಿದ ನ್ಯಾ. ಸಭಾಹಿತರು ಅಕ್ಟೋಬರ್ 29ರಂದು ಮುಖ್ಯನ್ಯಾಯಮೂರ್ತಿ ಖೇಹರ್‌ರ ನ್ಯಾಯತೀರ್ಮಾನವನ್ನು ಅನುಮೋದಿಸಿದರು. ಇದರೊಂದಿಗೆ 2:1 ರ ಅನುಪಾತದಲ್ಲಿ ಕರ್ನಾಟಕ ಉಚ್ಚನ್ಯಾಯಾಲಯ ಸ್ಪೀಕರ್‌ರ ಕ್ರಮವನ್ನು ಎತ್ತಿಹಿಡಿದು 11 ಬಂಡಾಯ ಶಾಸಕರ ಅನರ್ಹತೆಯನ್ನು ಮಾನ್ಯಗೊಳಿಸಿತು. ಈ ಇಡೀ ಪ್ರಕರಣದಲ್ಲಿ ನಾವು ಗಮನಿಸಬೇಕಾಗಿರುವ ಅತಿಮುಖ್ಯ ಸಂಗತಿ ಏನೆಂದರೆ, ಕರ್ನಾಟಕದ ಉಚ್ಚನ್ಯಾಯಾಲಯದ ದೃಷ್ಟಿಗೆ ಸ್ಪೀಕರ್ ಮತ್ತು ಮುಖ್ಯಮಂತ್ರಿಗಳ ನಡವಳಿಕೆಯಲ್ಲಿ ಯಾವುದೇ ಅನೈತಿಕತೆ ಮತ್ತು ಅಕ್ರಮ ಕಾಣಿಸದೆ ಇದ್ದುದು.

ಅನರ್ಹಗೊಂಡ ಬಂಡಾಯ ಶಾಸಕರ ಜೊತೆಜೊತೆಗೆ ಅನರ್ಹಗೊಂಡ ಐವರು ಪಕ್ಷೇತರ ಶಾಸಕರೂ ಕೂಡ ಕರ್ನಾಟಕದ ಉಚ್ಚನ್ಯಾಯಾಲಯಕ್ಕೆ ಪ್ರತ್ಯೇಕ ದೂರು ಸಲ್ಲಿಸಿದ್ದರು. ಆ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಂಡ ನ್ಯಾ. ಮೋಹನ್ ಶಾಂತನಗೌಡರ್, ನ್ಯಾ. ಅಬ್ದುಲ್ ನಜೀರ್, ಮತ್ತು ನ್ಯಾ. ಎಸ್. ಬೋಪಣ್ಣನವರ ಪೀಠವು ಸುದೀರ್ಘ ವಿಚಾರಣೆಯನ್ನು ನಡೆಸಿ, ಲಭ್ಯವಿದ್ದ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ, ಪಕ್ಷೇತರ ಶಾಸಕರ ಅನರ್ಹತೆ ವಿಚಾರದಲ್ಲಿ ಸ್ಪೀಕರ್ ಯಾವುದೇ ದುರುದ್ದೇಶದಿಂದ ನಡೆದುಕೊಂಡಿಲ್ಲ ಮತ್ತು ಅವರ ಕ್ರಮ ಸರಿ ಎಂಬ ತೀರ್ಪನ್ನು ಫೆಬ್ರವರಿ 15ರಂದು ನೀಡಿತು. ಇಲ್ಲಿ ಒತ್ತಿಹೇಳಬೇಕಾದ ಸಂಗತಿಯೆಂದರೆ ಈ ತೀರ್ಪು ಮೂವರು ನ್ಯಾಯಮೂರ್ತಿಗಳ ಒಮ್ಮತದ ನ್ಯಾಯತೀರ್ಮಾನವಾಗಿದ್ದದ್ದು.

ಹೀಗೆ ಎರಡೂ ಪ್ರಕರಣಗಳ ವಿಚಾರಣೆ ನಡೆಸಿದ ಕರ್ನಾಟಕದ ಹೈಕೋರ್ಟಿನ ಆರು ನ್ಯಾಯಮೂರ್ತಿಗಳ ಪೈಕಿ ಐವರಿಗೆ ಸ್ಪೀಕರ್‌ರ ಕ್ರಮ ಮತ್ತು ನಡವಳಿಕೆಯಲ್ಲಿ ಯಾವುದೇ ಪಕ್ಷಪಾತ, ದುರುದ್ದೇಶ, ಮತ್ತು ಕಾನೂನು ಮತ್ತು ಸಂವಿಧಾನದ ಉಲ್ಲಂಘನೆ ಕಂಡಿರಲಿಲ್ಲ.

ತಮಗೆ ಸಿಕ್ಕ ನ್ಯಾಯತೀರ್ಮಾನದಿಂದ ತೃಪ್ತರಾಗದ ಎಲ್ಲಾ 16 ಅನರ್ಹ ಶಾಸಕರು ದೆಹಲಿಯ ಸುಪ್ರೀಂಕೋರ್ಟಿಗೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಪ್ರತ್ಯೇಕ ಮೇಲ್ಮನವಿಗಳನ್ನು ಸಲ್ಲಿಸಿದರು. ಈ ಪ್ರಕರಣಗಳಲ್ಲಿ ಕರ್ನಾಟಕ ಹೈಕೋರ್ಟ್ ಪರಿಶೀಲಿಸಿದ ಅದೇ ದಾಖಲೆಗಳನ್ನು ಪುನರ್‌ಪರಿಶೀಲಿಸಿ ಮತ್ತೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾ. ಕಬೀರ್ ಮತ್ತು ನ್ಯಾ. ಜೋಸೆಫ್ ಹೈಕೋರ್ಟ್ ತೀರ್ಪಿಗೆ ಸಂಪೂರ್ಣ ವ್ಯತಿರಿಕ್ತವಾದ ಅವಳಿ ತೀರ್ಮಾನವನ್ನು ನೀಡಿದರು. ಅಷ್ಟೇ ಅಲ್ಲದೆ, “ನೈಸರ್ಗಿಕ ನ್ಯಾಯ ಮತ್ತು ನ್ಯಾಯಯುತ ನಡವಳಿಕೆಯ ಅವಳಿ ತತ್ವಗಳ ಪರೀಕ್ಷೆಯಲ್ಲಿ ಸ್ಪೀಕರ್ ಬೋಪಯ್ಯನವರ ಆದೇಶ ಪಾಸಾಗುವುದಿಲ್ಲ. ಸಂವಿಧಾನದ 10ನೇ ಷೆಡ್ಯೂಲಿನಲ್ಲಿ ಕಾಣಿಸಲಾಗಿರುವ ಸಾಂವಿಧಾನಿಕ ನಡವಳಿಕೆಗಳು ಮತ್ತು 1986ರ ಅನರ್ಹತೆ ನಿಯಮಗಳನ್ನು ಉಲಂಘಿಸುವುದಷ್ಟೇ ಅಲ್ಲದೆ ನ್ಯಾಯಯುತ ವಿಚಾರಣೆಯ ಮೂಲತತ್ವವನ್ನು ಕೂಡ ಗಾಳಿಗೆ ತೂರಿದ ಸ್ಪೀಕರ್ ಮುಂದಿದ್ದ ಏಕೈಕ ಗುರಿ ಎಂದರೆ ಯಡಿಯೂರಪ್ಪ ಸರ್ಕಾರವನ್ನು ವಿಶ್ವಾಸಮತದ ಸಂಕಟದಿಂದ ಪಾರುಮಾಡುವುದು. ಸ್ಪೀಕರ್ ಮುಂದೆ ಪರಿಶೀಲನೆಗೆ ಇಟ್ಟಿದ್ದ ಪ್ರಕರಣಕ್ಕೆ ನೇರವಾಗಿ ಸಂಬಂಧ ಪಡದೇ ಇರುವಂತಹ ಬಾಹ್ಯ ಪರಿಗಣನೆಗಳು ಸ್ಪೀಕರ್ ಆದೇಶದ ಮೇಲೆ ಎದ್ದು ಕಾಣಿಸುತ್ತಿವೆ. ಇಂತಹ ಆದೇಶವನ್ನು ತಳ್ಳಿ ಹಾಕಲೇಬೇಕು,” ಎಂದು ಸ್ಪಷ್ಟ ಮಾತುಗಳಲ್ಲಿ ಹೇಳುವ ಮೂಲಕ ಸ್ಪೀಕರ್ ಕ್ರಮವನ್ನು ತಳ್ಳಿಹಾಕಿದ್ದೇ ಅಲ್ಲದೆ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಕೂಡ ಅಮಾನ್ಯಗೊಳಿಸಿದರು.

ಇದರೊಂದಿಗೆ ಸುಪ್ರೀಂಕೋರ್ಟ್ ರಾಜ್ಯ ಹೈಕೋರ್ಟ್‌ನ ವಿಶ್ವಾಸಾರ್ಹತೆ ಮತ್ತು ಅದರ ನ್ಯಾಯಮೂರ್ತಿಗಳ ಸಂವಿಧಾನವನ್ನು ಅರ್ಥೈಸುವ ಸಾಮರ್ಥ್ಯವನ್ನು ಪರೋಕ್ಷವಾಗಿ ಪ್ರಶ್ನಿಸಿದಂತಾಗಿದೆ ಎನ್ನುವ ಅಭಿಪ್ರಾಯಕ್ಕೆ ಸದ್ಯದ ವಿದ್ಯಮಾನಗಳನ್ನು ಗಂಭೀರವಾಗಿ ಗಮನಿಸುತ್ತಿರುವವರು ಬರುವ ಹಾಗೆ ಆಗಿದೆ.

ಕರ್ನಾಟಕದ ಸಮಕಾಲೀನ ರಾಜಕೀಯ ವ್ಯವಸ್ಥೆ ಅತ್ಯಂತ ಭ್ರಷ್ಟವೂ, ಅನೈತಿಕವೂ, ಸ್ವಾರ್ಥಪೂರಿತವೂ ಆಗಿರುವುದನ್ನು ಕಳೆದ ನಾಲ್ಕೈದು ವರ್ಷಗಳ ಇತಿಹಾಸ ಸಾರಿ ಹೇಳುತ್ತಿದೆ. ಈ ಅನೈತಿಕತೆ ಮತ್ತು ಭ್ರಷ್ಟತೆ ರಾಜಕೀಯ ವಲಯಕ್ಕಷ್ಟೆ ಸೀಮಿತವಾಗದೆ ಬೇರೆಲ್ಲ ಸಾರ್ವಜನಿಕ ರಂಗಗಳಿಗೂ ವ್ಯಾಪಿಸುತ್ತ ಬಂದಿದೆ. ಇಂತಹ ನಿರಾಶಾದಾಯಕ ಸಂದರ್ಭದಲ್ಲಿ ಪ್ರಾಮಾಣಿಕರಿಗೆ ಮತ್ತು ದೇಶಪ್ರೇಮಿಗಳಿಗೆ ಉಳಿದಿದ್ದ ಏಕೈಕ ಭರವಸೆ ಎಂದರೆ ಅದು ನಮ್ಮ ಭ್ರಷ್ಟವಾಗಿಲ್ಲದಿದ್ದ ಮತ್ತು ಸಾಮರ್ಥ್ಯದಿಂದ ಕೂಡಿದ್ದ ನ್ಯಾಯಸ್ಥಾನಗಳು. ಈಗ ಮೇಲೆ ಉಲ್ಲೇಖಿಸಿರುವ ಪ್ರಕರಣಗಳಿಂದ ತಾವು ಇಟ್ಟುಕೊಂಡಿದ್ದ ಆ ಒಂದು ಭರವಸೆಯ ಬಗ್ಗೆಯೂ ನಾಗರಿಕರು ಸಂಶಯಾಸ್ಪದಿಂದ ನೋಡುವಂತೆ ಆಗಿದೆ. ನ್ಯಾಯತೀರ್ಮಾನಕ್ಕಿಂತ ಹೆಚ್ಚಾಗಿ ಅದಕ್ಕೆ ಸಂಬಂಧಪಡದ ಇತರೆ ವಿಷಯಗಳು ನ್ಯಾಯಸ್ಥಾನದ ಕರ್ತವ್ಯದ ಮೇಲೆ ಪ್ರಭಾವ ಬೀರುತ್ತಿರುವ ಸಂಶಯ ಇವೆಲ್ಲದರಿಂದ ಗಟ್ಟಿಯಾಗದೆ?

ಸುಪ್ರೀಂಕೋರ್ಟ್ ಕಂಡಂತೆ ಅಕ್ರಮ ಆದೇಶ ಹೊರಡಿಸಿದ್ದ ಸ್ಪೀಕರ್‌ರ ಕ್ರಮ ರಾಜ್ಯದ ಹೈಕೋರ್ಟ್‌ನಲ್ಲಿ ಸಕ್ರಮವಾಗಿ ಮಾನ್ಯತೆ ಪಡೆದಿದ್ದರ ಹಿಂದೆ ಇರುವ ಕಾರಣಗಳಾದರೂ ಏನು? ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಸ್ತಾಪವಾಗಿ ಜನರ ಪ್ರಜ್ಞೆಗೂ ಬಂದಿರುವ ನ್ಯಾಯಾಧೀಶರುಗಳ ಭ್ರಷ್ಟಾಚಾರವೆ? ಅಥವ, ಸಂವಿಧಾನವನ್ನು ಸರಿಯಾಗಿ ಅರ್ಥೈಸಿಕೊಳ್ಳಲಾಗದ ಅಸಮರ್ಥರೂ ನ್ಯಾಯಮೂರ್ತಿಗಳಾಗಿರುವುದೇ? ಅಥವ, ನ್ಯಾಯಮೂರ್ತಿಗಳ ವೈಯಕ್ತಿಕ ರಾಜಕೀಯ ನಿಲುವುಗಳೂ ಅವರು ಕೊಡುತ್ತಿರುವ ತೀರ್ಪಿನ ಮೇಲೆ ಪ್ರಭಾವ ಬೀರುತ್ತಿರುವುದೆ? ಅಥವ, ಅಧಿಕಾರರೂಢರ ಪರ ಇರುವುದರಿಂದ ತಮ್ಮ ಸವಲತ್ತುಗಳಲ್ಲಿ ಹೆಚ್ಚಳವಾಗುತ್ತದೆಯೆಂಬ ಸ್ವಹಿತಾಸಕ್ತಿಯೆ? ಒಟ್ಟಿನಲ್ಲಿ, ನ್ಯಾಯತೀರ್ಮಾನಕ್ಕಿಂತ ಹೆಚ್ಚಾಗಿ ಅದಕ್ಕೆ ಸಂಬಂಧಪಡದ ಇತರೆ ವಿಷಯಗಳು ನ್ಯಾಯಸ್ಥಾನದ ಕರ್ತವ್ಯದ ಮೇಲೆ ಪ್ರಭಾವ ಬೀರುತ್ತಿರುವುದೇ?

ಈ ಪ್ರಶ್ನೆಗಳು ರಾಜ್ಯದಲ್ಲಿ ಈಗ ನಡೆಯುತ್ತಿರುವ ಎಲ್ಲಾ ರಾಜಕೀಯ ಘಟನೆಗಳಿಗಿಂತ ಮುಖ್ಯವಾಗಿ ಚರ್ಚೆಯಾಗಬೇಕಾದ ಮತ್ತು ಕೂಡಲೇ ಸರಿಪಡಿಸಬೇಕಾದ ವಿಷಯಗಳಾಗಿವೆ. ನ್ಯಾಯಸ್ಥಾನದ ಬಗ್ಗೆ ನಾಗರಿಕರ ನಂಬಿಕೆಯನ್ನು ಉಳಿಸಿಕೊಳ್ಳುವ ಜವಾಬ್ದಾರಿ ಎಂದಿಗೂ ನ್ಯಾಯಮೂರ್ತಿಗಳದ್ದೇ ಆಗಿದೆ. ಅಲ್ಲವೆ?

ರವಿ ಕೃಷ್ಣಾ ರೆಡ್ಡಿ