Category Archives: ರಾಜಕೀಯ

ರಾಜಕೀಯ ವಿಷಯಗಳಿಗೆ ಸಂಬಂಧಿಸಿದ ಲೇಖನಗಳು ಮತ್ತು ವಿಡಿಯೋಗಳು…

ಜಾತಿ ಮೇಲಾಟ – ಈ ಸಂಘರ್ಷಗಳಿಗೆ ಕೊನೆ ಎಂದು..?

– ಮಹಾದೇವ ಹಡಪದ

ಸಾಮಾಜಿಕ ಬದಲಾವಣೆ ಅನ್ನುವುದು ಬರೀ ಭಾವನಾತ್ಮಕ ಗೇಯವಾಗಿ, ಸಂದರ್ಭನುಸಾರ ಆದರ್ಶದ ಮಾತಾಗಿ, ಗೆಳೆತನದಲ್ಲಿ ಜಾತಿ ನಿರ್ಲಕ್ಷಿಸುವ ಜಾಣಕುರುಡಾಗಿ ಮಾತ್ರ ಕಾಣುತ್ತದೆ. ಇರುವುದೆಲ್ಲವೂ ಹೇಗಿತ್ತೋ ಹಾಗೆ ಇರಬೇಕೆಂದು ಬಯಸುವವರ ಗುಂಪುಗಳು ಸಂಶೋಧನಾತ್ಮಕ ಚಟುವಟಿಕೆಯಲ್ಲಿ ತೊಡಗಿಕೊಂಡಿವೆ. ಜಾತಿಯ ಕುರುಹುಗಳು ಪತ್ರಿಕೆಗಳ ಒಳಪುಟದಲ್ಲಿ ಮಾತ್ರ ಪ್ರಕಟಗೊಂಡು ಘಟನೆಗಳು ತಣ್ಣಗಾಗುತ್ತಿವೆ. devdasiಆದರೆ ಬದಲಾಗುತ್ತಿರುವ ಸಾಮಾಜಿಕ ಸಂದರ್ಭದಲ್ಲಿ ದಲಿತ ಮಹಿಳೆಯರು ನಿಜಕ್ಕೂ ಸುರಕ್ಷಿತವಾಗಿಲ್ಲ. ಅದು ಗ್ರಾಮಭಾರತದಲ್ಲಿ ದಲಿತ ಮಹಿಳೆಯರ ಬದುಕು ಇಂದಿಗೂ ಸುಧಾರಣೆ ಕಂಡಿಲ್ಲ. ಸೇವೆಯ ಹೆಸರಿನಲ್ಲಿ ದೇವದಾಸಿ ಪದ್ಧತಿಯನ್ನು ಉಳಿಸಿಕೊಂಡು ಬಂದಿದ್ದವರು ಈಗ ದಲಿತ ಹೆಣ್ಣುಮಕ್ಕಳನ್ನು ಹೇಗೆ ನಡೆಸಿಕೊಳ್ಳುತ್ತಿದ್ದಾರೆ ಎಂಬುದು ಮೌನದ ನಾಗರೀಕ ಲಕ್ಷಣವಾಗಿದೆ. ಆಕೆ ಮದುವೆಯಾಗಿ ಮಕ್ಕಳನ್ನು ಹೊಂದಿದ್ದೂ ಯಾವನೋ ಮಲಗಲು ಕರೆದಾಗ ಹೋಗಲು ನಿರಾಕರಿಸಿದರೆ ಅತ್ಯಾಚಾರವಾಗುತ್ತದೆ. ಹೇಳಿಕೊಂಡರೆ ಗಂಡನಿಂದ ಸೋಡಚೀಟಿ ಪಡೆಯಬೇಕು. ಸಮಾಜದ ಕೊಂಕು ಮಾತುಗಳಿಗೆ ತುತ್ತಾಗಬೇಕು, ಗಂಡನ ಮನೆಯವರ ತಿರಸ್ಕಾರ ಅನುಭವಿಸಬೇಕು ಇಲ್ಲವೇ ಅತ್ಯಾಚಾರವನ್ನು ಗುಲ್ಲು ಮಾಡದೆ ಸಹಿಸಿಕೊಂಡು ಹೊಗಬೇಕು. ಇದೆಲ್ಲದರ ಹಿಂದೆ ಸಾಮಾಜಿಕ ಸ್ಥಾನಮಾನಗಳು, ಗೌರವ-ಮರ್ಯಾದೆಗಳು, ಭಯ-ಭಕ್ತಿ ಅಂಜಿಕೆಯ ಭಾವಗಳು ಸಂಚರಿಸುತ್ತಿರುತ್ತವೆ. ಆ ಮೌನದ ನೊಂದ ಜೀವಗಳು ತಮ್ಮ ಒಡುಲುರಿಯ ಸ್ಫೋಟಕ್ಕೆ ಸಿದ್ಧಗೊಳ್ಳುತ್ತಿರುವ ಈ ಹಂತದಲ್ಲಿ ದೌರ್ಜನ್ಯದ ನಾನಾಮುಖಗಳೂ ಗೋಚರಿಸುತ್ತಿವೆ. ಆ ಘಟಣೆಗಳಿಗೆ ಯಾವ ಸಂಶೋಧನೆಯ ಬಣ್ಣಹಚ್ಚಿದರೂ ಜಾತಿ ಕಾರಣ ಎಂಬುದು ಸ್ಪಷ್ಟವಾಗಿದೆ.

ರಾಯಚೂರು, ಬೀದರ, ಗುಲ್ಬರ್ಗಾ, ಕೊಪ್ಪಳ, ಬಳ್ಳಾರಿ, ಬಿಜಾಪೂರ ಜಿಲ್ಲೆಗಳಲ್ಲಿನ ದಲಿತ ಹೆಣ್ಣುಮಕ್ಕಳ ಆತಂಕಕ್ಕೆ ಕೊನೆಯಿಲ್ಲ. ಆದಿಶಕ್ತಿಯ ಹೆಸರನ್ನು ಮುಂದೆ ಮಾಡಿಕೊಂಡು ಬಸವಿ ಬಿಡುವ ಆಚರಣೆ ಕಳ್ಳತನದಲ್ಲಿ ನಡೆಯುತ್ತಿರುವುದು ಇಂದಿಗೂ ನಿಂತಿಲ್ಲ. ಗೆಳೆಯ ಪಂಪಾರಡ್ಡಿ ಮೊನ್ನೆಯಷ್ಟೆ ದೇವದಾಸಿ ಬಿಡುತ್ತಿದ್ದ ಹುಡುಗಿಗೆ ಮದುವೆ ಮಾಡಿಸಿದರು. ಮರಿಯಮ್ಮನಹಳ್ಳಿಯ ಆರನೇ ವಾರ್ಡಿನಲ್ಲಿ ಆಡುವ ಎಷ್ಟೋ ಮಕ್ಕಳಿಗೆ ತಂದೆ ಯಾರೆಂಬುದು ಗೊತ್ತಿಲ್ಲ. ವಿಸ್ತಾರದಲ್ಲಿ ಬೆಳೆಯುತ್ತಿರುವ ಅಸಂಖ್ಯ ಮಕ್ಕಳ ಕತೆಗಳು ಅಪೌಷ್ಟಿಕವಾಗಿರುವ ಬದುಕಿನ ಚಿತ್ರಣವನ್ನು ನೀಡುತ್ತವೆ. ಹೀಗಿರುವಾಗ ಈ ದೇಶದ ಚರಿತ್ರೆಯಲ್ಲಿನ ಅಸ್ಪೃಶ್ಯತೆಯ ರೂಪಗಳು ಜಾತಿಯಿಂದ ಜಾತಿಯ ಕಾರಣಕ್ಕಾಗಿ ಸೃಷ್ಟಿಯಾದುದಲ್ಲ ಎಂದು ಹೇಗೆ ನಿರ್ಧರಿಸಲಾಗುತ್ತದೆ.

ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಚಿಕ್ಕಕಡಬೂರು ಗ್ರಾಮದಲ್ಲಿ ಮೊನ್ನೆಯಷ್ಟೆ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಯಿತು. ಅದು ಜಾತಿಯ ಕಾರಣಕ್ಕಾಗಿಯೇ ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ. ಶಂಕ್ರಮ್ಮ ಎಂಬ ದಲಿತ ಹೆಣ್ಣುಮಗಳನ್ನು ಲೈಂಗಿಕ ತೃಷೆಗಾಗಿ ಕಾಡಿಸುತ್ತಿದ್ದ ದಲಿತೇತರ ಜನಾಂಗದ ವ್ಯಕ್ತಿಯೊಬ್ಬ ಕುಂಟಲಗಿತ್ತಿ ಮೂಲಕ ಆಕೆಗೆ ಎರಡು ಸಾವಿರ ರೂಪಾಯಿ ದುಡ್ಡಿನ ಆಸೆ ತೋರಿಸಿ ಮಲಗಲು ಕರೆದಿದ್ದಾನೆ. ಆ ಹೆಣ್ಣುಮಗಳು ಈ ವಿಷಯವನ್ನು ಗಂಡ ಬಸವರಾಜನಿಗೆ ಹೇಳಿದಾಗ ಆತ ಬಳಗಾನೂರು ಠಾಣೆಯಲ್ಲಿ ಆ ವ್ಯಕ್ತಿಯ ಮೇಲೆ ಕೇಸು ದಾಖಲಿಸಿದ್ದಾನೆ. ಅದು ಊರಿನಲ್ಲಿರುವ ಕುಲಬಾಂಧವರ ಗೌರವವನ್ನು ಮಣ್ಣುಗೂಡಿಸಿತೆಂದು ಮತ್ತೊಬ್ಬ ತನ್ನ ಸಮಾಜದ ದೊಣ್ಣೆನಾಯಕ ಬಸವರಾಜ ರೂಡಲಬಂಡ ಎಂಬಾತ ತನ್ನ ಜಾತಿಯ ಹುಡುಗರನ್ನೆಲ್ಲ ಸೇರಿಸಿಕೊಂಡು ಕೇಸು ದಾಖಲಿಸಿದ ತಪ್ಪಿಗಾಗಿ ಆ ಊರಿನಲ್ಲಿರುವ ಎಲ್ಲ ದಲಿತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಸ್ವಕೋಮಿನ ವ್ಯಕ್ತಿಯದು ತಪ್ಪಿದೆ ಎಂಬುದು ಅರಿವಿದ್ದರೂ “ದಲಿತರದ್ದು ಭಾರಿ ಸೊಕ್ಕಾಗಿದೆ” ಎಂಬ ಕಾರಣ ನೀಡಿ ಜಾತಿ ಕಾರಣಕ್ಕಾಗಿಯೇ ಈ ಹಲ್ಲೆಯನ್ನು ಮಾಡಲಾಗಿದೆ. caste-riot-policeನೂರಿಪ್ಪತ್ತು ಮನೆಗಳಿರುವವರು ಕೇವಲ ಎಂಟು ದಲಿತರ ಕುಟುಂಬಗಳ ಮೇಲೆ ಹಲ್ಲೆ ಮಾಡಿದ್ದಾರೆ. ಆ ದಿವಸ ಪೋಲಿಸರು ಬರುವುದು ಹತ್ತು ನಿಮಿಷ ತಡವಾಗಿದ್ದರೆ ನಮ್ಮೆಲ್ಲರ ಹೆಣಗಳು ಬೀಳುತ್ತಿದ್ದವು ಎಂದು ಹೇಳುವ ಹನಮಂತಪ್ಪನ ದ್ವನಿಯಲ್ಲಿ ಆ ರೋಷದ ಕಾವು ಕೇಳುತ್ತದೆ. ಹತಾಶರಾದ ಎಂಟು ಕುಟುಂಬದ ಸದಸ್ಯರು ಆ ಊರೊಳಗೆ ಉಳಿಯುವುದಿಲ್ಲವೆನ್ನುತ್ತಿದ್ದಾರೆ. ದ್ವೇಷವನ್ನು ಉಡಿಯಲ್ಲಿ ಕಟ್ಟಿಕೊಂಡು ಈ ಲಜ್ಜೆಗೆಟ್ಟವರ ಜಾತಿ ಅಹಂಕಾರದ ಜೊತೆ ಸಹಬಾಳ್ವೆ ಮಾಡುವುದಾದರೂ ಹೇಗೆ..? ಸಹನೆಯಿಂದ ಬದುಕಿದರೂ ನಮ್ಮ ಹೆಣ್ಣುಮಕ್ಕಳು ಸುರಕ್ಷಿತವಾಗಿರುತ್ತಾರೆಂದು ನಂಬುವುದು ಹೇಗೆ..? ಈ ಎಲ್ಲ ಪ್ರಶ್ನೆಗಳ ನಡುವೆ ರಾಜಿಮಾಡಿಕೊಂಡು ಬದುಕಲಾದೀತೆ.

ಈಗ ಹಳ್ಳಿಗಳಲ್ಲಿರುವ ಜಾತಿಯಾಧಾರಿತ ಓಣಿಗಳು ಒಂದಾಗುವುದು ಯಾವಾಗ..? ಈಗ ಮೊದಲಿನ ಹಾಗೇನೂ ಇಲ್ಲ ಎನ್ನುವ ಮನಸ್ಸನ್ನು ಚಿವುಟಿದರೆ ನೋವಾಗುತ್ತದೆ. ಕೆಲವು ಗುಂಪಿನ ಕೆಲವು ಕೋಮಿನ ವಿಷವರ್ತುಲಗಳು ಜಾಗೃತಗೊಂಡು ಸಂಪ್ರದಾಯಗಳನ್ನು ಜತನದಿಂದ ಕಾಯ್ದುಕೊಳ್ಳಲು ಹವಣಿಸುತ್ತವೆ. ಮದುವೆಯ ದಿನ ಆರುಂಧತಿ ವಸಿಷ್ಠರ ನಕ್ಷತ್ರ ತೋರಿಸುವಾಗ ‘ಆರುಂಧತಿಯ ಹಾಗೆ ಬಾಳು’ ಎಂದು ಪುರೋಹಿತ ಪಾಮರರು ಆಶೀರ್ವದಿಸುತ್ತಾರೆ. ಆದರೆ ವಾಸ್ತವದಲ್ಲಿ ಅದೆ ಪುರೋಹಿತಶಾಹಿಗಳು ತಮ್ಮ ಮನೆಗೆ ಅರುಂಧತಿ ಜಾತಿಗೆ ಸೇರಿದ ಹೆಣ್ಣುಮಗಳನ್ನು ಸೊಸೆಯಾಗಿ ತಂದುಕೊಳ್ಳಲಾರರು. ಆದರ್ಶಕ್ಕಷ್ಟೆ ಪುರಾಣಗಳನ್ನು ಕೇಳುವ ಈ ಅಸಮಾನತೆಯ ಸಂಪ್ರದಾಯಕ್ಕೆ ಕೊನೆಯೆಂಬುದಿಲ್ಲವಾಗಿದೆ. ಈವರೆಗೂ ದಲಿತ-ಬ್ರಾಹ್ಮಣರ ಅಥವ ದಲಿತ-ಮೇಲ್ಜಾತಿಗಳ ಹೆಣ್ಣು ಗಂಡಿನ ಸಂಬಂಧಗಳಲ್ಲಿ ಬರೀ ಬ್ರಾಹ್ಮಣರ/ಮೇಲ್ಜಾತಿಯ ಹೆಣ್ಣುಮಕ್ಕಳು ದಲಿತ ಗಂಡಸರನ್ನು ಮದುವೆ ಮಾಡಿಕೊಂಡಿದ್ದಾರೆ ಹೊರತು ಎಷ್ಟು ದಲಿತರ ಹೆಣ್ಣುಮಗಳು ಬ್ರಾಹ್ಮಣರ/ಮೇಲ್ಜಾತಿಯವರ ಸೊಸೆಯಾಗಿ ಹೋದದ್ದಿದೆ? caste-clashesಇಂಥ ಕೊಡುಕೊಳ್ಳುವಿಕೆಯನ್ನು ನಿರಾಕರಿಸುವ ಸಮಾಜದಲ್ಲಿ ದಲಿತ ಹೆಣ್ಣುಮಕ್ಕಳು ಇಂದು ಸುರಕ್ಷಿತವಾಗಿದ್ದಾರೆಂದು ಹೇಗೆ ಹೇಳುವುದು..? ಹರಿದ ಕುಪ್ಪಸ ಸೀರೆಯತ್ತ ಕಳ್ಳ ಕಣ್ಣಿಡುವುದು ಕೂಡ ಗ್ರಾಮಭಾರತದಲ್ಲಿ ಬಡತನ, ವಿಧವೆ, ಅನಾಥೆ ಅಥವಾ ಜಾತಿಕಾರಣದಿಂದಲೆ ಅಲ್ಲವೇ..? ಇಂಥ ಮನಃಸ್ಥಿತಿ ಹೆಪ್ಪುಗಟ್ಟಿರುವ ಸಮಾಜದಲ್ಲಿ ಸಮಸಮಾನತೆಯ ಕನಸು ಕಾಣುವವರು ಎಲ್ಲವೂ ಸರಿಯಾಗಿದೆ ಎಂಬ ಭ್ರಮೆಯ ಆದರ್ಶದಲ್ಲಿ, ಅಕ್ಷರದ ಅಹಂಕಾರದಲ್ಲಿ ಬದುಕುವುದನ್ನು ವಿಮರ್ಶಿಸಿಕೊಳ್ಳಬೆಕಾಗಿದೆ.

ಗಂಗೆ, ಗೌರಿ, ಕೆಂಪಿ, ಬುಡ್ಡಿಯರನ್ನು ಕೂಗಿ.. : ಭಾಗ – 2

– ಎಚ್.ಜಯಪ್ರಕಾಶ್ ಶೆಟ್ಟಿ

(ಭಾಗ – 1)

ಭಾಗ – 2 – ಹಟ್ಟಿಯ ಅವತಾರ, ಹಕ್ಕಿಯ ಕೂಗು

ನಾವು ಹಸು ಎಂದು ಸಾಮಾನ್ಯಾರ್ಥದಲ್ಲಿ ಕರೆಯುವ ಜಾನುವಾರುಗಳಲ್ಲಿ ವರ್ಗವಾರು-ಹೋರೆಮ್ಮೆ, ಕಡಗಂಟಿ ಎಂಬ ಎರಡು ವಿಭಾಗಗಳಿವೆ. ಎರಡನ್ನೂ ಸೇರಿಸಿ ಗಂಟಿ ಎಂದೇ ಕರೆಯುವ ರೂಢಿ ನಮ್ಮದು. ಹಟ್ಟಿ, ಕೋಳಿಗೂಡು ಮತ್ತು ಬಸಳೆಚಪ್ಪರಗಳಿಲ್ಲದ ಮನೆಗಳೇ ನನ್ನೂರಿನಲ್ಲಿಲ್ಲ. ಮನೆ ಎಂದ ಮೇಲೆ ಗೋಮಯಕ್ಕಾದರೂ ಒಂದು ಹಸು ಇರಲೇಬೇಕೆಂಬ ಅಲಿಖಿತ ಸಂವಿಧಾನವನ್ನು ಅನುಸರಿಸಿಕೊಂಡು ಬಂದ ಊರು ನಮ್ಮದು. ನಮಗೆ ಮನೆಯಿರುವ ಹಾಗೆಯೇ ಗಂಟಿಗಳಿಗೆ ಹಟ್ಟಿ ಇರಲೇಬೇಕು. ಹಟ್ಟಿಯಲ್ಲಿಯೂ ಉತ್ತಮ ಮತ್ತು ಕನಿಷ್ಠ ಎನ್ನುವ ಒಳವಿಭಾಗಗಳುಂಟು. indian-buffaloಹಟ್ಟಿಯ ಒಳವಿನ್ಯಾಸದಲ್ಲಿ ಎದುರು ಭಾಗವನ್ನು ‘ಮುಂದಣೆ’ ಎಂತಲೂ ಹಿಂಭಾಗವನ್ನು ‘ಹಿಂದಣೆ’ ಎಂತಲೂ ಕರೆಯುವುದು ವಾಡಿಕೆ. ಮುಂದಣೆಯಲ್ಲಿ ಕಟ್ಟುವುದಕ್ಕೆ ಯೋಗ್ಯವಾದ ದಳಕಟ್ಟು, ಅಕ್ಕಚ್ಚ್ಟು-ಬಾಯರು ಕುಡಿಯಲು ಬಾಣಿ/ಮರ್ಗಿ ಇವುಗಳ ಸಹಿತ ಆ ಹಟ್ಟಿಯ ಮಟ್ಟಿಗೆ ಅದು ವಿಐಪಿ ಸ್ಟ್ಯಾಂಡ್ ತರಹ ಇರುತ್ತದೆ. ‘ಹಿಂದಣೆ’ ಹೆಸರೇ ಹೇಳುವಂತೆ ಮುಖ್ಯ ಜಾನುವಾರುಗಳ ಬೆನ್ನಿಗೆ ಸಿಕ್ಕಜಾಗದಲ್ಲಿ ಮಲಗುವುದಕ್ಕೆ ಇರುವ ಅವಕಾಶ. ಈ ಅವಕಾಶದಲ್ಲಿ ಕೆಲವೊಮ್ಮೆ ಮುಂದಿನ ಹಸು ಹಿಂದಕ್ಕೆ ಬಂದು ಹಾಕಿದ ಸಗಣಿಯೂ ಇರಬಹುದು. ಇಲ್ಲವೇ ಹುಲ್ಲು ತಿನ್ನುವಾಗಲೆ (ಹೆಣ್ಣು ಹಸುವಾದರೆ) ಹಿಂದಕ್ಕೆ ಚಿಮ್ಮಿಸಿ ಬಿಡುವ ಉಚ್ಚೆಯೂ ಇರಬಹುದು. ಒಟ್ಟಾರೆ ಹಿಂದಣೆ ಎಂದರೆ ನಮ್ಮ ಸಮಾಜದಲ್ಲಿ ದಲಿತರ ಜಾಗ ಇದ್ದಂತೆ. ನಗರದಲ್ಲಿ ಕೊಳೆಗೇರಿ ಇದ್ದಂತೆ. ಇಕ್ಕಟ್ಟಿನಲ್ಲಿಯೇ ಸಿಕ್ಕಿದ್ದನ್ನು ತಿಂದು ಬದುಕಬೇಕು. ಮುಂದಣೆಯಲ್ಲಿ ಕಟ್ಟಲು ಜಾಗವಿಲ್ಲದೆ ಹೋದಾಗ ಮಿಕ್ಕವುಗಳಿಗೆ ಇಲ್ಲಿಯೇ ಜಾಗ ಸಿಕ್ಕಬೇಕು. ಇವುಗಳ ಪರಿಸ್ಥಿತಿಯೆಂದರೆ ತಿನ್ನುವುದರಲ್ಲಿ ಹಿಡಿಯಷ್ಟು ಪಾಲು ಆದರೆ ಅಪಾಯದಲ್ಲಿ ಹಿರಿದಾದ ಪಾಲು. ಯಾರಾದಾದರೂ ಮನೆಯ ಹಗ್ಗಬಿಚ್ಚಿಕೊಂಡ ಬೀಡಾಡಿ ಹಸುಗಳು ಹಟ್ಟಿಗೆ ನುಗ್ಗಿದಲ್ಲಿ ಮೊದಲು ಆಕ್ರಮಣ ಮಾಡುವುದು ಈ ಹಿಂದಣೆಯಲ್ಲಿರುವವುಗಳನ್ನೇ. ಅದಲ್ಲದೆ ಹಟ್ಟಿಗೆ ನುಗ್ಗುವ ಅಪಾಯಕಾರಿ ಪ್ರಾಣಿಗಳು ಮೊದಲು ಎರಗುವುದು ಇವುಗಳ ಮೇಲೆಯೇ. ಇದೊಂದರ್ಥದಲ್ಲಿ ಗಂಟಿಗುರಾಣಿಗಳ ತಾಣ. ಇನ್ನೂ ಒಂದರ್ಥದಲ್ಲಿ ಇದು ಹಟ್ಟಿಯಿಂದ ಹೊರಹಾಕಲೇಬಾಕಾದ ಅನುಪಯುಕ್ತವೆನಿಸಿದವುಗಳ ತಾತ್ಕಾಲಿಕ ತಂಗುದಾಣವೂ ಹೌದು.

ಹಸು ಸಾಕುವುದು ಅಲಂಕಾರಕ್ಕಲ್ಲ ಎಂಬುದನ್ನು ನಾನು ಹೇಳಬೇಕಾಗಿಲ್ಲ. ಆದರೆ ಹಾಗೆ ಸಾಕುವವರೂ ಉಂಟು. ಕಂಬಳದ ಫಲಕ ಗೆದ್ದು ಮೀಸೆ ತಿರುವುದಕ್ಕಾಗಿ ಅಲಂಕಾರಕ್ಕೆಂಬಂತೆ ಸಾಕುವವರಿರುವರಾದರೂ ಅವರುಗಳು ನಮ್ಮ ಜಾಗತೀಕರಣದ ಜಗತ್ತಿನ ಉದ್ಯಮಪತಿಗಳಂತಿರುವವರು. ಕ್ರಿಕೆಟಿಗರನ್ನು ಕೊಂಡುಕೊಂಡು ಆಟವಾಡಿಸಿ ಮೋಜುಮಾಡಬಲ್ಲವರು, ಮೃಗಾಲಯದ ಆನೆಯನ್ನು ದತ್ತುಪಡೆಯಬಲ್ಲವರು ಮತ್ತು ದೇಗುಲ/ಮಠಗಳಿಗೆ ಆನೆದಾನ ಮಾಡಬಲ್ಲವರು. ಅಂತಹ ಅಲಂಕಾರ ಪ್ರಿಯರಾರೂ ನನ್ನೂರಿನಲ್ಲಿ ಇರಲು ಅಂದಿಗೆ ಅವಕಾಶವಿರಲಿಲ್ಲ. ಅವರೆಲ್ಲಾ ಇರುವ ಹೊಲಮನೆ ಉಳುವುದಕ್ಕಾಗಿ, ಚಾಕಣ್ಣು (ಡಿಕಾಕ್ಷನ್) ಬಿಡಿಸಿ ಅದಕ್ಕೊಂದಿಷ್ಟು ಹಾಲು ಬೆರೆಸುವುದಕ್ಕಾಗಿ, ಹೋಟೆಲು ಮನೆಗಳಿಗೆ ಹಾಲು ಹಾಕಿ ಚೂರು ಪಾರು ಕಾಸು ಗಿಟ್ಟಿಸಿ ತಾವು ಬೆಳೆಯದ ಉಪ್ಪು ಮೆಣಸು ಹೊಂದಿಸುವ ದೈನಿಕದ ಒತ್ತಡಕ್ಕಾಗಿ ಹಸು ಸಾಕುತ್ತಿದ್ದರು ಮತ್ತು ಸಾಕುತ್ತಿರುವವರು. ಈ ಒತ್ತಡಕ್ಕಾಗಿಯೂ ಅವರು ವೈಜ್ಞಾನಿಕ ಹೈನುಗಾರಿಕೆ ನಡೆಸಲಾರದ ಸ್ಥಿತಿಯಲ್ಲಿ ಕರಾವಿಗೆಂದು ಸಾಕುತ್ತಿದ್ದುದು ಬಹುವಾಗಿ malenadu-giddaಮಲೆನಾಡು ಗಿಡ್ಡ ಇಲ್ಲವೆ ದೇಸೀ ತಳಿಯ ಕಿರುಗಾತ್ರದ ಅವೇ ಹುಂಡಿ, ಕೆಂಪಿ, ಬುಡ್ಡಿಯಂತಹ ದನಗಳನ್ನು. ವರ್ಷಕ್ಕೊ, ಎರಡು ವರ್ಷಕ್ಕೊ ಕರುಹಾಕುವ ಈ ಹಸುಗಳು, ದಿನಕ್ಕೆ ನಾಲ್ಕೈದು ಸಿದ್ದೆ ಹಾಲು ಕೊಟ್ಟರೆ ಅದೇ ಹೆಚ್ಚು. ಇವು ಹಾಕುವ ಹೆಣ್ಣು ಕರುಗಳನ್ನು ಸಂತಾನವಾಗಿ ಬಳಸಿಕೊಳ್ಳಲು ಸಮಸ್ಯೆಯಿರಲಿಲ್ಲ. ಆದರೆ ಗಂಡುಕರುಗಳು ಮಾವಿನಕಾಯಿ ಗಾತ್ರದವುಗಳೇ ಹೆಚ್ಚಾಗಿರುತ್ತಿದ್ದ ಕಾರಣಕ್ಕಾಗಿ ಉಳುವ ಗುಡ್ಡಗಳನ್ನಾಗಿ ಬಳಸಿಕೊಳ್ಳಲು ಸಾಧ್ಯವಾಗದೆ ಬೆಳೆಯುವ ತನಕ ಕೆಲವೊಂದಿಷ್ಟು ಕಾಲ ಹಿಂದಣೆಯಲ್ಲಿ ಕಟ್ಟಿ, ಅಲ್ಲ್ಲಿಯೇ ಸಗಣಿಯ ಮೇಲೆಯೇ ಹುಲ್ಲುತಳಿದು, ಬಿಟ್ಟು-ಕಟ್ಟಿ ಹೇಗೋ ಅನುಭವಿಸುವಷ್ಟು ಉಪದ್ರವವನ್ನು ಅವುಗಳಿಂದ ಅನುಭವಿಸಿಯಾದ ಮೇಲೆ ಮತ್ತು ಹಿಂದಣೆಯಲ್ಲಿ ಮತ್ತೊಂದನ್ನು ಕಟ್ಟಲೇಬೇಕಾದಾಗ ಇವುಗಳನ್ನು ಸಿಕ್ಕಷ್ಟಕ್ಕೆ ಸಾಗಹಾಕಿ ಯಾವುದಾದರೂ ಒಂದು ಸಣ್ಣ ಖರ್ಚನ್ನು ಸರಿತೂಗಿಸಿಕೊಳ್ಳುತ್ತಿದ್ದುದು ರೂಢಿ. ಕಟ್ಟಿ ಸಾಕಲು ಸಾಧ್ಯವಿಲ್ಲವೆನಿಸಿದಾಗ, ಯಾರು? ಮತ್ತು ಯಾಕೆ? ಕೊಳ್ಳುತ್ತಾರೆ ಎಂಬ ಅರಿವಿದ್ದೂ, ಹಟ್ಟಿಯನ್ನು ವಿಸ್ತರಿಸಲಾರದ, ಮನುಷ್ಯರಂತೆ ಅನುಪಯುಕ್ತ ಮಗುವನ್ನು ಲಿಂಗಪತ್ತೆ ಮಾಡಿ ಭ್ರೂಣಹತ್ಯೆ ಮಾಡುವ ವೈದ್ಯಕೀಯ ರೂಢಿಯೂ ಇರದ ಅವರು ಅವುಗಳನ್ನು ಮಾರಲೇಬೇಕು. ಅವುಗಳು ಎಲ್ಲಿಗೆ ಹೋಗುತ್ತವೆ ಎಂಬ ಅರಿವಿದ್ದೂ ಒಂದೂ ಕಾಸಿಲ್ಲದೆ ಎಲ್ಲಿಗೋ ಹೊಡೆದು ಬರುವುದು ಅವರಿಗೆ ಸಾಧ್ಯವೂ ಇರಲಿಲ್ಲ. ಮಾತ್ರವಲ್ಲ ನನ್ನೂರಿನಲ್ಲಿ ಹಾಗೆ ಹೊಡೆದುಬಂದ ಒಂದೇ ಒಂದು ಉದಾಹರಣೆಯನ್ನು ನಾನು ಕಂಡಿಲ್ಲ. ಆದರೆ ಹಿಂದಣೆಗಳು ಮಾತ್ರ ಹೊಸ ಸದಸ್ಯನಿಗಾಗಿ ಖಾಲಿಯಾಗುತ್ತಿದ್ದುದು ನಿಜ.

ಹಾಗೆಯೇ ಉಳುವುದಕ್ಕಾಗಿ ತರುತ್ತಿದ್ದ ಸಾಕಷ್ಟು ಜಾನುವಾರುಗಳಲ್ಲಿ ಬಾಯ್ಗೂಡಿ ಹಲ್ಲಾದವುಗಳೇ ಹೆಚ್ಚು. 2-3 ಸಾಗುವಳಿ ಮಾಡಿದ ಮೇಲೆ ಬಹುಸಂದರ್ಭಗಳಲ್ಲಿ ಇವುಗಳ ವಿಕ್ರಯವೂ ಮೇಲಿನಂತೆಯೇ ಅನಿವಾರ್ಯ. ಸಣ್ಣ ಬಂಡವಾಳವನ್ನು ಹೂಡಿ ತರುತ್ತಿದ್ದ ಎತ್ತು/ಕೋಣಗಳು ತಮ್ಮಿಂದ ಖಾಲಿಯಾಗುವಾಗ ಒಂದಿಷ್ಟಾದರೂ ಇಡಗಂಟು ಉಳಿಸಿಹೋಗದೇ ಇದ್ದರೆ ಸಣ್ಣ ರೈತರ ಪಾಡು ನಿಲುಗಡೆಗೆ ಬಿದ್ದಂತೆಯೇ. ಅದೇ ತೆರನಾಗಿ ಹಾಲು ಕರೆಯುವ ಮುದಿಹಸುಗಳೂ ತಮ್ಮ ಕರು ಉತ್ಪಾದಿಸುವ ಸಾಮರ್ಥ್ಯ ತೀರಿದ ಮೇಲೆ, ಹಾಲು ಕೊಡಲಾರದ ಸ್ಥಿತಿಯಲ್ಲಿ ಮುಂದಣೆಯಿಂದ ಹಿಂದಣೆಗೆ ಬರಲೇಬೇಕು. ಯಾಕೆಂದರೆ ಕರಾವಿನಚಕ್ರದಲ್ಲಿ ಆ ಮುದಿ ಹಸುವಿನ ಮಗಳಿಗೆ ಹೊಸಜಾಗ ಬೇಕಲ್ಲವೇ? ಇವು ಹಿಂದಣೆಯಲ್ಲಿ ಸಗಣಿ ಮೇಲೆ ಅಷ್ಟಿಷ್ಟು ದಿನ ಕಳೆದು ಖಾಲಿಯಾಗುತ್ತಿದ್ದವು, ಇಲ್ಲವೇ ಮಾರಲ್ಪಡುತ್ತಿದ್ದವು. ಕರು ಹಾಕಲಾರದ ಕರಾವಿನ ದನ, ಎಮ್ಮೆಗಳನ್ನು ಬಂಡವಾಳಕ್ಕಿಂತ ಹೆಚ್ಚಾಗಿ ಮುದಿವಯಸ್ಸಿನಲ್ಲಿ ಕಂಡುಕೊಳ್ಳುವುದು ಅಷ್ಟು ಸುಲಭವಲ್ಲ. ವಯಸ್ಸಾದಂತೆ ಬಾಯಿಯ ಹಲ್ಲುಗಳು ಒಂದೊಂದಾಗಿ ಜಾರಿ ಆಹಾರವನ್ನು ಸ್ವಯಂ ಜಗಿದು ನುಂಗಲಾರದ ದುರ್ಬಲ ಸ್ಥಿತಿಯಲ್ಲಿ ಚಂಡೆ ಉಗಿಯುವಂತಾಗುವ ಅವುಗಳ ಪಾಡು ಯಾತನಾದಾಯಕ. ಮೆಂದು ಬರಲಾರದ, ಹಾಕಿದ್ದನ್ನೂ ಚೆನ್ನಾಗಿ ಜಗಿದು ತಿನ್ನಲಾರದ ಜೀರ್ಣಾವಸ್ಥೆಯಲ್ಲಿ, ವಯಸ್ಸಿನ ಪರಿಣಾಮವಾಗಿ ಮೈಮೇಲೆ ಆಗುವ ಗಾಯಗಳು ಬೇರೆ. Two old and weak cows looking hungry, weak and unhealthy standinಚರ್ಮದ ಮೇಲೆ ಈ ಹಂತದಲ್ಲಿ ಆಗುವ ಗಾಯಗಳು, ಅವುಗಳ ಮೇಲೆ ಕೂತು ಇಪ್ಪಿ ಹಾಕುವ ನೊಣಗಳನ್ನು ಓಡಿಸಿಕೊಳ್ಳುವಲ್ಲ್ಲಿಯೂ ಸೋಲುವ ಚೋಂಕಾಗಿ(ರೋಮಉದುರಿ) ನಿತ್ರಾಣಗೊಂಡ ಬಾಲ ಹಾಗೂ ಅಲ್ಲಾಡಿಸಲಾರದ ಕಿವಿಗಳಿಂದಾಗಿ ಈ ಗಾಯಗಳಲ್ಲಿ ಹುಳುವಾಗಿ ನೆತ್ತರು ಸೋರುವಂತಾಗುತ್ತದೆ. ಬಯಲು ಹಾಗೂ ತೆರದ ಹಟ್ಟಿಯಲ್ಲಿ ಈ ಗಾಯಗಳ ಮೇಲೆ ದಾಳಿಮಾಡುವ ಕಾಗೆಗಳ ಹಿಂಸೆ ನೋಡಿಕೊಂಡಿರುವುದೇ ಯಾತನಾದಾಯಕ. ಅದೂ ಸಹಿಸಿಕೊಂಡು ಅವುಗಳು ಹಟ್ಟಿಯಲ್ಲಿಯೇ ಉಳಿದವೆಂದರೆ ಹಾಲುಕೊಡುವಾಗ ಕಾಮಧೇನುವಾಗಿದ್ದ ಅದೇ ಹಸು ಅಕ್ಷರಶ: ‘ಕಾಡುವಧೇನು’ ಆಗಲೂಬಹುದು. ಮಲಗಿದಲ್ಲಿಂದ ಏಳಲಾರದ ಅವುಗಳನ್ನು ಎಬ್ಬಿಸುವ ಸಲುವಾಗಿ ಅನಿವಾರ್‍ಯವಾಗಿ ಬಾಲವನ್ನು ತಿರುವಲಾಗುತ್ತದೆ. ಕೊನೆ ಕೊನೆಗೆ ಹೀಗೆ ತಿರುವುವ ವೇಳೆ ಉಂಟಾಗುವ ಬಾಲದ ವೇದನೆಗೂ ಎದ್ದು ನಿಲ್ಲುವ ತಾಕತ್ತು ಕಳೆದುಕೊಂಡ ಮೇಲೆ ಅವುಗಳ ಶುಶ್ರೂಷೆಗೆ ಕನಿಷ್ಠ 3-4 ಜನ ನಿಲ್ಲಬೇಕಾದ ಸ್ಥಿತಿ ಉಂಟಾಗಬಹುದು. ಎಮ್ಮೆ, ಕೋಣ, ಎತ್ತುಗಳಾದರೆ ಈ ಸ್ಥಿತಿ ಮತ್ತಷ್ಟು ಸಂಕಟದಾಯಕ. ಆದಾಯವೂ ಇಲ್ಲದೆ ಬಂಡವಾಳವನ್ನೂ ಕಳೆದುಕೊಳ್ಳುತ್ತಾ ಅನಾಥಾಶ್ರಮದಂತೆ ಚಾರಿಟಿಯ ಕೆಲಸ ಮಾಡುವ ಸಾಮರ್ಥ್ಯ ಒಬ್ಬ ಸಾಮಾನ್ಯ ರೈತನಿಗೆ ಇರುವುದು ಸಾಧ್ಯವೇ? ಕೈ ಮೈ ನೆಕ್ಕಿದ ಅದೇ ಹಸು ಈಗ ಇಡಿಯ ಮನೆಯನ್ನೇ ನೆಕ್ಕಿನಾಶ ಮಾಡಿದ ಅನುಭವವಾಗುತ್ತದೆ. ದುರಂತವೆಂದರೆ ಈ ಸ್ಥಿತಿಗೆ ತಲುಪಿದ ಹಸುವನ್ನು ಕೊಂದು ಪಾಪಕಟ್ಟಿಕೊಳ್ಳಲಾರದ ಅವರು ಅದು ಸಾಯುವ ತನಕ ಪಡಬಾರದ ಪಾಡುಪಡುತ್ತಾರೆ. ಹಾಗಾಗಿ ಆ ಸ್ಥಿತಿ ಒದಗದಿರಲಿ ಎಂದು ಮುಂಚಿತವಾಗಿಯೇ ಅದನ್ನು ಹಿಂದಣೆಯಲ್ಲಿ ಕಟ್ಟಿ ಹಟ್ಟಿಯಿಂದ ಹೊರಹಾಕಿ ಹಗುರಾಗಲು ಕಾಯುತ್ತಾರೆ.

ಹಸುಗಳ ಸಾವು ನಮ್ಮ ನಡುವಿನ ನಂಬಿಕೆಯಂತೆ ‘ಹೊಟ್ಟೆಗೆಂಡೆಗೆ ಬೀಳುವ ಪೆಟ್ಟು’. ಹಾಗಾಗಿಯೇ ‘ಹಟ್ಟಿಗೆ ಬೆಂಕಿ ಬೀಳಲಿ’, ‘ಕರುಮರಿ ನಾಶವಾಗಲಿ’, ‘ನಿರ್ಗ್ವಾಮಯ್ ಆಗ್ಲಿ’ ಎಂಬವುಗಳು ನಮ್ಮ ನಡುವಿನ ತೀವ್ರವಾದ ಶಾಪಾಶಯಗಳು (ಸಾಪುಳಿಗಳು). ಹಾಕಿದ ಬಂಡವಾಳ ಹಿಂತಿರುಗಿ ಬಾರದೆ, ಉಳುವ ಜಾನುವಾರು ಹಟ್ಟಿಯಲ್ಲಿಯೇ ಸತ್ತವೆಂದರೆ ಬೇಸಾಯದ ಮೂಲಬಂಡವಾಳಕ್ಕೇ ಪೆಟ್ಟು ಬಿದ್ದಂತೆ. ನನಗೆ ಗೊತ್ತಿರುವ ಹಾಗೆ ನಮ್ಮೂರಿನ ಕಿರುಹಿಡುವಳಿದಾರ ರೈತರೊಬ್ಬರು ಒಂದೇ ಮಳೆಗಾಲದಲ್ಲಿ ಕಾಯಿಲೆಯಿಂದ ಮತ್ತು ಚೇಳುಕಚ್ಚಿ ಎರಡುಜೋಡಿ ಕೋಣಗಳನ್ನು ಬೆನ್ನಿಂದ ಬೆನ್ನಿಗೆ ಕಳೆದುಕೊಂಡ ಪರಿಣಾಮ ಅವರ ಹಟ್ಟಿಯಲ್ಲಿ ಮುಂದಿನ ಆರು ವರ್ಷಗಳ ತನಕ ಉಳುವ ಜಾನುವಾರುಗಳನ್ನು ಕಟ್ಟಲಾಗಿಲ್ಲ. ಕೊನೆಗೂ ಅವರು ಜೋಡುಮಾಡಿದುದು ಒಂದು ಸಾಹಸವೇ ಆಗಿತ್ತು. ಹೇಳಿಕೇಳಿ ಈ ಜನ ಇಂದಿಗೂ ತಾವು ತರುವ ಜಾನುವಾರುಗಳ ಮೇಲೆ ವಿಮೆ ಮಾಡುವ ರೂಢಿ ಹೊಂದಿಲ್ಲ. ಅನೇಕ ಸಂದರ್ಭದಲ್ಲಿ ಕಾಯಿಲೆ ಬಿದ್ದರೆ ದೇವರು-ದಿಂಡರ ಜೊತೆಗೆ ನಾಟಿ ವೈದ್ಯವನ್ನೇ ಅವಲಂಬಿಸಿ ಗಂಟು ಕಳೆದುಕೊಳ್ಳುವವರಿವರು. ಹೀಗಿದ್ದ ಮೇಲೆ ಬಂಡವಾಳದ ಭಾಗಶಃ ಹಿಂಪಡೆಯುವಿಕೆಯೂ ಇಲ್ಲದೆ, ಅಲ್ಲೇ ಕಂತಿಹೋದರೆ (ಮುಳುಗಿದರೆ) ಅವರ ಪಾಡು ಹಕ್ಕಿಯಾಗಿ ಹಾರಬೇಕಷ್ಟೇ.

ನಮ್ಮ ಪರಿಸರದಲ್ಲಿ ಮಳೆಗಾಲದ ಆರಂಭವನ್ನು ಸೂಚಿಸುವ ಅನೇಕ ನೈಸರ್ಗಿಕ ಸಂಗತಿಗಳನ್ನು ಜಾನಪದಲೋಕ ಗುರುತಿಸುತ್ತದೆ. ಅವುಗಳಲ್ಲಿ ಮಳೆಯ ಆರಂಭದವಾರ್ತೆ ತರುವಂತೆ ಕೂಗುವ ‘ಉರಿಯೋ ಅಕ್ಕ’ ಹಾಗೂ ‘ಹೋರ್ ಸತ್ತ್ಹೋಯ್ತೊ’ ಎಂಬ ಹಾಗೆ ಕೂಗುವ ಎರಡು ಹಕ್ಕಿಗಳ ಕೂಗನ್ನು ಮಳೆಗಾಲದ ಖಚಿತ ಮಾಹಿತಿಯೆಂಬಂತೆ ಗಮನಿಸಲಾಗುತ್ತದೆ. ಈ ಹಕ್ಕಿಗಳನ್ನು ಗಂಡ ಹೆಂಡತಿಯರಾಗಿ ಈ ಭಾಗದ ಜನ ಕಥೆಕಟ್ಟಿಕೊಂಡಿದ್ದಾರೆ. ರೈತ ದಂಪತಿ ಎಂಬಂತೆ ಪ್ರಚಲಿತವಿರುವ ಈ ಹಕ್ಕಿಗಳ ಕುರಿತಾದ ಕಥನದ ಮೇರೆಗೆ,-“ಹೋರಿ (ಕೋಣ) ತಂದೂ ತಂದೂ ಸಾಯುತ್ತಲೇ ಹೋದಾಗ, ನೇಲು-ನೊಗ ಅಟ್ಟಕ್ಕೆ ಹಾಕುವಂತಾಗಿ ಮಳೆಗಾಲದ ವ್ಯವಸಾಯ ಮಾಡಲಾರದ ಸ್ಥಿತಿಯಲ್ಲಿ ಬದುಕಲಾಗದ ಹಂತ ತಲುಪಿದ ಬೇಸಾಯಗಾರ ಹಕ್ಕಿಯಾಗಿ ಹಾರಿ ಹೋದನೆಂದೂ, ಅವನ ಬಸುರಿಹೆಂಡತಿ ಗಂಡನಿಲ್ಲದೇ ಹೆರಿಗೆಯಾಗಿ, ಗಂಡನ ಅಕ್ಕನ ಆರೈಕೆ ಪಡೆಯಬೇಕಾಗಿದ್ದವಳು ಅವಳ ಕುದಿನೀರಿನ ಬಿಸಿ ತಾಳಲಾರದೇ ಅವಳೂ ಹಕ್ಕಿಯಾಗಿ ಹಾರಿದಳೆಂ”ದೂ ಕಥೆ. ಈ ಬೇಸಾಯಗಾರ ಸಮಕಾಲೀನ ಸಂದರ್ಭದ ರೈತನ ಆತ್ಮಹತ್ಯೆಯನ್ನು ನೆನಪಿಸುವಂತೆ ಹಕ್ಕಿಯಾಗಿ ಹಾರಿಯೂ ಉಳುಮೆ ಮಾಡಲಾಗದ ಆತ್ಮ ಸಂಕಟವನ್ನು ತೋಡಿಕೊಳ್ಳುವವನಂತೆ ‘ಹೋರ್‌ಸತ್ತ್ಹೋಯ್ತೋ’ ಎಂದು ಕೂಗುತ್ತಾನೆ. ಗಂಡನನ್ನು ಕಳೆದುಕೊಂಡು ಅನಾಥಳಾಗಿ ಅತ್ತಿಗೆಯ ವಂಚನೆಯಿಂದ ಸತ್ತವಳು ಬೀದಿಪಾಲಾದ ಕುಟುಂಬ ಸ್ಥಿತಿಯನ್ನು ಗಂಡನೊಂದಿಗೆ ನೆನೆದುಕೊಳ್ಳುವಂತೆ ‘ಉರಿಯೋ ಅಕ್ಕ’ ಎಂದು ಕೂಗುವ ಮೂಲಕ ಜಾನುವಾರು ಕಳೆದುಕೊಂಡು ನಿರ್ಗತಿಕನಾಗುವ ರೈತನ ದುರ್ಗತಿಯನ್ನು ಪ್ರತಿಧ್ವನಿಸಿಕೊಂಡೇ ಬರುತ್ತಿದ್ದಾಳೆ. ಈ ಕೂಗು ಕೇಳಿದಾಗೆಲ್ಲಾ ನಾವದಕ್ಕೆ ‘ಹೋರ್ ಸತ್ಹೋಯ್ತೋ ನೇಲ್‌ನೊಗ ಅಟ್ಕ್‌ಹಾಕ್ಯೊ’ ಎಂದು ಉಳಿದಭಾಗವನ್ನು ಸೇರಿಸಿ ಹಾಡುತ್ತಿದ್ದೆವು. Tilling_Rice_Fieldsಆದರೆ ಆ ಸ್ಥಿತಿ ನಮ್ಮ ಹಟ್ಟಿಯದೇ ಆದಾಗ ನಮಗೆ ಹಾಗೆ ಉಳಿದ ಕೋರಸ್ ಸೇರಿಸುವ ಶಕ್ತಿಯೇ ಇರುತ್ತಿರಲಿಲ್ಲ. ಚಾಲ್ತಿಯಲ್ಲಿರುವ ಈ ಕಥೆಯ ಆಳದಲ್ಲಿರುವುದು ಚಿಕ್ಕಹಿಡುವಳಿದಾರನ ಬಂಡವಾಳದ ಮುಳುಗುವಿಕೆಯಿಂದಾಗುವ ಸಂಸಾರದ ಅನಾಥಸ್ಥಿತಿ. ದುಡಿಮೆಯ ಹತಾರು, ದುಡಿಯುವ ನೆಲ ಕಳೆದುಕೊಳ್ಳುವ ರೈತರಿಗೆ ಒಂದೇ ದಾರಿ ಸಾವು. ಇಂತಹ ಸರಳ ಸತ್ಯಗಳು ಅರ್ಥವಾಗದ ವಾಣಿಜ್ಯೀಕೃತ ಆಸಕ್ತಿಗಳು ಅಭಿವೃದ್ಧಿಯ ಹೆಸರಲ್ಲಿ ರೈತರನ್ನು ಎತ್ತಂಗಡಿ ಮಾಡಿ, ಅವರಿಗೆ ಅವರು ಮಾಡಲಾರದ ಕೆಲಸ/ಉದ್ಯೋಗ ಕೊಡುವ ಮಾತಾಡುತ್ತವೆ. ಹಾಗೆಯೇ ಬಂಡವಾಳ ಹೂತು ಹೋದರೂ ಪರವಾಗಿಲ, ಭಾವನೆಯನ್ನು ಗೌರವಿಸು ಎಂಬ ಶಾಸನ ರೂಪಿಸುವಲ್ಲಿ ಒತ್ತಡ ಹೇರುತ್ತವೆ. ಮೂಲವನ್ನೇ ಕಳೆದುಕೊಳ್ಳುವ ರೈತರು ಮುಂದಿನ ದಿನಗಳಲ್ಲಿ ಮಳೆ ಬರುವುದನ್ನೂ ಎಚ್ಚರಿಸುವ ಭಾಗ್ಯ ಪಡೆಯುವರೆಂಬ ವಿಶ್ವಾಸವಿಲ್ಲ. ಯಾಕೆಂದರೆ ಕನಿಷ್ಠ ಆ ಸಂವೇದನೆಯನ್ನಾದರೂ ದುಡ್ಡು-ಧರ್ಮಗಳ ಅಮಲು ಉಳಿಸಬೇಕಲ್ಲವೇ?

Criticizing Siddaramaiah’s administration : Fair, unfair?

– Sudhanshu

The new government led by Siddaramaiah in Karnataka seems quite old in the wake of comments and criticisms it evoked within the short time. The Chief Minister was accused of being ‘haste’ in his announcements on promises made in the party manifesto, ‘corrupt’ in his motive to provide liquor at lesser price for poor, ‘anti-Vokkaliga’ in the officers’ transfers and also someone losing confidence of his own party leaders, who are contemplating a coordinating committee. All this happened within a span of first two months, otherwise considered hot honeymoon period of a new government.

H.D.Kumaraswamy, leader of opposition, had earlier announced to resort to find fault with the government after first six months. But he could not resist finding fault with Siddaramaiah’s administration hardly for a month. vokkaliga-meet-hinduInfluenced by the unnecessarily disappointed officers of his community, Kumaraswamy accused the government of sidelining Vokkaliga officers. Later, he even picked up the case of D.K.Shivakumar, his long time bête noire, to support his argument.

Prior to that he had found fault with the government for sending his to-be personal secretary on a special mission of rescuing Kannadigas in flooded Uttarakhand. Probably, this is the most ridiculous issue that an ex-CM, holding post of the leader of opposition, chose to criticize the incumbent CM. That too at the time when all states of the country were responding to the disaster of huge magnitude.

When the opposition parties were suffering with shortage of issues to find fault with the popular rice scheme (Annabhagya), media donned their role. A few newspapers and news channels went overboard asking the question – from where will Siddu bring money to procure rice? A few accused the government of adopting rob the rich to pay poor policy in the name of Annabhagya. Amidst these hyperboles, some relevant questions were raised. The government had to alter its plan and reintroduce unit-based distribution of rice in place providing 30 kgs of rice, irrespective of the family size. Siddaramaiah-annyabhagyaSome cried foul saying that Above Poverty Line families would be denied rice with the new scheme in place. They intentionally avoided the fact that distribution of rice for APL was stopped long back in the BJP rule.

Majority of the comments, criticism made against the government were dictated by bias either towards the party in power or the person in the CM gaddi. There is a strong section among the political class and those in board rooms of media houses which has not been able to digest the fact that Siddaramaiah has become CM. This feeling was evident in the anti-Vokkaliga comments as well as in writings ridiculing a particular community in the garb of humour.

Within days after it was clear that he would be leading the Opposition in the Legislative Assembly, H.D.Kumaraswamy issued statements in media accusing the Congress of conspiring to avoid him occupy the post. With this, it was clear that, he was trying to project himself as someone so strong a leader that the ruling party would fear to face. But, his response to the budget in the session remained a dud even without offering a good lead point to the next news reports, forget cornering the state government.

The major issue, the opposite benches could have raised in the legislature session, is thetangadagi-tulsi controversy surrounding the transfer of Koppal Deputy Commissioner following her order for action against a building belonging to brother of minister Shivaraj Tangadagi. This could have definitely cornered the minister and forced the CM to act. The opposition benches were more interested in photo gallery in the CM’s chamber than an officer’s transfer at the behest of law ignoring minister.

Forget Tangadagi, the opposite parties remained mute to the cry of poor against increase in fare by transport corporations. No discussion was held in the on-going session on this issue. Ex-transport minister R.Ashok, his colleagues C.T. Ravi, D.N.Jeevaraj did not waste a minute to blame the union ministers from the state for reports of IT raids on buildings belong to Adichunchanagiri Math. bmtc-bus-fare-hikeHowever, they did not have time to respond to the core public issues. (Interestingly, protests condemning IT raids continued across the state, even after one of seers of the math told media, the raid was only on education institutions, not math.)

The most worrying factor is that if the unfair criticism continues further, it remains an entertaining tool to the public and in the long run it might end up government not taking even the ‘fair criticism’ seriously.

ಅಕಾಡೆಮಿಗಳು, ಪ್ರಾಧಿಕಾರಗಳು ಸಾಂಸ್ಕೃತಿಕ ಕ್ಷೇತ್ರದವರ ಗಂಜಿ ಕೇಂದ್ರಗಳಾಗಿ ಬದಲಾಗದಿರಲಿ

– ಪ್ರದೀಪ್ ಮಾಲ್ಗುಡಿ

ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಇತರೆ ಅಕಾಡೆಮಿ, ಪ್ರಾಧಿಕಾರ, ನಿಗಮ ಮಂಡಳಿಗಳು, ರಂಗಾಯಣದ ಕೇಂದ್ರಗಳಿಗೆ ಸರ್ಕಾರವು ಅಧ್ಯಕ್ಷರು, ನಿರ್ದೇಶಕರನ್ನು ಆದಷ್ಟು ಶೀಘ್ರವಾಗಿ ನೇಮಿಸಬೇಕಿದೆ. ಅದರಲ್ಲೂ ಸಾಂಸ್ಕೃತಿಕ ಮಹತ್ವವುಳ್ಳ ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ರಂಗಾಯಣದಂತಹ ಸಂಸ್ಥೆಗಳು ದೀರ್ಘಕಾಲ ಖಾಲಿ ಉಳಿಯಬಾರದು. ಅದರಿಂದ ಸಾಂಸ್ಕೃತಿಕ ಕ್ಷೇತ್ರ ಬಡವಾಗುತ್ತದೆ. ಈ ವಿಳಂಬ ಕ್ರಿಯೆ ಕನ್ನಡ ಸಂಸ್ಕೃತಿಗೆ ಭವಿಷ್ಯದಲ್ಲಿ ಹಾನಿಯುಂಟುಮಾಡಬಲ್ಲುದು. ಆದರೆ ಈ ನೇಮಕದ ವಿಷಯದಲ್ಲಿ ಇದುವರೆಗೆ ಅನೇಕ ತಪ್ಪುಗಳು ಘಟಿಸಿವೆ.

ಸಾಂಸ್ಕೃತಿಕ ವಲಯದ ಬಹುತೇಕ ಬುದ್ಧಿಜೀವಿಗಳು, ವಿದ್ವಾಂಸರು, ರಂಗಕರ್ಮಿಗಳು ಹಾಗೂ ರಂಗಾಸಕ್ತರು ಈಗಾಗಲೇ ಒಂದು ಹುದ್ದೆಯನ್ನು ಪಡೆದಿರುವ ವ್ಯಕ್ತಿ ಮತ್ತೆ ಮತ್ತೆ ಅದೇ ಹುದ್ದೆಯಲ್ಲಿ ಮುಂದುವರೆಯುವುದು ಹಾಗೂ ಈಗಿನ ಅಕಾಡೆಮಿಗಳು, ಪ್ರಾಧಿಕಾರಗಳು ಮೊದಲಾದವುಗಳಿಂದ ಒಂದರಿಂದ ಮತ್ತೊಂದಕ್ಕೆ ವರ್ಗಾವಣೆ ಮಾಡುವುದನ್ನು ಅಂತರಂಗ-ಬಹಿರಂಗದಲ್ಲಿ ಖಂಡಿಸಿದ್ದಾರೆ. ಆದರೆ, ಈ ಯಾವ ಖಂಡನೆಗಳೂ ಅಧಿಕಾರದ ಆಕಾಂಕ್ಷಿಗಳ ಮಂಡನೆಗಳ ಮುಂದೆ ಪರಿಣಾಮಕಾರಿಯಾಗುತ್ತಿಲ್ಲ.

ಇರುವ ಎಲ್ಲ ಸಾಂಸ್ಕೃತಿಕ ಹುದ್ದೆಗಳನ್ನು ಅಲಂಕರಿಸುವ ಅನಿವಾರ್ಯತೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಹಾಗೇನಾದರೂ ಇದೆ ಎಂದಾದರೆ, beggingಆ ವ್ಯಕ್ತಿಗಳು ಎರಡನೆ ತಲೆಮಾರಿನ ವ್ಯಕ್ತಿಗಳನ್ನು ಬೆಳೆಸಿಲ್ಲವೆಂದರ್ಥ. ಯುವ ಜನಾಂಗದ ಮೇಲೆ ತಮ್ಮ ನಡೆ-ನುಡಿಗಳಿಂದ ಪ್ರೇರಣೆ ಬೀರಲಾಗದಂಥ-ಭಿನ್ನ ಕ್ಷೇತ್ರಗಳಲ್ಲಿ ಆಳವಾಗಿ ತೊಡಗಿಸಿಕೊಳ್ಳುವ ದಾರಿಗಳನ್ನು ನಿರ್ಮಿಸಿಕೊಳ್ಳಲು ಅವಕಾಶ ಮಾಡಿಕೊಡದವರು ಯಾವ ಹುದ್ದೆಯಲ್ಲಿದ್ದರೂ-ನಿರಂತರ ಹುದ್ದೆಗಳನ್ನು ಪಡೆಯುತ್ತಿದ್ದರೂ ಅದು ಅವರವರ ವೈಯಕ್ತಿಕ ಸಾಧನೆಯಾಗುತ್ತದೆಯೇ ಹೊರತು ಸಾಂಘಿಕ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಯಾಗಲಾರದು.

ಅಕಾಡೆಮಿ, ಪ್ರಾಧಿಕಾರ ಹಾಗೂ ಸರ್ಕಾರದ ಇತರೆ ಸಂಸ್ಥೆಗಳ ಅಧ್ಯಕ್ಷ, ನಿರ್ದೇಶಕ ಹುದ್ದೆಗಳನ್ನು ಒಂದು ಬಾರಿ ನಿರ್ವಹಿಸಿರುವವರನ್ನೇ ವರ್ಗಾಯಿಸುವ/ಪುನರ್ನೇಮಿಸುವ ಕ್ರಿಯೆಯು ಈಗಾಗಲೇ ಅಧಿಕಾರದಲ್ಲಿರುವವರನ್ನು ಬಿಟ್ಟು-ಅರ್ಹರಾದ ಒಬ್ಬ ವ್ಯಕ್ತಿಯೂ ಕರ್ನಾಟಕದಲ್ಲಿಲ್ಲ ಎಂದು ಹೇಳಿದಂತಾಗುತ್ತದೆ. ಈ ಬಗೆಯ ಅಪಕಲ್ಪನೆಗಳನ್ನು ಸಾಂಸ್ಕೃತಿಕ ವಾತಾವರಣದ ಹಿನ್ನೆಲೆಯುಳ್ಳವರು ಹುಟ್ಟು ಹಾಕಬಾರದು. ‘ಯಯಾತಿ’ ನಾಟಕವನ್ನು ಓದಿ, ನೋಡಿ, ಅಭಿನಯಿಸಿ, ನಿರ್ದೇಶಿಸಿ, ಬೋಧಿಸಿ, ವಿಮರ್ಶಿಸಿದವರು ಆ ‘ಯಯಾತಿ’ಯಂತಾಗಬಾರದಲ್ಲವೆ? ಸಾಂಸ್ಕೃತಿಕ ಕ್ಷೇತ್ರದಲ್ಲಿರುವವರು ಯಯಾತಿಯ ನೆನಪೇ ಇಲ್ಲದಂತೆ ವರ್ತಿಸುತ್ತಿರುವುದೇಕೆ? ಯುವ ಜನಾಂಗ ಈ ಎಲ್ಲವನ್ನು ಎಚ್ಚರದಿಂದ ಗಮನಿಸುತ್ತಿದೆ. ನೀವುಗಳು ಕೇಳಿದ ಪ್ರಶ್ನೆಗಳನ್ನೇ ಮತ್ತೆ ಯುವ ಜನಾಂಗವು ಇನ್ನೆಷ್ಟು ಕಾಲ ಮುಂದುವರಿಸಬೇಕು?

ಕನ್ನಡ ಅಭಿವೃದ್ಧಿ ಪ್ರಾಧಿಕಾರದಲ್ಲಿ ಅಧ್ಯಕ್ಷರಾದವರನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಗೆ, ಪುಸ್ತಕ ಪ್ರಾಧಿಕಾರಕ್ಕೆ, ನಾಟಕ ಅಕಾಡೆಮಿ ಅಧ್ಯಕ್ಷರಾದವರನ್ನು ರಂಗಾಯಣಕ್ಕೆ, ರಂಗಾಯಣದ ನಿರ್ದೇಶಕರಾದವರನ್ನು ನಾಟಕ ಅಕಾಡೆಮಿಗೆ, ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದವರನ್ನು ಮತ್ತೊಂದು ಹುದ್ದೆಗೆ ನೇಮಿಸಿದರೆ (ಹೀಗೆ ಒಂದು ಹುದ್ದೆಯನ್ನು ಅಲಂಕರಿಸಿರುವವರಿಗೆ ಮತ್ತೆ ಮತ್ತೆ ಮಣೆ ಹಾಕಿದರೆ) ಅದರಿಂದ ಯಾವ ಸಾಂಸ್ಕೃತಿಕ ಲಾಭ ಯಾರಿಗೆ ಎಂದು ಇದೇ ಸಂದರ್ಭದಲ್ಲಿ ಸ್ವತಃ ಆಕಾಂಕ್ಷಿಗಳು ಹಾಗು ಅವರ ಪರ ವಾದಿಸುವವರು ಮತ್ತು ಪ್ರಭಾವ ಬೀರಲು ಪ್ರಯತ್ನಿಸುವವರು ವಿವೇಚಿಸಬೇಕಿದೆ. ಅಕಾಡೆಮಿಗಳು, ಪ್ರಾಧಿಕಾರಗಳು ಸಾಂಸ್ಕೃತಿಕ ಕ್ಷೇತ್ರದವರ ಗಂಜಿ ಕೇಂದ್ರಗಳಾಗಿ ಬದಲಾಗದಿರಲಿ.

ಸರ್ಕಾರವಾದರೂ ಈ ಸಂದರ್ಭದಲ್ಲಿ ಕಠಿಣವಾದರೂ ನಿಷ್ಠುರವಾದ, ಸೂಕ್ತವಾದ ನಿರ್ಧಾರವನ್ನು ಕೈಗೊಂಡು ಇನ್ನುಮುಂದಾದರೂ ಮೇಲ್ಪಂಕ್ತಿಯನ್ನು ಹುಟ್ಟುಹಾಕಬೇಕಾಗಿದೆ.

ಪ್ರಜಾಪ್ರಭುತ್ವದ ಸಡಿಲ ಕೊಂಡಿಗಳು ಮತ್ತು ಜೀವವಿರೋಧಿ ರಾಜಕೀಯ ಭಾಷೆ?

– ಬಿ. ಶ್ರೀಪಾದ ಭಟ್

“ನಾನು ಈಗ ಬರೆಯುತ್ತಿರುವಂತಹ ಸಂದರ್ಭದಲ್ಲಿ ಆಧುನಿಕ, ಶಿಕ್ಷಿತ ನಾಗರಿಕರು ನನ್ನನ್ನು ಕೊಲ್ಲುವುದಕೋಸ್ಕರವಾಗಿಯೇ ನನ್ನ ತಲೆಯ ಮೇಲೆ ಹಾರಾಡುತ್ತಿದ್ದಾರೆ,” ಎಂದು ಒಂದು ಕಡೆ ಅರ್ವೆಲ್ ಬರೆಯುತ್ತಾನೆ ( ಸುಮಾರು 1940). ಮುಂದುವರೆದು, “ರಾಜಕೀಯ ಭಾಷೆಯನ್ನು ಹಸಿಯಾದ ಸುಳ್ಳುಗಳು ಎಲ್ಲರೂ ನಂಬುವಂತಹ ಸತ್ಯವನ್ನಾಗಿ ಮಾರ್ಪಡಿಸಿ ಹಾಗೆಯೇ ಮುಂದೊಂದು ದಿನ ಕೊಲೆಗಾರನನ್ನಾಗಿ ರೂಪಿತಗೊಳ್ಳುವಂತೆ ಡಿಸೈನ್ ಮಾಡಲಾಗುತ್ತದೆ. ಅದು ಹೀಗೆಯೇ ಮುಂದುವರೆದು ಒಂದು ನಿರ್ದಿಷ್ಟ ಬಗೆಯ, ಸಂಬಂಧಪಟ್ಟ ಜನಾಂಗದ ಸಾಲಿಡಾರಿಟಿ ಶಕ್ತಿಯಾಗಿ ತಯಾರಾಗುತ್ತದೆ,” George_Orwellಎಂದು ಮಾರ್ಮಿಕವಾಗಿ ನುಡಿಯುತ್ತಾನೆ. ಅರ್ವೆಲ್‌ನ “1984” ಕಾದಂಬರಿಯಲ್ಲಿ ಭಾಷಾತಜ್ಞ ಸಿಮೆ “ನಾವು ನೂರಾರು ಶಬ್ದಗಳನ್ನು ನಾಶಪಡಿಸುತ್ತಿದ್ದೇವೆ. ನಾವು ಶಬ್ದಗಳನ್ನು ಮೂಳೆಯ ಹಂದರಗಳ ಮಟ್ಟಕ್ಕೆ ಇಳಿಸುತ್ತಿದ್ದೇವೆ. ಅಂದರೆ ನಮ್ಮೆಲ್ಲೆರ ಮಾತುಗಾರಿಕೆಯೆಂದರೆ ಆಲೋಚನೆಯ ವ್ಯಾಪ್ತಿಯನ್ನೇ ಸಂಕುಚಿತಗೊಳಿಸುವುದು,” ಎಂದು ಗೊಣಗುತ್ತಾನೆ. ಹಾಗೆಯೇ ಮತ್ತೊಂದು ಕಡೆ ಸಿಮೆ “ರಾಜಕೀಯ ಭಾಷೆಯು ಸಮರ್ಪಕವಾಗಿ, ಮೌಲ್ಯಾಧರಿತವಾಗಿ ಪರಿಪೂರ್ಣವಾಗಿದ್ದಾಗ ಮಾತ್ರ ಕ್ರಾಂತಿಯ ಉದ್ದೇಶ ಈಡೇರುತ್ತದೆ” ಎಂದು ಉದ್ಗರಿಸುತ್ತಾನೆ. ಅರ್ವಲ್‌ನ ಪ್ರಕಾರ “ರಾಜಕೀಯ, ಸ್ವಾತಂತ್ರ್ಯ ಮತ್ತು ಭಾಷೆಯು ಒಂದಕ್ಕೊಂದು ಅವಲಂಬಿತಗೊಂಡಿರುತ್ತವೆ. ಅವನ್ನು ಬೇರ್ಪಡಿಸಲಾಗುವುದಿಲ್ಲ. ಒಂದು ವೇಳೆ ಅವೇನಾದರೂ ಬೇರ್ಪಟ್ಟರೆ ಅವುಗಳ ಸಾವು ನಿಶ್ಚಿತ. ಇಲ್ಲಿ ಭಾಷೆಯು ಚಿಂತನೆಯನ್ನು ಭ್ರಷ್ಟಗೊಳಿಸಿದೆಯೆಂದರೆ, ಚಿಂತನೆಯೂ ಸಹ ಭಾಷೆಯನ್ನು ಭ್ರಷ್ಟಗೊಳಿಸುವಷ್ಟು ಶಕ್ತವಾಗಿದೆಯೆಂದರ್ಥ.”

ದುರ್ಬಲರ, ಬಡವರ, ನಿರ್ಗತಿಕರ ರಕ್ಷಣೆಯ ಗುರಾಣಿಯಾಗಬೇಕಾಗಿದ್ದ ರಾಜಕೀಯ ಭಾಷೆಯು ಇಂದು ಇಂಡಿಯಾದಲ್ಲಿ ರಾಜಕಾರಣಿಗಳು ಮತ್ತು ಪೋಲೀಸರ ಕೈಯಲ್ಲಿ ಪೂರ್ವ ನಿರ್ಧರಿತ ಶತ್ರುಗಳನ್ನು ನಾಶಪಡಿಸಲು, ಕೊಲೆ ಮಾಡಲು ಬಳಕೆಯಾಗುತ್ತಿದೆ. ಎಪ್ಪತ್ತು ಮತ್ತು ಎಂಬತ್ತರ ದಶಕಗಳಲ್ಲಿ ಕೆಲವೇ ರಾಜ್ಯಗಳಲ್ಲಿ ಸೀಮಿತಗೊಂಡಿದ್ದ ಈ ಮಾದರಿಯ ಕೊಲೆಗಾರಿಕೆಯು ಇಪ್ತತ್ತೊಂದನೇ ಶತಮಾನದಲ್ಲಿ ದೇಶವ್ಯಾಪಿ ಹರಡಿಕೊಂಡಿದೆ. ನಕಲಿ, ಮೋಸದ ಅಭಿವೃದ್ಧಿಯ ನೇತಾರ ನರೇಂದ್ರ ಮೋದಿಯ ಹತ್ತು ವರ್ಷಗಳ ಸರ್ವಾಧಿಕಾರದ ಅವಧಿಯ ಗುಜರಾತ್‌ಲ್ಲಿ 2002 ರಲ್ಲಿ ಸಾವಿರಾರು ಮುಸ್ಲಿಂರ ಹತ್ಯೆಯಾಯಿತು. 2002-2006 ರ ಅವಧಿಯಲ್ಲಿ ಮೋದಿ ಆಳ್ವಿಕೆಯಲ್ಲಿ ಗುಜರಾತ್‌ನಲ್ಲಿ ಜರುಗಿದ 22 ನಕಲಿ ಎನ್‌ಕೌಂಟರ್‌ಗಳ ಕುರಿತಾಗಿ ತನಿಖೆ ನಡೆಸಲು ಸುಪ್ರೀಂ ಕೋರ್ಟ ಆದೇಶಿಸಿದೆ. ಅವುಗಳಲ್ಲಿ ಇಶ್ರಾತ್ ಜಹಾನ್, ಸೊಹ್ರಾಬುದ್ದೀನ್, ಪ್ರಜಾಪತಿ ನಕಲಿ ಎನ್‌ಕೌಂಟರ್‌ಗಳು ಇಂದು ತೀವ್ರ ಸ್ವರೂಪದಲ್ಲಿ ಚರ್ಚೆಗೊಳಗಾಗುತ್ತಿದೆ. Modiಹಲವಾರು ಪೋಲೀಸ್ ಅಧಿಕಾರಿಗಳು ಬಂಧನಕ್ಕೊಳಗಾಗಿದ್ದಾರೆ. ಗುಜರಾತ್ ರಾಜ್ಯದಲ್ಲಿ ಮೋದಿಯ ಕುಪ್ರಸಿದ್ದ ಹತ್ತು ವರ್ಷಗಳ ಸರ್ವಾಧಿಕಾರದ ಅವಧಿಯಲ್ಲಿ ಈ ಮಟ್ಟದಲ್ಲಿ ನಡೆದ ಸಾಮಾಜಿಕ, ರಾಜಕೀಯ ಹತಕಾಂಡಗಳು ಸ್ವತಂತ್ರ ಭಾರತದ ಇತಿಹಾಸದಲ್ಲಿ ಹೊಸ ದಾಖಲೆ. ಒಂದು ರಕ್ತ ಚರಿತ್ರೆ. ಈ ಹತ್ಯೆಗಳ ಸಂಚನ್ನು ಮೋದಿ ಮತ್ತವರ ಸಹಚರರು ರಾಜಕೀಯ ಭಾಷೆ ಮತ್ತು ಸ್ವಾತಂತ್ರ್ಯವನ್ನು ಅತ್ಯಂತ ಋಣಾತ್ಮಕ ಮಟ್ಟದಲ್ಲಿ, ಭ್ರಷ್ಠತೆಯ ನೆಲೆಯಲ್ಲಿ ಬಳಸಿಕೊಂಡು ರೂಪಿಸಿದರು. ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವವೆಂದು ಬಿಂಬಿತಗೊಂಡಿರುವ ಇಂಡಿಯಾದಲ್ಲಿ ಇಂದು ಈ ರಾಜಕೀಯ ಹತ್ಯೆಗಳ ಕುರಿತಾದ ವಿಚಾರಣೆ ಕಳೆದ ಹತ್ತು ವರ್ಷಗಳಿಂದ ನಡೆಯುತ್ತಿದೆ. ಭಾರತವು ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವವಾದ್ದರಿಂದ ಮೇಲಿನ ಕೊಲೆಗಳ ಸಂಚನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆಂದು ಆಪಾದನೆಗೊಳಗಾಗಿರುವ ಮೋದಿಯು ಇಂದು ಈ ದೇಶದ ಭವಿಷ್ಯದ ಪ್ರಧಾನಿ ಅಭ್ಯರ್ಥಿ. ಇದನ್ನು ಸಾಧ್ಯವಾಗಿಸಿದ್ದು ನಮ್ಮ ಪ್ರಜಾಪ್ರಭುತ್ವದ ಸಡಿಲ ಕೊಂಡಿಗಳನ್ನು ದುರ್ಬಳಕೆ ಮಾಡಿಕೊಂಡ ಸಂಘ ಪರಿವಾರವು ಕಳೆದ ಇಪ್ಪತ್ತೈದು ವರ್ಷಗಳಿಂದ ರಾಜಕೀಯ ಭಾಷೆಯನ್ನು ಕೊಲೆಗಾರನ ಮಟ್ಟಕ್ಕೆ ಇಳಿಸಿ ಇದನ್ನು ಒಂದು ಜನಾಂಗದ ಸಾಲಿಡಾರಿಟಿ ಶಕ್ತಿಯನ್ನಾಗಿ ಪರಿವರ್ತಿಸಿರುವುದರಿಂದ.

ಇತಹುದೇ ಮಾದರಿಯ ಸಾಲಿಡಾರಿಟಿಯ ಶಕ್ತಿಯ ಬಲದಿಂದಲೇ ಇಂದು ಪ್ರಭಾವಿ ಬಲಿಷ್ಠ ಜಾತಿಗೆ ಸೇರಿದ ನಮ್ಮ ರಾಜ್ಯದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು “ಒಕ್ಕಲಿಗರ ಸಮುದಾಯವನ್ನು ಅಗೌರವದಿಂದ ನಡೆಸಿಕೊಂಡರೆ ಮೌನಕ್ಕೆ ಶರಣಾಗಿ ಸುಮ್ಮನೆ ಕೂರುವುದಿಲ್ಲ,” vokkaliga-meet-hinduಎಂದು ಹಿಂದುಳಿದ ಜಾತಿಗೆ ಸೇರಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಗುಡುಗಿದ್ದಾರೆ. ( ಪ್ರಜಾವಾಣಿ : 9 ಜುಲೈ 2013).

ಇದೇ ಮಾದರಿಯ ಸಾಲಿಡಾರಿಟಿ ಶಕ್ತಿಯ ಬಲದಿಂದಲೇ ತಮಿಳುನಾಡಿನ ಪಿಎಂಕೆ ಪಕ್ಷದ ಸ್ಥಾಪಕ ಮತ್ತು ಬಲಿಷ್ಠ ವಣ್ಣಿಯಾರ್ ಜಾತಿಯ ಸ್ವಘೋಷಿತ ನೇತಾರ ಎಸ್. ರಾಮದಾಸ್ “ದಲಿತರು ಇಂದು ಜೀನ್ಸ್ ಪ್ಯಾಂಟ್, ಟೀ ಷರ್ಟ್, ತಂಪು ಕನ್ನಡಕಗಳನ್ನು ಧರಿಸುತ್ತಿದ್ದಾರೆ. ಬೈಕುಗಳಲ್ಲಿ ಅಡ್ಡಾಡುತ್ತಿದ್ದಾರೆ,” ಎಂದು ಗುಡುಗಿದ್ದು. ಈ ಗುಡುಗಿನ ಫಲವಾಗಿ ಧರ್ಮಪುರಿ ಜಿಲ್ಲೆಯಲ್ಲಿ 250 ದಲಿತರ ಮನೆಗಳನ್ನು ಸುಡಲಾಯಿತು. ದಲಿತರು ವಣ್ಣಿಯಾರ್ ಹೆಣ್ಣು ಮಕ್ಕಳನ್ನು ಅಪಹರಿಸಿಕೊಂಡು ಹೋಗುತ್ತಿದ್ದಾರೆ ಎನ್ನುವ ರಾಜಕೀಯ ಭಾಷೆಯಿಂದಾಗಿ ಜುಲೈ 4, 2013 ರಂದು ದಲಿತ ಯುವಕ ಇಲವರಸನ್‌ನ ಕೊಲೆಯಾಯ್ತು. ಏಕೆಂದರೆ ಇಲವರಸನ್ ಮತ್ತು ವಣ್ಣಿಯಾರ್ ಜಾತಿಗೆ ಸೇರಿದ ದಿವ್ಯ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು.

ಈ ರಾಜಕೀಯ ಭಾಷೆ ಮತ್ತು ಬಲಿಷ್ಠ ಜಾತಿಗಳ ಸಾಲಿಡಾರಿಟಿಯ ಮಾದರಿಯಿಂದಾಗಿ ಖೈರ್ಲಾಂಜಿಯಲ್ಲಿ, ಕಂಬಾಲಪಲ್ಲಿಯಲ್ಲಿ ದಲಿತರ ಕುಂಟುಂಬಗಳ ಹತ್ಯೆಯಾಯ್ತು. ಇಂದಿಗೂ ಉತ್ತರ ಭಾರತದ ರಾಜ್ಯಗಳಲ್ಲಿ ಖಾಪ್ ಪಂಚಾಯ್ತಿಯ ಹೆಸರಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬಗಳನ್ನು ನಾಶಪಡಿಸಲಾಗುತ್ತಿದೆ ಮತ್ತು ಹುಡುಗರನ್ನು ಹತ್ಯೆಗೈಯಲಾಗುತ್ತಿದೆ.

1990 ರ ನಂತರ ರಾಜಕೀಯವಾಗಿ ಮತ್ತು ಜಾತೀಯವಾಗಿ ಬಲಿಷ್ಠಗೊಂಡ ಮಂಡಲ್ ಮತ್ತು ಮಂದಿರದ ಶಕ್ತಿಗಳು ತಮ್ಮ ಸಾಲಿಡಾರಿಟಿಯ ಹಿರಿಮೆಗಾಗಿ ಈ ಬಗೆಯ ಹತ್ಯಾಕಾಂಡಗಳನ್ನು ರೂಪಿಸಿದ್ದು ಮಾತ್ರ ಅತ್ಯಂತ ದುರಂತ. ಏಕೆಂದರೆ ಮಂಡಲ್ ಶಕ್ತಿಗಳು ಬಲಗೊಂಡರೆ ಮಂದಿರದ ಮತೀಯವಾದಿ ಫೆನೆಟಿಸಂ ಗುಂಪನ್ನು ಮತ್ತಷ್ಟು ಸಶಕ್ತವಾಗಿ ಎದುರಿಸಬಹುದೆಂದು ನಂಬಿದ್ದ ಈ ದೇಶದ ಪ್ರಜ್ಞಾವಂತ ಜನತೆಗೆ ಇಂದು ಇದೇ ಮಂಡಲ್ ಗುಂಪಿನ ಇಂದಿನ ನವ ಬ್ರಾಹ್ಮಣಶಾಹೀ ವ್ಯಕ್ತಿತ್ವದ ಧೋರಣೆಗಳು ಮರೆಯಲಾಗದಂತಹ ಪೆಟ್ಟನ್ನು ನೀಡಿದೆ. ಧರ್ಮಪುರಿಯ ದಲಿತ ಇಲವರಸನ್‌ನ ಕೊಲೆ ಮುಂದಿನ ದಿನಗಳ ಕರಾಳತೆಯ ಮುನ್ಸೂಚನೆ. ಕಾನೂನು ನೀಡಿದ ಸಮಾನತೆಯನ್ನು ಧಿಕ್ಕರಿಸುವ ಶಕ್ತಿಗಳ ಅಪಾಯಕಾರಿ ಚಲನಶೀಲತೆಗೆ ಆತ್ಮವಂಚನೆಗೆ ಬಲಿಯಾದ ನಾವೆಲ್ಲ ಸಾಕ್ಷಿಯಾಗಬೇಕಾಗಿದೆ.

ಧರ್ಮವನ್ನು ಕೇವಲ ಆಧ್ಯಾತ್ಮಿಕ ಮಟ್ಟದಲ್ಲಿ, ವೈಯಕ್ತಿಕ ಹಿನ್ನೆಲೆಯಲ್ಲಿ ನೋಡುವುದನ್ನು ಕೈಬಿಟ್ಟು ಅದನ್ನು ರಾಜಕೀಯವಾಗಿ, ಸಾಮಾಜಿಕವಾಗಿ, ಸಾರ್ವಜನಿಕವಾಗಿ ಸಂಭ್ರಮದಿಂದ ಆಚರಿಸಿದ ಇಂಡಿಯಾದ ಶಿಕ್ಷಿತ ಜನರ ಬೌದ್ಧಿಕ ದಿವಾಳಿತನ ಈ ಅಮಾನವೀಯ ವ್ಯವಸ್ಥೆಗೆ ಮೂಲಭೂತ ಕಾರಣ. ಪ್ರಜಾಪ್ರಭುತ್ವವು ಬಹುಸಂಖ್ಯಾತ ಪದ್ಧತಿಯ ಮೇಲೆ ನಿಂತಿದ್ದರು ಸಹ ಆ ಬಹುಸಂಖ್ಯಾತ ಪರಿಕಲ್ಪನೆಯು ಯಾರನ್ನು ಹೆಚ್ಚಾಗಿ ಓಲೈಸುತ್ತದೆ ಎactivism-alice-walkerನ್ನುವುದನ್ನು ಸಹ ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸಬಹುದು. ಪ್ರಜಾಪ್ರಭುತ್ವವೆಂದರೆ ಪ್ರಜೆಗಳು ಅಜ್ಞಾನದಿಂದ, ಪರಸ್ಪರ ಸಂಬಂಧವಿಲ್ಲದಂತೆ ಬದುಕುವುದಲ್ಲ. ಬದಲಾಗಿ ಅಪಾರ ತಿಳುವಳಿಕೆಯನ್ನು, ಪ್ರಶ್ನಿಸುವ ಮನೋಭೂಮಿಕೆಯನ್ನು ಹೊಂದಬೇಕಾಗುತ್ತದೆಂದು ಜನತೆಗೆ ವಿವರಿಸಬೇಕಾಗುತ್ತದೆ. ಈ ಕಾರ್ಯವನ್ನು ನಮ್ಮ ಸಮಾಜ ವಿಜ್ಞಾನಿಗಳು ಮತ್ತು ಅಕಡೆಮಿಕ್ ಬುದ್ಧಿಜೀವಿಗಳು ತಮ್ಮ ದಂತಗೋಪುರದಿಂದ ಹೊರಬಂದು ಭೌತಿಕ ಆಕ್ಟಿವಿಸಂನಿಂದ (physical activism) ತಲೆಮಾರುಗಳನ್ನು ರೂಪಿಸಬೇಕಾದಂತಹ ಇಂದಿನ ತುರ್ತಿನ ಸಂದರ್ಭದಲ್ಲಿ ತಮ್ಮ ಪ್ರಚಂಡ ಪ್ರಬಂಧಗಳು, ಅಸ್ಖಲಿತ ಪಾಂಡಿತ್ಯಪೂರ್ಣ ಭಾಷಣಗಳು ತಂದು ಕೊಟ್ಟ ಜನಪ್ರಿಯತೆಯ ರೋಮಾಂಚನಕ್ಕೆ ತಾವೇ ಮೈಮರೆತು ಈ ಜನಪ್ರಿಯತೆ ತಂದುಕೊಡುವ ವೇದಿಕೆಗಳು, ಖ್ಯಾತಿಯ ಕನವರಿಕೆಗಳಲ್ಲಿ ಮುಳುಗಿದ್ದು ನಮ್ಮ ವ್ಯವಸ್ಥೆಯಲ್ಲಿ ವೈಚಾರಿಕತೆ ಮತ್ತು ಮಾನವೀಯತೆಯ ಸೋಲಿಗೆ ಕಾರಣ. ನಮ್ಮ ಬುದ್ಧಿಜೀವಿಗಳು ಭೌತಿಕ ಆಕ್ಟಿವಿಸಂಗೆ ತಿಲಾಂಜಲಿ ನೀಡಿದ್ದು ದಿಗ್ಭ್ರಮೆ ಮೂಡಿಸುತ್ತದೆ. ಇವರು ಮೌಲಿಕವಾದ ರಾಜಕೀಯ ಭಾಷೆಯನ್ನು ಮಾತನಾಡುವುದನ್ನು ಸಹ ಕೈಬಿಟ್ಟಿದ್ದಾರೆ.

ನಮಗೆಲ್ಲ ಇನ್ನು ಮುಂದಿರುವುದು ಪೆರಿಯಾರ್, ಅಂಬೇಡ್ಕರ್, ಗಾಂಧಿ ಮಾರ್ಗಗಳು. ಸಮಾನಮನಸ್ಕರು ಅಸಂಘಟಿತರಾಗಿ ಪರಸ್ಪರ ಸಂಬಂಧವಿಲ್ಲದಂತೆ ಬದುಕುವುದನ್ನು ಕೈ ಬಿಟ್ಟು ಹೊಸ ಮೌಲ್ಯಗಳ ರಚನೆಗೆ ಪರಸ್ಪರ ಕೈ ಜೋಡಿಸಬೇಕಾದಂತಹ ಕಾಲವಿದು.