ಮಂಗಳೂರಿನಲ್ಲಿ “ನುಡಿಸಿರಿ”ಗೆ ಪರ್ಯಾಯವಾಗಿ “ಜನ ನುಡಿ”
ಸ್ನೇಹಿತರೇ, ಪ್ರತಿವರ್ಷ ಮಂಗಳೂರು ಜಿಲ್ಲೆಯ ಮೂಡಬಿದ್ರೆಯಲ್ಲಿ ಮೋಹನ್ ಆಳ್ವ ಎನ್ನುವ ಉದ್ಯಮಿಯ ಶಿಕ್ಷಣ ಸಂಸ್ಥೆಯಲ್ಲಿ “ನುಡಿಸಿರಿ” ಎನ್ನುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ನಡೆಯುತ್ತದೆ. ಈ ಉತ್ಸವದ ಹಿನ್ನೆಲೆ ಮತ್ತು ಅದರ ನೈಜ ಉದ್ದೇಶದ ಬಗೆ ನಾಡಿನ ಕೆಲವು ಜನರಿಗೆ ಕೆಲವು ಸಂಶಯಗಳಿವೆ. ಕಳೆದ ವರ್ಷ ನಾಡಿನ ಹಿರಿಯ ಸಾಹಿತಿ ಅನಂತಮೂರ್ತಿಯವರು ಈ “ನುಡಿಸಿರಿ” ಕಾರ್ಯಕ್ರಮದ ಉದ್ಘಾಟಕರು ಎಂದು ಘೋಷಣೆಯಾದ ಸಂದರ್ಭದಲ್ಲಿ ಮಂಗಳೂರಿನ ಪತ್ರಕರ್ತ ನವೀನ್ ಸೂರಿಂಜೆಯವರು ವರ್ತಮಾನ.ಕಾಮ್ನಲ್ಲಿ “ಆಳ್ವಾಸ್ ನುಡಿಸಿರಿಗೆ ಅನಂತಮೂರ್ತಿಯವರು ಹೋಗುವುದು ಯುಕ್ತವೇ” ಎಂಬ ಲೇಖನ […]