ದಲಿತರು ಮತ್ತು ಉದ್ಯಮಶೀಲತೆ…
ಸ್ನೇಹಿತರೇ, ವರ್ತಮಾನ.ಕಾಮ್ಗೆ ಎರಡು ವರ್ಷ ತುಂಬಿದ ಸಂದರ್ಭದಲ್ಲಿ ವ್ಯಕ್ತಪಡಿಸಿದ ಆಶಯದಂತೆ ವರ್ತಮಾನ.ಕಾಮ್ ಬಳಗ ಇತರೆ ಸಮಾನಮನಸ್ಕ ಗುಂಪು ಮತ್ತು ಸಂಘಟನೆಗಳ ಜೊತೆಗೂಡಿ ರಾಜ್ಯದ ಹಲವು ಕಡೆ ಸಂವಾದ ಮತ್ತು ವಿಚಾರಸಂಕಿರಣಗಳನ್ನು ಆಯೋಜಿಸಲು ಪ್ರಯತ್ನಿಸುತ್ತಿದೆ. ಮೊದಲ ಕಾರ್ಯಕ್ರಮ ಹಾಸನದಲ್ಲಿ ಇದೇ ಶನಿವಾರ (07-09-2013) ನಡೆಯುತ್ತಿದೆ. ವಿಷಯ: “ದಲಿತರು ಮತ್ತು ಉದ್ಯಮಶೀಲತೆ”. ದಲಿತರು ಉದ್ಯಮಿಗಳಾಗಬೇಕೆ ಬೇಡವೆ, ಅವರೂ ಅಂತಿಮವಾಗಿ ಬಂಡವಾಳಶಾಹಿಯ ಶೋಷಕವರ್ಗದ ಪಾಲುದಾರರಾಗಬೇಕೆ, ಎನ್ನುವುದರಿಂದ ಹಿಡಿದು ಹೆಚ್ಚಿನ ಸಂಖ್ಯೆಯಲ್ಲಿ ದಲಿತರು ಉದ್ಯಮಿಗಳಾಗಲು ಇರುವ ಅಡೆತಡೆಗಳೇನು, ಬಂಡವಾಳ ಹೂಡಿಕೆ ಯಾರಿಂದ, ಇತ್ಯಾದಿ […]